AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್-19 ವಿಶ್ವಕಪ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಟೀಮ್ ಇಂಡಿಯಾ

India U19 vs Afghanistan U19: ಅಂಡರ್-19 ವಿಶ್ವಕಪ್​ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 310 ರನ್ ಕಲೆಹಾಕಿದರೆ, ಈ ಗುರಿಯನ್ನು ಭಾರತ ತಂಡ 41.1 ಓವರ್​ಗಳಲ್ಲಿ ಚೇಸ್ ಮಾಡಿದೆ.

ಝಾಹಿರ್ ಯೂಸುಫ್
|

Updated on:Feb 05, 2026 | 8:25 AM

Share
ಅಂಡರ್-19 ವಿಶ್ವಕಪ್​ನ 16ನೇ ಆವೃತ್ತಿಯಲ್ಲೂ ಭಾರತ ತಂಡ ಫೈನಲ್​​ಗೇರಿದೆ. ಹರಾರೆಯಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಈ ಎಂಟ್ರಿಯೊಂದಿಗೆ ವಿಶೇಷ ವಿಶ್ವ ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದೆ.

ಅಂಡರ್-19 ವಿಶ್ವಕಪ್​ನ 16ನೇ ಆವೃತ್ತಿಯಲ್ಲೂ ಭಾರತ ತಂಡ ಫೈನಲ್​​ಗೇರಿದೆ. ಹರಾರೆಯಲ್ಲಿ ನಡೆದ 2ನೇ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಪ್ರಶಸ್ತಿ ಸುತ್ತಿಗೆ ಎಂಟ್ರಿ ಕೊಟ್ಟಿದೆ. ಈ ಎಂಟ್ರಿಯೊಂದಿಗೆ ವಿಶೇಷ ವಿಶ್ವ ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದೆ.

1 / 5
ಅಂದರೆ ಭಾರತ ತಂಡವು ಅಂಡರ್-19 ವಿಶ್ವಕಪ್​ನಲ್ಲಿ ಫೈನಲ್​ಗೆ ಏರುತ್ತಿರುವುದು ಇದು 10ನೇ ಬಾರಿ. ಈ ಮೂಲಕ ಕಿರಿಯರ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ ಫೈನಲ್​ಗೇರಿದ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನ ಹೆಸರಿಗೆ ಸೇರ್ಪಡೆಗೊಳಿಸಿದೆ. 

ಅಂದರೆ ಭಾರತ ತಂಡವು ಅಂಡರ್-19 ವಿಶ್ವಕಪ್​ನಲ್ಲಿ ಫೈನಲ್​ಗೆ ಏರುತ್ತಿರುವುದು ಇದು 10ನೇ ಬಾರಿ. ಈ ಮೂಲಕ ಕಿರಿಯರ ವಿಶ್ವಕಪ್​ನಲ್ಲಿ ಅತೀ ಹೆಚ್ಚು ಬಾರಿ ಫೈನಲ್​ಗೇರಿದ ತಂಡವೆಂಬ ಹೆಗ್ಗಳಿಕೆಯನ್ನು ಟೀಮ್ ಇಂಡಿಯಾ ತನ್ನ ಹೆಸರಿಗೆ ಸೇರ್ಪಡೆಗೊಳಿಸಿದೆ. 

2 / 5
ಅದರಲ್ಲೂ ಸತತ 6ನೇ ಬಾರಿಗೆ ಫೈನಲ್​ಗೆ ಪ್ರವೇಶಿಸಿದೆ. ಅಂದರೆ ಕಳೆದ 5 ಆವೃತ್ತಿಗಳಲ್ಲೂ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಇದೀಗ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಈ ಮೂಲಕ ಆರನೇ ಬಾರಿ ಅಂಡರ್-19 ವಿಶ್ವಕಪ್ ಗೆಲ್ಲುವ ಇರಾದೆಯಲ್ಲಿದೆ.

ಅದರಲ್ಲೂ ಸತತ 6ನೇ ಬಾರಿಗೆ ಫೈನಲ್​ಗೆ ಪ್ರವೇಶಿಸಿದೆ. ಅಂದರೆ ಕಳೆದ 5 ಆವೃತ್ತಿಗಳಲ್ಲೂ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಇದೀಗ ಮತ್ತೊಮ್ಮೆ ಪ್ರಶಸ್ತಿ ಸುತ್ತಿಗೆ ಲಗ್ಗೆಯಿಟ್ಟಿದೆ. ಈ ಮೂಲಕ ಆರನೇ ಬಾರಿ ಅಂಡರ್-19 ವಿಶ್ವಕಪ್ ಗೆಲ್ಲುವ ಇರಾದೆಯಲ್ಲಿದೆ.

3 / 5
ಟೀಮ್ ಇಂಡಿಯಾ ಮೊದಲ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದಿದ್ದು 2000 ರಲ್ಲಿ. ಅಂದು ಮೊಹಮ್ಮದ್ ಕೈಫ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಅಂಡರ್-19 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ 2008 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2ನೇ ಬಾರಿ ವಿಶ್ವಕಪ್ ಎತ್ತಿ ಹಿಡಿದಿದ್ದರು.

ಟೀಮ್ ಇಂಡಿಯಾ ಮೊದಲ ಬಾರಿಗೆ ಅಂಡರ್-19 ವಿಶ್ವಕಪ್ ಗೆದ್ದಿದ್ದು 2000 ರಲ್ಲಿ. ಅಂದು ಮೊಹಮ್ಮದ್ ಕೈಫ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಅಂಡರ್-19 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದಾದ ಬಳಿಕ 2008 ರಲ್ಲಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2ನೇ ಬಾರಿ ವಿಶ್ವಕಪ್ ಎತ್ತಿ ಹಿಡಿದಿದ್ದರು.

4 / 5
ಆ ಬಳಿಕ 2012, 2018 ಮತ್ತು 2022 ರಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು. ಇದರ ನಡುವೆ 2006, 2016, 2020 ಮತ್ತು 2024 ರಲ್ಲಿ ಫೈನಲ್​ನಲ್ಲಿ ಸೋಲನುಭವಿಸಿತ್ತು. ಇದೀಗ 10ನೇ ಬಾರಿ ಫೈನಲ್​ಗೆ ಎಂಟ್ರಿ ಕೊಟ್ಟಿರುವ ಭಾರತ ತಂಡವು ಈ ಬಾರಿ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗುವ ನಿರೀಕ್ಷೆಯಿದೆ.

ಆ ಬಳಿಕ 2012, 2018 ಮತ್ತು 2022 ರಲ್ಲಿ ಟೀಮ್ ಇಂಡಿಯಾ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು. ಇದರ ನಡುವೆ 2006, 2016, 2020 ಮತ್ತು 2024 ರಲ್ಲಿ ಫೈನಲ್​ನಲ್ಲಿ ಸೋಲನುಭವಿಸಿತ್ತು. ಇದೀಗ 10ನೇ ಬಾರಿ ಫೈನಲ್​ಗೆ ಎಂಟ್ರಿ ಕೊಟ್ಟಿರುವ ಭಾರತ ತಂಡವು ಈ ಬಾರಿ ಮತ್ತೊಮ್ಮೆ ವಿಶ್ವ ಚಾಂಪಿಯನ್ ಆಗುವ ನಿರೀಕ್ಷೆಯಿದೆ.

5 / 5

Published On - 8:24 am, Thu, 5 February 26

Follow Us
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​