AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Test Squad: ಟೀಮ್ ಇಂಡಿಯಾದಲ್ಲಿ ಮೂವರು ಆಲ್​ರೌಂಡರ್​ಗಳಿಗೆ ಮಣೆ

IND vs NZ: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದರೆ, ಅಕ್ಟೋಬರ್ 24 ರಿಂದ ಶುರುವಾಗಲಿರುವ ಎರಡನೇ ಪಂದ್ಯಕ್ಕೆ ಪುಣೆ ಎಂಸಿಎ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ನವೆಂಬರ್ 1 ರಿಂದ ಆರಂಭವಾಗಲಿರುವ ಮೂರನೇ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.

ಝಾಹಿರ್ ಯೂಸುಫ್
|

Updated on: Oct 12, 2024 | 7:34 AM

Share
ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು (India squad) ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸಲಿದ್ದು, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.

1 / 6
ಇನ್ನು ಈ ಹದಿನೈದು ಸದಸ್ಯರಲ್ಲಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಮೂವರು ಆಟಗಾರರು ಮಾತ್ರ. ಹಾಗೆಯೇ ಆರು ಬ್ಯಾಟರ್​ಗಳಿಗೆ ಆಯ್ಕೆ ಸಮಿತಿ ಮಣೆಹಾಕಿದೆ. ಇವರ ಜೊತೆಗೆ ಇಬ್ಬರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳು ತಂಡದಲ್ಲಿದ್ದಾರೆ.

ಇನ್ನು ಈ ಹದಿನೈದು ಸದಸ್ಯರಲ್ಲಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ಕೇವಲ ಮೂವರು ಆಟಗಾರರು ಮಾತ್ರ. ಹಾಗೆಯೇ ಆರು ಬ್ಯಾಟರ್​ಗಳಿಗೆ ಆಯ್ಕೆ ಸಮಿತಿ ಮಣೆಹಾಕಿದೆ. ಇವರ ಜೊತೆಗೆ ಇಬ್ಬರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳು ತಂಡದಲ್ಲಿದ್ದಾರೆ.

2 / 6
ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಆಯ್ಕೆಯಾಗಿದ್ದಾರೆ.

ಇಲ್ಲಿ ಪರಿಪೂರ್ಣ ಬ್ಯಾಟರ್​ಗಳಾಗಿ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಹಾಗೂ ಸರ್ಫರಾಝ್ ಖಾನ್ ಆಯ್ಕೆಯಾಗಿದ್ದಾರೆ.

3 / 6
ವಿಕೆಟ್ ಕೀಪರ್ ಸ್ಥಾನಗಳಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಬಾರಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್.

ವಿಕೆಟ್ ಕೀಪರ್ ಸ್ಥಾನಗಳಲ್ಲಿ ರಿಷಭ್ ಪಂತ್ ಹಾಗೂ ಧ್ರುವ್ ಜುರೇಲ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹಾಗೆಯೇ ಈ ಬಾರಿ ಆಲ್ ರೌಂಡರ್​ಗಳಾಗಿ ಆಯ್ಕೆಯಾಗಿರುವುದು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್.

4 / 6
ಬೌಲರ್​ಗಳು ಪಟ್ಟಿಯಲ್ಲಿ ಒಟ್ಟು ನಾಲ್ವರಿದ್ದು, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

ಬೌಲರ್​ಗಳು ಪಟ್ಟಿಯಲ್ಲಿ ಒಟ್ಟು ನಾಲ್ವರಿದ್ದು, ವೇಗಿಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್ ಕಾಣಿಸಿಕೊಂಡರೆ, ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅದರಂತೆ ಭಾರತ ಟೆಸ್ಟ್ ತಂಡ ಈ ಕೆಳಗಿನಂತಿದೆ...

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್),  ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

6 / 6
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ