AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಲಂಕಾ ತಂಡಕ್ಕೆ ಮೂರನೇ ಆಘಾತ; ಮತ್ತೊಬ್ಬ ವೇಗಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು..!

IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೃಥ್ವಿಶಂಕರ
|

Updated on: Jul 27, 2024 | 2:54 PM

Share
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಮೊದಲ ಪಂದ್ಯ ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಶ್ರೀಲಂಕಾ ತಂಡಕ್ಕೆ ಮೂರನೇ ಹೊಡೆತ ಬಿದ್ದಿದೆ. ತಂಡದ ವೇಗದ ಬೌಲರ್ ಬಿನೂರ ಫೆರ್ನಾಂಡೋ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

1 / 5
ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಾಹಿತಿ ನೀಡಿದ್ದು ‘ಅನಾರೋಗ್ಯದ ಕಾರಣ ವೇಗಿ ಬಿನೂರ ಫರ್ನಾಂಡೊ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ್ ಮೆಂಡಿಸ್ ಅವರನ್ನು ಸ್ಟ್ಯಾಂಡ್‌ಬೈ ಆಗಿ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದಿದೆ. ಅಲ್ಲದೆ ಅನಾರೋಗ್ಯಕ್ಕೆ ತುತ್ತಾಗಿರುವ ಫೆರ್ನಾಂಡೋ ಮೊದಲ ಟಿ20 ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

2 / 5
ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

ಭಾರತ ವಿರುದ್ಧದ ಸರಣಿಗೂ ಮುನ್ನ ಅನಾರೋಗ್ಯಕ್ಕೊಳಗಾಗಿರುವ ಶ್ರೀಲಂಕಾ ತಂಡದ ಮೂರನೇ ಬೌಲರ್ ಬಿನೂರ ಫರ್ನಾಂಡೊ. ಇವರಿಗೂ ಮುನ್ನ ಬೆರಳಿನ ಗಾಯದಿಂದಾಗಿ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರ ಈ ಟಿ20 ಸರಣಿಯಿಂದ ಹೊರಬಿದ್ದಿದ್ದರು.

3 / 5
ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

ನುವಾನ್ ತುಷಾರಗೂ ಮುನ್ನ ತಂಡದ ಅನುಭವಿ ವೇಗದ ಬೌಲರ್ ದುಷ್ಮಂತ ಚಮೀರಾ ಕೂಡ ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಅವರು ಕೂಡ ಭಾರತ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದೀಗ ಬಿನೂರ ಫರ್ನಾಂಡೊ ಅನಾರೋಗ್ಯಕ್ಕೀಡಾಗುವುದರೊಂದಿಗೆ ಲಂಕಾ ತಂಡದ ಸಂಕಷ್ಟ ಮತ್ತಷ್ಟು ಹೆಚ್ಚಾಗಿದೆ.

4 / 5
ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

ಶ್ರೀಲಂಕಾ ತಂಡ: ದಿನೇಶ್ ಚಾಂಡಿಮಾಲ್, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಕುಸಲ್ ಪೆರೇರಾ, ಚರಿತ್ ಅಸಲಂಕಾ (ನಾಯಕ), ವನಿಂದು ಹಸರಂಗ, ಕಮಿಂದು ಮೆಂಡಿಸ್, ದಸುನ್ ಶಾನಕ, ಚಾಮಿಂದು ವಿಕ್ರಮಸಿಂಘೆ, ಬಿನೂರ ಫೆರ್ನಾಂಡೋ (ರಮೇಶ್ ಮೆಂಡಿಸ್, ಸ್ಟ್ಯಾಂಡ್‌ಬೈ ಆಟಗಾರ), ಮಧುಶಂಕ, ಮತೀಶ ಪತಿರಣ, ಮಹೇಶ ತೀಕ್ಷಣ, ದುನಿತ್ ವೇಲಾಲಗೆ.

5 / 5
Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!