AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಏಕದಿನ ಸರಣಿಯಲ್ಲಿ ದಾಖಲೆಗಳ ಮೇಲೆ ದಾಖಲೆ ಬರೆಯಲಿರುವ ರೋಹಿತ್

Rohit Sharma's Record Hunt: ಭಾರತ-ಇಂಗ್ಲೆಂಡ್ ಏಕದಿನ ಸರಣಿ ಜುಲೈ 14 ರಿಂದ ಆರಂಭ. ಈ ಸರಣಿಯಲ್ಲಿ ರೋಹಿತ್ ಶರ್ಮಾ ಹಲವು ಹೊಸ ದಾಖಲೆಗಳನ್ನು ಬರೆಯುವ ಸನಿಹದಲ್ಲಿದ್ದಾರೆ. ಶತಕ ಬಾರಿಸಿದರೆ ಭಾರತೀಯ ಆರಂಭಿಕನಾಗಿ ಅತಿ ಹೆಚ್ಚು ಶತಕ, ಇಂಗ್ಲೆಂಡ್‌ನಲ್ಲಿ 10 ಶತಕಗಳು ಸೇರಿ ಹಲವು ಮೈಲಿಗಲ್ಲುಗಳನ್ನು ತಲುಪಲಿದ್ದಾರೆ. 12,000 ಏಕದಿನ ರನ್‌ಗಳೂ ಅವರ ಗುರಿಯಾಗಿವೆ.

ಪೃಥ್ವಿಶಂಕರ
|

Updated on: Jul 12, 2026 | 10:00 PM

Share
Rohit

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇದೇ ಜುಲೈ 14 ರಿಂದ ಅಂದರೆ ಬರುವ ಮಂಗಳವಾರದಿಂದ ಆರಂಭವಾಗಲಿದೆ. ಈ ಸರಣಿಯ ಮೂಲಕ ಟೀಂ ಇಂಡಿಯಾದ ಇಬ್ಬರು ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶರ್ಮಾ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯನ್ನು ಆಡಿದ್ದರಾದರೂ, ಗಾಯದಿಂದಾಗಿ ಕೊಹ್ಲಿ ಈ ಸರಣಿಯ ಭಾಗವಾಗಿರಲಿಲ್ಲ (PC-PTI).

1 / 6
ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಫಾರ್ಮ್​ ಕಂಡುಕೊಂಡಿದ್ದರು. ಇದೀಗ ರೋಹಿತ್ ಇಂಗ್ಲೆಂಡ್‌ ವಿರುದ್ಧವೂ ಅದೇ ಫಾರ್ಮ್​ ಮುಂದುವರೆದರೆ, ಹಲವಾರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲೂ ರೋಹಿತ್ ಶತಕ ಬಾರಿಸಿದರೆ, ಒಟ್ಟಿಗೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ (PC-PTI).

ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಫಾರ್ಮ್​ ಕಂಡುಕೊಂಡಿದ್ದರು. ಇದೀಗ ರೋಹಿತ್ ಇಂಗ್ಲೆಂಡ್‌ ವಿರುದ್ಧವೂ ಅದೇ ಫಾರ್ಮ್​ ಮುಂದುವರೆದರೆ, ಹಲವಾರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲೂ ರೋಹಿತ್ ಶತಕ ಬಾರಿಸಿದರೆ, ಒಟ್ಟಿಗೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ (PC-PTI).

2 / 6
 ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶತಕ ಬಾರಿಸಿದರೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲಿ ಮೊದಲನೆಯದಾಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯ ಆರಂಭಿಕ ಆಟಗಾರನೆಂಬ ದಾಖಲೆ ರೋಹಿತ್ ಪಾಲಾಗಲಿದೆ. ಎರಡನೆಯದಾಗಿ 39 ನೇ ವಯಸ್ಸಿನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ (PC-PTI).

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶತಕ ಬಾರಿಸಿದರೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲಿ ಮೊದಲನೆಯದಾಗಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಭಾರತೀಯ ಆರಂಭಿಕ ಆಟಗಾರನೆಂಬ ದಾಖಲೆ ರೋಹಿತ್ ಪಾಲಾಗಲಿದೆ. ಎರಡನೆಯದಾಗಿ 39 ನೇ ವಯಸ್ಸಿನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ (PC-PTI).

3 / 6
ಮೂರನೆಯದಾಗಿ, ಡಾನ್ ಬ್ರಾಡ್ಮನ್ ನಂತರ ಇಂಗ್ಲೆಂಡ್‌ನಲ್ಲಿ 10 ಶತಕಗಳನ್ನು ಸಿಡಿಸಿದ ಎರಡನೇ ವಿದೇಶಿ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರೋಹಿತ್ ಪಾತ್ರರಾಗಲಿದ್ದಾರೆ. ಇದರ ಜೊತೆಗೆ ಮೂರು ಪಂದ್ಯಗಳ ಈ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಎರಡು ಶತಕಗಳನ್ನು ಸಿಡಿಸಿದರೆ, ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಅಂತರರಾಷ್ಟ್ರೀಯ ಶತಕಗಳನ್ನು ಬಾರಿಸಿದ ಭಾರತೀಯ ಆಟಗಾರನಾಗಲಿದ್ದಾರೆ (PC-PTI).

ಮೂರನೆಯದಾಗಿ, ಡಾನ್ ಬ್ರಾಡ್ಮನ್ ನಂತರ ಇಂಗ್ಲೆಂಡ್‌ನಲ್ಲಿ 10 ಶತಕಗಳನ್ನು ಸಿಡಿಸಿದ ಎರಡನೇ ವಿದೇಶಿ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ರೋಹಿತ್ ಪಾತ್ರರಾಗಲಿದ್ದಾರೆ. ಇದರ ಜೊತೆಗೆ ಮೂರು ಪಂದ್ಯಗಳ ಈ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಎರಡು ಶತಕಗಳನ್ನು ಸಿಡಿಸಿದರೆ, ಇಂಗ್ಲೆಂಡ್ ವಿರುದ್ಧ ಅತಿ ಹೆಚ್ಚು ಅಂತರರಾಷ್ಟ್ರೀಯ ಶತಕಗಳನ್ನು ಬಾರಿಸಿದ ಭಾರತೀಯ ಆಟಗಾರನಾಗಲಿದ್ದಾರೆ (PC-PTI).

4 / 6
ಇದರ ಜೊತೆಗೆ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆರಂಭಿಕ ಆಟಗಾರ ಮತ್ತು ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗುವ ಅವಕಾಶವನ್ನು ಹೊಂದಿದ್ದಾರೆ. ಈ ದಾಖಲೆಗಳನ್ನು ಸೃಷ್ಟಿಸಲು ರೋಹಿತ್, ಈ ಸರಣಿಯಲ್ಲಿ ಒಂದು ಸಿಕ್ಸರ್ ಜೊತೆಗೆ 178 ರನ್​ಗಳನ್ನು ಕಲೆಹಾಕಬೇಕಿದೆ (PC-PTI).

ಇದರ ಜೊತೆಗೆ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಭಾರತೀಯ ಆರಂಭಿಕ ಆಟಗಾರ ಮತ್ತು ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗುವ ಅವಕಾಶವನ್ನು ಹೊಂದಿದ್ದಾರೆ. ಈ ದಾಖಲೆಗಳನ್ನು ಸೃಷ್ಟಿಸಲು ರೋಹಿತ್, ಈ ಸರಣಿಯಲ್ಲಿ ಒಂದು ಸಿಕ್ಸರ್ ಜೊತೆಗೆ 178 ರನ್​ಗಳನ್ನು ಕಲೆಹಾಕಬೇಕಿದೆ (PC-PTI).

5 / 6
ಹಾಗೆಯೇ ರೋಹಿತ್ ಶರ್ಮಾ ಈ ಏಕದಿನ ಸರಣಿಯಲ್ಲಿ ಎಂಟು ಸಿಕ್ಸರ್‌ಗಳನ್ನು ಬಾರಿಸಿದರೆ, ಇಂಗ್ಲೆಂಡ್‌ನಲ್ಲಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿದೇಶಿ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ರೋಹಿತ್ ಏಕದಿನ ಕ್ರಿಕೆಟ್​ನಲ್ಲಿ 12,000 ಏಕದಿನ ರನ್‌ಗಳನ್ನು ತಲುಪಲು 280 ರನ್‌ಗಳ ದೂರದಲ್ಲಿದ್ದಾರೆ (PC-PTI).

ಹಾಗೆಯೇ ರೋಹಿತ್ ಶರ್ಮಾ ಈ ಏಕದಿನ ಸರಣಿಯಲ್ಲಿ ಎಂಟು ಸಿಕ್ಸರ್‌ಗಳನ್ನು ಬಾರಿಸಿದರೆ, ಇಂಗ್ಲೆಂಡ್‌ನಲ್ಲಿ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ವಿದೇಶಿ ಬ್ಯಾಟ್ಸ್‌ಮನ್ ಎನಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ರೋಹಿತ್ ಏಕದಿನ ಕ್ರಿಕೆಟ್​ನಲ್ಲಿ 12,000 ಏಕದಿನ ರನ್‌ಗಳನ್ನು ತಲುಪಲು 280 ರನ್‌ಗಳ ದೂರದಲ್ಲಿದ್ದಾರೆ (PC-PTI).

6 / 6
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು