AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಏಕದಿನದಲ್ಲಿ ವಿಶೇಷ ಮೈಲಿಗಲ್ಲು ದಾಟಲಿದ್ದಾರೆ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್

India vs Afghanistan ODI: shubman gill, ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಏಕದಿನ ಸರಣಿ ಜೂನ್ 12 ರಿಂದ ಧರ್ಮಶಾಲಾದಲ್ಲಿ ಆರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾದ ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ 3000 ಏಕದಿನ ರನ್ ಮೈಲಿಗಲ್ಲು ತಲುಪುವ ಅವಕಾಶದಲ್ಲಿದ್ದಾರೆ. ಗಿಲ್ ಧವನ್ ದಾಖಲೆಯನ್ನು ಮುರಿದು ಅತಿ ವೇಗದ ಭಾರತೀಯ ಆಟಗಾರನಾಗುವ ಸನಿಹದಲ್ಲಿದ್ದಾರೆ.

ಪೃಥ್ವಿಶಂಕರ
|

Updated on: Jun 12, 2026 | 5:32 PM

Share
ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 12 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಧರ್ಮಶಾಲಾಕ್ಕೆ ಬಂದಿಳಿದಿವೆ. ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೂ ಕಣ್ಣಿಟ್ಟಿದೆ (PC- BCCI X).

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 12 ರಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳು ಈಗಾಗಲೇ ಧರ್ಮಶಾಲಾಕ್ಕೆ ಬಂದಿಳಿದಿವೆ. ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯ ಮೇಲೂ ಕಣ್ಣಿಟ್ಟಿದೆ (PC- BCCI X).

1 / 5
ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ವಿಶೇಷ ಮೈಲಿಗಲ್ಲು ಸ್ಥಾಪಿಸುವ ಅವಕಾಶವನ್ನು ಹೊಂದಿದ್ದಾರೆ. ವಾಸ್ತವವಾಗಿ ಶುಭ್​ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ 3,000 ಏಕದಿನ ರನ್ ಪೂರೈಸುವ ಸನಿಹದಲ್ಲಿದ್ದಾರೆ (PC- BCCI X).

ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮತ್ತು ಉಪನಾಯಕ ಶ್ರೇಯಸ್ ಅಯ್ಯರ್ ವಿಶೇಷ ಮೈಲಿಗಲ್ಲು ಸ್ಥಾಪಿಸುವ ಅವಕಾಶವನ್ನು ಹೊಂದಿದ್ದಾರೆ. ವಾಸ್ತವವಾಗಿ ಶುಭ್​ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ 3,000 ಏಕದಿನ ರನ್ ಪೂರೈಸುವ ಸನಿಹದಲ್ಲಿದ್ದಾರೆ (PC- BCCI X).

2 / 5
ಮೊದಲ ಏಕದಿನ ಪಂದ್ಯದಲ್ಲಿ ಗಿಲ್ 47 ರನ್ ಮತ್ತು ಅಯ್ಯರ್ 23 ರನ್ ಗಳಿಸಿದರೆ, ಏಕದಿನ ಕ್ರಿಕೆಟ್​ನಲ್ಲಿ 3000 ರನ್​ಗಳ ಗಡಿ ದಾಟಲಿದ್ದಾರೆ. ಈ ಮೂಲಕ ಅತಿ ಕಡಿಮೆ ಪಂದ್ಯಗಳಲ್ಲಿ 3000 ಏಕದಿನ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಹಿಂದಿಕ್ಕಲಿದ್ದಾರೆ (PC- BCCI X).

ಮೊದಲ ಏಕದಿನ ಪಂದ್ಯದಲ್ಲಿ ಗಿಲ್ 47 ರನ್ ಮತ್ತು ಅಯ್ಯರ್ 23 ರನ್ ಗಳಿಸಿದರೆ, ಏಕದಿನ ಕ್ರಿಕೆಟ್​ನಲ್ಲಿ 3000 ರನ್​ಗಳ ಗಡಿ ದಾಟಲಿದ್ದಾರೆ. ಈ ಮೂಲಕ ಅತಿ ಕಡಿಮೆ ಪಂದ್ಯಗಳಲ್ಲಿ 3000 ಏಕದಿನ ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಹಿಂದಿಕ್ಕಲಿದ್ದಾರೆ (PC- BCCI X).

3 / 5
ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಏಕದಿನ ಪಂದ್ಯಗಳಲ್ಲಿ ವೇಗವಾಗಿ 3,000 ರನ್ ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಧವನ್ 72 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ ಗಿಲ್ 61 ಇನ್ನಿಂಗ್ಸ್‌ಗಳಲ್ಲಿ 2,953 ರನ್ ಬಾರಿಸಿದ್ದರೆ, ಅಯ್ಯರ್ 70 ಇನ್ನಿಂಗ್ಸ್‌ಗಳಲ್ಲಿ 2,977 ರನ್ ಕಲೆಹಾಕಿದ್ದಾರೆ. ಇದೀಗ ಗಿಲ್, ಧವನ್ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದಾರೆ (PC- PTI).

ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಏಕದಿನ ಪಂದ್ಯಗಳಲ್ಲಿ ವೇಗವಾಗಿ 3,000 ರನ್ ಗಳಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಹೊಂದಿದ್ದಾರೆ. ಧವನ್ 72 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಪ್ರಸ್ತುತ ಗಿಲ್ 61 ಇನ್ನಿಂಗ್ಸ್‌ಗಳಲ್ಲಿ 2,953 ರನ್ ಬಾರಿಸಿದ್ದರೆ, ಅಯ್ಯರ್ 70 ಇನ್ನಿಂಗ್ಸ್‌ಗಳಲ್ಲಿ 2,977 ರನ್ ಕಲೆಹಾಕಿದ್ದಾರೆ. ಇದೀಗ ಗಿಲ್, ಧವನ್ ದಾಖಲೆಯನ್ನು ಮುರಿಯುವ ಅವಕಾಶ ಹೊಂದಿದ್ದಾರೆ (PC- PTI).

4 / 5
ಇನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 3,000 ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಮೊದಲ ಸ್ಥಾನದಲ್ಲಿದ್ದಾರೆ. ಆಮ್ಲಾ 57 ಇನ್ನಿಂಗ್ಸ್‌ಗಳಲ್ಲಿ 30,000 ರನ್‌ಗಳನ್ನು ಪೂರೈಸಿದ್ದರು. ಅವರ ನಂತರ ಶೈ ಹೋಪ್, ಫಖರ್ ಜಮಾನ್ ಮತ್ತು ಇಮಾಮ್-ಉಲ್-ಹಕ್ ಎರಡನೇ ಸ್ಥಾನದಲ್ಲಿದ್ದಾರೆ. ಈ ಮೂವರು ತಲಾ 67 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಗಿಲ್, ಈ ಮೂವರನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದಾರೆ (PC- Google).

ಇನ್ನು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ 3,000 ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಹಾಶಿಮ್ ಆಮ್ಲಾ ಮೊದಲ ಸ್ಥಾನದಲ್ಲಿದ್ದಾರೆ. ಆಮ್ಲಾ 57 ಇನ್ನಿಂಗ್ಸ್‌ಗಳಲ್ಲಿ 30,000 ರನ್‌ಗಳನ್ನು ಪೂರೈಸಿದ್ದರು. ಅವರ ನಂತರ ಶೈ ಹೋಪ್, ಫಖರ್ ಜಮಾನ್ ಮತ್ತು ಇಮಾಮ್-ಉಲ್-ಹಕ್ ಎರಡನೇ ಸ್ಥಾನದಲ್ಲಿದ್ದಾರೆ. ಈ ಮೂವರು ತಲಾ 67 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇದೀಗ ಗಿಲ್, ಈ ಮೂವರನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದ್ದಾರೆ (PC- Google).

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು