
ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಮಹತ್ವದ ಟೆಸ್ಟ್ ಸರಣಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಭಾರತ ಕ್ರಿಕೆಟ್ ತಂಡಕ್ಕೆ ಭಾರಿ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಸೇರಿದಂತೆ ಭಾರತ ಟೆಸ್ಟ್ ತಂಡದ ಐವರು ಆಟಗಾರರು ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಆ ಆಟಗಾರರು ಯಾರೆಂದರೆ... (PC: BCCI)

ಜಸ್ಪ್ರೀತ್ ಬುಮ್ರಾ: ಭಾರತ ತಂಡದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಎಡಗಾಲಿನ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಅವರು ಸಂಪೂರ್ಣ ಸರಣಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಆಖಿಬ್ ನಬಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. (PC: GettyImages)

ಸಾಯಿ ಸುದರ್ಶನ್: ಟೀಮ್ ಇಂಡಿಯಾದ ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರ ಬಲಗಾಲಿನ ಹೆಬ್ಬೆರಳಿಗೆ ಗಾಯವಾಗಿದ್ದು, ಈ ಗಾಯದ ಸಮಸ್ಯೆಯಿಂದ ಅವರು ಇನ್ನೂ ಸಹ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರು ಕೂಡ ಟೆಸ್ಟ್ ಸರಣಿಗೆ ಲಭ್ಯವಿರುವುದಿಲ್ಲ. (PC: GettyImages)

ಹರ್ಷಿತ್ ರಾಣಾ: ಭಾರತ ತಂಡದ ವೇಗಿ ಹರ್ಷಿತ್ ರಾಣಾ ಚೇತರಿಸಿಕೊಳ್ಳುವ ಹಂತದಲ್ಲಿದ್ದಾಗಲೇ ಬಲಗಾಲಿನ ಹ್ಯಾಮ್ಸ್ಟ್ರಿಂಗ್ ಸಮಸ್ಯೆಗೀಡಾಗಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. (PC: GettyImages)

ನಿತೀಶ್ ಕುಮಾರ್ ರೆಡ್ಡಿ: ಟೀಮ್ ಇಂಡಿಯಾ ಯುವ ಆಲ್ ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರ ಎಡಗಾಲಿನ ಕ್ವಾಡ್ರಿಸೆಪ್ಸ್ ನಲ್ಲಿ ತೀವ್ರ ಗಾಯವಾಗಿದ್ದು, ಹೀಗಾಗಿ ಮುಂಬರುವ ಪಂದ್ಯಗಳಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. (PC: GettyImages)

ವಾಷಿಂಗ್ಟನ್ ಸುಂದರ್: ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಬಲಗಾಲಿನ ಹ್ಯಾಮ್ಸ್ಟ್ರಿಂಗ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಸುಂದರ್ ಕೂಡ ಕಾಣಿಸಿಕೊಳ್ಳುವುದಿಲ್ಲ. (PC: GettyImages)