AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: 3539 ದಿನಗಳ ಬಳಿಕ ಕಣಕ್ಕಿಳಿದು 27 ವರ್ಷಗಳ ಹಳೆಯ ದಾಖಲೆ ಮುರಿದ ಜಯದೇವ್ ಉನದ್ಕಟ್‌!

Jaydev Unadkat: ಜಯದೇವ್ ಉನದ್ಕಟ್ ಬರೋಬ್ಬರಿ 3539 ದಿನಗಳ ಬಳಿಕ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು 27 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಪೃಥ್ವಿಶಂಕರ
|

Updated on: Aug 02, 2023 | 6:41 AM

Share
ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್‌ನ ತರೂಬಾದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 200 ರನ್​ಗಳ ಬೃಹತ್ ಗೆಲುವು ದಾಖಲಿಸಿದೆ ಇದರೊಂದಿಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ವೆಸ್ಟ್ ಇಂಡೀಸ್ ವಿರುದ್ಧ ಟ್ರಿನಿಡಾಡ್‌ನ ತರೂಬಾದ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 200 ರನ್​ಗಳ ಬೃಹತ್ ಗೆಲುವು ದಾಖಲಿಸಿದೆ ಇದರೊಂದಿಗೆ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ.

1 / 8
ಇನ್ನು ಸರಣಿಯೂದ್ದಕ್ಕು ಮಾಡಿಕೊಂಡ ಬದಲಾವಣೆಯನ್ನು ಈ ಪಂದ್ಯದಲ್ಲೂ ಟೀಂ ಇಂಡಿಯಾ ಮಾಡಿತ್ತು. ವೇಗಿ ಉಮ್ರಾನ್ ಮಲಿಕ್ ಬದಲು, ತಂಡದಲ್ಲಿ ಸ್ಥಾನ ಪಡೆದಿದ್ದ ಜಯದೇವ್ ಉನದ್ಕಟ್ ಈ ರೀ ಎಂಟ್ರಿಯೊಂದಿಗೆ ಬರೋಬ್ಬರಿ 3539 ದಿನಗಳ ಬಳಿಕ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು 27 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

ಇನ್ನು ಸರಣಿಯೂದ್ದಕ್ಕು ಮಾಡಿಕೊಂಡ ಬದಲಾವಣೆಯನ್ನು ಈ ಪಂದ್ಯದಲ್ಲೂ ಟೀಂ ಇಂಡಿಯಾ ಮಾಡಿತ್ತು. ವೇಗಿ ಉಮ್ರಾನ್ ಮಲಿಕ್ ಬದಲು, ತಂಡದಲ್ಲಿ ಸ್ಥಾನ ಪಡೆದಿದ್ದ ಜಯದೇವ್ ಉನದ್ಕಟ್ ಈ ರೀ ಎಂಟ್ರಿಯೊಂದಿಗೆ ಬರೋಬ್ಬರಿ 3539 ದಿನಗಳ ಬಳಿಕ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದು 27 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ.

2 / 8
ವಾಸ್ತವವಾಗಿ 2013 ರ ಬಳಿಕ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದ ಉನದ್ಕಟ್ ಎರಡು ಏಕದಿನ ಪಂದ್ಯಗಳ ನಡುವೆ ಸುದೀರ್ಘ ಅಂತರವನ್ನು ಹೊಂದಿರುವ ಭಾರತದ ಮೊದಲ ಆಟಗಾರನೆಂಬ ದಾಖಲೆ ಬರೆದಿದ್ದಾರೆ.

ವಾಸ್ತವವಾಗಿ 2013 ರ ಬಳಿಕ ಮತ್ತೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದ ಉನದ್ಕಟ್ ಎರಡು ಏಕದಿನ ಪಂದ್ಯಗಳ ನಡುವೆ ಸುದೀರ್ಘ ಅಂತರವನ್ನು ಹೊಂದಿರುವ ಭಾರತದ ಮೊದಲ ಆಟಗಾರನೆಂಬ ದಾಖಲೆ ಬರೆದಿದ್ದಾರೆ.

3 / 8
ಉನದ್ಕಟ್​ಗೂ ಮೊದಲು, ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಸಿಂಗ್ ಎರಡು ಏಕದಿನ ಪಂದ್ಯಗಳ ನಡುವೆ ಏಳು ವರ್ಷ, 230 ದಿನಗಳ ಅಂತರದೊಂದಿಗೆ ಈ ದಾಖಲೆಯನ್ನು ಹೊಂದಿದ್ದರು. ಆದರೆ ಇದೀಗ ಉನದ್ಕಟ್ 9 ವರ್ಷ 210 ದಿನಗಳ ಬಳಿಕ ಏಕದಿನ ಪಂದ್ಯ ಆಡಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಉನದ್ಕಟ್​ಗೂ ಮೊದಲು, ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಸಿಂಗ್ ಎರಡು ಏಕದಿನ ಪಂದ್ಯಗಳ ನಡುವೆ ಏಳು ವರ್ಷ, 230 ದಿನಗಳ ಅಂತರದೊಂದಿಗೆ ಈ ದಾಖಲೆಯನ್ನು ಹೊಂದಿದ್ದರು. ಆದರೆ ಇದೀಗ ಉನದ್ಕಟ್ 9 ವರ್ಷ 210 ದಿನಗಳ ಬಳಿಕ ಏಕದಿನ ಪಂದ್ಯ ಆಡಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

4 / 8
ಇನ್ನು ಈ ಪಟ್ಟಿಯಲ್ಲಿ ಈ ಇಬ್ಬರನ್ನು ಹೊರತುಪಡಿಸಿ, ತಂಡದ ಮಾಜಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಆಡಿದ ಎರಡು ಏಕದಿನ ಪಂದ್ಯಗಳ ನಡುವೆ 6 ವರ್ಷ, 160 ದಿನಗಳ ಅಂತರದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಏಪ್ರಿಲ್ 2003 ರಲ್ಲಿ ಕೊನೆಯದಾಗಿ ಏಕದಿನ ಪಂದ್ಯವನ್ನಾಡಿದ್ದ ಅಮಿತ್, ಆ ಬಳಿಕ 2009 ರ ಸೆಪ್ಟೆಂಬರ್​ನಲ್ಲಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು.

ಇನ್ನು ಈ ಪಟ್ಟಿಯಲ್ಲಿ ಈ ಇಬ್ಬರನ್ನು ಹೊರತುಪಡಿಸಿ, ತಂಡದ ಮಾಜಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ ಅವರು ಆಡಿದ ಎರಡು ಏಕದಿನ ಪಂದ್ಯಗಳ ನಡುವೆ 6 ವರ್ಷ, 160 ದಿನಗಳ ಅಂತರದೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಏಪ್ರಿಲ್ 2003 ರಲ್ಲಿ ಕೊನೆಯದಾಗಿ ಏಕದಿನ ಪಂದ್ಯವನ್ನಾಡಿದ್ದ ಅಮಿತ್, ಆ ಬಳಿಕ 2009 ರ ಸೆಪ್ಟೆಂಬರ್​ನಲ್ಲಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದರು.

5 / 8
ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ವಿಕೆಟ್‌ಕೀಪರ್ ಪಾರ್ಥಿವ್ ಪಟೇಲ್, ಆರು ವರ್ಷ, 133 ದಿನಗಳ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ವಿಕೆಟ್‌ಕೀಪರ್ ಪಾರ್ಥಿವ್ ಪಟೇಲ್, ಆರು ವರ್ಷ, 133 ದಿನಗಳ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

6 / 8
ಹಾಗೆಯೇ ಕನ್ನಡಿಗ ರಾಬಿನ್ ಉತ್ತಪ್ಪ ಐದು ವರ್ಷ, 344 ದಿನಗಳ ದೊಡ್ಡ ಅಂತರದ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆದು, ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

ಹಾಗೆಯೇ ಕನ್ನಡಿಗ ರಾಬಿನ್ ಉತ್ತಪ್ಪ ಐದು ವರ್ಷ, 344 ದಿನಗಳ ದೊಡ್ಡ ಅಂತರದ ನಂತರ ಏಕದಿನ ತಂಡದಲ್ಲಿ ಸ್ಥಾನ ಪಡೆದು, ಈ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದ್ದಾರೆ.

7 / 8
ಏತನ್ಮಧ್ಯೆ, ವಿಶ್ವ ಕ್ರಿಕೆಟ್​ನಲ್ಲಿ ಎರಡು ಏಕದಿನ ಪಂದ್ಯಗಳ ನಡುವೆ ಸುದೀರ್ಘ ಅಂತರವನ್ನು ಹೊಂದಿರುವ ಆಟಗಾರರ ಸಾರ್ವಕಾಲಿಕ ಪಟ್ಟಿಯಲ್ಲಿ ಜಯದೇವ್ ಉನದ್ಕಟ್ 8 ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಜೆಫ್ ವಿಲ್ಸನ್ ಅವರು 11 ವರ್ಷ, 331 ದಿನಗಳ ನಂತರ ತಮ್ಮ ದೇಶದ ಪರ ಏಕದಿನ ಪಂದ್ಯವನ್ನಾಡಿದ್ದು, ಇದುವರೆಗಿನ ದಾಖಲೆಯಾಗಿದೆ.

ಏತನ್ಮಧ್ಯೆ, ವಿಶ್ವ ಕ್ರಿಕೆಟ್​ನಲ್ಲಿ ಎರಡು ಏಕದಿನ ಪಂದ್ಯಗಳ ನಡುವೆ ಸುದೀರ್ಘ ಅಂತರವನ್ನು ಹೊಂದಿರುವ ಆಟಗಾರರ ಸಾರ್ವಕಾಲಿಕ ಪಟ್ಟಿಯಲ್ಲಿ ಜಯದೇವ್ ಉನದ್ಕಟ್ 8 ನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್‌ನ ಜೆಫ್ ವಿಲ್ಸನ್ ಅವರು 11 ವರ್ಷ, 331 ದಿನಗಳ ನಂತರ ತಮ್ಮ ದೇಶದ ಪರ ಏಕದಿನ ಪಂದ್ಯವನ್ನಾಡಿದ್ದು, ಇದುವರೆಗಿನ ದಾಖಲೆಯಾಗಿದೆ.

8 / 8
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ನಟ ಭಯಂಕರ ವಜ್ರಮುನಿ ಅವರ ಕೊನೆಯ ದಿನಗಳು ಹೇಗಿದ್ದವು: ವಿಡಿಯೋ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ