AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಟೆಸ್ಟ್‌ ಕ್ರಿಕೆಟ್​ನಲ್ಲಿ ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ಟೀಂ ಇಂಡಿಯಾ

India Eyes 4th Spot in Test Wins: ಶುಭ್​ಮನ್ ಗಿಲ್ ನಾಯಕತ್ವದಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-0 ಅಂತರದ ಗೆಲುವು ಸಾಧಿಸಿದರೆ ಭಾರತ ಟೆಸ್ಟ್ ಕ್ರಿಕೆಟ್‌ನಲ್ಲಿ 188 ಗೆಲುವುಗಳನ್ನು ಸಾಧಿಸಲಿದೆ. ಇದು ವೆಸ್ಟ್ ಇಂಡೀಸ್ ತಂಡವನ್ನು ಹಿಂದಿಕ್ಕಿ, ಅತಿ ಹೆಚ್ಚು ಗೆಲುವು ಸಾಧಿಸಿದ ತಂಡಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಲು ನೆರವಾಗಲಿದೆ. ಅಲ್ಲದೆ, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಭಾರತದ 600ನೇ ಟೆಸ್ಟ್ ಪಂದ್ಯವಾಗಲಿದೆ, ಇದು ಮಹತ್ವದ ಮೈಲಿಗಲ್ಲು.

ಪೃಥ್ವಿಶಂಕರ
|

Updated on: Aug 10, 2026 | 9:21 PM

Share
ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಿಂದ ಆರಂಭವಾಗಲಿದೆ. ಇದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 23 ರಿಂದ ಶುರುವಾಗಲಿದೆ. ಈ ಎರಡೂ ಪಂದ್ಯಗಳನ್ನು ಗೆದ್ದರೆ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದೆ(PC-PTI).

ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಶುಭ್​ಮನ್ ಗಿಲ್ ನಾಯಕತ್ವದ ಟೀಂ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15 ರಿಂದ ಆರಂಭವಾಗಲಿದೆ. ಇದಾದ ಬಳಿಕ ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 23 ರಿಂದ ಶುರುವಾಗಲಿದೆ. ಈ ಎರಡೂ ಪಂದ್ಯಗಳನ್ನು ಗೆದ್ದರೆ ಟೀಂ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಮಹತ್ವದ ಮೈಲಿಗಲ್ಲು ದಾಟಲಿದೆ(PC-PTI).

1 / 5
ಟೀಂ ಇಂಡಿಯಾದ1932 ರಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿದೆ. ಅಲ್ಲಿಂದ ಇಲ್ಲಿಯವರೆಗೆ ಟೀಂ ಇಂಡಿಯಾ 599 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ತಂಡ 186 ಟೆಸ್ಟ್ ಪಂದ್ಯಗಳನ್ನು ಗೆದಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಪ್ರಸ್ತುತ ಐದನೇ ಸ್ಥಾನದಲ್ಲಿದೆ. ಇದೀಗ ಈ ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದರೆ ಅದರ ಸ್ಥಾನ ಬದಲಾಗಲಿದೆ(PC-PTI).

ಟೀಂ ಇಂಡಿಯಾದ1932 ರಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿದೆ. ಅಲ್ಲಿಂದ ಇಲ್ಲಿಯವರೆಗೆ ಟೀಂ ಇಂಡಿಯಾ 599 ಟೆಸ್ಟ್ ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ತಂಡ 186 ಟೆಸ್ಟ್ ಪಂದ್ಯಗಳನ್ನು ಗೆದಿದೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ಗೆಲುವು ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಪ್ರಸ್ತುತ ಐದನೇ ಸ್ಥಾನದಲ್ಲಿದೆ. ಇದೀಗ ಈ ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದರೆ ಅದರ ಸ್ಥಾನ ಬದಲಾಗಲಿದೆ(PC-PTI).

2 / 5
ಆಗಸ್ಟ್ 15 ರಿಂದ ಪ್ರಾರಂಭವಾಗುವ ಎರಡು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದರೆ ತನ್ನ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 188 ಪಂದ್ಯಗಳನ್ನು ಗೆದ್ದ ಸಾಧನೆ ಮಾಡಲಿದೆ. ಈ ಮೂಲಕ ಟೀಂ ಇಂಡಿಯಾ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಏರುತ್ತದೆ. ವೆಸ್ಟ್ ಇಂಡೀಸ್ ಇಲ್ಲಿಯವರೆಗೆ 187 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ(PC-PTI).

ಆಗಸ್ಟ್ 15 ರಿಂದ ಪ್ರಾರಂಭವಾಗುವ ಎರಡು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ, ಶ್ರೀಲಂಕಾವನ್ನು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದರೆ ತನ್ನ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 188 ಪಂದ್ಯಗಳನ್ನು ಗೆದ್ದ ಸಾಧನೆ ಮಾಡಲಿದೆ. ಈ ಮೂಲಕ ಟೀಂ ಇಂಡಿಯಾ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ ತಂಡನ್ನು ಹಿಂದಿಕ್ಕಿ ನಾಲ್ಕನೇ ಸ್ಥಾನಕ್ಕೆ ಏರುತ್ತದೆ. ವೆಸ್ಟ್ ಇಂಡೀಸ್ ಇಲ್ಲಿಯವರೆಗೆ 187 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ(PC-PTI).

3 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಭಾರತಕ್ಕಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿವೆ. ಆಸ್ಟ್ರೇಲಿಯಾ 426 ಟೆಸ್ಟ್ ಪಂದ್ಯಗಳ ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿದೆ. 405 ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 191 ಪಂದ್ಯಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದೆ(PC-PTI).

ಟೆಸ್ಟ್ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಭಾರತಕ್ಕಿಂತ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿವೆ. ಆಸ್ಟ್ರೇಲಿಯಾ 426 ಟೆಸ್ಟ್ ಪಂದ್ಯಗಳ ಗೆಲುವಿನೊಂದಿಗೆ ಅಗ್ರಸ್ಥಾನದಲ್ಲಿದೆ. 405 ಟೆಸ್ಟ್ ಪಂದ್ಯಗಳನ್ನು ಗೆದ್ದಿರುವ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 191 ಪಂದ್ಯಗಳನ್ನು ಗೆದ್ದು ಮೂರನೇ ಸ್ಥಾನದಲ್ಲಿದೆ(PC-PTI).

4 / 5
ಈ ದಾಖಲೆಯ ಜೊತೆಗೆ ಭಾರತ ಟೆಸ್ಟ್ ಕ್ರಿಕೆಟ್ ದಾಖಲೆಯ ಪುಸ್ತಕಕ್ಕೆ ಮತ್ತೊಂದು ದಾಖಲೆಯೂ ಸೇರಿಕೊಳ್ಳಲಿದೆ. ಅದೆನೆಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ಇದುವರೆಗೆ 599 ಪಂದ್ಯಗಳನ್ನು ಆಡಿದ್ದು, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಭಾರತಕ್ಕೆ 600ನೇ ಟೆಸ್ಟ್ ಪಂದ್ಯವಾಗಲಿದೆ. ಈ ಮೂಲಕ ಭಾರತ 600 ಟೆಸ್ಟ್ ಪಂದ್ಯಗಳನ್ನು ಆಡಿದ ವಿಶ್ವದಾದ್ಯಂತ ಆಯ್ದ ತಂಡಗಳ ಗುಂಪಿಗೆ ಸೇರಲಿದೆ(PC-PTI).

ಈ ದಾಖಲೆಯ ಜೊತೆಗೆ ಭಾರತ ಟೆಸ್ಟ್ ಕ್ರಿಕೆಟ್ ದಾಖಲೆಯ ಪುಸ್ತಕಕ್ಕೆ ಮತ್ತೊಂದು ದಾಖಲೆಯೂ ಸೇರಿಕೊಳ್ಳಲಿದೆ. ಅದೆನೆಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತ ಇದುವರೆಗೆ 599 ಪಂದ್ಯಗಳನ್ನು ಆಡಿದ್ದು, ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಭಾರತಕ್ಕೆ 600ನೇ ಟೆಸ್ಟ್ ಪಂದ್ಯವಾಗಲಿದೆ. ಈ ಮೂಲಕ ಭಾರತ 600 ಟೆಸ್ಟ್ ಪಂದ್ಯಗಳನ್ನು ಆಡಿದ ವಿಶ್ವದಾದ್ಯಂತ ಆಯ್ದ ತಂಡಗಳ ಗುಂಪಿಗೆ ಸೇರಲಿದೆ(PC-PTI).

5 / 5
Follow Us
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ
ಬಿಡದಿ ಟೌನ್​ಶಿಪ್​ ಯೋಜನೆಯ ಹಿಂದಿನ ಉದ್ದೇಶ ಏನು? ಸಿಎಂಗೆ ದೇವೇಗೌಡ ಪ್ರಶ್ನೆ