AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ‘ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸುವುದಿಲ್ಲ’; ವಿದೇಶಾಂಗ ಸಚಿವಾಲಯದ ಸ್ಪಷ್ಟನೆ

ICC Champions Trophy 2025: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ.

ಪೃಥ್ವಿಶಂಕರ
|

Updated on:Nov 29, 2024 | 5:01 PM

Share
ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ.

ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ.

1 / 6
ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಅವರ ಬಳಿ ಐಸಿಸಿ ಪಂದ್ಯಾವಳಿಯನ್ನಾಡಲು ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಹೋಗಲಿದೆಯೇ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ಭದ್ರತಾ ಕಾಳಜಿಯ ದೃಷ್ಟಿಯಿಂದ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಈಗಾಗಲೇ ನಾವು ಬಿಸಿಸಿಐಗೆ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.

ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಅವರ ಬಳಿ ಐಸಿಸಿ ಪಂದ್ಯಾವಳಿಯನ್ನಾಡಲು ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಹೋಗಲಿದೆಯೇ ಎಂಬ ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ಭದ್ರತಾ ಕಾಳಜಿಯ ದೃಷ್ಟಿಯಿಂದ ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಈಗಾಗಲೇ ನಾವು ಬಿಸಿಸಿಐಗೆ ಮಾಹಿತಿ ನೀಡಿದ್ದೇವೆ ಎಂದಿದ್ದಾರೆ.

2 / 6
ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಈ ಹೇಳಿಕೆ ಹೊರಬಿದ್ದ ಬಳಿಕ ಐಸಿಸಿ ನಡೆಸುತ್ತಿರುವ ವರ್ಚುವಲ್ ಸಭೆಯ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹಗ್ಗಜಗ್ಗಾಟಕ್ಕೆ ತೆರೆ ಎಳೆಯುವ ಸಲುವಾಗಿ ಐಸಿಸಿ ಈ ಸಭೆಯನ್ನು ಏರ್ಪಡಿಸಿದೆ. ಇದೀಗ ಈ ಸಭೆಗೂ ಮುನ್ನ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟನೆ ನೀಡಿರುವುದರಿಂದ ಐಸಿಸಿ, ಈ ಸಮಸ್ಯೆಗೆ ಯಾವ ರೀತಿಯ ಪರಿಹಾರ ಕಂಡುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಈ ಹೇಳಿಕೆ ಹೊರಬಿದ್ದ ಬಳಿಕ ಐಸಿಸಿ ನಡೆಸುತ್ತಿರುವ ವರ್ಚುವಲ್ ಸಭೆಯ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹಗ್ಗಜಗ್ಗಾಟಕ್ಕೆ ತೆರೆ ಎಳೆಯುವ ಸಲುವಾಗಿ ಐಸಿಸಿ ಈ ಸಭೆಯನ್ನು ಏರ್ಪಡಿಸಿದೆ. ಇದೀಗ ಈ ಸಭೆಗೂ ಮುನ್ನ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟನೆ ನೀಡಿರುವುದರಿಂದ ಐಸಿಸಿ, ಈ ಸಮಸ್ಯೆಗೆ ಯಾವ ರೀತಿಯ ಪರಿಹಾರ ಕಂಡುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

3 / 6
ಸದ್ಯದ ಮಾಹಿತಿಯ ಪ್ರಕಾರ, ಐಸಿಸಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ಪಾಕಿಸ್ತಾನಕ್ಕೆ ಕೇಳಲಿದೆ. ಆ ಪ್ರಕಾರ ಭಾರತದ ಪಂದ್ಯಗಳು ಪಾಕಿಸ್ತಾನದ ಹೊರಗೆ ನಡೆಯಲ್ಲಿವೆ. ಉಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ನಡೆಯಲ್ಲಿವೆ.

ಸದ್ಯದ ಮಾಹಿತಿಯ ಪ್ರಕಾರ, ಐಸಿಸಿ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಲು ಪಾಕಿಸ್ತಾನಕ್ಕೆ ಕೇಳಲಿದೆ. ಆ ಪ್ರಕಾರ ಭಾರತದ ಪಂದ್ಯಗಳು ಪಾಕಿಸ್ತಾನದ ಹೊರಗೆ ನಡೆಯಲ್ಲಿವೆ. ಉಳಿದ ಪಂದ್ಯಗಳು ಪಾಕಿಸ್ತಾನದಲ್ಲೇ ನಡೆಯಲ್ಲಿವೆ.

4 / 6
ಆದರೆ ಪಾಕಿಸ್ತಾನ ಈಗಾಗಲೇ ಹೈಬ್ರಿಡ್ ಮಾದರಿಗೆ ನಮ್ಮ ಸಮ್ಮತಿಯಿಲ್ಲ ಎಂಬುದನ್ನು ಐಸಿಸಿಗೆ ತಿಳಿಸಿದೆ. ಹೀಗಾಗಿ ಐಸಿಸಿಯ ಈ ನಿರ್ಧಾರಕ್ಕೆ ಪಾಕಿಸ್ತಾನ ಒಪ್ಪದಿದ್ದರೆ, ಇಡೀ ಪಂದ್ಯಾವಳಿಯನ್ನು ಪಾಕಿಸ್ತಾನದ ಹೊರಗೆ ನಡೆಸುವ ಸಾಧ್ಯತೆಗಳಿವೆ. ಇದಕ್ಕೆ ಪೂರಕವಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಲು ನಾವು ಸಿದ್ದ ಎಂದು ಬಿಸಿಸಿಐ ಹೇಳಿದೆ ಎಂದು ವರದಿಯಾಗಿದೆ.

ಆದರೆ ಪಾಕಿಸ್ತಾನ ಈಗಾಗಲೇ ಹೈಬ್ರಿಡ್ ಮಾದರಿಗೆ ನಮ್ಮ ಸಮ್ಮತಿಯಿಲ್ಲ ಎಂಬುದನ್ನು ಐಸಿಸಿಗೆ ತಿಳಿಸಿದೆ. ಹೀಗಾಗಿ ಐಸಿಸಿಯ ಈ ನಿರ್ಧಾರಕ್ಕೆ ಪಾಕಿಸ್ತಾನ ಒಪ್ಪದಿದ್ದರೆ, ಇಡೀ ಪಂದ್ಯಾವಳಿಯನ್ನು ಪಾಕಿಸ್ತಾನದ ಹೊರಗೆ ನಡೆಸುವ ಸಾಧ್ಯತೆಗಳಿವೆ. ಇದಕ್ಕೆ ಪೂರಕವಾಗಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಲು ನಾವು ಸಿದ್ದ ಎಂದು ಬಿಸಿಸಿಐ ಹೇಳಿದೆ ಎಂದು ವರದಿಯಾಗಿದೆ.

5 / 6
ಮೂಲಗಳ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲೇ ನಡೆಸಬೇಕೆಂಬ ಒತ್ತಡಕ್ಕೆ ಪಾಕಿಸ್ತಾನ ಮಣಿದರೆ, ಮುಂದಿನ ವರ್ಷ ಭಾರತದಲ್ಲಿ ನಡೆಯಲ್ಲಿರುವ ಮಹಿಳೆಯರ ಏಕದಿನ ವಿಶ್ವಕಪ್ ಹಾಗೂ ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಬೇಕು ಎಂಬ ವಾದವನ್ನು ಐಸಿಸಿ ಮುಂದಿಡಲು ಪಾಕಿಸ್ತಾನ ಸಜ್ಜಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ, ಚಾಂಪಿಯನ್ಸ್ ಟ್ರೋಫಿಯನ್ನು ಹೈಬ್ರಿಡ್ ಮಾದರಿಯಲ್ಲೇ ನಡೆಸಬೇಕೆಂಬ ಒತ್ತಡಕ್ಕೆ ಪಾಕಿಸ್ತಾನ ಮಣಿದರೆ, ಮುಂದಿನ ವರ್ಷ ಭಾರತದಲ್ಲಿ ನಡೆಯಲ್ಲಿರುವ ಮಹಿಳೆಯರ ಏಕದಿನ ವಿಶ್ವಕಪ್ ಹಾಗೂ ಭಾರತ ಮತ್ತು ಶ್ರೀಲಂಕಾ ಆತಿಥ್ಯದಲ್ಲಿ ನಡೆಯಲ್ಲಿರುವ ಟಿ20 ವಿಶ್ವಕಪ್ ಅನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಬೇಕು ಎಂಬ ವಾದವನ್ನು ಐಸಿಸಿ ಮುಂದಿಡಲು ಪಾಕಿಸ್ತಾನ ಸಜ್ಜಾಗಿದೆ ಎಂದು ವರದಿಯಾಗಿದೆ.

6 / 6

Published On - 4:36 pm, Fri, 29 November 24

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ