- Kannada News Photo gallery Cricket photos India and South Africa for the second ODI shifts to Ranchi check Team India practice photos
IND vs SA 2nd ODI: ಗೆಲುವು ಅನಿವಾರ್ಯ: ರಾಂಚಿಯಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ
ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.
Updated on:Oct 09, 2022 | 10:10 AM

ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯದಲ್ಲಿ ಸೋಲು ಕಂಡ ಭಾರತ (India vs South Africa) ತಂಡ ಇದೀಗ ದ್ವಿತೀಯ ಕದನಕ್ಕೆ ಸಜ್ಜಾಗುತ್ತಿದೆ. ಇಂದು ರಾಂಚಿಯ ಜೆಎಸ್ಸಿಎ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ಎರಡನೇ ಪಂದ್ಯ ಆಯೋಜಿಸಲಾಗಿದೆ.

ಭಾರತ ಬ್ಯಾಟಿಂಗ್ ವಿಭಾಗದಲ್ಲಿ ಸುಧಾರಿಸಬೇಕಿದೆ. ನಾಯಕ ಶಿಖರ್ ಧವನ್ ಹಾಗೂ ಶುಭ್ಮನ್ ಗಿಲ್ ಉತ್ತಮ ಆರಂಭ ಒದಗಿಸಬೇಕಾದ ಒತ್ತಡದಲ್ಲಿದ್ದಾರೆ. ರುತುರಾಜ್ ಗಾಯಕ್ವಾಡ್ ಕೂಡ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ.

ಶ್ರೇಯಸ್ ಅಯ್ಯರ್ ಮತ್ತು ಸಂಜು ಸ್ಯಾಮ್ಸನ್ ಮಾತ್ರ ಕಳೆದ ಪಂದ್ಯದಲ್ಲಿ ತಂಡಕ್ಕೆ ನೆರವಾಗಿದ್ದರು.

ರುತುರಾಜ್ ಗಾಯಕ್ವಾಡ್ ತಮಗೆ ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಂಡಿಲ್ಲ. ಹೀಗಾಗಿ ಇವರ ಜಾಗದಲ್ಲಿ ಇಂದು ರಜತ್ ಪಟಿದಾರ್ ಆಡಿದರೆ ಅಚ್ಚರಿ ಪಡಬೇಕಿಲ್ಲ. ಯಾಕೆಂದರೆ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವ ಪಟಿದಾರ್ ಭರ್ಜರಿ ಫಾರ್ಮ್ನಲ್ಲಿದ್ದಾರೆ.

ಕುಲ್ದೀಪ್ ಯಾದವ್ ಹಾಗೂ ರವಿ ಬಿಷ್ಟೋಯಿ ಸ್ಪಿನ್ ಅಷ್ಟೊಂದು ಕೆಲಸ ಮಾಡಿಲ್ಲ. ಬಿಷ್ಟೋಯಿ ಕೊಂಚ ದುಬಾರಿ ಕೂಡ ಆಗಿದ್ದರು. ಹೀಗಾಗಿ ಇವರ ಬದಲು ವಾಷಿಂಗ್ಟನ್ ಸುಂದರ್ ಪ್ಲೇಯಿಂಗ್ ಇಲೆವೆನ್ನಲ್ಲಿ ಕಾಣಿಸಿಕೊಳ್ಳಬಹುದು.

ಶಾರ್ದೂಲ್ ಥಾಕೂರ್ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಹಾಗೂ ಆವೇಶ್ ಖಾನ್ ಲಯ ಕಂಡುಕೊಳ್ಳಬೇಕಿದೆ.

ಶನಿವಾರದಿಂದ ರಾಂಚಿಯಲ್ಲಿ ಮಳೆಯಾಗುತ್ತಿದೆ. ಅಷ್ಟೇ ಅಲ್ಲ, ಭಾನುವಾರವೂ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಂಚಿಯ ಪ್ರಾದೇಶಿಕ ಹವಾಮಾನ ಇಲಾಖೆಯ ವಿಜ್ಞಾನಿ ಅಭಿಷೇಕ್ ಆನಂದ್ ಟಿವಿ9 ಹಿಂದಿಯೊಂದಿಗೆ ಮಾತನಾಡುತ್ತಾ, 9 ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪಂದ್ಯವಿದ್ದು, ರಾಂಚಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಈ ಪಂದ್ಯ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಇದಕ್ಕೂ ಅರ್ಧ ಗಂಟೆ ಮೊದಲು ಅಂದರೆ ಮಧ್ಯಾಹ್ನ 1 ಗಂಟೆಗೆ ಟಾಸ್ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ಭಾರತ ತಂಡ: ಶಿಖರ್ ಧವನ್ (ನಾಯಕ), ಶುಭ್ಮನ್ ಗಿಲ್, ರಜತ್ ಪಟಿದಾರ್, ಶ್ರೇಯಸ್ ಅಯ್ಯರ್ (ಉಪ ನಾಯಕ), ಇಶಾನ್ ಕಿಶನ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆವೇಶ್ ಖಾನ್.
Published On - 10:10 am, Sun, 9 October 22
