AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಟಿ20 ಸರಣಿಯಿಂದ ಗಿಲ್​ಗೆ ವಿಶ್ರಾಂತಿ! ಯಾವ ಪ್ಲೇಯರ್​ಗೆ ಒಲಿಯಲಿದೆ ಅದೃಷ್ಟ?

IND vs WI: ಟೀಂ ಇಂಡಿಯಾದ ಮುಂದಿನ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಗಿಲ್ ಟಿ20 ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Jun 22, 2023 | 9:07 AM

ಟೀಂ ಇಂಡಿಯಾದ ಭವಿಷ್ಯದ ನಾಯಕ ಎಂದು ಬಿಂಬಿತವಾಗಿರುವ ಯುವ ಬ್ಯಾಟರ್ ಶುಭಮನ್ ಗಿಲ್‌ ಸದ್ಯ ಮೂರೂ ಮಾದರಿಗಳಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಈ ವರ್ಷ ಗಿಲ್ ಏಕದಿನದಲ್ಲಿ ದ್ವಿಶತಕ, ಟೆಸ್ಟ್‌ನಲ್ಲಿ ಶತಕ, ಐಪಿಎಲ್‌ನಲ್ಲಿ ಶತಕ ಮತ್ತು ಟಿ 20 ಅಂತರಾಷ್ಟ್ರೀಯ ಶತಕವನ್ನೂ ಸಿಡಿಸಿದ್ದಾರೆ. ಇದರೊಂದಿಗೆ ನಾನು ಟೀಂ ಇಂಡಿಯಾದ ಭವಿಷ್ಯದ ನಾಯಕನಾಗಲೂ ಅರ್ಹನೆಂಬ ಸಂದೇಶವನ್ನು ಬಿಸಿಸಿಐಗೆ ಕಳುಹಿಸಿದ್ದಾರೆ.

ಟೀಂ ಇಂಡಿಯಾದ ಭವಿಷ್ಯದ ನಾಯಕ ಎಂದು ಬಿಂಬಿತವಾಗಿರುವ ಯುವ ಬ್ಯಾಟರ್ ಶುಭಮನ್ ಗಿಲ್‌ ಸದ್ಯ ಮೂರೂ ಮಾದರಿಗಳಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಈ ವರ್ಷ ಗಿಲ್ ಏಕದಿನದಲ್ಲಿ ದ್ವಿಶತಕ, ಟೆಸ್ಟ್‌ನಲ್ಲಿ ಶತಕ, ಐಪಿಎಲ್‌ನಲ್ಲಿ ಶತಕ ಮತ್ತು ಟಿ 20 ಅಂತರಾಷ್ಟ್ರೀಯ ಶತಕವನ್ನೂ ಸಿಡಿಸಿದ್ದಾರೆ. ಇದರೊಂದಿಗೆ ನಾನು ಟೀಂ ಇಂಡಿಯಾದ ಭವಿಷ್ಯದ ನಾಯಕನಾಗಲೂ ಅರ್ಹನೆಂಬ ಸಂದೇಶವನ್ನು ಬಿಸಿಸಿಐಗೆ ಕಳುಹಿಸಿದ್ದಾರೆ.

1 / 9
ಆದರೆ ಈ ನಡುವೆ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಟೀಂ ಇಂಡಿಯಾದ ಮುಂದಿನ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಗಿಲ್ ಟಿ20 ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ವಾಸ್ತವವಾಗಿ ಭಾರತ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಬೇಕಿದೆ.

ಆದರೆ ಈ ನಡುವೆ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಟೀಂ ಇಂಡಿಯಾದ ಮುಂದಿನ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಗಿಲ್ ಟಿ20 ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ವಾಸ್ತವವಾಗಿ ಭಾರತ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಬೇಕಿದೆ.

2 / 9
ಈ ಪ್ರವಾಸದಲ್ಲಿ ಭಾರತ ಎರಡು ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳನ್ನು ಆಡಬೇಕಾಗಿದೆ. ಈ ಪ್ರವಾಸವು ಜುಲೈ 12 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 13 ರಂದು ಕೊನೆಗೊಳ್ಳಲಿದೆ.

ಈ ಪ್ರವಾಸದಲ್ಲಿ ಭಾರತ ಎರಡು ಟೆಸ್ಟ್ ಪಂದ್ಯಗಳನ್ನು ಹೊರತುಪಡಿಸಿ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳನ್ನು ಆಡಬೇಕಾಗಿದೆ. ಈ ಪ್ರವಾಸವು ಜುಲೈ 12 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 13 ರಂದು ಕೊನೆಗೊಳ್ಳಲಿದೆ.

3 / 9
ಈ ಪ್ರವಾಸಕ್ಕೆ ಇನ್ನು ಟೀಂ ಇಂಡಿಯಾವನ್ನು ಪ್ರಕಟಿಸಿಲ್ಲ. ಆದರೆ ಮಾಧ್ಯಮ ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಸರಣಿಯಿಂದ ಗಿಲ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಗಳಿವೆ. ಕೆಲಸದ ಹೊರೆ ನಿರ್ವಹಣೆಯನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ.

ಈ ಪ್ರವಾಸಕ್ಕೆ ಇನ್ನು ಟೀಂ ಇಂಡಿಯಾವನ್ನು ಪ್ರಕಟಿಸಿಲ್ಲ. ಆದರೆ ಮಾಧ್ಯಮ ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಸರಣಿಯಿಂದ ಗಿಲ್‌ಗೆ ವಿಶ್ರಾಂತಿ ನೀಡುವ ಸಾಧ್ಯತೆಗಳಿವೆ. ಕೆಲಸದ ಹೊರೆ ನಿರ್ವಹಣೆಯನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲು ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ.

4 / 9
ಗಿಲ್ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಡಿಸೆಂಬರ್​ನಲ್ಲಿ ಬಾಂಗ್ಲಾದೇಶ ಪ್ರವಾಸಕ್ಕೆ ತೆರಳಿದ್ದ ಗಿಲ್, ಅಲ್ಲಿಂದ ವಾಪಸಾದ ಬಳಿಕ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತಂಡದಲ್ಲಿದ್ದರು. ನಂತರ ಐಪಿಎಲ್​ನಲ್ಲಿ ಆಡಿದ್ದ ಗಿಲ್, ಸೀದಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡಲು ಇಂಗ್ಲೆಂಡ್​ಗೆ ಹಾರಿದ್ದರು.

ಗಿಲ್ ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಡಿಸೆಂಬರ್​ನಲ್ಲಿ ಬಾಂಗ್ಲಾದೇಶ ಪ್ರವಾಸಕ್ಕೆ ತೆರಳಿದ್ದ ಗಿಲ್, ಅಲ್ಲಿಂದ ವಾಪಸಾದ ಬಳಿಕ ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತಂಡದಲ್ಲಿದ್ದರು. ನಂತರ ಐಪಿಎಲ್​ನಲ್ಲಿ ಆಡಿದ್ದ ಗಿಲ್, ಸೀದಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ನಲ್ಲಿ ಆಡಲು ಇಂಗ್ಲೆಂಡ್​ಗೆ ಹಾರಿದ್ದರು.

5 / 9
ಈ ವರ್ಷ ಭಾರತ ಏಷ್ಯಾಕಪ್ ಮತ್ತು ನಂತರ ಏಕದಿನ ವಿಶ್ವಕಪ್ ಆಡಬೇಕಿದೆ. ಏಕದಿನ ಮಾದರಿಯಲ್ಲಿ ಗಿಲ್ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಹೀಗಾಗಿ ಗಿಲ್‌ ಈ ಐಸಿಸಿಯ ಪ್ರಮುಖ ಈವೆಂಟ್​ಗೆ ಫಿಟ್ ಆಗಿರುವುದು ಬಹಳ ಮುಖ್ಯ. ಆದ್ದರಿಂದ ಗಿಲ್ ಅವರನ್ನು ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಸರಣಿಯಿಂದ ಹೊರಗಿಡಲು ಬಿಸಿಸಿಐ ಯೋಚಿಸಿದೆ.

ಈ ವರ್ಷ ಭಾರತ ಏಷ್ಯಾಕಪ್ ಮತ್ತು ನಂತರ ಏಕದಿನ ವಿಶ್ವಕಪ್ ಆಡಬೇಕಿದೆ. ಏಕದಿನ ಮಾದರಿಯಲ್ಲಿ ಗಿಲ್ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಹೀಗಾಗಿ ಗಿಲ್‌ ಈ ಐಸಿಸಿಯ ಪ್ರಮುಖ ಈವೆಂಟ್​ಗೆ ಫಿಟ್ ಆಗಿರುವುದು ಬಹಳ ಮುಖ್ಯ. ಆದ್ದರಿಂದ ಗಿಲ್ ಅವರನ್ನು ವೆಸ್ಟ್ ಇಂಡೀಸ್ ಪ್ರವಾಸದ ಟಿ20 ಸರಣಿಯಿಂದ ಹೊರಗಿಡಲು ಬಿಸಿಸಿಐ ಯೋಚಿಸಿದೆ.

6 / 9
ಒಂದು ವೇಳೆ ಟಿ20 ಸರಣಿಯಿಂದ ಗಿಲ್​ಗೆ ವಿಶ್ರಾಂತಿ ನೀಡಿದರೆ ಅವರ ಸ್ಥಾನದಲ್ಲಿ ಮತ್ತೊಬ್ಬ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ತಂಡದಲ್ಲಿ ಸ್ಥಾನ ಪಡೆಯಬಹುದು. ರುತುರಾಜ ಕಳೆದ ಕೆಲವು ವರ್ಷಗಳಿಂದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ. ಇತ್ತೀಚೆಗೆ ಮುಗಿದ 16ನೇ ಆವೃತ್ತಿಯಲ್ಲೂ ಆರಂಭಿಕರಾಗಿ ರುತುರಾಜ್ ಆರೆಂಜ್ ಕ್ಯಾಪ್ ರೇಸ್​ನಲ್ಲಿದ್ದರು.

ಒಂದು ವೇಳೆ ಟಿ20 ಸರಣಿಯಿಂದ ಗಿಲ್​ಗೆ ವಿಶ್ರಾಂತಿ ನೀಡಿದರೆ ಅವರ ಸ್ಥಾನದಲ್ಲಿ ಮತ್ತೊಬ್ಬ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್ ತಂಡದಲ್ಲಿ ಸ್ಥಾನ ಪಡೆಯಬಹುದು. ರುತುರಾಜ ಕಳೆದ ಕೆಲವು ವರ್ಷಗಳಿಂದ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ತೋರಿದ್ದಾರೆ. ಇತ್ತೀಚೆಗೆ ಮುಗಿದ 16ನೇ ಆವೃತ್ತಿಯಲ್ಲೂ ಆರಂಭಿಕರಾಗಿ ರುತುರಾಜ್ ಆರೆಂಜ್ ಕ್ಯಾಪ್ ರೇಸ್​ನಲ್ಲಿದ್ದರು.

7 / 9
ಈ ಐಪಿಎಲ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ರುತುರಾಜ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಮೀಸಲು ಆಟಗಾರನಾಗಿ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಮದುವೆಯ ಕಾರಣದಿಂದಾಗಿ ರುತುರಾಜ್ ಇಂಗ್ಲೆಂಡ್ ಪ್ರವಾಸ ಮಾಡಿರಲಿಲ್ಲ. ಇದೀಗ ಟೀಂ ಇಂಡಿಯಾ ಸೇರಲು ಕಾತುರರಾಗಿರುವ ರುತುರಾಜ್ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ.

ಈ ಐಪಿಎಲ್​ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ರುತುರಾಜ್ ಅವರನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ಗೆ ಮೀಸಲು ಆಟಗಾರನಾಗಿ ತಂಡದಲ್ಲಿ ಆಯ್ಕೆ ಮಾಡಲಾಗಿತ್ತು. ಆದರೆ ಮದುವೆಯ ಕಾರಣದಿಂದಾಗಿ ರುತುರಾಜ್ ಇಂಗ್ಲೆಂಡ್ ಪ್ರವಾಸ ಮಾಡಿರಲಿಲ್ಲ. ಇದೀಗ ಟೀಂ ಇಂಡಿಯಾ ಸೇರಲು ಕಾತುರರಾಗಿರುವ ರುತುರಾಜ್ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ತಂಡವನ್ನು ಸೇರಿಕೊಳ್ಳುವ ಸಾಧ್ಯತೆಗಳಿವೆ.

8 / 9
ಇನ್ನು ಟೀಂ ಇಂಡಿಯಾದಲ್ಲಿ ಗಿಲ್ ಅವರ ಪ್ರದರ್ಶನ ನೋಡುವುದಾದರೆ, ಗಿಲ್ ಇದುವರೆಗೆ ಭಾರತದ ಪರ 16 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 32.89 ಸರಾಸರಿಯಲ್ಲಿ 921 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, 24 ಏಕದಿನ ಪಂದ್ಯಗಳಲ್ಲಿ 65.55 ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಗಿಲ್ 1311 ರನ್ ಕಲೆಹಾಕಿದ್ದಾರೆ. ಟಿ20ಯಲ್ಲಿ ಗಿಲ್ ಆರು ಪಂದ್ಯಗಳನ್ನು ಆಡಿದ್ದು, ಶತಕ ಸೇರಿದಂತೆ 202 ರನ್ ಸಿಡಿಸಿದ್ದಾರೆ.

ಇನ್ನು ಟೀಂ ಇಂಡಿಯಾದಲ್ಲಿ ಗಿಲ್ ಅವರ ಪ್ರದರ್ಶನ ನೋಡುವುದಾದರೆ, ಗಿಲ್ ಇದುವರೆಗೆ ಭಾರತದ ಪರ 16 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 32.89 ಸರಾಸರಿಯಲ್ಲಿ 921 ರನ್ ಗಳಿಸಿದ್ದಾರೆ. ಅದೇ ಸಮಯದಲ್ಲಿ, 24 ಏಕದಿನ ಪಂದ್ಯಗಳಲ್ಲಿ 65.55 ಸರಾಸರಿಯಲ್ಲಿ ಬ್ಯಾಟ್ ಬೀಸಿರುವ ಗಿಲ್ 1311 ರನ್ ಕಲೆಹಾಕಿದ್ದಾರೆ. ಟಿ20ಯಲ್ಲಿ ಗಿಲ್ ಆರು ಪಂದ್ಯಗಳನ್ನು ಆಡಿದ್ದು, ಶತಕ ಸೇರಿದಂತೆ 202 ರನ್ ಸಿಡಿಸಿದ್ದಾರೆ.

9 / 9
Follow us
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ