Asia Cup 2025:​ ಭಾರತ ತಂಡದಲ್ಲಿ ಮೂವರಿಗಿಲ್ಲ ಚಾನ್ಸ್​..!

Updated on: Aug 12, 2025 | 10:55 AM

India Asia Cup 2025 Squad: ಏಷ್ಯಾಕಪ್​ಗಾಗಿ ಶೀಘ್ರದಲ್ಲೇ 15 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಲಾಗುತ್ತದೆ. ಈ ತಂಡದಲ್ಲಿ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿದ್ದ ಮೂವರು ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಅಂದರೆ ಈ ಹಿಂದೆ ಭಾರತ ಟಿ20 ತಂಡವನ್ನು ಪ್ರತಿನಿಧಿಸಿದ್ದ ಮೂವರು ಆಟಗಾರರು ಏಷ್ಯಾಕಪ್​ಗೆ ಆಯ್ಕೆಯಾಗುವುದಿಲ್ಲ.

1 / 5
Asia Cup 2025: ಏಷ್ಯಾಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನಕ್ಕಾಗಿ ಮುಂದಿನ ವಾರ ಟೀಮ್ ಇಂಡಿಯಾವನ್ನು ಪ್ರಕಟಿಸಲಿದ್ದಾರೆ. 15 ಸದಸ್ಯರ ಈ ತಂಡದಲ್ಲಿ ಮೂವರು ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಅವರೆಂದರೆ...

Asia Cup 2025: ಏಷ್ಯಾಕಪ್ ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 9 ರಿಂದ ಆರಂಭವಾಗಲಿರುವ ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನಕ್ಕಾಗಿ ಮುಂದಿನ ವಾರ ಟೀಮ್ ಇಂಡಿಯಾವನ್ನು ಪ್ರಕಟಿಸಲಿದ್ದಾರೆ. 15 ಸದಸ್ಯರ ಈ ತಂಡದಲ್ಲಿ ಮೂವರು ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿದೆ. ಅವರೆಂದರೆ...

2 / 5
ಯಶಸ್ವಿ ಜೈಸ್ವಾಲ್: ಟೀಮ್ ಇಂಡಿಯಾದಲ್ಲಿ ಆರಂಭಿಕ ದಾಂಡಿಗರ ದಂಡೇ ಇದೆ. ಏಷ್ಯಾಕಪ್​ ತಂಡದಲ್ಲಿ ಆರಂಭಿಕರಾಗಿ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ಏಷ್ಯಾಕಪ್​ಗೆ ಪರಿಗಣಿಸುವುದಿಲ್ಲ ಎಂದು ತಿಳಿದು ಬಂದಿದೆ.

ಯಶಸ್ವಿ ಜೈಸ್ವಾಲ್: ಟೀಮ್ ಇಂಡಿಯಾದಲ್ಲಿ ಆರಂಭಿಕ ದಾಂಡಿಗರ ದಂಡೇ ಇದೆ. ಏಷ್ಯಾಕಪ್​ ತಂಡದಲ್ಲಿ ಆರಂಭಿಕರಾಗಿ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ ಹಾಗೂ ಶುಭ್​ಮನ್ ಗಿಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ಏಷ್ಯಾಕಪ್​ಗೆ ಪರಿಗಣಿಸುವುದಿಲ್ಲ ಎಂದು ತಿಳಿದು ಬಂದಿದೆ.

3 / 5
ರಿಷಭ್ ಪಂತ್: ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಪಂದ್ಯದ ವೇಳೆ ಗಾಯಗೊಂಡಿರುವ ರಿಷಭ್ ಪಂತ್ ಅವರನ್ನು ಸಹ ಏಷ್ಯಾಕಪ್​ನಿಂದ ಹೊರಗಿಡಲು ಬಿಸಿಸಿಐ ಚಿಂತಿಸಿದೆ. ಪಂತ್ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮರಳಲು ಸಮಯವಕಾಶ ಬೇಕಿದ್ದು, ಹೀಗಾಗಿ ರಿಷಭ್ ಅವರ ಬದಲಿಗೆ ಮತ್ತೋರ್ವ ವಿಕೆಟ್ ಕೀಪರ್​ಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.

ರಿಷಭ್ ಪಂತ್: ಇಂಗ್ಲೆಂಡ್ ವಿರುದ್ದದ ಟೆಸ್ಟ್​ ಪಂದ್ಯದ ವೇಳೆ ಗಾಯಗೊಂಡಿರುವ ರಿಷಭ್ ಪಂತ್ ಅವರನ್ನು ಸಹ ಏಷ್ಯಾಕಪ್​ನಿಂದ ಹೊರಗಿಡಲು ಬಿಸಿಸಿಐ ಚಿಂತಿಸಿದೆ. ಪಂತ್ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮರಳಲು ಸಮಯವಕಾಶ ಬೇಕಿದ್ದು, ಹೀಗಾಗಿ ರಿಷಭ್ ಅವರ ಬದಲಿಗೆ ಮತ್ತೋರ್ವ ವಿಕೆಟ್ ಕೀಪರ್​ಗೆ ಚಾನ್ಸ್ ನೀಡುವ ಸಾಧ್ಯತೆಯಿದೆ.

4 / 5
ಕೆಎಲ್ ರಾಹುಲ್: ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ಖಾಯಂ ಸದಸ್ಯರಾಗಿರುವ ಕೆಎಲ್ ರಾಹುಲ್ ಅವರನ್ನು ಸಹ ಏಷ್ಯಾಕಪ್​ಗೆ ಪರಿಗಣಿಸುವುದಿಲ್ಲ ಎಂದು ತಿಳಿದು ಬಂದಿದೆ. ಮೊದಲೇ ಹೇಳಿದಂತೆ ಆರಂಭಿಕರಾಗಿ ತಂಡದಲ್ಲಿ ಮೂವರು ಆಟಗಾರರಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲೂ ಬಲಿಷ್ಠ ದಾಂಡಿಗರ ದಂಡೇ ಇದೆ. ಹೀಗಾಗಿ ಕೆಎಲ್ ರಾಹುಲ್ ಅವರನ್ನು ಸಹ ಏಷ್ಯಾಕಪ್​ಗೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಕೆಎಲ್ ರಾಹುಲ್: ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳ ಖಾಯಂ ಸದಸ್ಯರಾಗಿರುವ ಕೆಎಲ್ ರಾಹುಲ್ ಅವರನ್ನು ಸಹ ಏಷ್ಯಾಕಪ್​ಗೆ ಪರಿಗಣಿಸುವುದಿಲ್ಲ ಎಂದು ತಿಳಿದು ಬಂದಿದೆ. ಮೊದಲೇ ಹೇಳಿದಂತೆ ಆರಂಭಿಕರಾಗಿ ತಂಡದಲ್ಲಿ ಮೂವರು ಆಟಗಾರರಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲೂ ಬಲಿಷ್ಠ ದಾಂಡಿಗರ ದಂಡೇ ಇದೆ. ಹೀಗಾಗಿ ಕೆಎಲ್ ರಾಹುಲ್ ಅವರನ್ನು ಸಹ ಏಷ್ಯಾಕಪ್​ಗೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

5 / 5
ಇನ್ನು ರಿಷಭ್ ಪಂತ್ ಹೊರಗುಳಿದರೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ನಿರ್ವಹಿಸಲಿದ್ದಾರೆ. ಇನ್ನು 2ನೇ ವಿಕೆಟ್ ಕೀಪರ್ ಆಗಿ ಧ್ರುವ್ ಜುರೇಲ್ ಅಥವಾ ಜಿತೇಶ್ ಶರ್ಮಾ ಆಯ್ಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಬಾರಿಯ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪರ ಯುವ ದಾಂಡಿಗರ ದಂಡೇ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಇನ್ನು ರಿಷಭ್ ಪಂತ್ ಹೊರಗುಳಿದರೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಸಂಜು ಸ್ಯಾಮ್ಸನ್ ನಿರ್ವಹಿಸಲಿದ್ದಾರೆ. ಇನ್ನು 2ನೇ ವಿಕೆಟ್ ಕೀಪರ್ ಆಗಿ ಧ್ರುವ್ ಜುರೇಲ್ ಅಥವಾ ಜಿತೇಶ್ ಶರ್ಮಾ ಆಯ್ಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಬಾರಿಯ ಏಷ್ಯಾಕಪ್​ನಲ್ಲಿ ಟೀಮ್ ಇಂಡಿಯಾ ಪರ ಯುವ ದಾಂಡಿಗರ ದಂಡೇ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.