AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಂ ಇಂಡಿಯಾವನ್ನು ಕಾಡುತ್ತಿರುವ ಇಬ್ಬರು ಆರ್​ಸಿಬಿ ಆಟಗಾರರು

India vs England: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ತನ್ನ ಗೆಲುವಿನ ಖಾತೆ ತೆರೆಯಲು ವಿಫಲವಾಗಿದೆ. ಆಡಿದ ಮೂರು ಪಂದ್ಯಗಳಲ್ಲಿ ಎರಡು ಸೋತು, ಒಂದು ರದ್ದಾಗಿದೆ. ಈ ಸರಣಿಯಲ್ಲಿ ಭಾರತದ ಸೋಲಿಗೆ ಜೇಕಬ್ ಬೆಥೆಲ್ ಮತ್ತು ಫಿಲ್ ಸಾಲ್ಟ್ (ಆರ್‌ಸಿಬಿ ಆಟಗಾರರು) ಪ್ರಮುಖ ಕಾರಣರಾಗಿದ್ದು, ಇಂಗ್ಲೆಂಡ್ ಪರ ನಿರ್ಣಾಯಕ ಇನ್ನಿಂಗ್ಸ್‌ಗಳನ್ನು ಆಡಿ ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆ ತಂದಿದ್ದಾರೆ.

ಪೃಥ್ವಿಶಂಕರ
|

Updated on:Jul 08, 2026 | 3:21 PM

Share
ಐದು ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಇದುವರೆಗೂ ತನ್ನ ಗೆಲುವಿನ ಖಾತೆ ತೆರೆದಿಲ್ಲ ನಡೆದಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋತಿದ್ದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಶ್ರೇಯಸ್ ಪಡೆಯ ಈ ಕಳಪೆ ಪ್ರದರ್ಶನವನ್ನು ನೋಡಿದರೆ, ಮಳೆಯಿಂದ ಮೊದಲ ಪಂದ್ಯ ರದ್ದಾಗದಿದ್ದರೆ, ಆ ಪಂದ್ಯವನ್ನು ಭಾರತ ಸೋಲುವ ಸಾಧ್ಯತೆಗಳಿದ್ದವು (PC-BCCI).

ಐದು ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಇದುವರೆಗೂ ತನ್ನ ಗೆಲುವಿನ ಖಾತೆ ತೆರೆದಿಲ್ಲ ನಡೆದಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಟೀಂ ಇಂಡಿಯಾ ಸೋತಿದ್ದರೆ, ಇನ್ನೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು. ಶ್ರೇಯಸ್ ಪಡೆಯ ಈ ಕಳಪೆ ಪ್ರದರ್ಶನವನ್ನು ನೋಡಿದರೆ, ಮಳೆಯಿಂದ ಮೊದಲ ಪಂದ್ಯ ರದ್ದಾಗದಿದ್ದರೆ, ಆ ಪಂದ್ಯವನ್ನು ಭಾರತ ಸೋಲುವ ಸಾಧ್ಯತೆಗಳಿದ್ದವು (PC-BCCI).

1 / 5
ಸರಣಿಯ ಎರಡನೇ ಪಂದ್ಯವನ್ನು 4 ವಿಕೆಟ್‌ಗಳಿಂದ ಸೋತಿದ್ದ ಭಾರತ ತಂಡ, ಎರಡನೇ ಪಂದ್ಯವನ್ನು ಬರೋಬ್ಬರಿ 125 ರನ್​ಗಳಿಂದ ಸೋತಿತು. ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಕಂಡ ಅತಿದೊಡ್ಡ ಸೋಲು ಇದಾಗಿದೆ. ಹಾಗೆಯೇ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆಲ್ಲಲು ವಿಫಲವಾಗಿರುವುದು ಇದೇ ಮೊದಲು (PC-BCCI).

ಸರಣಿಯ ಎರಡನೇ ಪಂದ್ಯವನ್ನು 4 ವಿಕೆಟ್‌ಗಳಿಂದ ಸೋತಿದ್ದ ಭಾರತ ತಂಡ, ಎರಡನೇ ಪಂದ್ಯವನ್ನು ಬರೋಬ್ಬರಿ 125 ರನ್​ಗಳಿಂದ ಸೋತಿತು. ಟಿ20 ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಕಂಡ ಅತಿದೊಡ್ಡ ಸೋಲು ಇದಾಗಿದೆ. ಹಾಗೆಯೇ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಭಾರತ ತಂಡ ಸತತ ಐದು ಪಂದ್ಯಗಳನ್ನು ಗೆಲ್ಲಲು ವಿಫಲವಾಗಿರುವುದು ಇದೇ ಮೊದಲು (PC-BCCI).

2 / 5
ವಾಸ್ತವವಾಗಿ ಟೀಂ ಇಂಡಿಯಾದ ಸತತ ಈ ಎರಡು ಸೋಲುಗಳಿಗೆ ಒಂದರ್ಥದಲ್ಲಿ ಇಬ್ಬರು ಆರ್​ಸಿಬಿ ಆಟಗಾರರೇ ಪ್ರಮುಖ ಕಾರಣ ಎನ್ನಬಹುದು. ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 190 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ಗೆ ಉತ್ತಮ ಆರಂಭ ಸಿಗಲಿಲ್ಲ. ಆದರೆ 4ನೇ ಕ್ರಮಾಂಕದಲ್ಲಿ ಬಂದ ಜೇಕಬ್ ಬೆಥೆಲ್ ಕೊನೆಯವರೆಗೂ ಅಜೇಯರಾಗಿ ಉಳಿದು 76 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಬೆಥೆಲ್ ಐಪಿಎಲ್‌ನಲ್ಲಿ ಆರ್​ಸಿಬಿ ಪರ ಆಡುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ (PC-ECB).

ವಾಸ್ತವವಾಗಿ ಟೀಂ ಇಂಡಿಯಾದ ಸತತ ಈ ಎರಡು ಸೋಲುಗಳಿಗೆ ಒಂದರ್ಥದಲ್ಲಿ ಇಬ್ಬರು ಆರ್​ಸಿಬಿ ಆಟಗಾರರೇ ಪ್ರಮುಖ ಕಾರಣ ಎನ್ನಬಹುದು. ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 190 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್​ಗೆ ಉತ್ತಮ ಆರಂಭ ಸಿಗಲಿಲ್ಲ. ಆದರೆ 4ನೇ ಕ್ರಮಾಂಕದಲ್ಲಿ ಬಂದ ಜೇಕಬ್ ಬೆಥೆಲ್ ಕೊನೆಯವರೆಗೂ ಅಜೇಯರಾಗಿ ಉಳಿದು 76 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಬೆಥೆಲ್ ಐಪಿಎಲ್‌ನಲ್ಲಿ ಆರ್​ಸಿಬಿ ಪರ ಆಡುತ್ತಾರೆ ಎಂಬುದು ಗಮನಿಸಬೇಕಾದ ಸಂಗತಿ (PC-ECB).

3 / 5
ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ಮಾಡಿತು. ಈ ಪಂದ್ಯದಲ್ಲಿ ಇಂಗ್ಲೆಂಡ್‌ ಪರ ಆರಂಭಿಕ ಫಿಲ್ ಸಾಲ್ಟ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡ 200 ರನ್​ಗಳ ಗಡಿ ದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸಾಲ್ಟ್ 17ನೇ ಓವರ್​ನವರೆಗೂ ಕ್ರಿಸ್​ನಲ್ಲಿ ನಿಂತು ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಹಾಗೆಯೇ ವೈಯಕ್ತಿಕವಾಗಿ 70 ರನ್​ಗಳ ಇನ್ನಿಂಗ್ಸ್ ಕೂಡ ಆಡಿದರು. ಸಾಲ್ಟ್ ಕೂಡ ಐಪಿಎಲ್‌ನಲ್ಲಿ ಆರ್​ಸಿಬಿ ಪರ ಆಡುತ್ತಾರೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ (PC-PTI).

ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ಮಾಡಿತು. ಈ ಪಂದ್ಯದಲ್ಲಿ ಇಂಗ್ಲೆಂಡ್‌ ಪರ ಆರಂಭಿಕ ಫಿಲ್ ಸಾಲ್ಟ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡ 200 ರನ್​ಗಳ ಗಡಿ ದಾಟುವಲ್ಲಿ ಪ್ರಮುಖ ಪಾತ್ರವಹಿಸಿದರು. ಆರಂಭಿಕನಾಗಿ ಕಣಕ್ಕಿಳಿದಿದ್ದ ಸಾಲ್ಟ್ 17ನೇ ಓವರ್​ನವರೆಗೂ ಕ್ರಿಸ್​ನಲ್ಲಿ ನಿಂತು ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಹಾಗೆಯೇ ವೈಯಕ್ತಿಕವಾಗಿ 70 ರನ್​ಗಳ ಇನ್ನಿಂಗ್ಸ್ ಕೂಡ ಆಡಿದರು. ಸಾಲ್ಟ್ ಕೂಡ ಐಪಿಎಲ್‌ನಲ್ಲಿ ಆರ್​ಸಿಬಿ ಪರ ಆಡುತ್ತಾರೆ ಎಂಬುದನ್ನು ಹೊಸದಾಗಿ ಹೇಳಬೇಕಿಲ್ಲ (PC-PTI).

4 / 5
ಇವರಿಬ್ಬರ ಜೊತೆಗೆ ಇಡೀ ಇಂಗ್ಲೆಂಡ್‌ ತಂಡದ ಸಾಂಘಿಕ ಪ್ರದರ್ಶನ ಗೆಲುವಿಗೆ ಪ್ರಮುಖ ಕಾರಣವಾಗಿದ್ದರೂ ಇವರಿಬ್ಬರ ನಿರ್ಣಾಯಕ ರನ್ ಕೊಡುಗೆ ತಂಡವನ್ನು ಒತ್ತಡದಿಂದ ದೂರ ಮಾಡಿತು. ಅದರಲ್ಲೂ 2ನೇ ಟಿ20 ಪಂದ್ಯದಲ್ಲಿ ಬೆಥೆಲ್ ಆಡಿದ ಅಜೇಯ ಇನ್ನಿಂಗ್ಸ್​ನಿಂದಾಗಿಯೇ ಇಂಗ್ಲೆಂಡ್‌ ಗೆದ್ದಿತು ಎಂಬುದರಲ್ಲಿ ಯಾವುದೇ ಸುಳ್ಳಿಲ್ಲ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಲ್ಟ್ ಕಟ್ಟಿದ ಇನ್ನಿಂಗ್ಸ್ ಕೂಡ ಇಂಗ್ಲೆಂಡ್‌ ಗೆಲುವಿಗೆ ಕಾರಣವಾಯಿತು. ಒಟ್ಟಾರೆ ಐಪಿಎಲ್‌ನಲ್ಲಿ ಆರ್​ಸಿಬಿ ಅಭಿಮಾನಿಗಳ ಫೆವರೇಟ್ ಆಟಗಾರರೆನಿಸಿಕೊಂಡಿರುವವರು, ಇದೀಗ ಟೀಂ ಇಂಡಿಯಾ ಪಾಲಿಗೆ ವಿಲನ್​ಗಳಾಗಿದ್ದಾರೆ ಎಂದರೆ ತಪ್ಪಾಗಲಾರದು (PC-PTI).

ಇವರಿಬ್ಬರ ಜೊತೆಗೆ ಇಡೀ ಇಂಗ್ಲೆಂಡ್‌ ತಂಡದ ಸಾಂಘಿಕ ಪ್ರದರ್ಶನ ಗೆಲುವಿಗೆ ಪ್ರಮುಖ ಕಾರಣವಾಗಿದ್ದರೂ ಇವರಿಬ್ಬರ ನಿರ್ಣಾಯಕ ರನ್ ಕೊಡುಗೆ ತಂಡವನ್ನು ಒತ್ತಡದಿಂದ ದೂರ ಮಾಡಿತು. ಅದರಲ್ಲೂ 2ನೇ ಟಿ20 ಪಂದ್ಯದಲ್ಲಿ ಬೆಥೆಲ್ ಆಡಿದ ಅಜೇಯ ಇನ್ನಿಂಗ್ಸ್​ನಿಂದಾಗಿಯೇ ಇಂಗ್ಲೆಂಡ್‌ ಗೆದ್ದಿತು ಎಂಬುದರಲ್ಲಿ ಯಾವುದೇ ಸುಳ್ಳಿಲ್ಲ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಲ್ಟ್ ಕಟ್ಟಿದ ಇನ್ನಿಂಗ್ಸ್ ಕೂಡ ಇಂಗ್ಲೆಂಡ್‌ ಗೆಲುವಿಗೆ ಕಾರಣವಾಯಿತು. ಒಟ್ಟಾರೆ ಐಪಿಎಲ್‌ನಲ್ಲಿ ಆರ್​ಸಿಬಿ ಅಭಿಮಾನಿಗಳ ಫೆವರೇಟ್ ಆಟಗಾರರೆನಿಸಿಕೊಂಡಿರುವವರು, ಇದೀಗ ಟೀಂ ಇಂಡಿಯಾ ಪಾಲಿಗೆ ವಿಲನ್​ಗಳಾಗಿದ್ದಾರೆ ಎಂದರೆ ತಪ್ಪಾಗಲಾರದು (PC-PTI).

5 / 5

Published On - 3:21 pm, Wed, 8 July 26

Follow Us
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ: ಕುಸಿದು ಬೀಳುತ್ತಿರುವ ಬಂಡೆಗಲ್ಲುಗಳು
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಇಂಡೋನೇಷ್ಯಾದ ಭವ್ಯ 'ಪ್ರಂಬಾನನ್' ಶಿವ ದೇವಾಲಯಕ್ಕೆ ಪಿಎಂ ಮೋದಿ ಭೇಟಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ
ಭಾರತ-ಇಂಡೋನೇಷ್ಯಾ ಸ್ನೇಹ ಅತ್ಯಂತ ಗಟ್ಟಿ ಮತ್ತು ರೋಮಾಂಚಕ: ಮೋದಿ