AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟಿ20 ತಂಡದಿಂದ ಹಿರಿಯರಿಗೆ ಕೋಕ್; ಹಾರ್ದಿಕ್ ಪಾಂಡ್ಯಗೆ ನಾಯಕತ್ವ..!

IND vs WI: ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಟಿ20 ನಾಯಕತ್ವವಹಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಅವರೇ ವಿಂಡೀಸ್ ವಿರುದ್ಧ ತಂಡವನ್ನು ಮುನ್ನಡೆಸಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 19, 2023 | 8:50 AM

ಫೆಬ್ರವರಿ ತಿಂಗಳಲ್ಲಿ ಕೊನೆಯದಾಗಿ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡಿದ್ದ ಟೀಂ ಇಂಡಿಯಾ ಇದೀಗ ಬರೋಬ್ಬರಿ 6 ತಿಂಗಳ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಎಲ್ಲಾ ಮೂರು ಮಾದರಿಗಳ ಕ್ರಿಕೆಟ್ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿರುವ ಭಾರತ, ಪ್ರವಾಸದ ಕೊನೆಯಲ್ಲಿ ಈ ಟಿ20 ಸರಣಿಯಲ್ಲಿ ಅಖಾಡಕ್ಕಿಳಿಯಲಿದೆ.

ಫೆಬ್ರವರಿ ತಿಂಗಳಲ್ಲಿ ಕೊನೆಯದಾಗಿ ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡಿದ್ದ ಟೀಂ ಇಂಡಿಯಾ ಇದೀಗ ಬರೋಬ್ಬರಿ 6 ತಿಂಗಳ ಬಳಿಕ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಎಲ್ಲಾ ಮೂರು ಮಾದರಿಗಳ ಕ್ರಿಕೆಟ್ ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರವಾಸ ಮಾಡಲಿರುವ ಭಾರತ, ಪ್ರವಾಸದ ಕೊನೆಯಲ್ಲಿ ಈ ಟಿ20 ಸರಣಿಯಲ್ಲಿ ಅಖಾಡಕ್ಕಿಳಿಯಲಿದೆ.

1 / 6
ಜುಲೈ 12 ರಿಂದ ಕೆರಿಬಿಯನ್ ತಂಡದ ವಿರುದ್ಧ ಟೆಸ್ಟ್ ಸರಣಿ ಆರಂಭಿಸಲಿರುವ ಭಾರತ, ಆ ಬಳಿಕ ಏಕದಿನ ಸರಣಿ ಆಡಲಿದೆ. ಅಂತಿಮವಾಗಿ ಆಗಸ್ಟ್ 3 ರಿಂದ 5 ಪಂದ್ಯಗಳ ಟಿ20 ಸರಣಿಯೊಂದಿಗೆ ವಿಂಡೀಸ್ ಪ್ರವಾಸ ಮುಗಿಸಲಿದೆ. ಈ ಮೂರು ಸರಣಿಗಾಗಿ ಪೂರ್ಣ ಪ್ರಮಾಣದ ಟೀಂ ಇಂಡಿಯಾ, ವಿಂಡೀಸ್​ಗೆ ಪ್ರಯಾಣ ಬೆಳೆಸುತ್ತಿದೆ.

ಜುಲೈ 12 ರಿಂದ ಕೆರಿಬಿಯನ್ ತಂಡದ ವಿರುದ್ಧ ಟೆಸ್ಟ್ ಸರಣಿ ಆರಂಭಿಸಲಿರುವ ಭಾರತ, ಆ ಬಳಿಕ ಏಕದಿನ ಸರಣಿ ಆಡಲಿದೆ. ಅಂತಿಮವಾಗಿ ಆಗಸ್ಟ್ 3 ರಿಂದ 5 ಪಂದ್ಯಗಳ ಟಿ20 ಸರಣಿಯೊಂದಿಗೆ ವಿಂಡೀಸ್ ಪ್ರವಾಸ ಮುಗಿಸಲಿದೆ. ಈ ಮೂರು ಸರಣಿಗಾಗಿ ಪೂರ್ಣ ಪ್ರಮಾಣದ ಟೀಂ ಇಂಡಿಯಾ, ವಿಂಡೀಸ್​ಗೆ ಪ್ರಯಾಣ ಬೆಳೆಸುತ್ತಿದೆ.

2 / 6
ಆದರೆ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಆಡಲ್ಲಿರುವ ಹಲವು ಹಿರಿಯ ಮುಖಗಳಿಗೆ ಟಿ20 ಸರಣಿಯಿಂದ ಕೋಕ್ ನೀಡಲಾಗುವುದು ಎಂದು ವರದಿಯಾಗಿದೆ. ಅಲ್ಲದೆ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಟಿ20 ನಾಯಕತ್ವವಹಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಅವರೇ ವಿಂಡೀಸ್ ವಿರುದ್ಧ ತಂಡವನ್ನು ಮುನ್ನಡೆಸಲ್ಲಿದ್ದಾರೆ.

ಆದರೆ ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಆಡಲ್ಲಿರುವ ಹಲವು ಹಿರಿಯ ಮುಖಗಳಿಗೆ ಟಿ20 ಸರಣಿಯಿಂದ ಕೋಕ್ ನೀಡಲಾಗುವುದು ಎಂದು ವರದಿಯಾಗಿದೆ. ಅಲ್ಲದೆ ಟಿ20 ವಿಶ್ವಕಪ್ ಬಳಿಕ ಟೀಂ ಇಂಡಿಯಾದ ಟಿ20 ನಾಯಕತ್ವವಹಿಸಿಕೊಂಡಿರುವ ಹಾರ್ದಿಕ್ ಪಾಂಡ್ಯ ಅವರೇ ವಿಂಡೀಸ್ ವಿರುದ್ಧ ತಂಡವನ್ನು ಮುನ್ನಡೆಸಲ್ಲಿದ್ದಾರೆ.

3 / 6
ವಾಸ್ತವವಾಗಿ ಟೀಂ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿ ಟಿ20 ತಂಡದಿಂದ ಹೊರಗುಳಿದಿದ್ದಾರೆ. ಟಿ20 ತಂಡದ ಅಧಿಕೃತ ನಾಯಕರಾಗಿ ಪಾಂಡ್ಯ ಅವರನ್ನು ಹೆಸರಿಸದಿದ್ದರೂ, ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

ವಾಸ್ತವವಾಗಿ ಟೀಂ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಮತ್ತು ಮೊಹಮ್ಮದ್ ಶಮಿ ಟಿ20 ತಂಡದಿಂದ ಹೊರಗುಳಿದಿದ್ದಾರೆ. ಟಿ20 ತಂಡದ ಅಧಿಕೃತ ನಾಯಕರಾಗಿ ಪಾಂಡ್ಯ ಅವರನ್ನು ಹೆಸರಿಸದಿದ್ದರೂ, ಅವರು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳುವ ನಿರೀಕ್ಷೆಯಿದೆ.

4 / 6
ಪಾಂಡ್ಯ ಅವರು 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ತಮ್ಮ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಮಾಡಿದ್ದರು. ಎಲ್ಲದೆ 16ನೇ ಆವೃತ್ತಿಯ ಐಪಿಎಲ್​ನಲ್ಲೂ ತಂಡವನ್ನು ಫೈನಲ್​ಗೆ ಕೊಂಡೊಯ್ದಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಂತಿಮ ಎಸೆತದಲ್ಲಿ ಸೋತು ನಿರಾಸೆ ಅನುಭವಿಸಿದ್ದರು.

ಪಾಂಡ್ಯ ಅವರು 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ತಮ್ಮ ಚೊಚ್ಚಲ ಆವೃತ್ತಿಯಲ್ಲೇ ಚಾಂಪಿಯನ್ ಮಾಡಿದ್ದರು. ಎಲ್ಲದೆ 16ನೇ ಆವೃತ್ತಿಯ ಐಪಿಎಲ್​ನಲ್ಲೂ ತಂಡವನ್ನು ಫೈನಲ್​ಗೆ ಕೊಂಡೊಯ್ದಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಂತಿಮ ಎಸೆತದಲ್ಲಿ ಸೋತು ನಿರಾಸೆ ಅನುಭವಿಸಿದ್ದರು.

5 / 6
ಇದೀಗ ಟಿ20 ತಂಡದಿಂದ ಹಿರಿಯ ಆಟಗಾರರನ್ನು ಕೈಬಿಡಲು ಸಿದ್ಧತೆ ನಡೆಸಿರುವ ಟೀಂ ಇಂಡಿಯಾದ ಆಯ್ಕೆದಾರರು, ಹಿರಿಯರ ಬದಲಿಗೆ ಯುವ ಪ್ರತಿಭೆಗಳಾದ ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್‌ ಅವರನ್ನು ಟಿ20 ತಂಡದಲ್ಲಿ ಆಡಿಸುವ ಸಾಧ್ಯತೆ ಇದೆ. ಈ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್ 3, 6, 8, 12 ಮತ್ತು 13 ರಂದು ನಡೆಯಲಿವೆ. ಕೊನೆಯ ಎರಡು ಪಂದ್ಯಗಳು ಫ್ಲೋರಿಡಾದಲ್ಲಿ ನಡೆಯಲಿವೆ.

ಇದೀಗ ಟಿ20 ತಂಡದಿಂದ ಹಿರಿಯ ಆಟಗಾರರನ್ನು ಕೈಬಿಡಲು ಸಿದ್ಧತೆ ನಡೆಸಿರುವ ಟೀಂ ಇಂಡಿಯಾದ ಆಯ್ಕೆದಾರರು, ಹಿರಿಯರ ಬದಲಿಗೆ ಯುವ ಪ್ರತಿಭೆಗಳಾದ ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್‌ ಅವರನ್ನು ಟಿ20 ತಂಡದಲ್ಲಿ ಆಡಿಸುವ ಸಾಧ್ಯತೆ ಇದೆ. ಈ ಐದು ಪಂದ್ಯಗಳ ಟಿ20 ಸರಣಿ ಆಗಸ್ಟ್ 3, 6, 8, 12 ಮತ್ತು 13 ರಂದು ನಡೆಯಲಿವೆ. ಕೊನೆಯ ಎರಡು ಪಂದ್ಯಗಳು ಫ್ಲೋರಿಡಾದಲ್ಲಿ ನಡೆಯಲಿವೆ.

6 / 6
Follow us
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ