AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ‘ಭಾರತ- ಪಾಕ್ ಆಟಗಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಡಬೇಕು’; ಕ್ರಿಸ್ ಗೇಲ್ ಅಚ್ಚರಿ ಹೇಳಿಕೆ

World Cup 2023: ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ಪೃಥ್ವಿಶಂಕರ
|

Updated on: Jun 30, 2023 | 10:31 AM

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೆ ಇನ್ನು 107 ದಿನಗಳು ಬಾಕಿ ಉಳಿದಿವೆ. ಎರಡೂ ತಂಡಗಳು ಅಹಮದಾಬಾದ್ ಮೈದಾನದಲ್ಲಿ ಅಕ್ಟೋಬರ್ 15 ರಂದು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಈ ಎರಡೂ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಗೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ನಡುವೆ ನಡೆಯಲಿರುವ ಪಂದ್ಯಕ್ಕೆ ಇನ್ನು 107 ದಿನಗಳು ಬಾಕಿ ಉಳಿದಿವೆ. ಎರಡೂ ತಂಡಗಳು ಅಹಮದಾಬಾದ್ ಮೈದಾನದಲ್ಲಿ ಅಕ್ಟೋಬರ್ 15 ರಂದು ಮುಖಾಮುಖಿಯಾಗಲಿವೆ. ಆದರೆ ಅದಕ್ಕೂ ಮುನ್ನ ಈ ಎರಡೂ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.

1 / 7
ವಾಸ್ತವವಾಗಿ ಇಡೀ ವಿಶ್ವ ಕ್ರಿಕೆಟ್ ಈ ಪಂದ್ಯವನ್ನು ಎದುರು ನೋಡುತ್ತಿದೆ. ಏಕೆಂದರೆ ಈ ಉಭಯ ತಂಡಗಳು ಭಾರತ- ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಪರೂಪಕ್ಕೊಮ್ಮೆ ಕಾಳಗಕ್ಕಿಳಿಯುವ ಈ ತಂಡಗಳ ನಡುವಿನ ಹೋರಾಟ ಬಲು ರೋಚಕವೂ ಕೂಡ.

ವಾಸ್ತವವಾಗಿ ಇಡೀ ವಿಶ್ವ ಕ್ರಿಕೆಟ್ ಈ ಪಂದ್ಯವನ್ನು ಎದುರು ನೋಡುತ್ತಿದೆ. ಏಕೆಂದರೆ ಈ ಉಭಯ ತಂಡಗಳು ಭಾರತ- ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವುದರಿಂದ ಕೇವಲ ಐಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹೀಗಾಗಿ ಅಪರೂಪಕ್ಕೊಮ್ಮೆ ಕಾಳಗಕ್ಕಿಳಿಯುವ ಈ ತಂಡಗಳ ನಡುವಿನ ಹೋರಾಟ ಬಲು ರೋಚಕವೂ ಕೂಡ.

2 / 7
ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ವಿಶ್ವದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಹಮದಾಬಾದ್​ಗೆ ಬಂದಿಳಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹೋಟೆಲ್​ಗಳು ಈಗಾಗಲೇ ತಮ್ಮ ರೂಮ್​ಗಳ ಬೆಲೆಯನ್ನು 10 ಪಟ್ಟು ಹೆಚ್ಚಿಸಿವೆ.

ಭಾರತ-ಪಾಕಿಸ್ತಾನ ನಡುವಿನ ಪಂದ್ಯ ವೀಕ್ಷಿಸಲು ವಿಶ್ವದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಅಹಮದಾಬಾದ್​ಗೆ ಬಂದಿಳಿಯಲ್ಲಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಅಲ್ಲಿನ ಹೋಟೆಲ್​ಗಳು ಈಗಾಗಲೇ ತಮ್ಮ ರೂಮ್​ಗಳ ಬೆಲೆಯನ್ನು 10 ಪಟ್ಟು ಹೆಚ್ಚಿಸಿವೆ.

3 / 7
ಹಾಗೆಯೇ ಈ ಎರಡೂ ತಂಡಗಳ ಮುಖಾಮುಖಿಯನ್ನು ಮೈದಾನದಲ್ಲಿ ವೀಕ್ಷಿಸಲು ಸಾಧ್ಯವಾಗದ ಜನ ಟಿವಿಯಲ್ಲಿ ವೀಕ್ಷಿಸುತ್ತಾರೆ. ಹೀಗಿರುವಾಗ ಈ ಪಂದ್ಯ ಪ್ರಸಾರಕರಿಗೆ ಭಾರಿ ಮೊತ್ತದ ಲಾಭವಾಗುವುದಂತೂ ಖಚಿತ. ಹೀಗಾಗಿ ಭಾರತ-ಪಾಕಿಸ್ತಾನ ತಂಡಗಳ ಆಟಗಾರರಿಗೆ ಐಸಿಸಿ ನಿಗದಿಗಿಂತ ಹೆಚ್ಚು ಹಣ ನೀಡಬೇಕೆಂದು ಗೇಲ್ ಹೇಳಿಕೊಂಡಿದ್ದಾರೆ.

ಹಾಗೆಯೇ ಈ ಎರಡೂ ತಂಡಗಳ ಮುಖಾಮುಖಿಯನ್ನು ಮೈದಾನದಲ್ಲಿ ವೀಕ್ಷಿಸಲು ಸಾಧ್ಯವಾಗದ ಜನ ಟಿವಿಯಲ್ಲಿ ವೀಕ್ಷಿಸುತ್ತಾರೆ. ಹೀಗಿರುವಾಗ ಈ ಪಂದ್ಯ ಪ್ರಸಾರಕರಿಗೆ ಭಾರಿ ಮೊತ್ತದ ಲಾಭವಾಗುವುದಂತೂ ಖಚಿತ. ಹೀಗಾಗಿ ಭಾರತ-ಪಾಕಿಸ್ತಾನ ತಂಡಗಳ ಆಟಗಾರರಿಗೆ ಐಸಿಸಿ ನಿಗದಿಗಿಂತ ಹೆಚ್ಚು ಹಣ ನೀಡಬೇಕೆಂದು ಗೇಲ್ ಹೇಳಿಕೊಂಡಿದ್ದಾರೆ.

4 / 7
ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ವೆಸ್ಟ್ ಇಂಡೀಸ್ ತಂಡ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ವಿಶ್ವಕಪ್ ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದರಿಂದ ಐಸಿಸಿಗೆ ಹಾಗೂ ಪ್ರಸಾರಕರಿಗೆ ಸಾಕಷ್ಟು ಆದಾಯ ಬರುತ್ತದೆ. ಈ ಎರಡೂ ತಂಡಗಳ ಮುಖಾಮುಖಿಯೇ ವಿಶ್ವಕಪ್​ನ ಪ್ರಮುಖ ಕೇಂದ್ರ ಬಿಂದುವಾಗಿದೆ.

ಈ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿರುವ ವೆಸ್ಟ್ ಇಂಡೀಸ್ ತಂಡ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್, ವಿಶ್ವಕಪ್ ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದರಿಂದ ಐಸಿಸಿಗೆ ಹಾಗೂ ಪ್ರಸಾರಕರಿಗೆ ಸಾಕಷ್ಟು ಆದಾಯ ಬರುತ್ತದೆ. ಈ ಎರಡೂ ತಂಡಗಳ ಮುಖಾಮುಖಿಯೇ ವಿಶ್ವಕಪ್​ನ ಪ್ರಮುಖ ಕೇಂದ್ರ ಬಿಂದುವಾಗಿದೆ.

5 / 7
ಹಾಗೆಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಸಂಪೂರ್ಣ ಈವೆಂಟ್ ಅನ್ನು ನಿಭಾಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮತ್ತು ಭಾರತದ ಆಟಗಾರರು ಈ ಪಂದ್ಯದಲ್ಲಿ ಆಡಲು ಹೆಚ್ಚಿನ ಹಣಕ್ಕೆ ಬೇಡಿಕೆಯಿಡಬೇಕು ಎಂದಿದ್ದಾರೆ.

ಹಾಗೆಯೇ ಈ ಎರಡೂ ತಂಡಗಳ ನಡುವಿನ ಪಂದ್ಯ ಸಂಪೂರ್ಣ ಈವೆಂಟ್ ಅನ್ನು ನಿಭಾಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಮತ್ತು ಭಾರತದ ಆಟಗಾರರು ಈ ಪಂದ್ಯದಲ್ಲಿ ಆಡಲು ಹೆಚ್ಚಿನ ಹಣಕ್ಕೆ ಬೇಡಿಕೆಯಿಡಬೇಕು ಎಂದಿದ್ದಾರೆ.

6 / 7
ತಾನು ಕ್ರಿಕೆಟ್ ಮಂಡಳಿ ಅಥವಾ ಐಸಿಸಿಯ ಅಧಿಕಾರದಲ್ಲಿದ್ದರೆ, ಈ ಹೈಪ್ರೊಫೈಲ್ ಪಂದ್ಯವನ್ನು ಆಡುವ ಆಟಗಾರರಿಗೆ ಹೆಚ್ಚಿನ ಹಣ ನೀಡುವಂತೆ ಪ್ರತಿಪಾದಿಸುತ್ತಿದ್ದೆ ಎಂದು ಗೇಲ್ ತಮಾಷೆಯಾಗಿ ಹೇಳಿದ್ದಾರೆ. ಇದಲ್ಲದೆ ಪಿಟಿಐ ಜೊತೆ ಮಾತನಾಡಿದ ಗೇಲ್, ಈ ಟೂರ್ನಿಯ ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ್ದು, ಗೇಲ್ ಪ್ರಕಾರ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಸೆಮಿಫೈನಲ್ ತಲುಪುವುದು ಖಚಿತ ಎಂದಿದ್ದಾರೆ.

ತಾನು ಕ್ರಿಕೆಟ್ ಮಂಡಳಿ ಅಥವಾ ಐಸಿಸಿಯ ಅಧಿಕಾರದಲ್ಲಿದ್ದರೆ, ಈ ಹೈಪ್ರೊಫೈಲ್ ಪಂದ್ಯವನ್ನು ಆಡುವ ಆಟಗಾರರಿಗೆ ಹೆಚ್ಚಿನ ಹಣ ನೀಡುವಂತೆ ಪ್ರತಿಪಾದಿಸುತ್ತಿದ್ದೆ ಎಂದು ಗೇಲ್ ತಮಾಷೆಯಾಗಿ ಹೇಳಿದ್ದಾರೆ. ಇದಲ್ಲದೆ ಪಿಟಿಐ ಜೊತೆ ಮಾತನಾಡಿದ ಗೇಲ್, ಈ ಟೂರ್ನಿಯ ಸೆಮಿಫೈನಲ್ ಆಡುವ 4 ತಂಡಗಳನ್ನು ಹೆಸರಿಸಿದ್ದು, ಗೇಲ್ ಪ್ರಕಾರ ಭಾರತ, ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಟೂರ್ನಿಯಲ್ಲಿ ಸೆಮಿಫೈನಲ್ ತಲುಪುವುದು ಖಚಿತ ಎಂದಿದ್ದಾರೆ.

7 / 7
Follow us
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ