IND vs NZ: ಸೋಲು, ಸೋಲು, ಸೋಲು… ಗಂಭೀರ್ ಗುರು ಆದ್ಮೇಲೆ ಬದಲಾಯ್ತು ಟೀಂ ಇಂಡಿಯಾ ಹಣೆಬರಹ

Gautam Gambhir: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 2-0 ಅಂತರದಿಂದ ಸೋತಿರುವುದು ಭಾರತೀಯ ಕ್ರಿಕೆಟ್‌ಗೆ ದೊಡ್ಡ ಹಿನ್ನಡೆ. ಗೌತಮ್ ಗಂಭೀರ್ ಅವರ ಕೋಚಿಂಗ್‌ನಲ್ಲಿ ಭಾರತ ತಂಡ ಹಲವು ಸೋಲುಗಳನ್ನು ಅನುಭವಿಸಿದೆ. ಅದರಲ್ಲೂ ಗಂಭೀರ್ ಜವಬ್ದಾರಿವಹಿಸಿಕೊಂಡ ಮೇಲೆ ಟೀಂ ಇಂಡಿಯಾ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿ ಹಲವಾರು ನಾಚಿಕೆಗೇಡಿನ ದಾಖಲೆಗಳನ್ನು ಮಾಡಿದೆ.

|

Updated on: Oct 26, 2024 | 7:48 PM

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಕಳೆದುಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿ ಸೋತಿದೆ. ವಾಸ್ತವವಾಗಿ ಗೌತಮ್ ಗಂಭೀರ್ ತಂಡದ ಮುಖ್ಯ ಕೋಚ್ ಆದ ಬಳಿಕ ಟೀಂ ಇಂಡಿಯಾ ಈ ರೀತಿಯ ಹಲವು ಅವಮಾನಕರ ಸೋಲುಗಳಿಗೆ ಕೊರಳೊಡ್ಡಿದೆ.

ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-0 ಅಂತರದಿಂದ ಕಳೆದುಕೊಂಡಿದೆ. ಈ ಮೂಲಕ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿ ಸೋತಿದೆ. ವಾಸ್ತವವಾಗಿ ಗೌತಮ್ ಗಂಭೀರ್ ತಂಡದ ಮುಖ್ಯ ಕೋಚ್ ಆದ ಬಳಿಕ ಟೀಂ ಇಂಡಿಯಾ ಈ ರೀತಿಯ ಹಲವು ಅವಮಾನಕರ ಸೋಲುಗಳಿಗೆ ಕೊರಳೊಡ್ಡಿದೆ.

1 / 10
ವಾಸ್ತವವಾಗಿ 2024 ರ ಟಿ20 ವಿಶ್ವಕಪ್​ ಗೆಲ್ಲುವುದರೊಂದಿಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಕೊನೆಗೊಂಡಿತ್ತು. ಆ ನಂತರ ಗೌತಮ್ ಗಂಭೀರ್ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಯಿತು. ಆದರೆ ಗೌತಮ್ ಗಂಭೀರ್ ಈ ಜವಬ್ದಾರಿ ಹೊತ್ತ ಅಲ್ಪಾವಧಿಯಲ್ಲಿ ಟೀಂ ಇಂಡಿಯಾ ಹಲವು ನಾಚಿಕೆಗೇಡಿನ ದಾಖಲೆಗಳನ್ನು ಮಾಡಿದೆ.

ವಾಸ್ತವವಾಗಿ 2024 ರ ಟಿ20 ವಿಶ್ವಕಪ್​ ಗೆಲ್ಲುವುದರೊಂದಿಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿಯು ಕೊನೆಗೊಂಡಿತ್ತು. ಆ ನಂತರ ಗೌತಮ್ ಗಂಭೀರ್ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಯಿತು. ಆದರೆ ಗೌತಮ್ ಗಂಭೀರ್ ಈ ಜವಬ್ದಾರಿ ಹೊತ್ತ ಅಲ್ಪಾವಧಿಯಲ್ಲಿ ಟೀಂ ಇಂಡಿಯಾ ಹಲವು ನಾಚಿಕೆಗೇಡಿನ ದಾಖಲೆಗಳನ್ನು ಮಾಡಿದೆ.

2 / 10
ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಶ್ರೀಲಂಕಾಕ್ಕೆ ಮೊದಲ ವಿದೇಶಿ ಪ್ರವಾಸ ಕೈಗೊಂಡರು. ಅವರ ಅಧಿಕಾರಾವಧಿಯಲ್ಲಿ ಟಿ20 ಸರಣಿಯಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಆ ನಂತರ ನಡೆದ ಏಕದಿನ ಸರಣಿಯಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧ ಭಾರತ ಮೊದಲ ಏಕದಿನ ಸರಣಿ ಸೋತ ಬೇಡದ ದಾಖಲೆ ಬರೆಯಿತು.

ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಶ್ರೀಲಂಕಾಕ್ಕೆ ಮೊದಲ ವಿದೇಶಿ ಪ್ರವಾಸ ಕೈಗೊಂಡರು. ಅವರ ಅಧಿಕಾರಾವಧಿಯಲ್ಲಿ ಟಿ20 ಸರಣಿಯಲ್ಲಿ ಗೆಲ್ಲುವ ಮೂಲಕ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಆ ನಂತರ ನಡೆದ ಏಕದಿನ ಸರಣಿಯಲ್ಲಿ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ 27 ವರ್ಷಗಳ ನಂತರ ಶ್ರೀಲಂಕಾ ವಿರುದ್ಧ ಭಾರತ ಮೊದಲ ಏಕದಿನ ಸರಣಿ ಸೋತ ಬೇಡದ ದಾಖಲೆ ಬರೆಯಿತು.

3 / 10
ಅಲ್ಲದೆ ಶ್ರೀಲಂಕಾ ವಿರುದ್ಧದ ಈ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾ ಆಲೌಟ್ ಆಗಿತ್ತು. ವಾಸ್ತವವಾಗಿ, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಟೀಂ ಇಂಡಿಯಾ ಏಕದಿನ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಆಲೌಟ್ ಆದ ಬೇಡದ ದಾಖಲೆ ಬರೆಯಿತು.

ಅಲ್ಲದೆ ಶ್ರೀಲಂಕಾ ವಿರುದ್ಧದ ಈ ಏಕದಿನ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾ ಆಲೌಟ್ ಆಗಿತ್ತು. ವಾಸ್ತವವಾಗಿ, ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ, ಟೀಂ ಇಂಡಿಯಾ ಏಕದಿನ ಸರಣಿಯ ಎಲ್ಲಾ ಪಂದ್ಯಗಳಲ್ಲಿ ಆಲೌಟ್ ಆದ ಬೇಡದ ದಾಖಲೆ ಬರೆಯಿತು.

4 / 10
ಕಳೆದ 45 ವರ್ಷಗಳಲ್ಲಿ ಭಾರತ ತಂಡವು ಒಂದು ವರ್ಷದಲ್ಲಿ ಯಾವುದೇ ಏಕದಿನ ಪಂದ್ಯವನ್ನು ಗೆಲ್ಲಲು ಸಾಧ್ಯವಾಗದಿರುವುದು ಇದೇ ಮೊದಲು. ಟೀಂ ಇಂಡಿಯಾ ಈ ವರ್ಷ ಕೇವಲ 3 ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 2 ಪಂದ್ಯಗಳಲ್ಲಿ ಸೋಲ ಕಂಡಿದ್ದರೆ, ಒಂದು ಪಂದ್ಯವನ್ನು ಟೈ  ಮಾಡಿಕೊಂಡಿತ್ತು.

ಕಳೆದ 45 ವರ್ಷಗಳಲ್ಲಿ ಭಾರತ ತಂಡವು ಒಂದು ವರ್ಷದಲ್ಲಿ ಯಾವುದೇ ಏಕದಿನ ಪಂದ್ಯವನ್ನು ಗೆಲ್ಲಲು ಸಾಧ್ಯವಾಗದಿರುವುದು ಇದೇ ಮೊದಲು. ಟೀಂ ಇಂಡಿಯಾ ಈ ವರ್ಷ ಕೇವಲ 3 ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ 2 ಪಂದ್ಯಗಳಲ್ಲಿ ಸೋಲ ಕಂಡಿದ್ದರೆ, ಒಂದು ಪಂದ್ಯವನ್ನು ಟೈ ಮಾಡಿಕೊಂಡಿತ್ತು.

5 / 10
ಇದೀಗ ನ್ಯೂಜಿಲೆಂಡ್ ವಿರುದ್ಧವೂ ಟೀಂ ಇಂಡಿಯಾದ ಕಳಪೆ ಪ್ರದರ್ಶನ ಮುಂದುವರಿದಿದ್ದು, ಬೆಂಗಳೂರಿನಲ್ಲಿ ನಡೆದಿದ್ದ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿತ್ತು. ಇದರೊಂದಿಗೆ ಟೀಂ ಇಂಡಿಯಾ 36 ವರ್ಷಗಳ ನಂತರ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಸೋತ ಬೇಡದ ದಾಖಲೆ ಬರೆಯಿತು. ಇದಕ್ಕೂ ಮುನ್ನ ನ್ಯೂಜಿಲೆಂಡ್ 1988ರಲ್ಲಿ ಭಾರತದಲ್ಲಿ ಟೆಸ್ಟ್ ಗೆದ್ದಿತ್ತು.

ಇದೀಗ ನ್ಯೂಜಿಲೆಂಡ್ ವಿರುದ್ಧವೂ ಟೀಂ ಇಂಡಿಯಾದ ಕಳಪೆ ಪ್ರದರ್ಶನ ಮುಂದುವರಿದಿದ್ದು, ಬೆಂಗಳೂರಿನಲ್ಲಿ ನಡೆದಿದ್ದ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲು ಕಂಡಿತ್ತು. ಇದರೊಂದಿಗೆ ಟೀಂ ಇಂಡಿಯಾ 36 ವರ್ಷಗಳ ನಂತರ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಸೋತ ಬೇಡದ ದಾಖಲೆ ಬರೆಯಿತು. ಇದಕ್ಕೂ ಮುನ್ನ ನ್ಯೂಜಿಲೆಂಡ್ 1988ರಲ್ಲಿ ಭಾರತದಲ್ಲಿ ಟೆಸ್ಟ್ ಗೆದ್ದಿತ್ತು.

6 / 10
ಹಾಗೆಯೇ 19 ವರ್ಷಗಳ ಬಳಿಕ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿತ್ತು. ಇದಕ್ಕೂ ಮೊದಲು 2005ರಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಪಾಕಿಸ್ತಾನ ಸೋಲಿಸಿತ್ತು.

ಹಾಗೆಯೇ 19 ವರ್ಷಗಳ ಬಳಿಕ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತಿತ್ತು. ಇದಕ್ಕೂ ಮೊದಲು 2005ರಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಪಾಕಿಸ್ತಾನ ಸೋಲಿಸಿತ್ತು.

7 / 10
ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 46 ರನ್​ಗಳಿಗೆ ಆಲೌಟ್ ಆಗಿತ್ತು. ತವರಿನಲ್ಲಿ ಟೀಂ ಇಂಡಿಯಾ 50 ರನ್‌ಗಳಿಗೆ ಆಲೌಟ್ ಆಗಿದ್ದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು.

ನ್ಯೂಜಿಲೆಂಡ್ ವಿರುದ್ಧದ ಬೆಂಗಳೂರು ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ 46 ರನ್​ಗಳಿಗೆ ಆಲೌಟ್ ಆಗಿತ್ತು. ತವರಿನಲ್ಲಿ ಟೀಂ ಇಂಡಿಯಾ 50 ರನ್‌ಗಳಿಗೆ ಆಲೌಟ್ ಆಗಿದ್ದು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು.

8 / 10
ಇದೀಗ ನ್ಯೂಜಿಲೆಂಡ್ ವಿರುದ್ಧದ ಪುಣೆ ಟೆಸ್ಟ್‌ನಲ್ಲೂ ಟೀಂ ಇಂಡಿಯಾ ಸೋಲು ಅನುಭವಿಸಿದ್ದು, ಇದರೊಂದಿಗೆ ಭಾರತ ತಂಡ ಈ ಸರಣಿಯನ್ನೂ ಕಳೆದುಕೊಂಡಿದೆ. 12 ವರ್ಷಗಳ ನಂತರ ಭಾರತವು ತವರಿನಲ್ಲಿ ಟೆಸ್ಟ್ ಸರಣಿಯನ್ನು ಸೋತ ದಾಖಲೆಗೆ ಕೊರಳೊಡ್ಡಿದೆ.

ಇದೀಗ ನ್ಯೂಜಿಲೆಂಡ್ ವಿರುದ್ಧದ ಪುಣೆ ಟೆಸ್ಟ್‌ನಲ್ಲೂ ಟೀಂ ಇಂಡಿಯಾ ಸೋಲು ಅನುಭವಿಸಿದ್ದು, ಇದರೊಂದಿಗೆ ಭಾರತ ತಂಡ ಈ ಸರಣಿಯನ್ನೂ ಕಳೆದುಕೊಂಡಿದೆ. 12 ವರ್ಷಗಳ ನಂತರ ಭಾರತವು ತವರಿನಲ್ಲಿ ಟೆಸ್ಟ್ ಸರಣಿಯನ್ನು ಸೋತ ದಾಖಲೆಗೆ ಕೊರಳೊಡ್ಡಿದೆ.

9 / 10
ಈ ಸರಣಿಗೂ ಮುನ್ನ ಟೀಂ ಇಂಡಿಯಾ ತವರಿನಲ್ಲಿ ಸತತ 18 ಟೆಸ್ಟ್ ಸರಣಿಗಳನ್ನು ಗೆದ್ದಿತ್ತು. ಆದರೆ ಈಗ ಈ ಗೆಲುವಿನ ಸರಣಿಗೆ ಬ್ರೇಕ್ ಬಿದ್ದಿದೆ. ಭಾರತ 4302 ದಿನಗಳ ನಂತರ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ.

ಈ ಸರಣಿಗೂ ಮುನ್ನ ಟೀಂ ಇಂಡಿಯಾ ತವರಿನಲ್ಲಿ ಸತತ 18 ಟೆಸ್ಟ್ ಸರಣಿಗಳನ್ನು ಗೆದ್ದಿತ್ತು. ಆದರೆ ಈಗ ಈ ಗೆಲುವಿನ ಸರಣಿಗೆ ಬ್ರೇಕ್ ಬಿದ್ದಿದೆ. ಭಾರತ 4302 ದಿನಗಳ ನಂತರ ತವರಿನಲ್ಲಿ ಟೆಸ್ಟ್ ಸರಣಿಯನ್ನು ಕಳೆದುಕೊಂಡಿದೆ.

10 / 10
Follow us
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಬಿಜೆಪಿ ಕಚೇರಿಗೆ ಬಂದ ನಿಖಿಲ್ ಕುಮಾರಸ್ವಾಮಿಗೆ ಸಿಕ್ಕಿತು ಅದ್ದೂರಿ ಸ್ವಾಗತ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಶಿಗ್ಗಾವಿ ಚುನಾವಣೆಯಲ್ಲಿ ಲಿಂಗಾಯತರು ಕಾಂಗ್ರೆಸ್​ಗೆ​ ಮತ ನೀಡುತ್ತಾರೆ: ಸಚಿವ
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗೇಶ್ವರ್ ಸ್ಪರ್ಧಿಯಾದರೂ ಶಿವಕುಮಾರ್ ಹೆಸರಲ್ಲಿ ಮತಯಾಚನೆ: ಸುರೇಶ್
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಯೋಗರಾಜ್ ಭಟ್ ಎದುರು ಅನಾವರಣವಾಯಿತು ಹನುಮಂತನ ನಿಜವಾದ ಬಣ್ಣ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
ಬಿಜೆಪಿ ಜೊತೆ ಮೈತ್ರಿ ಬೆಳಸುವಂತೆ ಕುಮಾರಸ್ವಾಮಿಗೆ ಹೇಳಿದ್ದೇ ನಾನು: ಸಿಪಿವೈ
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
IND vs NZ: ಓಡ್ಲಿಕ್ಕೆ ಆಗದಿದ್ದರೂ, ಓಡಿ ಹೋಗಿ ರನೌಟ್ ಆದ ರಿಷಭ್ ಪಂತ್
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಬಗ್ಗೆ ಸೋಮಶೇಖರ್​ರನ್ನೇ ಕೇಳಬೇಕು: ಸಚಿವ
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಖಾದ್ರಿಗೆ ಸಿಎಂ ತಾಕೀತು
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಪಹಣಿಯಲ್ಲಿ ವಕ್ಫ್​​ ಹೆಸರು: ವಿಜಯಪುರ ರೈತರ ಪ್ರತಿಭಟನೆ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ
ಮುಚ್ಚಿದ ಹೋಟೆಲ್​​ಗೆ ರಾತ್ರಿ ನುಗ್ಗಿದ ಹೆಲ್ಮೆಟ್​ಧಾರಿ ಕಳ್ಳ ಚಿಲ್ರೆ ಕದ್ದ