AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಷಭ್ ಪಂತ್ ಆಯ್ಕೆಯ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಡಿವಿಲಿಯರ್ಸ್

India vs Sri Lanka Test: ಭಾರತ-ಶ್ರೀಲಂಕಾ ಟೆಸ್ಟ್ ಸರಣಿಗೆ ಬಿಸಿಸಿಐ ತಂಡ ಪ್ರಕಟಿಸಿದ್ದು, ರಿಷಭ್ ಪಂತ್ ಆಯ್ಕೆ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಎಬಿ ಡಿವಿಲಿಯರ್ಸ್ ಪಂತ್ ಫಿಟ್ನೆಸ್ ಮತ್ತು ಐಪಿಎಲ್ ಪ್ರದರ್ಶನದ ಬಗ್ಗೆ ಪ್ರಶ್ನಿಸಿದ್ದಾರೆ. ಆದಾಗ್ಯೂ, ಪಂತ್ ಉತ್ತಮ ಪ್ರದರ್ಶನ ನೀಡುವ ಭರವಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ವಿವಿಎಸ್ ಲಕ್ಷ್ಮಣ್ ಅವರ ಕೋಚಿಂಗ್ ಯಶಸ್ಸನ್ನು ಶ್ಲಾಘಿಸಿ, ಅದು ಗೌತಮ್ ಗಂಭೀರ್ ಮೇಲೆ ಒತ್ತಡ ಹೇರುತ್ತಿದೆ ಎಂದಿದ್ದಾರೆ.

ಪೃಥ್ವಿಶಂಕರ
|

Updated on: Jul 29, 2026 | 7:16 PM

Share
ಭಾರತ ಹಾಗೂ ಶ್ರೀಲಂಕಾ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಮುಂದಿನ ತಿಂಗಳು ಅಂದರೆ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಬಿಸಿಸಿಐ ಕೂಡ ತನ್ನ ತಂಡವನ್ನು ಪ್ರಕಟಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ದೃಷ್ಟಿಯಿಂದ ಈ ಸರಣಿ ಗೆಲುವು ಟೀಂ ಇಂಡಿಯಾಕ್ಕೆ ಅತ್ಯವಶ್ಯಕವಾಗಿದೆ. ಹೀಗಾಗಿ ಬಿಸಿಸಿಐ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ. ಆದರೆ ಈ ತಂಡದಲ್ಲಿ ಆಯ್ಕೆಯಾಗಿರುವ ಏಕೈಕ ಆಟಗಾರನ ಬಗ್ಗೆ ಎಬಿ ಡಿವಿಲಿಯರ್ಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ(PC-PTI).

ಭಾರತ ಹಾಗೂ ಶ್ರೀಲಂಕಾ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಮುಂದಿನ ತಿಂಗಳು ಅಂದರೆ ಆಗಸ್ಟ್ 15 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಬಿಸಿಸಿಐ ಕೂಡ ತನ್ನ ತಂಡವನ್ನು ಪ್ರಕಟಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ದೃಷ್ಟಿಯಿಂದ ಈ ಸರಣಿ ಗೆಲುವು ಟೀಂ ಇಂಡಿಯಾಕ್ಕೆ ಅತ್ಯವಶ್ಯಕವಾಗಿದೆ. ಹೀಗಾಗಿ ಬಿಸಿಸಿಐ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ. ಆದರೆ ಈ ತಂಡದಲ್ಲಿ ಆಯ್ಕೆಯಾಗಿರುವ ಏಕೈಕ ಆಟಗಾರನ ಬಗ್ಗೆ ಎಬಿ ಡಿವಿಲಿಯರ್ಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ(PC-PTI).

1 / 5
ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡದಲ್ಲಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಬಹಳ ದಿನಗಳ ಬಳಿಕ ಪಂತ್ ತಂಡಕ್ಕೆ ಮರಳಿದ್ದಾರೆ. ತಂಡಕ್ಕೆ ಮರಳುವ ಮೊದಲು ಪಂತ್ ಐಪಿಎಲ್​​ನಲ್ಲೂ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಹೀಗಿರುವಾಗ ಅವರ ಆಯ್ಕೆಯ ಬಗ್ಗೆ ಹಲವರು ಪ್ರಶ್ನೆಗಳನ್ನು ಎತ್ತಿದ್ದಾರೆ(PC-PTI).

ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡದಲ್ಲಿ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಅವರನ್ನು ಆಯ್ಕೆ ಮಾಡಲಾಗಿದೆ. ಬಹಳ ದಿನಗಳ ಬಳಿಕ ಪಂತ್ ತಂಡಕ್ಕೆ ಮರಳಿದ್ದಾರೆ. ತಂಡಕ್ಕೆ ಮರಳುವ ಮೊದಲು ಪಂತ್ ಐಪಿಎಲ್​​ನಲ್ಲೂ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಹೀಗಿರುವಾಗ ಅವರ ಆಯ್ಕೆಯ ಬಗ್ಗೆ ಹಲವರು ಪ್ರಶ್ನೆಗಳನ್ನು ಎತ್ತಿದ್ದಾರೆ(PC-PTI).

2 / 5
ಇದೆಲ್ಲದರ ನಡುವೆ ರಿಷಭ್ ಪಂತ್ ಆಯ್ಕೆಯ ಬಗ್ಗೆ ಮಾತನಾಡಿರುವ ಡಿವಿಲಿಯರ್ಸ್, ತಂಡಕ್ಕೆ ಪಂತ್ ಅವರನ್ನು ಆಯ್ಕೆ ಮಾಡಿರುವುದು ಆಶ್ಚರ್ಯಕರವಾಗಿದೆ. ಅವರ ಫಿಟ್ನೆಸ್ ಹೇಗೆ ಇರುತ್ತದೆ ಎಂಬುದನ್ನು ನಾವು ನೋಡಬೇಕಾಗಿದೆ. ಐಪಿಎಲ್ ಸಮಯದಲ್ಲಿ ಅವರ ಶಕ್ತಿ ಮತ್ತು ಆತ್ಮವಿಶ್ವಾಸವು ತುಂಬಾ ಕಡಿಮೆಯಾಗಿತ್ತು(PC-PTI).

ಇದೆಲ್ಲದರ ನಡುವೆ ರಿಷಭ್ ಪಂತ್ ಆಯ್ಕೆಯ ಬಗ್ಗೆ ಮಾತನಾಡಿರುವ ಡಿವಿಲಿಯರ್ಸ್, ತಂಡಕ್ಕೆ ಪಂತ್ ಅವರನ್ನು ಆಯ್ಕೆ ಮಾಡಿರುವುದು ಆಶ್ಚರ್ಯಕರವಾಗಿದೆ. ಅವರ ಫಿಟ್ನೆಸ್ ಹೇಗೆ ಇರುತ್ತದೆ ಎಂಬುದನ್ನು ನಾವು ನೋಡಬೇಕಾಗಿದೆ. ಐಪಿಎಲ್ ಸಮಯದಲ್ಲಿ ಅವರ ಶಕ್ತಿ ಮತ್ತು ಆತ್ಮವಿಶ್ವಾಸವು ತುಂಬಾ ಕಡಿಮೆಯಾಗಿತ್ತು(PC-PTI).

3 / 5
 ಈಗ ಅವರು ಮತ್ತೆ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಪ್ರವಾಸದಲ್ಲಿ ಪಂತ್ ತನ್ನ ಅತ್ಯುತ್ತಮ ಪ್ರದರ್ಶನ ನೀಡುತ್ತಾನೆ ಎಂದು ನಾನು ಭಾವಿಸುತ್ತೇನೆ. ನಾನು ಅವರ ದೊಡ್ಡ ಅಭಿಮಾನಿ ಮತ್ತು ಅವರು ತಮ್ಮ ಪೂರ್ಣ ಸಾಮರ್ಥ್ಯಕ್ಕೆ ತಕ್ಕಂತೆ ಆಡುವುದನ್ನು ನೋಡಲು ಬಯಸುತ್ತೇನೆ ಎಂದಿದ್ದಾರೆ(PC-PTI).

ಈಗ ಅವರು ಮತ್ತೆ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಈ ಪ್ರವಾಸದಲ್ಲಿ ಪಂತ್ ತನ್ನ ಅತ್ಯುತ್ತಮ ಪ್ರದರ್ಶನ ನೀಡುತ್ತಾನೆ ಎಂದು ನಾನು ಭಾವಿಸುತ್ತೇನೆ. ನಾನು ಅವರ ದೊಡ್ಡ ಅಭಿಮಾನಿ ಮತ್ತು ಅವರು ತಮ್ಮ ಪೂರ್ಣ ಸಾಮರ್ಥ್ಯಕ್ಕೆ ತಕ್ಕಂತೆ ಆಡುವುದನ್ನು ನೋಡಲು ಬಯಸುತ್ತೇನೆ ಎಂದಿದ್ದಾರೆ(PC-PTI).

4 / 5
ಹಾಗೆಯೇ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಅವರ ಯಶಸ್ಸಿನ ಬಗ್ಗೆ ಮಾತನಾಡಿದ ಎಬಿ ಡಿವಿಲಿಯರ್ಸ್, ‘ಕೆಲವೊಮ್ಮೆ ವಿರಾಮ ತೆಗೆದುಕೊಂಡು ವಿಶ್ರಾಂತಿ ಪಡೆಯುವುದು ಒಳ್ಳೆಯದು. ಇದು ನಿಮ್ಮನ್ನು ಪುನರ್ಭರ್ತಿ ಮಾಡಲು ಅನುವು ಮಾಡಿಕೊಡುತ್ತದೆ. ಆದರೆ ಅದೇ ಸಮಯದಲ್ಲಿ, ತಂಡದ ಆಟಗಾರರು ಬೇರೊಬ್ಬರ ಉಪಸ್ಥಿತಿಯಲ್ಲಿ (ಲಕ್ಷ್ಮಣ್) ಯಶಸ್ವಿಯಾಗುತ್ತಿದ್ದಾರೆ ಮತ್ತು ಆಟವನ್ನು ಆನಂದಿಸುತ್ತಿದ್ದಾರೆ. ಇದರ ಹಿಂದೆ ನಿಖರವಾಗಿ ಏನಿದೆ ಎಂದು ನಾನು ಹೇಳಲಾರೆ, ಆದರೆ ವಿವಿಎಸ್ ಲಕ್ಷ್ಮಣ್ ಖಂಡಿತವಾಗಿಯೂ ಗೌತಮ್ ಗಂಭೀರ್ ಮೇಲೆ ಒತ್ತಡ ಹೇರುತ್ತಿದ್ದಾರೆ’ ಎಂದಿದ್ದಾರೆ(PC-PTI).

ಹಾಗೆಯೇ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಅವರ ಯಶಸ್ಸಿನ ಬಗ್ಗೆ ಮಾತನಾಡಿದ ಎಬಿ ಡಿವಿಲಿಯರ್ಸ್, ‘ಕೆಲವೊಮ್ಮೆ ವಿರಾಮ ತೆಗೆದುಕೊಂಡು ವಿಶ್ರಾಂತಿ ಪಡೆಯುವುದು ಒಳ್ಳೆಯದು. ಇದು ನಿಮ್ಮನ್ನು ಪುನರ್ಭರ್ತಿ ಮಾಡಲು ಅನುವು ಮಾಡಿಕೊಡುತ್ತದೆ. ಆದರೆ ಅದೇ ಸಮಯದಲ್ಲಿ, ತಂಡದ ಆಟಗಾರರು ಬೇರೊಬ್ಬರ ಉಪಸ್ಥಿತಿಯಲ್ಲಿ (ಲಕ್ಷ್ಮಣ್) ಯಶಸ್ವಿಯಾಗುತ್ತಿದ್ದಾರೆ ಮತ್ತು ಆಟವನ್ನು ಆನಂದಿಸುತ್ತಿದ್ದಾರೆ. ಇದರ ಹಿಂದೆ ನಿಖರವಾಗಿ ಏನಿದೆ ಎಂದು ನಾನು ಹೇಳಲಾರೆ, ಆದರೆ ವಿವಿಎಸ್ ಲಕ್ಷ್ಮಣ್ ಖಂಡಿತವಾಗಿಯೂ ಗೌತಮ್ ಗಂಭೀರ್ ಮೇಲೆ ಒತ್ತಡ ಹೇರುತ್ತಿದ್ದಾರೆ’ ಎಂದಿದ್ದಾರೆ(PC-PTI).

5 / 5
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!