AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಸಿಕ್ಸರ್ ಸಿಡಿಸಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಹಾರ್ದಿಕ್ ಪಾಂಡ್ಯ..!

Hardik Pandya: ವಾಸ್ತವವಾಗಿ ಸಿಕ್ಸರ್ ಸಿಡಿಸುವ ಮೂಲಕ ಜಯ ತಂದುಕೊಟ್ಟ ಪಾಂಡ್ಯ, ಟಿ20ಯಲ್ಲಿ ಈ ರೀತಿಯಾಗಿ ಅಂದರೆ, ಸಿಕ್ಸರ್ ಸಿಡಿಸುವ ಮೂಲಕ ತಂಡವನ್ನು 4ನೇ ಬಾರಿಗೆ ಗೆಲುವಿನ ದಡ ಮುಟ್ಟಿಸಿದರು. 18ನೇ ಓವರ್​ನ ಐದನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ರೋಚಕ ಜಯ ತಂದುಕೊಟ್ಟ ಪಾಂಡ್ಯ ಈ ಗೆಲುವಿನ ಸಿಕ್ಸರ್ ಜೊತೆಗೆ ಕೊಹ್ಲಿ ದಾಖಲೆಯನ್ನು ಮುರಿದರು.

ಪೃಥ್ವಿಶಂಕರ
|

Updated on:Aug 09, 2023 | 10:42 AM

Share
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ವಿಂಡೀಸ್ ನೀಡಿದ 159 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಇನ್ನು 13 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ 7 ವಿಕೆಟ್​ಗಳ ಭರ್ಜರಿ ಜಯ ದಾಖಲಿಸಿದೆ. ವಿಂಡೀಸ್ ನೀಡಿದ 159 ರನ್​ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಇನ್ನು 13 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು.

1 / 7
ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಕುಲ್ದೀಪ್ ಯಾದವ್ 3 ವಿಕೆಟ್ ಪಡೆದು ಮಿಂಚಿದರೆ, ಸೂರ್ಯಕುಮಾರ್ ಯಾದವ್ 83 ರನ್ ಹಾಗೂ ತಿಲಕ್ ವರ್ಮಾ ಅಜೇಯ 49 ರನ್​ಗಳ ಇನ್ನಿಂಗ್ಸ್ ಆಡಿದರು. ಇವರೊಂದಿಗೆ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಅಜೇಯ 20 ರನ್ ಬಾರಿಸಿದರು.

ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಕುಲ್ದೀಪ್ ಯಾದವ್ 3 ವಿಕೆಟ್ ಪಡೆದು ಮಿಂಚಿದರೆ, ಸೂರ್ಯಕುಮಾರ್ ಯಾದವ್ 83 ರನ್ ಹಾಗೂ ತಿಲಕ್ ವರ್ಮಾ ಅಜೇಯ 49 ರನ್​ಗಳ ಇನ್ನಿಂಗ್ಸ್ ಆಡಿದರು. ಇವರೊಂದಿಗೆ ನಾಯಕ ಹಾರ್ದಿಕ್ ಪಾಂಡ್ಯ ಕೂಡ ಅಜೇಯ 20 ರನ್ ಬಾರಿಸಿದರು.

2 / 7
ಅದರಲ್ಲೂ 18ನೇ ಓವರ್​ನ ಐದನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಹಾರ್ದಿಕ್ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದು ವಿಶೇಷವಾಗಿತ್ತು. ಅಲ್ಲದೆ ಈ ಗೆಲುವಿನ ಸಿಕ್ಸರ್ ಜೊತೆಗೆ ಪಾಂಡ್ಯ, ಕೊಹ್ಲಿ ದಾಖಲೆಯನ್ನು ಮುರಿದರು.

ಅದರಲ್ಲೂ 18ನೇ ಓವರ್​ನ ಐದನೇ ಎಸೆತದಲ್ಲಿ ಸಿಕ್ಸರ್ ಬಾರಿಸುವ ಮೂಲಕ ಹಾರ್ದಿಕ್ ತಂಡಕ್ಕೆ ರೋಚಕ ಜಯ ತಂದುಕೊಟ್ಟಿದ್ದು ವಿಶೇಷವಾಗಿತ್ತು. ಅಲ್ಲದೆ ಈ ಗೆಲುವಿನ ಸಿಕ್ಸರ್ ಜೊತೆಗೆ ಪಾಂಡ್ಯ, ಕೊಹ್ಲಿ ದಾಖಲೆಯನ್ನು ಮುರಿದರು.

3 / 7
ವಾಸ್ತವವಾಗಿ ಸಿಕ್ಸರ್ ಸಿಡಿಸುವ ಮೂಲಕ ಜಯ ತಂದುಕೊಟ್ಟ ಪಾಂಡ್ಯ, ಟಿ20ಯಲ್ಲಿ ಈ ರೀತಿಯಾಗಿ ಅಂದರೆ, ಸಿಕ್ಸರ್ ಸಿಡಿಸುವ ಮೂಲಕ ತಂಡವನ್ನು 4ನೇ ಬಾರಿಗೆ ಗೆಲುವಿನ ದಡ ಮುಟ್ಟಿಸಿದರು.

ವಾಸ್ತವವಾಗಿ ಸಿಕ್ಸರ್ ಸಿಡಿಸುವ ಮೂಲಕ ಜಯ ತಂದುಕೊಟ್ಟ ಪಾಂಡ್ಯ, ಟಿ20ಯಲ್ಲಿ ಈ ರೀತಿಯಾಗಿ ಅಂದರೆ, ಸಿಕ್ಸರ್ ಸಿಡಿಸುವ ಮೂಲಕ ತಂಡವನ್ನು 4ನೇ ಬಾರಿಗೆ ಗೆಲುವಿನ ದಡ ಮುಟ್ಟಿಸಿದರು.

4 / 7
ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಈ ಚುಟುಕು ಮಾದರಿಯಲ್ಲಿ ಸಿಕ್ಸರ್ ಸಿಡಿಸುವ ಮೂಲಕ ತಂಡಕ್ಕೆ 4 ಬಾರಿ ಗೆಲುವು ತಂದುಕೊಟ್ಟಿದ್ದಾರೆ. ಇದೀಗ ಈ ದಾಖಲೆಯನ್ನು ಪಾಂಡ್ಯ ಸರಿಗಟ್ಟಿದ್ದಾರೆ.

ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಈ ಚುಟುಕು ಮಾದರಿಯಲ್ಲಿ ಸಿಕ್ಸರ್ ಸಿಡಿಸುವ ಮೂಲಕ ತಂಡಕ್ಕೆ 4 ಬಾರಿ ಗೆಲುವು ತಂದುಕೊಟ್ಟಿದ್ದಾರೆ. ಇದೀಗ ಈ ದಾಖಲೆಯನ್ನು ಪಾಂಡ್ಯ ಸರಿಗಟ್ಟಿದ್ದಾರೆ.

5 / 7
ಇನ್ನು ಈ ಟಿ20 ಸರಣಿ ಮೂಲಕ ಭಾರತ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಯುವ ಬ್ಯಾಟರ್ ತಿಲಕ್ ವರ್ಮಾ ಕೂಡ ಆಡಿರುವ ಮೂರು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನಿಡಿದ್ದಾರೆ. 2ನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ತಿಲಕ್, ಈ ಪಂದ್ಯದಲ್ಲೂ ಅಜೇಯ 49 ರನ್ ಸಿಡಿಸಿದರು.

ಇನ್ನು ಈ ಟಿ20 ಸರಣಿ ಮೂಲಕ ಭಾರತ ಕ್ರಿಕೆಟ್​ಗೆ ಪದಾರ್ಪಣೆ ಮಾಡಿರುವ ಯುವ ಬ್ಯಾಟರ್ ತಿಲಕ್ ವರ್ಮಾ ಕೂಡ ಆಡಿರುವ ಮೂರು ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನಿಡಿದ್ದಾರೆ. 2ನೇ ಟಿ20 ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದ ತಿಲಕ್, ಈ ಪಂದ್ಯದಲ್ಲೂ ಅಜೇಯ 49 ರನ್ ಸಿಡಿಸಿದರು.

6 / 7
ಕೇವಲ 1 ರನ್​ಗಳಿಂದ ಅರ್ಧಶತಕ ವಂಚಿತರಾದ ತಿಲಕ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ನಾಲ್ಕು ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಆಡುವಾಗ 49 ರನ್ ಗಳಿಸಿ ಅಜೇಯರಾಗಿ ಉಳಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡರು. ಇವರಿಗೂ ಮುನ್ನ 2016ರಲ್ಲಿ ಸುರೇಶ್ ರೈನಾ 49 ರನ್ ಸಿಡಿಸಿ ಅಜೇಯರಾಗಿ ಉಳಿದಿದ್ದರು.

ಕೇವಲ 1 ರನ್​ಗಳಿಂದ ಅರ್ಧಶತಕ ವಂಚಿತರಾದ ತಿಲಕ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ನಾಲ್ಕು ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಆಡುವಾಗ 49 ರನ್ ಗಳಿಸಿ ಅಜೇಯರಾಗಿ ಉಳಿದ ಎರಡನೇ ಭಾರತೀಯ ಆಟಗಾರ ಎನಿಸಿಕೊಂಡರು. ಇವರಿಗೂ ಮುನ್ನ 2016ರಲ್ಲಿ ಸುರೇಶ್ ರೈನಾ 49 ರನ್ ಸಿಡಿಸಿ ಅಜೇಯರಾಗಿ ಉಳಿದಿದ್ದರು.

7 / 7

Published On - 10:33 am, Wed, 9 August 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​