AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ ಓವಲ್ ಟೆಸ್ಟ್ ಗೆದ್ದರೆ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಯಾರ ಕೈ ಸೇರಲಿದೆ?

Anderson-Tendulkar Trophy: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯದ ಫಲಿತಾಂಶವು ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಭವಿಷ್ಯವನ್ನು ನಿರ್ಧರಿಸುತ್ತದೆ. ಸರಣಿ ಡ್ರಾ ಆದರೆ, ಟ್ರೋಫಿ ಯಾರಿಗೂ ಸಲ್ಲದು ಎಂಬುದು ಇತ್ತೀಚಿನ ಅಧಿಕೃತ ಮಾಹಿತಿ. ಇದರರ್ಥ ಟ್ರೋಫಿ ECB ಪ್ರಧಾನ ಕಚೇರಿಯಾದ ಲಾರ್ಡ್ಸ್‌ನಲ್ಲಿ ಇರಿಸಲಾಗುವುದು. ಪೂರ್ವದ ಪಟೌಡಿ ಟ್ರೋಫಿ ಫಲಿತಾಂಶವನ್ನು ಈ ಬಾರಿ ಪರಿಗಣಿಸಲಾಗುವುದಿಲ್ಲ.

ಪೃಥ್ವಿಶಂಕರ
|

Updated on:Aug 04, 2025 | 4:04 PM

Share
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಆದಾಗ್ಯೂ ಕೊನೆಯ ಪಂದ್ಯವನ್ನು ಭಾರತ ಗೆದ್ದುಕೊಂಡರೆ, ಆಗ ಸರಣಿ 2-2 ರಿಂದ ಡ್ರಾದಲ್ಲಿ ಕೊನೆಯಾಗಲಿದೆ. ಇಂತಹ ಸಂದರ್ಭದಲ್ಲಿ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಯಾರಿಗೆ ಸಿಗುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಆದಾಗ್ಯೂ ಕೊನೆಯ ಪಂದ್ಯವನ್ನು ಭಾರತ ಗೆದ್ದುಕೊಂಡರೆ, ಆಗ ಸರಣಿ 2-2 ರಿಂದ ಡ್ರಾದಲ್ಲಿ ಕೊನೆಯಾಗಲಿದೆ. ಇಂತಹ ಸಂದರ್ಭದಲ್ಲಿ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಯಾರಿಗೆ ಸಿಗುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

1 / 5
ವಾಸ್ತವವಾಗಿ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಟೌಡಿ ಟ್ರೋಫಿ ಟೆಸ್ಟ್ ಸರಣಿಯ ಹೆಸರನ್ನು ಈಗ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಎಂದು ಬದಲಾಯಿಸಲಾಗಿದೆ. ಈ ಹಿಂದೆ ಭಾರತ ಹಾಗೂ ಇಂಗ್ಲೆಂಡ್‌ ನಡುವೆ ನಡೆದಿದ್ದ ಪಟೌಡಿ ಟ್ರೋಫಿ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್‌ ಗೆದ್ದುಕೊಂಡಿತ್ತು. ಹೀಗಾಗಿ ಈ ಸರಣಿ ಡ್ರಾ ಆದರೆ ಟ್ರೋಫಿ ಇಂಗ್ಲೆಂಡ್‌ ಬಳಿ ಉಳಿಯುತ್ತದೆ ಎನ್ನಲಾಗುತ್ತಿತ್ತು.

ವಾಸ್ತವವಾಗಿ, ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಟೌಡಿ ಟ್ರೋಫಿ ಟೆಸ್ಟ್ ಸರಣಿಯ ಹೆಸರನ್ನು ಈಗ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿ ಎಂದು ಬದಲಾಯಿಸಲಾಗಿದೆ. ಈ ಹಿಂದೆ ಭಾರತ ಹಾಗೂ ಇಂಗ್ಲೆಂಡ್‌ ನಡುವೆ ನಡೆದಿದ್ದ ಪಟೌಡಿ ಟ್ರೋಫಿ ಟೆಸ್ಟ್ ಸರಣಿಯನ್ನು ಇಂಗ್ಲೆಂಡ್‌ ಗೆದ್ದುಕೊಂಡಿತ್ತು. ಹೀಗಾಗಿ ಈ ಸರಣಿ ಡ್ರಾ ಆದರೆ ಟ್ರೋಫಿ ಇಂಗ್ಲೆಂಡ್‌ ಬಳಿ ಉಳಿಯುತ್ತದೆ ಎನ್ನಲಾಗುತ್ತಿತ್ತು.

2 / 5
ಆದರೆ ಇದೀಗ ಹೊರಬಿದ್ದಿರುವ ಮಾಹಿತಿಯ ಪ್ರಕಾರ ಪಟೌಡಿ ಟ್ರೋಫಿ ಹೆಸರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿಯನ್ನು  ಯಾರು ಗೆದ್ದರು ಎಂಬುದು ಇಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಇದರರ್ಥ ಈ ಸರಣಿ ಡ್ರಾ ಆದರೆ, ಈ ಟ್ರೋಫಿಯನ್ನು ಇಸಿಬಿ ಪ್ರಧಾನ ಕಚೇರಿಯಲ್ಲಿ ಇಡಲಾಗುತ್ತದೆ.

ಆದರೆ ಇದೀಗ ಹೊರಬಿದ್ದಿರುವ ಮಾಹಿತಿಯ ಪ್ರಕಾರ ಪಟೌಡಿ ಟ್ರೋಫಿ ಹೆಸರಿನಲ್ಲಿ ನಡೆದಿದ್ದ ಟೆಸ್ಟ್ ಸರಣಿಯನ್ನು ಯಾರು ಗೆದ್ದರು ಎಂಬುದು ಇಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ ಎಂದು ಹೇಳಲಾಗುತ್ತಿದೆ. ಇದರರ್ಥ ಈ ಸರಣಿ ಡ್ರಾ ಆದರೆ, ಈ ಟ್ರೋಫಿಯನ್ನು ಇಸಿಬಿ ಪ್ರಧಾನ ಕಚೇರಿಯಲ್ಲಿ ಇಡಲಾಗುತ್ತದೆ.

3 / 5
ECB ಯ ಪ್ರಧಾನ ಕಛೇರಿ ಲಾರ್ಡ್ಸ್​ನಲ್ಲಿ ಇದ್ದು, ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಡ್ರಾ ಆದರೆ, ಈ ಟ್ರೋಫಿಯನ್ನು ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಇಡಲಾಗುತ್ತದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಡ್ರಾ ಆದಾಗಲೂ ಸಹ ಟ್ರೋಫಿಯನ್ನು ಲಾರ್ಡ್ಸ್‌ನಲ್ಲಿ ಇಡಲಾಗುತ್ತದೆ.

ECB ಯ ಪ್ರಧಾನ ಕಛೇರಿ ಲಾರ್ಡ್ಸ್​ನಲ್ಲಿ ಇದ್ದು, ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಡ್ರಾ ಆದರೆ, ಈ ಟ್ರೋಫಿಯನ್ನು ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ಇಡಲಾಗುತ್ತದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಆಶಸ್ ಡ್ರಾ ಆದಾಗಲೂ ಸಹ ಟ್ರೋಫಿಯನ್ನು ಲಾರ್ಡ್ಸ್‌ನಲ್ಲಿ ಇಡಲಾಗುತ್ತದೆ.

4 / 5
ಇನ್ನು ಟೆಸ್ಟ್ ಸರಣಿಯ ಬಗ್ಗೆ ಹೇಳುವುದಾದರೆ.. ಲೀಡ್ಸ್‌ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಿದ್ದ ಇಂಗ್ಲೆಂಡ್‌, ಎಡ್ಜ್‌ಬಾಸ್ಟನ್‌ನಲ್ಲಿ ಸೋತಿತ್ತು. ಆ ಬಳಿಕ ಲಾರ್ಡ್ಸ್‌ನಲ್ಲಿ ನಡೆದಿದ್ದ ಪಂದ್ಯವನ್ನು ಇಂಗ್ಲೆಂಡ್‌ ಗೆದ್ದಿಕೊಂಡರೆ, ಮ್ಯಾಂಚೆಸ್ಟರ್ ಟೆಸ್ಟ್ ಡ್ರಾ ಆಗಿತ್ತು. ಈಗ ಇಂಗ್ಲೆಂಡ್ ಸರಣಿಯನ್ನು ಗೆಲ್ಲುತ್ತದೆಯೇ ಅಥವಾ ಭಾರತ ಡ್ರಾ ಮಾಡಿಕೊಳ್ಳುತ್ತದೆಯೇ ಎಂಬುದು ಓವಲ್‌ನಲ್ಲಿ ನಿರ್ಧರಿಸಲ್ಪಡುತ್ತದೆ.

ಇನ್ನು ಟೆಸ್ಟ್ ಸರಣಿಯ ಬಗ್ಗೆ ಹೇಳುವುದಾದರೆ.. ಲೀಡ್ಸ್‌ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಿದ್ದ ಇಂಗ್ಲೆಂಡ್‌, ಎಡ್ಜ್‌ಬಾಸ್ಟನ್‌ನಲ್ಲಿ ಸೋತಿತ್ತು. ಆ ಬಳಿಕ ಲಾರ್ಡ್ಸ್‌ನಲ್ಲಿ ನಡೆದಿದ್ದ ಪಂದ್ಯವನ್ನು ಇಂಗ್ಲೆಂಡ್‌ ಗೆದ್ದಿಕೊಂಡರೆ, ಮ್ಯಾಂಚೆಸ್ಟರ್ ಟೆಸ್ಟ್ ಡ್ರಾ ಆಗಿತ್ತು. ಈಗ ಇಂಗ್ಲೆಂಡ್ ಸರಣಿಯನ್ನು ಗೆಲ್ಲುತ್ತದೆಯೇ ಅಥವಾ ಭಾರತ ಡ್ರಾ ಮಾಡಿಕೊಳ್ಳುತ್ತದೆಯೇ ಎಂಬುದು ಓವಲ್‌ನಲ್ಲಿ ನಿರ್ಧರಿಸಲ್ಪಡುತ್ತದೆ.

5 / 5

Published On - 3:44 pm, Mon, 4 August 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!