AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 3539 ದಿನಗಳ ಬಳಿಕ ಕಣಕ್ಕಿಳಿದು 27 ವರ್ಷಗಳ ಹಳೆಯ ದಾಖಲೆ ಮುರಿದ ಜಯದೇವ್ ಉನದ್ಕಟ್‌!

Jaydev Unadkat: ಜಯದೇವ್ ಉನದ್ಕಟ್ ಬರೋಬ್ಬರಿ 3539 ದಿನಗಳ ಬಳಿಕ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು 27 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಪೃಥ್ವಿಶಂಕರ
|

Updated on: Aug 02, 2023 | 6:41 AM

Share
ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್‌ನ ತರೂಬಾದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 200 ರನ್​ಗಳ ಬೃಹತ್ ಗೆಲುವು ದಾಖಲಿಸಿದೆ ಇದರೊಂದಿಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್‌ನ ತರೂಬಾದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 200 ರನ್​ಗಳ ಬೃಹತ್ ಗೆಲುವು ದಾಖಲಿಸಿದೆ ಇದರೊಂದಿಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

1 / 8
ಇನ್ನು ಸರಣಿಯೂದ್ದಕ್ಕು ಮಾಡಿಕೊಂಡ ಬದಲಾವಣೆಯನ್ನು ಈ ಪಂದ್ಯದಲ್ಲೂ ಟೀಂ ಇಂಡಿಯಾ ಮಾಡಿತ್ತು. ವೇಗಿ ಉಮ್ರಾನ್ ಮಲಿಕ್ ಬದಲು, ತಂಡದಲ್ಲಿ ಸ್ಥಾನ ಪಡೆದಿದ್ದ ಜಯದೇವ್ ಉನದ್ಕಟ್ ಈ ರೀ ಎಂಟ್ರಿಯೊಂದಿಗೆ ಬರೋಬ್ಬರಿ 3539 ದಿನಗಳ ಬಳಿಕ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು 27 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಇನ್ನು ಸರಣಿಯೂದ್ದಕ್ಕು ಮಾಡಿಕೊಂಡ ಬದಲಾವಣೆಯನ್ನು ಈ ಪಂದ್ಯದಲ್ಲೂ ಟೀಂ ಇಂಡಿಯಾ ಮಾಡಿತ್ತು. ವೇಗಿ ಉಮ್ರಾನ್ ಮಲಿಕ್ ಬದಲು, ತಂಡದಲ್ಲಿ ಸ್ಥಾನ ಪಡೆದಿದ್ದ ಜಯದೇವ್ ಉನದ್ಕಟ್ ಈ ರೀ ಎಂಟ್ರಿಯೊಂದಿಗೆ ಬರೋಬ್ಬರಿ 3539 ದಿನಗಳ ಬಳಿಕ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು 27 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

2 / 8
ವಾಸ್ತವವಾಗಿ 2013 ರ ಬಳಿಕ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದ ಉನದ್ಕಟ್ ಎರಡು ಏಕದಿನ ಪಂದ್ಯಗಳ ನಡುವೆ ಸುದೀರ್ಘ ಅಂತರವನ್ನು ಹೊಂದಿರುವ ಭಾರತದ ಮೊದಲ ಆಟಗಾರನೆಂಬ ದಾಖಲೆ ಬರೆದಿದ್ದಾರೆ.

ವಾಸ್ತವವಾಗಿ 2013 ರ ಬಳಿಕ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದ ಉನದ್ಕಟ್ ಎರಡು ಏಕದಿನ ಪಂದ್ಯಗಳ ನಡುವೆ ಸುದೀರ್ಘ ಅಂತರವನ್ನು ಹೊಂದಿರುವ ಭಾರತದ ಮೊದಲ ಆಟಗಾರನೆಂಬ ದಾಖಲೆ ಬರೆದಿದ್ದಾರೆ.

3 / 8
ಉನದ್ಕಟ್​ಗೂ ಮೊದಲು, ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಸಿಂಗ್ ಎರಡು ಏಕದಿನ ಪಂದ್ಯಗಳ ನಡುವೆ ಏಳು ವರ್ಷ, 230 ದಿನಗಳ ಅಂತರದೊಂದಿಗೆ ಈ ದಾಖಲೆಯನ್ನು ಹೊಂದಿದ್ದರು. ಆದರೆ ಇದೀಗ ಉನದ್ಕಟ್ 9 ವರ್ಷ 210 ದಿನಗಳ ಬಳಿಕ ಏಕದಿನ ಪಂದ್ಯ ಆಡಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಉನದ್ಕಟ್​ಗೂ ಮೊದಲು, ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಸಿಂಗ್ ಎರಡು ಏಕದಿನ ಪಂದ್ಯಗಳ ನಡುವೆ ಏಳು ವರ್ಷ, 230 ದಿನಗಳ ಅಂತರದೊಂದಿಗೆ ಈ ದಾಖಲೆಯನ್ನು ಹೊಂದಿದ್ದರು. ಆದರೆ ಇದೀಗ ಉನದ್ಕಟ್ 9 ವರ್ಷ 210 ದಿನಗಳ ಬಳಿಕ ಏಕದಿನ ಪಂದ್ಯ ಆಡಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 8
ಇನ್ನು ಈ ಪಟ್ಟಿಯಲ್ಲಿ ಈ ಇಬ್ಬರನ್ನು ಹೊರತುಪಡಿಸಿ, ತಂಡದ ಮಾಜಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಆಡಿದ ಎರಡು ಏಕದಿನ ಪಂದ್ಯಗಳ ನಡುವೆ 6 ವರ್ಷ, 160 ದಿನಗಳ ಅಂತರದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಏಪ್ರಿಲ್ 2003 ರಲ್ಲಿ ಕೊನೆಯದಾಗಿ ಏಕದಿನ ಪಂದ್ಯವನ್ನಾಡಿದ್ದ ಅಮಿತ್, ಆ ಬಳಿಕ 2009 ರ ಸೆಪ್ಟೆಂಬರ್​ನಲ್ಲಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು.

ಇನ್ನು ಈ ಪಟ್ಟಿಯಲ್ಲಿ ಈ ಇಬ್ಬರನ್ನು ಹೊರತುಪಡಿಸಿ, ತಂಡದ ಮಾಜಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಆಡಿದ ಎರಡು ಏಕದಿನ ಪಂದ್ಯಗಳ ನಡುವೆ 6 ವರ್ಷ, 160 ದಿನಗಳ ಅಂತರದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಏಪ್ರಿಲ್ 2003 ರಲ್ಲಿ ಕೊನೆಯದಾಗಿ ಏಕದಿನ ಪಂದ್ಯವನ್ನಾಡಿದ್ದ ಅಮಿತ್, ಆ ಬಳಿಕ 2009 ರ ಸೆಪ್ಟೆಂಬರ್​ನಲ್ಲಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು.

5 / 8
ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ವಿಕೆಟ್‌ಕೀಪರ್ ಪಾರ್ಥಿವ್ ಪಟೇಲ್, ಆರು ವರ್ಷ, 133 ದಿನಗಳ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ವಿಕೆಟ್‌ಕೀಪರ್ ಪಾರ್ಥಿವ್ ಪಟೇಲ್, ಆರು ವರ್ಷ, 133 ದಿನಗಳ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

6 / 8
ಹಾಗೆಯೇ ಕನ್ನಡಿಗ ರಾಬಿನ್ ಉತ್ತಪ್ಪ ಐದು ವರ್ಷ, 344 ದಿನಗಳ ದೊಡ್ಡ ಅಂತರದ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆದು, ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ಹಾಗೆಯೇ ಕನ್ನಡಿಗ ರಾಬಿನ್ ಉತ್ತಪ್ಪ ಐದು ವರ್ಷ, 344 ದಿನಗಳ ದೊಡ್ಡ ಅಂತರದ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆದು, ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

7 / 8
ಏತನ್ಮಧ್ಯೆ, ವಿಶ್ವ ಕ್ರಿಕೆಟ್​ನಲ್ಲಿ ಎರಡು ಏಕದಿನ ಪಂದ್ಯಗಳ ನಡುವೆ ಸುದೀರ್ಘ ಅಂತರವನ್ನು ಹೊಂದಿರುವ ಆಟಗಾರರ ಸಾರ್ವಕಾಲಿಕ ಪಟ್ಟಿಯಲ್ಲಿ ಜಯದೇವ್ ಉನದ್ಕಟ್ 8 ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಜೆಫ್ ವಿಲ್ಸನ್ ಅವರು 11 ವರ್ಷ, 331 ದಿನಗಳ ನಂತರ ತಮ್ಮ ದೇಶದ ಪರ ಏಕದಿನ ಪಂದ್ಯವನ್ನಾಡಿದ್ದು, ಇದುವರೆಗಿನ ದಾಖಲೆಯಾಗಿದೆ.

ಏತನ್ಮಧ್ಯೆ, ವಿಶ್ವ ಕ್ರಿಕೆಟ್​ನಲ್ಲಿ ಎರಡು ಏಕದಿನ ಪಂದ್ಯಗಳ ನಡುವೆ ಸುದೀರ್ಘ ಅಂತರವನ್ನು ಹೊಂದಿರುವ ಆಟಗಾರರ ಸಾರ್ವಕಾಲಿಕ ಪಟ್ಟಿಯಲ್ಲಿ ಜಯದೇವ್ ಉನದ್ಕಟ್ 8 ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಜೆಫ್ ವಿಲ್ಸನ್ ಅವರು 11 ವರ್ಷ, 331 ದಿನಗಳ ನಂತರ ತಮ್ಮ ದೇಶದ ಪರ ಏಕದಿನ ಪಂದ್ಯವನ್ನಾಡಿದ್ದು, ಇದುವರೆಗಿನ ದಾಖಲೆಯಾಗಿದೆ.

8 / 8
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು