AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

೧೪೮ ವರ್ಷಗಳ ಇತಿಹಾಸದಲ್ಲೇ ಟೀಮ್ ಇಂಡಿಯಾಗೆ ಹೀಗೊಂದು ಹೀನಾಯ ಸೋಲು

India vs England 1st Test: ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿದರೆ, ಇಂಗ್ಲೆಂಡ್ 465 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 364 ರನ್​ಗಳಿಗೆ ಆಲೌಟ್ ಆದರು. ಅತ್ತ 371 ರನ್​ಗಳ ಗುರಿಯನ್ನು ಇಂಗ್ಲೆಂಡ್ 82 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jun 25, 2025 | 7:24 AM

Share
148 ವರ್ಷಗಳ ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಪಂದ್ಯವೊಂದರಲ್ಲಿ 5 ಶತಕ ಸಿಡಿಸಿರುವುದು ಕೇವಲ ಮೂರು ಬಾರಿ. ಹೀಗೆ 5 ಶತಕ ಸಿಡಿಸಿ ಅಬ್ಬರಿಸಿದ ತಂಡಗಳೆಲ್ಲವೂ ಭರ್ಜರಿ ಜಯ ಸಾಧಿಸಿದೆ. ಆದರೆ ಟೀಮ್ ಇಂಡಿಯಾ ಪಾಲಿಗೆ ಆ ಅದೃಷ್ಟವಿಲ್ಲ.

148 ವರ್ಷಗಳ ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಪಂದ್ಯವೊಂದರಲ್ಲಿ 5 ಶತಕ ಸಿಡಿಸಿರುವುದು ಕೇವಲ ಮೂರು ಬಾರಿ. ಹೀಗೆ 5 ಶತಕ ಸಿಡಿಸಿ ಅಬ್ಬರಿಸಿದ ತಂಡಗಳೆಲ್ಲವೂ ಭರ್ಜರಿ ಜಯ ಸಾಧಿಸಿದೆ. ಆದರೆ ಟೀಮ್ ಇಂಡಿಯಾ ಪಾಲಿಗೆ ಆ ಅದೃಷ್ಟವಿಲ್ಲ.

1 / 6
ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಶತಕ ಬಾರಿಸಿದ್ದರು.

ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಶತಕ ಬಾರಿಸಿದ್ದರು.

2 / 6
ಈ ಶತಕಗಳ ಹೊರತಾಗಿಯೂ ಈ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು ಸಾಧ್ಯವಾಗಿಲ್ಲ. ಭಾರತ ತಂಡವು ಕೊನೆಯ ಇನಿಂಗ್ಸ್ ನಲ್ಲಿ ನೀಡಿದ 371 ರನ್ ಗಳ ಗುರಿಯನ್ನು ಇಂಗ್ಲೆಂಡ್ ತಂಡವು 82 ಓವರ್‌ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಈ ಶತಕಗಳ ಹೊರತಾಗಿಯೂ ಈ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಗೆಲ್ಲಲು ಸಾಧ್ಯವಾಗಿಲ್ಲ. ಭಾರತ ತಂಡವು ಕೊನೆಯ ಇನಿಂಗ್ಸ್ ನಲ್ಲಿ ನೀಡಿದ 371 ರನ್ ಗಳ ಗುರಿಯನ್ನು ಇಂಗ್ಲೆಂಡ್ ತಂಡವು 82 ಓವರ್‌ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

3 / 6
ಇದಕ್ಕೂ ಮುನ್ನ ಒಂದೇ ಪಂದ್ಯದಲ್ಲಿ 5 ಶತಕಗಳನ್ನು ಸಿಡಿಸಿದ್ದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ್ ತಂಡಗಳು ಭರ್ಜರಿ ಗೆಲುವು ದಾಖಲಿಸಿದ್ದವು. 1955 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 5 ಶತಕ ಬಾರಿಸಿದ ಆಸೀಸ್ ಪಡೆ ಇನಿಂಗ್ಸ್ ಹಾಗೂ 82 ರನ್ ಗಳ ಅಮೋಘ ಗೆಲುವು ದಾಖಲಿಸಿತ್ತು.

ಇದಕ್ಕೂ ಮುನ್ನ ಒಂದೇ ಪಂದ್ಯದಲ್ಲಿ 5 ಶತಕಗಳನ್ನು ಸಿಡಿಸಿದ್ದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ್ ತಂಡಗಳು ಭರ್ಜರಿ ಗೆಲುವು ದಾಖಲಿಸಿದ್ದವು. 1955 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 5 ಶತಕ ಬಾರಿಸಿದ ಆಸೀಸ್ ಪಡೆ ಇನಿಂಗ್ಸ್ ಹಾಗೂ 82 ರನ್ ಗಳ ಅಮೋಘ ಗೆಲುವು ದಾಖಲಿಸಿತ್ತು.

4 / 6
ಇನ್ನು 2001 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 5 ಶತಕ ಬಾರಿಸಿದ್ದ ಪಾಕಿಸ್ತಾನ್ ಇನಿಂಗ್ಸ್ ಹಾಗೂ 264 ರನ್​ಗಳ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಆದರೆ ಟೀಮ್ ಇಂಡಿಯಾ ದಾಂಡಿಗರು ಬಾರಿಸಿದ 5 ಶತಕಗಳು ಸೋಲಿನೊಂದಿಗೆ ವ್ಯರ್ಥವಾಗಿದೆ.

ಇನ್ನು 2001 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ 5 ಶತಕ ಬಾರಿಸಿದ್ದ ಪಾಕಿಸ್ತಾನ್ ಇನಿಂಗ್ಸ್ ಹಾಗೂ 264 ರನ್​ಗಳ ಅಭೂತಪೂರ್ವ ಗೆಲುವು ದಾಖಲಿಸಿತ್ತು. ಆದರೆ ಟೀಮ್ ಇಂಡಿಯಾ ದಾಂಡಿಗರು ಬಾರಿಸಿದ 5 ಶತಕಗಳು ಸೋಲಿನೊಂದಿಗೆ ವ್ಯರ್ಥವಾಗಿದೆ.

5 / 6
ಈ ಮೂಲಕ 148 ವರ್ಷಗಳ ಟೆಸ್ಟ್‌ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ 5 ಸೆಂಚುರಿ ಸಿಡಿಸಿದರೂ ಸೋತ ತಂಡವೆಂಬ ಹಣೆಪಟ್ಟಿ ಟೀಮ್ ಇಂಡಿಯಾ ಪಾಲಾಗಿದೆ. ಇದಾಗ್ಯೂ ಇಂಗ್ಲೆಂಡ್ ವಿರುದ್ಧ ಇನ್ನೂ ನಾಲ್ಕು ಪಂದ್ಯಗಳು ಉಳಿದಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿ ಯಂಗ್ ಇಂಡಿಯಾ ಇತಿಹಾಸ ಬರೆಯಲಿದೆಯಾ ಕಾದು ನೋಡಬೇಕಿದೆ.

ಈ ಮೂಲಕ 148 ವರ್ಷಗಳ ಟೆಸ್ಟ್‌ ಇತಿಹಾಸದಲ್ಲಿ ಪಂದ್ಯವೊಂದರಲ್ಲಿ 5 ಸೆಂಚುರಿ ಸಿಡಿಸಿದರೂ ಸೋತ ತಂಡವೆಂಬ ಹಣೆಪಟ್ಟಿ ಟೀಮ್ ಇಂಡಿಯಾ ಪಾಲಾಗಿದೆ. ಇದಾಗ್ಯೂ ಇಂಗ್ಲೆಂಡ್ ವಿರುದ್ಧ ಇನ್ನೂ ನಾಲ್ಕು ಪಂದ್ಯಗಳು ಉಳಿದಿದ್ದು, ಈ ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿ ಯಂಗ್ ಇಂಡಿಯಾ ಇತಿಹಾಸ ಬರೆಯಲಿದೆಯಾ ಕಾದು ನೋಡಬೇಕಿದೆ.

6 / 6
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ