AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಬೇಡದ ಶತಕ ಬಾರಿಸಿದ ಕುಲ್ದೀಪ್

Kuldeep Yadav: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಗೆಲುವಿನ ಹೊಸ್ತಿಲಲ್ಲಿದೆ, ಕೇವಲ 54 ರನ್ ಅಗತ್ಯವಿದೆ. ಆದಾಗ್ಯೂ, ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತದ ಬೌಲರ್‌ಗಳು ದುಬಾರಿಯಾಗಿದ್ದರು. ಕುಲ್ದೀಪ್ ಯಾದವ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ 100ಕ್ಕೂ ಹೆಚ್ಚು ರನ್ ಬಿಟ್ಟುಕೊಟ್ಟರೆ, ರವೀಂದ್ರ ಜಡೇಜಾ ಕೂಡ ಹೆಚ್ಚು ರನ್ ನೀಡಿದರು. ಇದು ವಿಂಡೀಸ್ ತಂಡ 350ಕ್ಕೂ ಹೆಚ್ಚು ರನ್ ಗಳಿಸಲು ನೆರವಾಯಿತು.

ಪೃಥ್ವಿಶಂಕರ
|

Updated on: Oct 13, 2025 | 10:13 PM

Share
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲು ಟೀಂ ಇಂಡಿಯಾ ಕೇವಲ 54 ರನ್‌ಗಳ ದೂರದಲ್ಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಭಯ ತಂಡಗಳ ನಡುವಿನ  ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್, ಭಾರತಕ್ಕೆ 121 ರನ್‌ಗಳ ಗುರಿಯನ್ನು ನೀಡಿತು. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡಕ್ಕೆ ಭಾರತದ ಬೌಲರ್​ಗಳು ಸರಾಗವಾಗಿ ರನ್ ಬಿಟ್ಟುಕೊಟ್ಟರು. ಈ ಮೂಲಕ ಅನೇಕ ಅನಗತ್ಯ ದಾಖಲೆಗಳನ್ನು ಬರೆದರು.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲು ಟೀಂ ಇಂಡಿಯಾ ಕೇವಲ 54 ರನ್‌ಗಳ ದೂರದಲ್ಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉಭಯ ತಂಡಗಳ ನಡುವಿನ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್, ಭಾರತಕ್ಕೆ 121 ರನ್‌ಗಳ ಗುರಿಯನ್ನು ನೀಡಿತು. ಆದಾಗ್ಯೂ ಎರಡನೇ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡಕ್ಕೆ ಭಾರತದ ಬೌಲರ್​ಗಳು ಸರಾಗವಾಗಿ ರನ್ ಬಿಟ್ಟುಕೊಟ್ಟರು. ಈ ಮೂಲಕ ಅನೇಕ ಅನಗತ್ಯ ದಾಖಲೆಗಳನ್ನು ಬರೆದರು.

1 / 5
ಮೊದಲ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡವನ್ನು 248 ರನ್​ಗಳಿಗೆ ಆಲೌಟ್ ಮಾಡಿದ್ದ ಟೀಂ ಇಂಡಿಯಾ ವೇಗಿಗಳು ಎರಡನೇ ಇನ್ನಿಂಗ್ಸ್​ನಲ್ಲಿ 390 ರನ್ ಬಿಟ್ಟುಕೊಟ್ಟರು. ಈ ಮೂಲಕ ವಿಂಡೀಸ್ ತಂಡ, 2013 ರ ನಂತರ ವಿದೇಶಿ ತಂಡವೊಂದು ಭಾರತದಲ್ಲಿ ಅದರಲ್ಲೂ ಎರಡನೇ ಇನ್ನಿಂಗ್ಸ್‌ನಲ್ಲಿ 350 ಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆ ಬರೆಯಿತು.

ಮೊದಲ ಇನ್ನಿಂಗ್ಸ್​ನಲ್ಲಿ ವಿಂಡೀಸ್ ತಂಡವನ್ನು 248 ರನ್​ಗಳಿಗೆ ಆಲೌಟ್ ಮಾಡಿದ್ದ ಟೀಂ ಇಂಡಿಯಾ ವೇಗಿಗಳು ಎರಡನೇ ಇನ್ನಿಂಗ್ಸ್​ನಲ್ಲಿ 390 ರನ್ ಬಿಟ್ಟುಕೊಟ್ಟರು. ಈ ಮೂಲಕ ವಿಂಡೀಸ್ ತಂಡ, 2013 ರ ನಂತರ ವಿದೇಶಿ ತಂಡವೊಂದು ಭಾರತದಲ್ಲಿ ಅದರಲ್ಲೂ ಎರಡನೇ ಇನ್ನಿಂಗ್ಸ್‌ನಲ್ಲಿ 350 ಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆ ಬರೆಯಿತು.

2 / 5
ಇನ್ನು ಭಾರತದ ಪರ ಮೊದಲ ಇನ್ನಿಂಗ್ಸ್​ನಲ್ಲಿ 5 ವಿಕೆಟ್ ಪಡೆದು ಮಿಂಚಿದ್ದ ಕುಲ್ದೀಪ್ ಯಾದವ್, ಎರಡನೇ ಇನ್ನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿದರು. ಆದಾಗ್ಯೂ ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ 82 ರನ್‌ಗಳಿಗೆ 5 ವಿಕೆಟ್‌ಗಳನ್ನು ಉರುಳಿಸಿದ್ದ ಕುಲ್ದೀಪ್ ಎರಡನೇ ಇನ್ನಿಂಗ್ಸ್​ನಲ್ಲಿ 104 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆದರು.

ಇನ್ನು ಭಾರತದ ಪರ ಮೊದಲ ಇನ್ನಿಂಗ್ಸ್​ನಲ್ಲಿ 5 ವಿಕೆಟ್ ಪಡೆದು ಮಿಂಚಿದ್ದ ಕುಲ್ದೀಪ್ ಯಾದವ್, ಎರಡನೇ ಇನ್ನಿಂಗ್ಸ್​ನಲ್ಲಿ 3 ವಿಕೆಟ್ ಕಬಳಿಸಿದರು. ಆದಾಗ್ಯೂ ಬೇಡದ ದಾಖಲೆಯೊಂದನ್ನು ತಮ್ಮ ಖಾತೆಗೆ ಹಾಕಿಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ 82 ರನ್‌ಗಳಿಗೆ 5 ವಿಕೆಟ್‌ಗಳನ್ನು ಉರುಳಿಸಿದ್ದ ಕುಲ್ದೀಪ್ ಎರಡನೇ ಇನ್ನಿಂಗ್ಸ್​ನಲ್ಲಿ 104 ರನ್ ಬಿಟ್ಟುಕೊಟ್ಟು 3 ವಿಕೆಟ್ ಪಡೆದರು.

3 / 5
ಎರಡನೇ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 104 ರನ್​​ಗಳನ್ನು ಬಿಟ್ಟುಕೊಡುವ ಮೂಲಕ ಕುಲ್ದೀಪ್ ಯಾದವ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ 100 ರನ್‌ಗಳನ್ನು ಬಿಟ್ಟುಕೊಟ್ಟ ಬೇಡದ ದಾಖಲೆಗೆ ಕೊರಳೊಡ್ಡಿದರು. 2ನೇ ಇನ್ನಿಂಗ್ಸ್​ನಲ್ಲಿ ಕುಲ್ದೀಪ್, ವಿಂಡೀಸ್ ನಾಯಕ ರೋಸ್ಟನ್ ಚೇಸ್, ಟೆವಿನ್ ಇಮ್ಲಾಚ್, ಖಾರಿ ಪಿಯರೆ ಅವರ ವಿಕೆಟ್ ಉರುಳಿಸಿದರು.

ಎರಡನೇ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 104 ರನ್​​ಗಳನ್ನು ಬಿಟ್ಟುಕೊಡುವ ಮೂಲಕ ಕುಲ್ದೀಪ್ ಯಾದವ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಮೊದಲ ಬಾರಿಗೆ 100 ರನ್‌ಗಳನ್ನು ಬಿಟ್ಟುಕೊಟ್ಟ ಬೇಡದ ದಾಖಲೆಗೆ ಕೊರಳೊಡ್ಡಿದರು. 2ನೇ ಇನ್ನಿಂಗ್ಸ್​ನಲ್ಲಿ ಕುಲ್ದೀಪ್, ವಿಂಡೀಸ್ ನಾಯಕ ರೋಸ್ಟನ್ ಚೇಸ್, ಟೆವಿನ್ ಇಮ್ಲಾಚ್, ಖಾರಿ ಪಿಯರೆ ಅವರ ವಿಕೆಟ್ ಉರುಳಿಸಿದರು.

4 / 5
ಎರಡನೇ ಇನ್ನಿಂಗ್ಸ್​ನಲ್ಲಿ ಕುಲ್ದೀಪ್ ಯಾದವ್ ಮಾತ್ರವಲ್ಲದೆ ರವೀಂದ್ರ ಜಡೇಜಾ ಕೂಡ ದುಬಾರಿಯಾದರು.  ಈ ಇನ್ನಿಂಗ್ಸ್​ನಲ್ಲಿ 33 ಓವರ್​ಗಳನ್ನು ಬೌಲ್ ಮಾಡಿದ ಜಡೇಜಾ 104 ರನ್‌ಗಳನ್ನು ಬಿಟ್ಟುಕೊಟ್ಟು ಕೇವಲ 1 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾದರು.

ಎರಡನೇ ಇನ್ನಿಂಗ್ಸ್​ನಲ್ಲಿ ಕುಲ್ದೀಪ್ ಯಾದವ್ ಮಾತ್ರವಲ್ಲದೆ ರವೀಂದ್ರ ಜಡೇಜಾ ಕೂಡ ದುಬಾರಿಯಾದರು. ಈ ಇನ್ನಿಂಗ್ಸ್​ನಲ್ಲಿ 33 ಓವರ್​ಗಳನ್ನು ಬೌಲ್ ಮಾಡಿದ ಜಡೇಜಾ 104 ರನ್‌ಗಳನ್ನು ಬಿಟ್ಟುಕೊಟ್ಟು ಕೇವಲ 1 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾದರು.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ