AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಐಪಿಎಲ್​ನಲ್ಲಿ ದುಬಾರಿ ಎನಿಸಿಕೊಂಡಿದ್ದ ಬೌಲರ್​ಗೆ ಮಣೆ ಹಾಕಿದ ಬಿಸಿಸಿಐ..!

IND vs WI: ವಾಸ್ತವವಾಗಿ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ಬಲಗೈ ವೇಗಿ ಮುಖೇಶ್ ಕುಮಾರ್ ಆಡಿದ ಒಟ್ಟು 10 ಪಂದ್ಯಗಳಲ್ಲಿ 186 ಎಸೆತಗಳನ್ನು ಬೌಲ್ ಮಾಡಿ 326 ರನ್ ಬಿಟ್ಟುಕೊಟ್ಟಿದ್ದರು.

ಪೃಥ್ವಿಶಂಕರ
|

Updated on:Jun 24, 2023 | 12:37 PM

Share
ಟೀಂ ಇಂಡಿಯಾ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಎರಡು ಟೆಸ್ಟ್, ಮೂರು ಏಕದಿನ ಹಾಗೂ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಬಿಸಿಸಿಐನ ಆಯ್ಕೆ ಸಮಿತಿಯು ಶುಕ್ರವಾರ ಈ ಪ್ರವಾಸಕ್ಕಾಗಿ ಟೆಸ್ಟ್ ಮತ್ತು ಏಕದಿನ ತಂಡವನ್ನು ಪ್ರಕಟಿಸಿದೆ.

ಟೀಂ ಇಂಡಿಯಾ ಮುಂದಿನ ತಿಂಗಳು ವೆಸ್ಟ್ ಇಂಡೀಸ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಎರಡು ಟೆಸ್ಟ್, ಮೂರು ಏಕದಿನ ಹಾಗೂ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ಬಿಸಿಸಿಐನ ಆಯ್ಕೆ ಸಮಿತಿಯು ಶುಕ್ರವಾರ ಈ ಪ್ರವಾಸಕ್ಕಾಗಿ ಟೆಸ್ಟ್ ಮತ್ತು ಏಕದಿನ ತಂಡವನ್ನು ಪ್ರಕಟಿಸಿದೆ.

1 / 6
ಈ ಎರಡೂ ತಂಡಗಳಲ್ಲಿ ಯುವ ವೇಗಿ ಮುಖೇಶ್ ಕುಮಾರ್ ಸ್ಥಾನ ಪಡೆದಿದ್ದಾರೆ. ಆದರೆ ಇಲ್ಲೊಂದು ಅಚ್ಚರಿಯ ಸಂಗತಿಯೆಂದರೆ ಇದೇ ಮುಖೇಶ್ ಕುಮಾರ್ ಐಪಿಎಲ್​ನಲ್ಲಿ ಬರೋಬ್ಬರಿ 10.52 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟು ದುಬಾರಿಯಾಗಿದ್ದರು.

ಈ ಎರಡೂ ತಂಡಗಳಲ್ಲಿ ಯುವ ವೇಗಿ ಮುಖೇಶ್ ಕುಮಾರ್ ಸ್ಥಾನ ಪಡೆದಿದ್ದಾರೆ. ಆದರೆ ಇಲ್ಲೊಂದು ಅಚ್ಚರಿಯ ಸಂಗತಿಯೆಂದರೆ ಇದೇ ಮುಖೇಶ್ ಕುಮಾರ್ ಐಪಿಎಲ್​ನಲ್ಲಿ ಬರೋಬ್ಬರಿ 10.52 ರ ಎಕಾನಮಿಯಲ್ಲಿ ರನ್ ಬಿಟ್ಟುಕೊಟ್ಟು ದುಬಾರಿಯಾಗಿದ್ದರು.

2 / 6
ವಾಸ್ತವವಾಗಿ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ಬಲಗೈ ವೇಗಿ ಮುಖೇಶ್ ಕುಮಾರ್ ಆಡಿದ ಒಟ್ಟು 10 ಪಂದ್ಯಗಳಲ್ಲಿ 186 ಎಸೆತಗಳನ್ನು ಬೌಲ್ ಮಾಡಿ 326 ರನ್ ಬಿಟ್ಟುಕೊಟ್ಟಿದ್ದರು. ಹಾಗೆಯೇ ಕೇವಲ ಏಳು ವಿಕೆಟ್​ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

ವಾಸ್ತವವಾಗಿ 16ನೇ ಆವೃತ್ತಿಯ ಐಪಿಎಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಕಣಕ್ಕಿಳಿದಿದ್ದ ಬಲಗೈ ವೇಗಿ ಮುಖೇಶ್ ಕುಮಾರ್ ಆಡಿದ ಒಟ್ಟು 10 ಪಂದ್ಯಗಳಲ್ಲಿ 186 ಎಸೆತಗಳನ್ನು ಬೌಲ್ ಮಾಡಿ 326 ರನ್ ಬಿಟ್ಟುಕೊಟ್ಟಿದ್ದರು. ಹಾಗೆಯೇ ಕೇವಲ ಏಳು ವಿಕೆಟ್​ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದರು.

3 / 6
ಆದರೆ ಐಪಿಎಲ್​ನಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟು ದುಬಾರಿಯಾಗಿದ್ದ ಮುಖೇಶ್​ರನ್ನು ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲು ಪ್ರಮುಖ ಕಾರಣವೂ ಇದ್ದು, ದೇಶೀಯ ಕ್ರಿಕೆಟ್‌ನಲ್ಲಿ ಮುಖೇಶ್ ಅವರ ಪ್ರದರ್ಶನ ಅದ್ಭುತವಾಗಿದೆ. ಹೀಗಾಗಿ ಆಯ್ಕೆ ಮಂಡಳಿ ಮುಖೇಶ್​ಗೆ ಮಣೆಹಾಕಿದೆ.

ಆದರೆ ಐಪಿಎಲ್​ನಲ್ಲಿ ಅತಿ ಹೆಚ್ಚು ರನ್ ಬಿಟ್ಟುಕೊಟ್ಟು ದುಬಾರಿಯಾಗಿದ್ದ ಮುಖೇಶ್​ರನ್ನು ಟೀಂ ಇಂಡಿಯಾಕ್ಕೆ ಆಯ್ಕೆ ಮಾಡಲು ಪ್ರಮುಖ ಕಾರಣವೂ ಇದ್ದು, ದೇಶೀಯ ಕ್ರಿಕೆಟ್‌ನಲ್ಲಿ ಮುಖೇಶ್ ಅವರ ಪ್ರದರ್ಶನ ಅದ್ಭುತವಾಗಿದೆ. ಹೀಗಾಗಿ ಆಯ್ಕೆ ಮಂಡಳಿ ಮುಖೇಶ್​ಗೆ ಮಣೆಹಾಕಿದೆ.

4 / 6
ದೇಶೀ ಕ್ರಿಕೆಟ್​ನಲ್ಲಿ ಬಂಗಾಳ ಪರ ಆಡುವ ಮುಖೇಶ್, 2019-20 ಮತ್ತು 2022-23ರ ರಣಜಿ ಟ್ರೋಫಿಯ ಫೈನಲ್‌ಗೆ ತಂಡವನ್ನು ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದುವರೆಗೆ 39 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಮುಖೇಶ್ 149 ವಿಕೆಟ್ ಪಡೆದಿದ್ದಾರೆ.

ದೇಶೀ ಕ್ರಿಕೆಟ್​ನಲ್ಲಿ ಬಂಗಾಳ ಪರ ಆಡುವ ಮುಖೇಶ್, 2019-20 ಮತ್ತು 2022-23ರ ರಣಜಿ ಟ್ರೋಫಿಯ ಫೈನಲ್‌ಗೆ ತಂಡವನ್ನು ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದುವರೆಗೆ 39 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಮುಖೇಶ್ 149 ವಿಕೆಟ್ ಪಡೆದಿದ್ದಾರೆ.

5 / 6
ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ಮುಖೇಶ್ ನಂತರ ಭಾರತ-ಎ ಪರ ಆಡಿದ್ದರು. ಇಲ್ಲಿಯೂ ತಮ್ಮ ಖಾತೆಗೆ ಒಟ್ಟು 18 ವಿಕೆಟ್​ಗಳನ್ನು ಹಾಕಿಕೊಂಡಿದ್ದರು. ಈ ಹಿಂದೆ ಇಂಗ್ಲೆಂಡ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯಕ್ಕೆ ಮುಖೇಶ್ ಟೀಂ ಇಂಡಿಯಾದಲ್ಲಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಮುಖೇಶ್​ ವಿಂಡೀಸ್ ಪ್ರವಾಸದಲ್ಲಿ ತಂಡದ ಪರ ಕಣಕ್ಕಿಳಿಯುವ ಸಾಧ್ಯತೆಗಳಿವೆ.

ದೇಶೀಯ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದ ಮುಖೇಶ್ ನಂತರ ಭಾರತ-ಎ ಪರ ಆಡಿದ್ದರು. ಇಲ್ಲಿಯೂ ತಮ್ಮ ಖಾತೆಗೆ ಒಟ್ಟು 18 ವಿಕೆಟ್​ಗಳನ್ನು ಹಾಕಿಕೊಂಡಿದ್ದರು. ಈ ಹಿಂದೆ ಇಂಗ್ಲೆಂಡ್​ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯಕ್ಕೆ ಮುಖೇಶ್ ಟೀಂ ಇಂಡಿಯಾದಲ್ಲಿ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಮುಖೇಶ್​ ವಿಂಡೀಸ್ ಪ್ರವಾಸದಲ್ಲಿ ತಂಡದ ಪರ ಕಣಕ್ಕಿಳಿಯುವ ಸಾಧ್ಯತೆಗಳಿವೆ.

6 / 6

Published On - 12:34 pm, Sat, 24 June 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ