- Kannada News Photo gallery Cricket photos India and South Africa 3rd T20I Rohit Sharma lead Team India practice Photos
IND vs SA 3rd T20: ಅಂತಿಮ ಕದನಕ್ಕೆ ಸಜ್ಜು: ಟೀಮ್ ಇಂಡಿಯಾ ಆಟಗಾರರಿಂದ ಭರ್ಜರಿ ಅಭ್ಯಾಸ
ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ತಂಡ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಮೊದಲ ಕದನದಲ್ಲಿ 8 ವಿಕೆಟ್ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್ಗಳಿಂದ ಗೆದ್ದು ಬೀಗಿತ್ತು. ಇದೀಗ ಅಂತಿಮ ತೃತೀಯ ಸೆಣೆಸಾಟಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ.
Updated on:Oct 04, 2022 | 10:56 AM

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ 2-0 ಮುನ್ನಡೆ ಪಡೆದುಕೊಂಡಿರುವ ಭಾರತ (India vs South Africa) ತಂಡ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಮೊದಲ ಕದನದಲ್ಲಿ 8 ವಿಕೆಟ್ಗಳ ಜಯ ಸಾಧಿಸಿದರೆ, ಎರಡನೇ ಪಂದ್ಯದಲ್ಲಿ 16 ರನ್ಗಳಿಂದ ಗೆದ್ದು ಬೀಗಿತ್ತು. ಇದೀಗ ಅಂತಿಮ ತೃತೀಯ ಸೆಣೆಸಾಟಕ್ಕೆ ಉಭಯ ತಂಡಗಳು ಸಜ್ಜಾಗುತ್ತಿದೆ.

ಇಂದು ಇಂದೋರ್ನ ಹೋಲ್ಕರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಟಿ20 ಪಂದ್ಯ ಆಯೋಜಿಸಲಾಗಿದೆ. ಟಿ20 ವಿಶ್ವಕಪ್ಗೂ ಮುನ್ನ ಟೀಮ್ ಇಂಡಿಯಾ (Team India) ಆಡುತ್ತಿರುವ ಕೊನೆಯ ಚುಟುಕು ಪಂದ್ಯ ಇದಾಗಿದ್ದು ಬೌಲಿಂಗ್ ವಿಭಾಗದಲ್ಲಿ ಪ್ರಯೋಗ ನಡೆಸುವುದು ಖಚಿತ.

ಮೂರನೇ ಟಿ20 ಪಂದ್ಯದಿಂದ ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ವಿಶ್ರಾಂತಿ ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್ 6 ರಂದು ಟಿ20 ವಿಶ್ವಕಪ್ನ 15 ಸದಸ್ಯರ ತಂಡ ಆಸ್ಟ್ರೇಲಿಯಾಗೆ ತೆರಳಲಿದೆ. ಆದ್ದರಿಂದ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಮೂರನೇ ಟಿ20 ಪಂದ್ಯದಲ್ಲಿ ಹಲವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ.

ರಾಹುಲ್ ಮತ್ತು ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಮತ್ತು ಮೊಹಮ್ಮದ್ ಸಿರಾಜ್ ಆಡುವ ಅವಕಾಶ ಪಡೆಯಬಹುದು ಎನ್ನಲಾಗಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಿಷಬ್ ಪಂತ್ ಆಡುತ್ತಿದ್ದರೂ ಅವರಿಗೆ ಇದುವರೆಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ. ಹೀಗಾಗಿ ರೋಹಿತ್ ಜೊತೆ ಇವರು ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಟೀಮ್ ಇಂಡಿಯಾ ದೊಡ್ಡ ತಲೆನೋವಾಗಿರುವುದು ಬೌಲಿಂಗ್ ವಿಭಾಗದಲ್ಲಿ. ಕಳೆದ ಪಂದ್ಯದಲ್ಲಿ ಭಾರತದ ಬೌಲರ್ಗಳು ಕೊನೆಯ ನಾಲ್ಕು ಓವರ್ಗಳಲ್ಲಿ 65 ರನ್ಗಳನ್ನು ಬಿಟ್ಟುಕೊಟ್ಟರು. ಇದು ಕಳೆದ 5-6 ಪಂದ್ಯಗಳಲ್ಲಿ ಕಂಡುಬಂದಿದೆ.

ಜಸ್ಪ್ರಿತ್ ಬುಮ್ರಾ ಅಲಭ್ಯತೆ ಎದ್ದು ಕಾಣುತ್ತಿರುವುದು ನಿಜ. ಹೀಗಾಗಿ ಮೊಹಮ್ಮದ್ ಸಿರಾಜ್ ಮೇಲೆ ಒತ್ತಡವಿದೆ. ಅರ್ಶ್ದೀಪ್ ಸಿಂಗ್, ದೀಪಕ್ ಚಹರ್, ಭುವನೇಶ್ವರ್ ಕುಮಾರ್ ವಿಕೆಟ್ ಕೀಳುವ ಜೊತೆಗೆ ಲಯ ಕಂಡುಕೊಳ್ಳಬೇಕಿದೆ.

ಭಾರತ: ರೋಹಿತ್ ಶರ್ಮಾ (ನಾಯಕ), ರಿಷಭ್ ಪಂತ್ (ಉಪ ನಾಯಕ), ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಯುಜ್ವೇಂದ್ರ ಚಹಲ್, ಆರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
Published On - 10:56 am, Tue, 4 October 22
