AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ವಿರುದ್ಧ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಟಿಕೆಟ್ ಕಾಯ್ದಿರಿಸಿದ ಟೀಂ ಇಂಡಿಯಾ 3 ಆಟಗಾರರಿವರು

IND vs SL: ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ 2022 ರಲ್ಲಿ ಅನೇಕ ಭಾರತೀಯ ಆಟಗಾರರು ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಅವಕಾಶ ಪಡೆದ ಈ ಮೂವರು ಉತ್ತಮ ಪ್ರದರ್ಶನ ನೀಡಿ ಆಯ್ಕೆಗಾರರ ​​ಸಂಕಷ್ಟವನ್ನು ಹೆಚ್ಚಿಸಿದ್ದಾರೆ.

ಪೃಥ್ವಿಶಂಕರ
|

Updated on:Feb 28, 2022 | 8:09 PM

Share
ಶ್ರೀಲಂಕಾ ವಿರುದ್ಧದ ಟಿ20 ಸರಣಿಯು ಅನೇಕ ಭಾರತೀಯ ಆಟಗಾರರಿಗೆ ನಿರ್ಣಾಯಕ ಪರೀಕ್ಷೆಯಾಗಿತ್ತು. ಟಿ20 ವಿಶ್ವಕಪ್‌ನ ಪೂರ್ವದಲ್ಲಿ ಈ ಸರಣಿ ನಿರ್ಣಾಯಕವಾಗಿದೆ. ಆದರೆ, ಟಿ20 ವಿಶ್ವಕಪ್‌ಗೆ ಇನ್ನೂ ಸಮಯವಿದೆ. ಆದರೆ, ಶ್ರೀಲಂಕಾ ವಿರುದ್ಧದ ಅವಕಾಶವನ್ನು ಆಟಗಾರರು ಸದುಪಯೋಗಪಡಿಸಿಕೊಂಡರು ಮತ್ತು ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯುವ ಐಸಿಸಿ ಟೂರ್ನಿಯಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡರು. ಈ ಸರಣಿಯಲ್ಲಿ ಮಿಂಚಿದವರ ಪ್ರದರ್ಶನವನ್ನು ನೋಡೋಣ.

1 / 4
ಭುವನೇಶ್ವರ್ ಕುಮಾರ್: ಟಿ20 ವಿಶ್ವಕಪ್ ತಂಡದಲ್ಲಿ ಭುವನೇಶ್ವರ್ ಕುಮಾರ್ ಸ್ಥಾನ ಪಡೆಯುತ್ತಾರೋ ಇಲ್ಲವೋ ಹೇಳಲು ಈ ಸರಣಿ ಸಾಕು. ಆದರೆ, ಭುವನೇಶ್ವರ್ ಭಾರತದ ವೈಟ್ ಬಾಲ್ ತಂಡದಲ್ಲಿ ಕರ್ಚೀಫ್ ತನ್ನ ಛಾಪು ಮೂಡಿಸಿರುವುದು ಇದೀಗ ಗೊತ್ತಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಹಳೆಯ ಛಾರ್ಮ್​ನೊಂದಿಗೆ ಕಾಣಿಸಿಕೊಂಡಿದ್ದಾರೆ. ರನ್ ಬಿಟ್ಟುಕೊಡದಂತೆ ಬ್ಯಾಟ್ಸ್‌ಮನ್‌ಗಳ ಮೇಲೆ ಒತ್ತಡ ಹೇರಿದರು. ಅವರು ಸರಣಿಯಲ್ಲಿ ಆಡಿದ 2 ಪಂದ್ಯಗಳಲ್ಲಿ 15 ಸರಾಸರಿಯಲ್ಲಿ 3 ವಿಕೆಟ್ ಪಡೆದರು.

2 / 4
ರವೀಂದ್ರ ಜಡೇಜಾ: ಗಾಯದ ಸಮಸ್ಯೆಯಿಂದ ಕೆಲ ದಿನಗಳಿಂದ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಜಡೇಜಾ ಹೊಸ ವರ್ಷದಲ್ಲಿ ಅವರ ಮೊದಲ ಸರಣಿಯನ್ನು ಆಡುತ್ತಿದ್ದಾರೆ. ಆದಾಗ್ಯೂ ಈ ಸರಣಿಯಲ್ಲಿ ಅದ್ಭುತ ಪುನರಾಗಮನವನ್ನು ತೋರಿದರು. ಕ್ರಿಕೆಟ್‌ನಿಂದ ದೂರ ಉಳಿದಿರುವುದು ಜಡೇಜಾ ಆಟದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಅವರು ಚೆಂಡು ಮತ್ತು ಬ್ಯಾಟ್‌ನಿಂದ ಅದ್ಭುತಗಳನ್ನು ಮಾಡಿದರು. ಜಡೇಜಾ ಕೇವಲ 37 ಎಸೆತಗಳನ್ನು ಎದುರಿಸಿ ಸರಣಿಯಲ್ಲಿ 3 ಪಂದ್ಯಗಳಲ್ಲಿ 70 ರನ್ ಗಳಿಸಿದರು. ಅಲ್ಲದೆ 2 ವಿಕೆಟ್ ಪಡೆದರು.

3 / 4
ಶ್ರೇಯಸ್ ಅಯ್ಯರ್: ಬಲಗೈ ಬ್ಯಾಟ್ಸ್‌ಮನ್ ಟಿ20 ಸರಣಿಯಲ್ಲಿ 3 ಪಂದ್ಯಗಳಲ್ಲಿ 174.35 ಸರಾಸರಿಯಲ್ಲಿ 204 ರನ್ ಗಳಿಸಿದ್ದಾರೆ. ಅಚ್ಚರಿ ಎಂದರೆ ಶ್ರೇಯಸ್ ಒಮ್ಮೆಯೂ ಔಟಾಗಲಿಲ್ಲ. ಅವರು ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಅರ್ಧಶತಕಗಳನ್ನು ಗಳಿಸಿದರು. ಅವರು ಔಟಾಗದೆ 74 ರನ್ ಗಳಿಸಿದ್ದು ಅವರ ಅತ್ಯಧಿಕ ರನ್ ಆಗಿದೆ. ಇದು ಟಿ20 ವಿಶ್ವಕಪ್ 2022ರ ತಂಡದಲ್ಲಿ ಅವರ ಸ್ಥಾನವನ್ನು ಭದ್ರಪಡಿಸುವುದರಲ್ಲಿ ಸಂಶಯವಿಲ್ಲ.

4 / 4

Published On - 6:23 pm, Mon, 28 February 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ