AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs West Indies: ಭಾರತ ಟೆಸ್ಟ್ ತಂಡದಲ್ಲಿ ಪೂಜಾರ ಸ್ಥಾನ ತುಂಬಬಲ್ಲ 4 ಆಟಗಾರರಿವರು

India vs West Indies: ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಯುತ್ತಾರೆ. ಈ ಕ್ರಮಾಂಕಕ್ಕೆ ಬಹಳ ಮಹತ್ವವಿದೆ.

ಪೃಥ್ವಿಶಂಕರ
|

Updated on: Jun 25, 2023 | 9:55 AM

Share
ಭಾರತ ಟೆಸ್ಟ್ ತಂಡದಿಂದ ಹೊರಬಿದ್ದಿರುವ ಚೇತೇಶ್ವರ ಪೂಜಾರ ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಮತ್ತೆ ಫಾರ್ಮ್​ಗೆ ಮರಳುವ ಯತ್ನದಲ್ಲಿದ್ದಾರೆ. ಇತ್ತ ಪೂಜಾರ ಅವರ ಸ್ಥಾನ ತೆರವಾಗಿರುವುದರಿಂದ ಅವರ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ.

ಭಾರತ ಟೆಸ್ಟ್ ತಂಡದಿಂದ ಹೊರಬಿದ್ದಿರುವ ಚೇತೇಶ್ವರ ಪೂಜಾರ ದೇಶೀ ಕ್ರಿಕೆಟ್​ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಮತ್ತೆ ಫಾರ್ಮ್​ಗೆ ಮರಳುವ ಯತ್ನದಲ್ಲಿದ್ದಾರೆ. ಇತ್ತ ಪೂಜಾರ ಅವರ ಸ್ಥಾನ ತೆರವಾಗಿರುವುದರಿಂದ ಅವರ ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ.

1 / 7
ಪ್ರಸ್ತುತ ವಿಂಡೀಸ್ ಪ್ರವಾಸಕ್ಕೆ ಪೂಜಾರ ಬದಲಿಗೆ ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಒಂದು ವೇಳೆ ದೇಶೀ ಸೀಸನ್​ನಲ್ಲೂ ಪೂಜಾರ ಮತ್ತೆ ಫಾರ್ಮ್​ ಕಂಡುಕೊಳ್ಳದಿದ್ದರೆ, ಅವರ ಸ್ಥಾನಕ್ಕೆ ಖಾಯಂ ಆಟಗಾರನೊಬ್ಬನನ್ನು ಹುಡುಕುವ ಕೆಲಸ ಬಿಸಿಸಿಐ ಮುಂದಿದೆ.

ಪ್ರಸ್ತುತ ವಿಂಡೀಸ್ ಪ್ರವಾಸಕ್ಕೆ ಪೂಜಾರ ಬದಲಿಗೆ ರುತುರಾಜ್ ಗಾಯಕ್ವಾಡ್ ಹಾಗೂ ಯಶಸ್ವಿ ಜೈಸ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಒಂದು ವೇಳೆ ದೇಶೀ ಸೀಸನ್​ನಲ್ಲೂ ಪೂಜಾರ ಮತ್ತೆ ಫಾರ್ಮ್​ ಕಂಡುಕೊಳ್ಳದಿದ್ದರೆ, ಅವರ ಸ್ಥಾನಕ್ಕೆ ಖಾಯಂ ಆಟಗಾರನೊಬ್ಬನನ್ನು ಹುಡುಕುವ ಕೆಲಸ ಬಿಸಿಸಿಐ ಮುಂದಿದೆ.

2 / 7
ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಯುತ್ತಾರೆ. ಈ ಕ್ರಮಾಂಕಕ್ಕೆ ಬಹಳ ಮಹತ್ವವಿದೆ. ಏಕೆಂದರೆ ಆರಂಭಿಕರು ಉತ್ತಮ ಜೊತೆಯಾಟ ನಡೆಸುವಲ್ಲಿ ವಿಫಲರಾದರೆ ಆ ಜವಬ್ದಾರಿ 3ನೇ ಕ್ರಮಾಂಕದ ಬ್ಯಾಟರ್​ ಮೇಲೆ ಬೀಳುತ್ತದೆ. ಹೀಗಾಗಿ ಆ ಸ್ಥಾನವನ್ನು ತುಂಬಲು ಒಬ್ಬ ಪ್ರತಿಭಾವಂತ ಆಟಗಾರನಿಂದ ಮಾತ್ರ ಸಾಧ್ಯ. ಹೀಗಾಗಿ ಪೂಜಾರ ಬದಲಿ ಆಟಗಾರನನ್ನು ಹುಡುಕುತ್ತಿರುವ ಬಿಸಿಸಿಐಗೆ ಪ್ರಮುಖವಾಗಿ 4 ಆಯ್ಕೆಗಳಿವೆ.

ಪೂಜಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಪರ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿಯುತ್ತಾರೆ. ಈ ಕ್ರಮಾಂಕಕ್ಕೆ ಬಹಳ ಮಹತ್ವವಿದೆ. ಏಕೆಂದರೆ ಆರಂಭಿಕರು ಉತ್ತಮ ಜೊತೆಯಾಟ ನಡೆಸುವಲ್ಲಿ ವಿಫಲರಾದರೆ ಆ ಜವಬ್ದಾರಿ 3ನೇ ಕ್ರಮಾಂಕದ ಬ್ಯಾಟರ್​ ಮೇಲೆ ಬೀಳುತ್ತದೆ. ಹೀಗಾಗಿ ಆ ಸ್ಥಾನವನ್ನು ತುಂಬಲು ಒಬ್ಬ ಪ್ರತಿಭಾವಂತ ಆಟಗಾರನಿಂದ ಮಾತ್ರ ಸಾಧ್ಯ. ಹೀಗಾಗಿ ಪೂಜಾರ ಬದಲಿ ಆಟಗಾರನನ್ನು ಹುಡುಕುತ್ತಿರುವ ಬಿಸಿಸಿಐಗೆ ಪ್ರಮುಖವಾಗಿ 4 ಆಯ್ಕೆಗಳಿವೆ.

3 / 7
1. ಶುಭ್‌ಮನ್ ಗಿಲ್- ಟೀಂ ಇಂಡಿಯಾ ಈ ಹಿಂದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಶುಭ್‌ಮನ್ ಗಿಲ್ ಅವರನ್ನು 3ನೇ ಕ್ರಮಾಂಕದಲ್ಲಿ ಆಡಲು ಪ್ರಯತ್ನಿಸಿತ್ತು. ಏಕೆಂದರೆ ಆ ವೇಳೆಗೆ ಕೆಎಲ್ ರಾಹುಲ್, ನಾಯಕ ರೋಹಿತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಆದರೆ ಈ ಮೂವರಲ್ಲಿ ಇಬ್ಬರು ಇಂಜುರಿ ಹಾಗೂ ಕಳಪೆ ಫಾರ್ಮ್​ನಿಂದಾಗಿ ತಂಡದಿಂದ ಹೊರಬಿದ್ದ ಬಳಿಕ ಗಿಲ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಿತು. ಸದ್ಯ ಆರಂಭಿಕ ಸ್ಥಾನಕ್ಕೆ ಕಿಶನ್, ಜೈಸ್ವಾಲ್, ರುತುರಾಜ್ ಸ್ಪರ್ಧೆಯಲ್ಲಿರುವುದರಿಂದ ಗಿಲ್​ರನ್ನು 3ನೇ ಕ್ರಮಾಂಕದಲ್ಲಿ ಆಡಿಸಬಹುದಾಗಿದೆ.

1. ಶುಭ್‌ಮನ್ ಗಿಲ್- ಟೀಂ ಇಂಡಿಯಾ ಈ ಹಿಂದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಶುಭ್‌ಮನ್ ಗಿಲ್ ಅವರನ್ನು 3ನೇ ಕ್ರಮಾಂಕದಲ್ಲಿ ಆಡಲು ಪ್ರಯತ್ನಿಸಿತ್ತು. ಏಕೆಂದರೆ ಆ ವೇಳೆಗೆ ಕೆಎಲ್ ರಾಹುಲ್, ನಾಯಕ ರೋಹಿತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಆದರೆ ಈ ಮೂವರಲ್ಲಿ ಇಬ್ಬರು ಇಂಜುರಿ ಹಾಗೂ ಕಳಪೆ ಫಾರ್ಮ್​ನಿಂದಾಗಿ ತಂಡದಿಂದ ಹೊರಬಿದ್ದ ಬಳಿಕ ಗಿಲ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಿತು. ಸದ್ಯ ಆರಂಭಿಕ ಸ್ಥಾನಕ್ಕೆ ಕಿಶನ್, ಜೈಸ್ವಾಲ್, ರುತುರಾಜ್ ಸ್ಪರ್ಧೆಯಲ್ಲಿರುವುದರಿಂದ ಗಿಲ್​ರನ್ನು 3ನೇ ಕ್ರಮಾಂಕದಲ್ಲಿ ಆಡಿಸಬಹುದಾಗಿದೆ.

4 / 7
2. ಯಶಸ್ವಿ ಜೈಸ್ವಾಲ್- ತಂಡವು ಪ್ರಯೋಗಗಳಿಗಿಂತ ನಿರಂತರತೆಗೆ ಆದ್ಯತೆ ನೀಡಿದರೆ, ಗಿಲ್ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಹೀಗಾಗಿ ಮೊದಲ ಬಾರಿಗೆ ತಂಡಕ್ಕೆ ಆಯ್ಕೆಯಾಗಿರುವ ಯಶಸ್ವಿ ಜೈಸ್ವಾಲ್ 3ನೇ ಕ್ರಮಾಂಕದಲ್ಲಿ ಆಡುವ ಅವಕಾಶವಿದೆ. ಅಲ್ಲದೆ ಜೈಸ್ವಾಲ್ ಎಡಗೈ ಬ್ಯಾಟರ್ ಆಗಿರುವುದು ಕೂಡ ಈ ಜಾಗಕ್ಕೆ ಉತ್ತಮ ಆಯ್ಕೆಯಾಗಿದೆ. ಹಾಗೆಯೇ ಜೈಸ್ವಾಲ್ ಕೂಡ ದೇಶೀ ಕ್ರಿಕೆಟ್​ನಲ್ಲಿ 3ನೇ ಕ್ರಮಾಂಕದಲ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ.

2. ಯಶಸ್ವಿ ಜೈಸ್ವಾಲ್- ತಂಡವು ಪ್ರಯೋಗಗಳಿಗಿಂತ ನಿರಂತರತೆಗೆ ಆದ್ಯತೆ ನೀಡಿದರೆ, ಗಿಲ್ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಹೀಗಾಗಿ ಮೊದಲ ಬಾರಿಗೆ ತಂಡಕ್ಕೆ ಆಯ್ಕೆಯಾಗಿರುವ ಯಶಸ್ವಿ ಜೈಸ್ವಾಲ್ 3ನೇ ಕ್ರಮಾಂಕದಲ್ಲಿ ಆಡುವ ಅವಕಾಶವಿದೆ. ಅಲ್ಲದೆ ಜೈಸ್ವಾಲ್ ಎಡಗೈ ಬ್ಯಾಟರ್ ಆಗಿರುವುದು ಕೂಡ ಈ ಜಾಗಕ್ಕೆ ಉತ್ತಮ ಆಯ್ಕೆಯಾಗಿದೆ. ಹಾಗೆಯೇ ಜೈಸ್ವಾಲ್ ಕೂಡ ದೇಶೀ ಕ್ರಿಕೆಟ್​ನಲ್ಲಿ 3ನೇ ಕ್ರಮಾಂಕದಲ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ.

5 / 7
3. ರುತುರಾಜ್ ಗಾಯಕ್ವಾಡ್ - ರುತುರಾಜ್ ಗಾಯಕ್ವಾಡ್ ಭಾರತ ಟೆಸ್ ತಂಡಕ್ಕೆ ಅಚ್ಚರಿಯ ಸೇರ್ಪಡೆಯಾಗಿದೆ. ಏಕೆಂದರೆ ಜೈಸ್ವಾಲ್ ಸೇರಿದಂತೆ ತಂಡದಲ್ಲಿ ಈಗಾಗಲೇ ಮೂವರು ಆರಂಭಿಕರಿದ್ದಾರೆ. ಅದಾಗ್ಯೂ ರುತುರಾಜ್​ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಒಂದು ವೇಳೆ ಜೈಸ್ವಾಲ್ 3ನೇ ಕ್ರಮಾಂಕದಲ್ಲಿ ಕ್ಲಿಕ್ ಆಗದಿದ್ದರೆ, ಆಗ ರುತುರಾಜ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

3. ರುತುರಾಜ್ ಗಾಯಕ್ವಾಡ್ - ರುತುರಾಜ್ ಗಾಯಕ್ವಾಡ್ ಭಾರತ ಟೆಸ್ ತಂಡಕ್ಕೆ ಅಚ್ಚರಿಯ ಸೇರ್ಪಡೆಯಾಗಿದೆ. ಏಕೆಂದರೆ ಜೈಸ್ವಾಲ್ ಸೇರಿದಂತೆ ತಂಡದಲ್ಲಿ ಈಗಾಗಲೇ ಮೂವರು ಆರಂಭಿಕರಿದ್ದಾರೆ. ಅದಾಗ್ಯೂ ರುತುರಾಜ್​ಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಒಂದು ವೇಳೆ ಜೈಸ್ವಾಲ್ 3ನೇ ಕ್ರಮಾಂಕದಲ್ಲಿ ಕ್ಲಿಕ್ ಆಗದಿದ್ದರೆ, ಆಗ ರುತುರಾಜ್​ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

6 / 7
4. ಅಜಿಂಕ್ಯ ರಹಾನೆ - ಸದ್ಯ ಟೀಂ ಇಂಡಿಯಾದ ಉಪನಾಯಕನಾಗಿರುವ ಅಜಿಂಕ್ಯ ರಹಾನೆ ಕೂಡ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಈ ಹಿಂದೆ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರಹಾನೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಹೀಗಾಗಿ ಅನುಭವಿ ರಹಾನೆ ಕೂಡ 3ನೇ ಕ್ರಮಾಂಕಕ್ಕೆ ಸೂಕ್ತ ಆಯ್ಕೆಯಾಗಲಿದ್ದಾರೆ.

4. ಅಜಿಂಕ್ಯ ರಹಾನೆ - ಸದ್ಯ ಟೀಂ ಇಂಡಿಯಾದ ಉಪನಾಯಕನಾಗಿರುವ ಅಜಿಂಕ್ಯ ರಹಾನೆ ಕೂಡ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಸಾಮಥ್ರ್ಯ ಹೊಂದಿದ್ದಾರೆ. ಈ ಹಿಂದೆ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ರಹಾನೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಹೀಗಾಗಿ ಅನುಭವಿ ರಹಾನೆ ಕೂಡ 3ನೇ ಕ್ರಮಾಂಕಕ್ಕೆ ಸೂಕ್ತ ಆಯ್ಕೆಯಾಗಲಿದ್ದಾರೆ.

7 / 7
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ