AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

India vs Zimbabwe: ಭಾರತ ಮತ್ತು ಝಿಂಬಾಬ್ವೆ ನಡುವಣ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 234 ರನ್​ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಝಿಂಬಾಬ್ವೆ ತಂಡವು 18.4 ಓವರ್​ಗಳಲ್ಲಿ 134 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ಝಾಹಿರ್ ಯೂಸುಫ್
|

Updated on:Jul 08, 2024 | 8:59 AM

Share
IND vs ZIM: ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು.

IND vs ZIM: ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶುಭ್​ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿದ್ದರು.

1 / 5
ಮೊದಲ ಓವರ್​ನಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ ಝಿಂಬಾಬ್ವೆ ಬೌಲರ್​ಗಳ ಬೆಂಡೆತ್ತಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ರುತುರಾಜ್ ಗಾಯಕ್ವಾಡ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 11 ಓವರ್​ಗಳಾಗುವಷ್ಟರಲ್ಲಿ ಟೀಮ್ ಇಂಡಿಯಾ ಮೊತ್ತ 100ರ ಗಡಿದಾಟಿತು.

ಮೊದಲ ಓವರ್​ನಿಂದಲೇ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ ಝಿಂಬಾಬ್ವೆ ಬೌಲರ್​ಗಳ ಬೆಂಡೆತ್ತಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ರುತುರಾಜ್ ಗಾಯಕ್ವಾಡ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 11 ಓವರ್​ಗಳಾಗುವಷ್ಟರಲ್ಲಿ ಟೀಮ್ ಇಂಡಿಯಾ ಮೊತ್ತ 100ರ ಗಡಿದಾಟಿತು.

2 / 5
ಟೀಮ್ ಇಂಡಿಯಾ ಮೊತ್ತ ನೂರರ ಗಡಿದಾಟುತ್ತಿದ್ದಂತೆ ಅಬ್ಬರಿಸಲಾರಂಭಿಸಿದ ಅಭಿಷೇಕ್ ಶರ್ಮಾ 46 ಎಸೆತಗಳಲ್ಲಿ ಶತಕ ಪೂರೈಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಿಂಕು ಸಿಂಗ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 22 ಎಸೆತಗಳನ್ನು ಎದುರಿಸಿದ ರಿಂಕು 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 48 ರನ್ ಸಿಡಿಸಿದರು. 47 ಎಸೆತಗಳನ್ನು ಎದುರಿಸಿದ ರುತುರಾಜ್ ಗಾಯಕ್ವಾಡ್ ಅಜೇಯ 77 ರನ್ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ ಮೊತ್ತ 234 ರನ್​​ಗೆ ಬಂದು ನಿಂತಿತು.

ಟೀಮ್ ಇಂಡಿಯಾ ಮೊತ್ತ ನೂರರ ಗಡಿದಾಟುತ್ತಿದ್ದಂತೆ ಅಬ್ಬರಿಸಲಾರಂಭಿಸಿದ ಅಭಿಷೇಕ್ ಶರ್ಮಾ 46 ಎಸೆತಗಳಲ್ಲಿ ಶತಕ ಪೂರೈಸಿ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ರಿಂಕು ಸಿಂಗ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 22 ಎಸೆತಗಳನ್ನು ಎದುರಿಸಿದ ರಿಂಕು 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 48 ರನ್ ಸಿಡಿಸಿದರು. 47 ಎಸೆತಗಳನ್ನು ಎದುರಿಸಿದ ರುತುರಾಜ್ ಗಾಯಕ್ವಾಡ್ ಅಜೇಯ 77 ರನ್ ಬಾರಿಸಿದರು. ಪರಿಣಾಮ ಟೀಮ್ ಇಂಡಿಯಾ ಮೊತ್ತ 234 ರನ್​​ಗೆ ಬಂದು ನಿಂತಿತು.

3 / 5
ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅಂತಿಮ 10 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007 ರಲ್ಲಿ ಕೀನ್ಯಾ ವಿರುದ್ಧದ ಟಿ20 ಪಂದ್ಯದಲ್ಲಿ ಶ್ರೀಲಂಕಾ ಬ್ಯಾಟರ್​ಗಳು ಕೊನೆಯ 10 ಓವರ್​ಗಳಲ್ಲಿ 159 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅಂತಿಮ 10 ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾ ತಂಡದ ಹೆಸರಿನಲ್ಲಿತ್ತು. 2007 ರಲ್ಲಿ ಕೀನ್ಯಾ ವಿರುದ್ಧದ ಟಿ20 ಪಂದ್ಯದಲ್ಲಿ ಶ್ರೀಲಂಕಾ ಬ್ಯಾಟರ್​ಗಳು ಕೊನೆಯ 10 ಓವರ್​ಗಳಲ್ಲಿ 159 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದರು.

4 / 5
ಇದೀಗ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಈ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. ಮೊದಲ 10 ಓವರ್​ಗಳಲ್ಲಿ 74 ರನ್ ಬಾರಿಸಿದ್ದ ಭಾರತೀಯ ಬ್ಯಾಟರ್​ಗಳು, ಕೊನೆಯ 10 ಓವರ್​ಗಳಲ್ಲಿ ಬರೋಬ್ಬರಿ 160 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಂತಿಮ ಹತ್ತು ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಈ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ತನ್ನದಾಗಿಸಿಕೊಂಡಿದೆ. ಮೊದಲ 10 ಓವರ್​ಗಳಲ್ಲಿ 74 ರನ್ ಬಾರಿಸಿದ್ದ ಭಾರತೀಯ ಬ್ಯಾಟರ್​ಗಳು, ಕೊನೆಯ 10 ಓವರ್​ಗಳಲ್ಲಿ ಬರೋಬ್ಬರಿ 160 ರನ್ ಕಲೆಹಾಕಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅಂತಿಮ ಹತ್ತು ಓವರ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 8:58 am, Mon, 8 July 24

2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಚಿತ್ರದುರ್ಗ ಬಳಿ ಬಸ್​​ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಹೊಸೂರು ಬಳಿ ಹಳ್ಳಿಗೆ ನುಗ್ಗಿದ 40ಕ್ಕೂ ಹೆಚ್ಚು ಕಾಡಾನೆ ಹಿಂಡು!
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: ಮೂವರು ನಾಪತ್ತೆ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
ಕ್ಯಾಥೆಡ್ರಲ್ ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮೋದಿ
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
‘10 ಬಾರಿ ನೋಡಿದ್ರೂ ಬೇಸರ ಬರಲ್ಲ’; ‘ಮಾರ್ಕ್’ ನೋಡಿ ಫ್ಯಾನ್ಸ್ ರಿಯಾಕ್ಷನ್
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಡಿವೈಡರ್ ಹಾರಿ ಬಸ್​ಗೆ ಗುದ್ದಿದ ಲಾರಿ: ಪ್ರತ್ಯಕ್ಷದರ್ಶಿ ಹೇಳಿದ್ದೇನು ನೋಡಿ
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!
ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 61 ರನ್ ಬಾರಿಸಿದ RCB ದಾಂಡಿಗ..!