Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಂಡದಲ್ಲಿಲ್ಲ ರಿಷಭ್ ಪಂತ್: ಕೆಎಲ್ ರಾಹುಲ್ ಕೈಯಲ್ಲಿದೆ ಸೂರ್ಯನ ಭವಿಷ್ಯ

India vs Australia 1st Test: ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡರೆ ಶುಭ್​ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು.

TV9 Web
| Updated By: ಝಾಹಿರ್ ಯೂಸುಫ್

Updated on: Feb 07, 2023 | 8:30 PM

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್​ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ವಿದರ್ಭ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ಈಗ ಕುತೂಹಲ. ಇದಕ್ಕೆ ಮುಖ್ಯ ಕಾರಣ ಪ್ರಮುಖ ಆಟಗಾರರ ಅಲಭ್ಯತೆ.

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್​ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ವಿದರ್ಭ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ಈಗ ಕುತೂಹಲ. ಇದಕ್ಕೆ ಮುಖ್ಯ ಕಾರಣ ಪ್ರಮುಖ ಆಟಗಾರರ ಅಲಭ್ಯತೆ.

1 / 6
ಅಂದರೆ ಈ ಸರಣಿಗೆ ಅಜಿಂಕ್ಯ ರಹಾನೆ ಹಾಗೂ ಹುನಮ ವಿಹಾರಿ ಆಯ್ಕೆಯಾಗಿಲ್ಲ. ಮತ್ತೊಂದೆಡೆ ಅಪಘಾತದಿಂದ ಗಾಯಗೊಂಡಿರುವ ರಿಷಭ್ ಪಂತ್ ತಂಡದಲ್ಲಿಲ್ಲ. ಹಾಗೆಯೇ ತಂಡಕ್ಕೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ.

ಅಂದರೆ ಈ ಸರಣಿಗೆ ಅಜಿಂಕ್ಯ ರಹಾನೆ ಹಾಗೂ ಹುನಮ ವಿಹಾರಿ ಆಯ್ಕೆಯಾಗಿಲ್ಲ. ಮತ್ತೊಂದೆಡೆ ಅಪಘಾತದಿಂದ ಗಾಯಗೊಂಡಿರುವ ರಿಷಭ್ ಪಂತ್ ತಂಡದಲ್ಲಿಲ್ಲ. ಹಾಗೆಯೇ ತಂಡಕ್ಕೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ.

2 / 6
ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡರೆ ಶುಭ್​ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು. ಒಂದು ವೇಳೆ ಗಿಲ್ ಓಪನಿಂಗ್ ಮಾಡಿದ್ರೆ ಕೆಎಲ್​ಆರ್​ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು. ಇನ್ನು ಕೆಎಲ್ ರಾಹುಲ್ ಹೆಚ್ಚುವರಿ ಜವಾಬ್ದಾರಿವಹಿಸಿಕೊಂಡರೆ ಸೂರ್ಯಕುಮಾರ್ ಯಾದವ್​ಗೆ ಅವಕಾಶ ಸಿಗಲಿದೆ.

ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡರೆ ಶುಭ್​ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು. ಒಂದು ವೇಳೆ ಗಿಲ್ ಓಪನಿಂಗ್ ಮಾಡಿದ್ರೆ ಕೆಎಲ್​ಆರ್​ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು. ಇನ್ನು ಕೆಎಲ್ ರಾಹುಲ್ ಹೆಚ್ಚುವರಿ ಜವಾಬ್ದಾರಿವಹಿಸಿಕೊಂಡರೆ ಸೂರ್ಯಕುಮಾರ್ ಯಾದವ್​ಗೆ ಅವಕಾಶ ಸಿಗಲಿದೆ.

3 / 6
ಅಂದರೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಹಾಗೂ ಕೆಎಸ್ ಭರತ್ ಆಯ್ಕೆಯಾಗಿದ್ದಾರೆ. ಆದರೆ ಈ ಇಬ್ಬರಿಗಿಂತ ವಿಕೆಟ್ ಕೀಪಿಂಗ್​ನಲ್ಲಿ ಕೆಎಲ್ ರಾಹುಲ್ ಹೆಚ್ಚಿನ ಅನುಭವ ಹೊಂದಿದ್ದಾರೆ. ಹೀಗಾಗಿ ವಿಕೆಟ್ ಕೀಪರ್ ಜವಾಬ್ದಾರಿಯನ್ನೂ ಕೂಡ ಅವರೇ ವಹಿಸಿಕೊಂಡರೆ ಹೆಚ್ಚುವರಿ ಬ್ಯಾಟ್ಸ್​ಮನ್​ನ ಕಣಕ್ಕಿಳಿಸುವ ಆಯ್ಕೆ ಟೀಮ್ ಇಂಡಿಯಾಗೆ ಸಿಗಲಿದೆ.

ಅಂದರೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಹಾಗೂ ಕೆಎಸ್ ಭರತ್ ಆಯ್ಕೆಯಾಗಿದ್ದಾರೆ. ಆದರೆ ಈ ಇಬ್ಬರಿಗಿಂತ ವಿಕೆಟ್ ಕೀಪಿಂಗ್​ನಲ್ಲಿ ಕೆಎಲ್ ರಾಹುಲ್ ಹೆಚ್ಚಿನ ಅನುಭವ ಹೊಂದಿದ್ದಾರೆ. ಹೀಗಾಗಿ ವಿಕೆಟ್ ಕೀಪರ್ ಜವಾಬ್ದಾರಿಯನ್ನೂ ಕೂಡ ಅವರೇ ವಹಿಸಿಕೊಂಡರೆ ಹೆಚ್ಚುವರಿ ಬ್ಯಾಟ್ಸ್​ಮನ್​ನ ಕಣಕ್ಕಿಳಿಸುವ ಆಯ್ಕೆ ಟೀಮ್ ಇಂಡಿಯಾಗೆ ಸಿಗಲಿದೆ.

4 / 6
ಅದರಂತೆ ಸೂರ್ಯಕುಮಾರ್ ಯಾದವ್ ಟೆಸ್ಟ್​ ಕ್ರಿಕೆಟ್​ನಲ್ಲಿ ಪದಾರ್ಪಣೆ ಮಾಡುವ ಅವಕಾಶ ದೊರೆಯಲಿದೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ರಿಷಭ್ ಪಂತ್ ಸ್ಥಾನವನ್ನು ತುಂಬಬಲ್ಲ ಆಟಗಾರನ ಅವಶ್ಯಕತೆ ಟೀಮ್ ಇಂಡಿಯಾಗಿದೆ. ಹೀಗಾಗಿ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್​ರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

ಅದರಂತೆ ಸೂರ್ಯಕುಮಾರ್ ಯಾದವ್ ಟೆಸ್ಟ್​ ಕ್ರಿಕೆಟ್​ನಲ್ಲಿ ಪದಾರ್ಪಣೆ ಮಾಡುವ ಅವಕಾಶ ದೊರೆಯಲಿದೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ರಿಷಭ್ ಪಂತ್ ಸ್ಥಾನವನ್ನು ತುಂಬಬಲ್ಲ ಆಟಗಾರನ ಅವಶ್ಯಕತೆ ಟೀಮ್ ಇಂಡಿಯಾಗಿದೆ. ಹೀಗಾಗಿ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್​ರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

5 / 6
ಆದರೆ ಸೂರ್ಯಕುಮಾರ್​ಗೆ ಚಾನ್ಸ್ ಸಿಗಬೇಕಿದ್ದರೆ ಇಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಇಲ್ಲದಿದ್ರೆ ಕೆಎಸ್ ಭರತ್​ ಆಡುವ ಬಳಗದಲ್ಲಿ ಅವಕಾಶ ಪಡೆಯಲಿದ್ದಾರೆ. ಅದರಂತೆ ನಾಗಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ಗೆ ಚೊಚ್ಚಲ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.

ಆದರೆ ಸೂರ್ಯಕುಮಾರ್​ಗೆ ಚಾನ್ಸ್ ಸಿಗಬೇಕಿದ್ದರೆ ಇಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಇಲ್ಲದಿದ್ರೆ ಕೆಎಸ್ ಭರತ್​ ಆಡುವ ಬಳಗದಲ್ಲಿ ಅವಕಾಶ ಪಡೆಯಲಿದ್ದಾರೆ. ಅದರಂತೆ ನಾಗಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ಗೆ ಚೊಚ್ಚಲ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ