AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಮೊದಲ ಟೆಸ್ಟ್ ಸೋತ ಶ್ರೀಲಂಕಾಕ್ಕೆ ಮತ್ತೊಂದು ಆಘಾತ

India vs Sri Lanka Test: ಭಾರತದ ವಿರುದ್ಧದ ಮೊದಲ ಟೆಸ್ಟ್ ಸೋತ ಶ್ರೀಲಂಕಾ, 2ನೇ ಪಂದ್ಯ ಗೆಲ್ಲಲು ಭಾರೀ ಒತ್ತಡದಲ್ಲಿದೆ. ಈ ಮಧ್ಯೆ, ಸ್ಟಾರ್ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಲ್ ತಲೆಗೆ ಗಾಯಗೊಂಡಿದ್ದರಿಂದ ಐಸಿಸಿ ಕನ್ಕಷನ್ ನಿಯಮದ ಪ್ರಕಾರ 2ನೇ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ. ಇದು ಲಂಕಾ ತಂಡಕ್ಕೆ ದೊಡ್ಡ ಆಘಾತ ನೀಡಿದ್ದು, ಸರಣಿ ಉಳಿಸಿಕೊಳ್ಳುವ ಅವರ ಆಸೆಗೆ ಹಿನ್ನಡೆಯಾಗಿದೆ.

ಪೃಥ್ವಿಶಂಕರ
|

Updated on: Aug 19, 2026 | 7:12 PM

Share
ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆತಿಥೇಯ ಶ್ರೀಲಂಕಾವನ್ನು ಏಕಪಕ್ಷೀಯವಾಗಿ ಬರೋಬ್ಬರಿ 165 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತು. ತವರಿನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿರುವ ಶ್ರೀಲಂಕಾಕ್ಕೆ ಈಗ ಸರಣಿಯನ್ನು ಕಳೆದುಕೊಳ್ಳುವ ಅಪಾಯ ಎದುರಾಗಿದೆ(PC-PTI).

ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆತಿಥೇಯ ಶ್ರೀಲಂಕಾವನ್ನು ಏಕಪಕ್ಷೀಯವಾಗಿ ಬರೋಬ್ಬರಿ 165 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿತು. ತವರಿನಲ್ಲಿ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿರುವ ಶ್ರೀಲಂಕಾಕ್ಕೆ ಈಗ ಸರಣಿಯನ್ನು ಕಳೆದುಕೊಳ್ಳುವ ಅಪಾಯ ಎದುರಾಗಿದೆ(PC-PTI).

1 / 5
ಇಂತಹ ಪರಿಸ್ಥಿತಿಯಲ್ಲಿ ಶ್ರೀಲಂಕಾ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ತಂಡ ಗೆಲ್ಲಬೇಕೆಂದರೆ ತಂಡದಲ್ಲಿರುವ ಅನುಭವಿ ಬ್ಯಾಟ್ಸ್​ಮನ್​ಗಳು ತಮ್ಮ ಲಯಕ್ಕೆ ಮರಳಬೇಕಿದೆ. ಈ ನಡುವೆ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು ಸ್ಟಾರ್ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಲ್ ಎರಡನೇ ಟೆಸ್ಟ್‌ನಿಂದ ಹೊರಬೀಳುವ ಸಾಧ್ಯತೆ ಇದೆ(PC-PTI).

ಇಂತಹ ಪರಿಸ್ಥಿತಿಯಲ್ಲಿ ಶ್ರೀಲಂಕಾ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ತಂಡ ಗೆಲ್ಲಬೇಕೆಂದರೆ ತಂಡದಲ್ಲಿರುವ ಅನುಭವಿ ಬ್ಯಾಟ್ಸ್​ಮನ್​ಗಳು ತಮ್ಮ ಲಯಕ್ಕೆ ಮರಳಬೇಕಿದೆ. ಈ ನಡುವೆ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು ಸ್ಟಾರ್ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಲ್ ಎರಡನೇ ಟೆಸ್ಟ್‌ನಿಂದ ಹೊರಬೀಳುವ ಸಾಧ್ಯತೆ ಇದೆ(PC-PTI).

2 / 5
ಕ್ರಿಕ್ಇನ್ಫೋ ವರದಿಯ ಪ್ರಕಾರ, ಅನುಭವಿ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಲ್ ಎರಡನೇ ಟೆಸ್ಟ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಗಾಲೆ ಟೆಸ್ಟ್‌ನಲ್ಲಿ ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಚಾಂಡಿಮಲ್  ಗಾಯಗೊಂಡರು. ಇದರಿಂದಾಗಿಅವರು ಆಸ್ಪತ್ರೆಗೆ ದಾಖಲಾಗಬೇಕಾಯಿತು(PC-PTI).

ಕ್ರಿಕ್ಇನ್ಫೋ ವರದಿಯ ಪ್ರಕಾರ, ಅನುಭವಿ ಬ್ಯಾಟ್ಸ್‌ಮನ್ ದಿನೇಶ್ ಚಾಂಡಿಮಲ್ ಎರಡನೇ ಟೆಸ್ಟ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಗಾಲೆ ಟೆಸ್ಟ್‌ನಲ್ಲಿ ಭಾರತದ ಎರಡನೇ ಇನ್ನಿಂಗ್ಸ್‌ನಲ್ಲಿ ಫೀಲ್ಡಿಂಗ್ ಮಾಡುವಾಗ ಚಾಂಡಿಮಲ್ ಗಾಯಗೊಂಡರು. ಇದರಿಂದಾಗಿಅವರು ಆಸ್ಪತ್ರೆಗೆ ದಾಖಲಾಗಬೇಕಾಯಿತು(PC-PTI).

3 / 5
ಹೀಗಾಗಿ ನಾಲ್ಕನೇ ದಿನದಾಟದಂದು ಚಾಂಡಿಮಲ್ ಬದಲಿಗೆ ಪಸಿಂದು ಸೂರ್ಯಬಂಢಾರ ಅವರನ್ನು ಬದಲಿ ಆಟಗಾರನಾಗಿ ತಂಡದಲ್ಲಿ ಆಡಿಸಲಾಯಿತು. ಇದರರ್ಥ ಚಾಂಡಿಮಲ್ ಗಾಯದಿಂದ ಚೇತರಿಸಿಕೊಂಡಿದ್ದರೂ ಆಗಸ್ಟ್ 23 ರಂದು ಪ್ರಾರಂಭವಾಗುವ ಎರಡನೇ ಟೆಸ್ಟ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಇದಕ್ಕೆ ಕಾರಣ ಐಸಿಸಿ ನಿಯಮ(PC-PTI).

ಹೀಗಾಗಿ ನಾಲ್ಕನೇ ದಿನದಾಟದಂದು ಚಾಂಡಿಮಲ್ ಬದಲಿಗೆ ಪಸಿಂದು ಸೂರ್ಯಬಂಢಾರ ಅವರನ್ನು ಬದಲಿ ಆಟಗಾರನಾಗಿ ತಂಡದಲ್ಲಿ ಆಡಿಸಲಾಯಿತು. ಇದರರ್ಥ ಚಾಂಡಿಮಲ್ ಗಾಯದಿಂದ ಚೇತರಿಸಿಕೊಂಡಿದ್ದರೂ ಆಗಸ್ಟ್ 23 ರಂದು ಪ್ರಾರಂಭವಾಗುವ ಎರಡನೇ ಟೆಸ್ಟ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಇದಕ್ಕೆ ಕಾರಣ ಐಸಿಸಿ ನಿಯಮ(PC-PTI).

4 / 5
ಪಂದ್ಯದ ವೇಳೆ ತಲೆಗೆ ಪೆಟ್ಟು ಬಿದ್ದ ಕಾರಣ ಬದಲಾಯಿಸಲ್ಪಟ್ಟ ಆಟಗಾರ ಮುಂದಿನ ಏಳು ದಿನ ಆಡುವಂತಿಲ್ಲ ಎಂದು ಐಸಿಸಿ ನಿಯಮವಿದೆ.. ಆಗಸ್ಟ್ 18 ರಂದು ಚಾಂಡಿಮಲ್ ಗಾಯಗೊಂಡು ಪಂದ್ಯದಿಂದ ಹೊರಬಿದ್ದರು. ಪರಿಣಾಮವಾಗಿ, ಮುಂದಿನ ಪಂದ್ಯವು ಏಳು ದಿನಗಳ ಮೊದಲು ಆರಂಭವಾಗಲಿದ್ದು, ಚಾಂಡಿಮಲ್ ಆಡಲು ಸಾಧ್ಯವಾಗುವುದಿಲ್ಲ(PC-PTI).

ಪಂದ್ಯದ ವೇಳೆ ತಲೆಗೆ ಪೆಟ್ಟು ಬಿದ್ದ ಕಾರಣ ಬದಲಾಯಿಸಲ್ಪಟ್ಟ ಆಟಗಾರ ಮುಂದಿನ ಏಳು ದಿನ ಆಡುವಂತಿಲ್ಲ ಎಂದು ಐಸಿಸಿ ನಿಯಮವಿದೆ.. ಆಗಸ್ಟ್ 18 ರಂದು ಚಾಂಡಿಮಲ್ ಗಾಯಗೊಂಡು ಪಂದ್ಯದಿಂದ ಹೊರಬಿದ್ದರು. ಪರಿಣಾಮವಾಗಿ, ಮುಂದಿನ ಪಂದ್ಯವು ಏಳು ದಿನಗಳ ಮೊದಲು ಆರಂಭವಾಗಲಿದ್ದು, ಚಾಂಡಿಮಲ್ ಆಡಲು ಸಾಧ್ಯವಾಗುವುದಿಲ್ಲ(PC-PTI).

5 / 5
Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?