AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 2nd Test: ಟ್ರಿನಿಡಾಡ್​ಗೆ ತಲುಪಿದ ಟೀಮ್ ಇಂಡಿಯಾ: ದ್ವಿತೀಯ ಟೆಸ್ಟ್​ಗೆ ಇಂದಿನಿಂದ ಅಭ್ಯಾಸ

India vs West Indies Test: ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

Vinay Bhat
|

Updated on: Jul 18, 2023 | 7:34 AM

Share
ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಕೊನೆಗೊಂಡಿತ್ತು. ಭಾರತೀಯ ಸ್ಪಿನ್ ದಾಳಿಗೆ ನಲುಗಿದ ಕೆರಿಬಿಯನ್ ಪಡೆ ಹೀನಾಯ ಬ್ಯಾಟಿಂಗ್ ಪ್ರದರ್ಶಿಸಿತ್ತು. ಪರಿಣಾಮ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ.

1 / 7
ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ಗೆ ತಲುಪಿದ್ದಾರೆ.

ಇದೀಗ ಉಭಯ ತಂಡಗಳು ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಟ್ರಿನಿಡಾಡ್​ನ ಪೋರ್ಟ್ ಆಫ್ ಸ್ಪೇನ್​ಗೆ ತಲುಪಿದ್ದಾರೆ.

2 / 7
ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

ಜುಲೈ 20 ರಿಂದ ಭಾರತ- ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕೆಲ ದಿನಗಳ ವಿಶ್ರಾಂತಿ ಬಳಿಕ ರೋಹಿತ್ ಪಡೆ ಇಂದಿನಿಂದ ಕ್ವೀನ್ಸ್ ಪಾರ್ಕ್ ಓವಲ್​ನಲ್ಲಿ ಅಭ್ಯಾಸ ಶುರು ಮಾಡಲಿದೆ.

3 / 7
ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್​ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

ಮೊದಲ ಟೆಸ್ಟ್​ನಲ್ಲೇ ಶತಕ ಸಿಡಿಸಿ ಯಶಸ್ವಿ ಜೈಸ್ವಾಲ್ ಆಯ್ಕೆದಾರರ ಮನ ಗೆದ್ದಿದ್ದು ಟೀಮ್ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಬಹುತೇಕ ಖಚಿತ ಪಡಿಸಿಕೊಂಡಿದ್ದಾರೆ. ಆದರೆ, ಮೂರನೇ ಕ್ರಮಾಂಕಕ್ಕೆ ಶಿಫ್ಟ್ ಆಗಿರುವ ಶುಭ್​ಮನ್ ಗಿಲ್ ವೈಫಲ್ಯ ಅನುಭವಿಸಿದ್ದರು.

4 / 7
ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ.  ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

ಕ್ವೀನ್ಸ್ ಪಾರ್ಕ್​ ಓವಲ್​ನಲ್ಲಿ ಭಾರತ ಇಂದು ಮೊದಲ ಅಭ್ಯಾಸ ಸೆಷನ್ ನಡೆಸಲಿದೆ. ಆದರೆ, ಇದಕ್ಕೆ ಮಳೆಯ ಕಾಟ ಇರಲಿದೆ ಎಂದು ಹೇಳಲಾಗಿದೆ. ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ.

5 / 7
ಇನ್ನು ಕ್ವೀನ್ಸ್ ಪಾರ್ಕ್​ ಓವಲ್​ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

ಇನ್ನು ಕ್ವೀನ್ಸ್ ಪಾರ್ಕ್​ ಓವಲ್​ನ ಪಿಚ್ ನಿಗೂಢವಾಗಿ ಉಳಿದಿದೆ. ಯಾಕೆಂದರೆ ಕಳೆದ ಕೆಲವು ಸಮಯದಿಂದ ಇಲ್ಲಿ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳು ನಡೆದಿಲ್ಲ. ವಿಶೇಷವಾಗಿ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ಪರಿಸ್ಥಿತಿಗಳು ಹೇಗೆ ಇರುತ್ತವೆ ಎಂಬುದನ್ನು ಊಹಿಸಲು ಕಷ್ಟ.

6 / 7
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

7 / 7
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ