AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಅರ್ಧಶತಕ ಸಿಡಿಸಿ ಸೂರ್ಯಕುಮಾರ್ ದಾಖಲೆ ಮುರಿದ ತಿಲಕ್ ವರ್ಮಾ

Tilak Varma: 20ರ ಹರೆಯದ ವರ್ಮಾ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ 39 ರನ್ ಸಿಡಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ 41 ಎಸೆತಗಳ ಸಹಾಯದಿಂದ 51 ರನ್ ಸಿಡಿಸಿ, ಮೊದಲ ಎರಡು ಪಂದ್ಯಗಳಿಂದ 90 ರನ್‌ ಕಲೆ ಹಾಕಿದ್ದಾರೆ.

ಪೃಥ್ವಿಶಂಕರ
|

Updated on: Aug 07, 2023 | 6:25 AM

Share
ಆಗಸ್ಟ್ 6 ರಂದು ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಸೋಲು ಕಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 152 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ವಿಂಡೀಸ್ ಪಡೆ ಇನ್ನು 7 ವಿಕೆಟ್ ಇರುವಂತೆಯೇ 8ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

ಆಗಸ್ಟ್ 6 ರಂದು ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೂ ಟೀಂ ಇಂಡಿಯಾ ಸೋಲು ಕಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಕೇವಲ 152 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನಟ್ಟಿದ ವಿಂಡೀಸ್ ಪಡೆ ಇನ್ನು 7 ವಿಕೆಟ್ ಇರುವಂತೆಯೇ 8ವಿಕೆಟ್ ಕಳೆದುಕೊಂಡು ಗೆಲುವಿನ ದಡ ಸೇರಿತು.

1 / 9
ಇನ್ನು ಈ ಪಂದ್ಯದಲ್ಲೂ ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಮುಗ್ಗರಿಸಿತು. ಆದರೆ ಟೀಂ ಇಂಡಿಯಾ ಪರ ಚೊಚ್ಚಲ ಟಿ20 ಸರಣಿ ಆಡುತ್ತಿರುವ ಯುವ ಬ್ಯಾಟರ್ ತಿಲಕ್ ವರ್ಮಾ ಸತತ ಎರಡನೇ ಪಂದ್ಯದಲ್ಲೂ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಇದರೊಂದಿಗೆ ಪ್ರಮುಖ ದಾಖಲೆಗಳನ್ನು ತನ್ನದಾಗಿಸಿಕೊಂಡರು.

ಇನ್ನು ಈ ಪಂದ್ಯದಲ್ಲೂ ಮತ್ತೊಮ್ಮೆ ತಂಡದ ಬ್ಯಾಟಿಂಗ್ ವಿಭಾಗ ಮುಗ್ಗರಿಸಿತು. ಆದರೆ ಟೀಂ ಇಂಡಿಯಾ ಪರ ಚೊಚ್ಚಲ ಟಿ20 ಸರಣಿ ಆಡುತ್ತಿರುವ ಯುವ ಬ್ಯಾಟರ್ ತಿಲಕ್ ವರ್ಮಾ ಸತತ ಎರಡನೇ ಪಂದ್ಯದಲ್ಲೂ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಇದರೊಂದಿಗೆ ಪ್ರಮುಖ ದಾಖಲೆಗಳನ್ನು ತನ್ನದಾಗಿಸಿಕೊಂಡರು.

2 / 9
20ರ ಹರೆಯದ ವರ್ಮಾ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ 39 ರನ್ ಸಿಡಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ 41 ಎಸೆತಗಳ ಸಹಾಯದಿಂದ 51 ರನ್ ಸಿಡಿಸಿ, ಮೊದಲ ಎರಡು ಪಂದ್ಯಗಳಿಂದ 90 ರನ್‌ ಕಲೆ ಹಾಕಿದ್ದಾರೆ.

20ರ ಹರೆಯದ ವರ್ಮಾ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ 39 ರನ್ ಸಿಡಿಸಿದ್ದರು. ಇದೀಗ ಎರಡನೇ ಪಂದ್ಯದಲ್ಲಿ 41 ಎಸೆತಗಳ ಸಹಾಯದಿಂದ 51 ರನ್ ಸಿಡಿಸಿ, ಮೊದಲ ಎರಡು ಪಂದ್ಯಗಳಿಂದ 90 ರನ್‌ ಕಲೆ ಹಾಕಿದ್ದಾರೆ.

3 / 9
ಇದರೊಂದಿಗೆ ಈ ಮೊದಲು ಭಾರತೀಯ ಕ್ರಿಕೆಟಿಗರಿಂದ ಮೊದಲ ಎರಡು ಇನ್ನಿಂಗ್ಸ್‌ಗಳಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ್ದ ಸೂರ್ಯಕುಮಾರ್ ಯಾದವ್ ಅವರ 89 ರನ್‌ಗಳ ದಾಖಲೆಯನ್ನು ಮೀರಿಸಿದರು. ಪ್ರಸ್ತುತ ಟಿ20 ಕ್ರಿಕೆಟ್​ನ ನಂಬರ್ 1 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಅವರು ಮಾರ್ಚ್ 2021 ರಲ್ಲಿ ತಾವು ಆಡಿದ ಮೊದಲ ಎರಡು ಟಿ20 ಪಂದ್ಯಗಳಲ್ಲಿ 89 ರನ್ ಸಿಡಿಸಿ ಈ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದರು.

ಇದರೊಂದಿಗೆ ಈ ಮೊದಲು ಭಾರತೀಯ ಕ್ರಿಕೆಟಿಗರಿಂದ ಮೊದಲ ಎರಡು ಇನ್ನಿಂಗ್ಸ್‌ಗಳಲ್ಲಿ ಅತಿ ಹೆಚ್ಚು ರನ್ ಕಲೆಹಾಕಿದ್ದ ಸೂರ್ಯಕುಮಾರ್ ಯಾದವ್ ಅವರ 89 ರನ್‌ಗಳ ದಾಖಲೆಯನ್ನು ಮೀರಿಸಿದರು. ಪ್ರಸ್ತುತ ಟಿ20 ಕ್ರಿಕೆಟ್​ನ ನಂಬರ್ 1 ಬ್ಯಾಟರ್ ಎನಿಸಿಕೊಂಡಿರುವ ಸೂರ್ಯಕುಮಾರ್ ಅವರು ಮಾರ್ಚ್ 2021 ರಲ್ಲಿ ತಾವು ಆಡಿದ ಮೊದಲ ಎರಡು ಟಿ20 ಪಂದ್ಯಗಳಲ್ಲಿ 89 ರನ್ ಸಿಡಿಸಿ ಈ ದಾಖಲೆಯನ್ನು ತನ್ನದಾಗಿಸಿಕೊಂಡಿದ್ದರು.

4 / 9
ಇನ್ನು ಈ ಪಟ್ಟಿಯಲ್ಲಿ ಈ ಇಬ್ಬರನ್ನು ಹೊರತುಪಡಿಸಿ, ಮೊದಲೆರಡು ಟಿ20 ಪಂದ್ಯಗಳಲ್ಲಿ 83 ರನ್ ಸಿಡಿಸಿದ್ದ ಮಂದೀಪ್ ಸಿಂಗ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಈ ಪಟ್ಟಿಯಲ್ಲಿ ಈ ಇಬ್ಬರನ್ನು ಹೊರತುಪಡಿಸಿ, ಮೊದಲೆರಡು ಟಿ20 ಪಂದ್ಯಗಳಲ್ಲಿ 83 ರನ್ ಸಿಡಿಸಿದ್ದ ಮಂದೀಪ್ ಸಿಂಗ್ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

5 / 9
ಈ ದಾಖಲೆಯೊಂದಿಗೆ ಮತ್ತೊಂದು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ ತಿಲಕ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ದಾಖಲಿಸಿದ ಭಾರತದ ಎರಡನೇ ಕಿರಿಯ ಬ್ಯಾಟರ್ ಎನಿಸಿಕೊಂಡರು.

ಈ ದಾಖಲೆಯೊಂದಿಗೆ ಮತ್ತೊಂದು ಪ್ರಮುಖ ಮೈಲಿಗಲ್ಲನ್ನು ಸಾಧಿಸಿದ ತಿಲಕ್, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅರ್ಧಶತಕ ದಾಖಲಿಸಿದ ಭಾರತದ ಎರಡನೇ ಕಿರಿಯ ಬ್ಯಾಟರ್ ಎನಿಸಿಕೊಂಡರು.

6 / 9
ಈ ಮೊದಲು ನಾಯಕ ರೋಹಿತ್ ಶರ್ಮಾ ಅವರು 20 ವರ್ಷ, 143 ದಿನಗಳಲ್ಲಿ ತಮ್ಮ ಚೊಚ್ಚಲ ಟಿ20 ಅರ್ಧಶತಕ ಸಿಡಿಸಿ ಈ ದಾಖಲೆ ಬರೆದಿದ್ದರು.

ಈ ಮೊದಲು ನಾಯಕ ರೋಹಿತ್ ಶರ್ಮಾ ಅವರು 20 ವರ್ಷ, 143 ದಿನಗಳಲ್ಲಿ ತಮ್ಮ ಚೊಚ್ಚಲ ಟಿ20 ಅರ್ಧಶತಕ ಸಿಡಿಸಿ ಈ ದಾಖಲೆ ಬರೆದಿದ್ದರು.

7 / 9
ಇದೀಗ 20 ವರ್ಷ, 143 ದಿನಗಳಲ್ಲಿ ತಮ್ಮ ಮೊದಲ ಅರ್ಧಶತಕ ಸಿಡಿಸಿರುವ ತಿಲಕ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ಇದೀಗ 20 ವರ್ಷ, 143 ದಿನಗಳಲ್ಲಿ ತಮ್ಮ ಮೊದಲ ಅರ್ಧಶತಕ ಸಿಡಿಸಿರುವ ತಿಲಕ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

8 / 9
ಹಾಗೆಯೇ 21 ವರ್ಷ, 38 ದಿನಗಳಲ್ಲಿ ಮೊದಲ ಟಿ20 ಅರ್ಧಶತಕ ಸಿಡಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಹಾಗೆಯೇ 21 ವರ್ಷ, 38 ದಿನಗಳಲ್ಲಿ ಮೊದಲ ಟಿ20 ಅರ್ಧಶತಕ ಸಿಡಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

9 / 9
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ