AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಂಡದಲ್ಲಿಲ್ಲ ರಿಷಭ್ ಪಂತ್: ಕೆಎಲ್ ರಾಹುಲ್ ಕೈಯಲ್ಲಿದೆ ಸೂರ್ಯನ ಭವಿಷ್ಯ

India vs Australia 1st Test: ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡರೆ ಶುಭ್​ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು.

TV9 Web
| Edited By: |

Updated on: Feb 07, 2023 | 8:30 PM

Share
ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್​ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ವಿದರ್ಭ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ಈಗ ಕುತೂಹಲ. ಇದಕ್ಕೆ ಮುಖ್ಯ ಕಾರಣ ಪ್ರಮುಖ ಆಟಗಾರರ ಅಲಭ್ಯತೆ.

ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್​ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ವಿದರ್ಭ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎಂಬುದೇ ಈಗ ಕುತೂಹಲ. ಇದಕ್ಕೆ ಮುಖ್ಯ ಕಾರಣ ಪ್ರಮುಖ ಆಟಗಾರರ ಅಲಭ್ಯತೆ.

1 / 6
ಅಂದರೆ ಈ ಸರಣಿಗೆ ಅಜಿಂಕ್ಯ ರಹಾನೆ ಹಾಗೂ ಹುನಮ ವಿಹಾರಿ ಆಯ್ಕೆಯಾಗಿಲ್ಲ. ಮತ್ತೊಂದೆಡೆ ಅಪಘಾತದಿಂದ ಗಾಯಗೊಂಡಿರುವ ರಿಷಭ್ ಪಂತ್ ತಂಡದಲ್ಲಿಲ್ಲ. ಹಾಗೆಯೇ ತಂಡಕ್ಕೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ.

ಅಂದರೆ ಈ ಸರಣಿಗೆ ಅಜಿಂಕ್ಯ ರಹಾನೆ ಹಾಗೂ ಹುನಮ ವಿಹಾರಿ ಆಯ್ಕೆಯಾಗಿಲ್ಲ. ಮತ್ತೊಂದೆಡೆ ಅಪಘಾತದಿಂದ ಗಾಯಗೊಂಡಿರುವ ರಿಷಭ್ ಪಂತ್ ತಂಡದಲ್ಲಿಲ್ಲ. ಹಾಗೆಯೇ ತಂಡಕ್ಕೆ ಆಯ್ಕೆಯಾಗಿದ್ದ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಕಾರಣ ಹೊರಗುಳಿದಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ.

2 / 6
ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡರೆ ಶುಭ್​ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು. ಒಂದು ವೇಳೆ ಗಿಲ್ ಓಪನಿಂಗ್ ಮಾಡಿದ್ರೆ ಕೆಎಲ್​ಆರ್​ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು. ಇನ್ನು ಕೆಎಲ್ ರಾಹುಲ್ ಹೆಚ್ಚುವರಿ ಜವಾಬ್ದಾರಿವಹಿಸಿಕೊಂಡರೆ ಸೂರ್ಯಕುಮಾರ್ ಯಾದವ್​ಗೆ ಅವಕಾಶ ಸಿಗಲಿದೆ.

ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡರೆ ಶುಭ್​ಮನ್ ಗಿಲ್ ಮಧ್ಯಮ ಕ್ರಮಾಂಕದಲ್ಲಿ ಆಡಬಹುದು. ಒಂದು ವೇಳೆ ಗಿಲ್ ಓಪನಿಂಗ್ ಮಾಡಿದ್ರೆ ಕೆಎಲ್​ಆರ್​ 5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಬಹುದು. ಇನ್ನು ಕೆಎಲ್ ರಾಹುಲ್ ಹೆಚ್ಚುವರಿ ಜವಾಬ್ದಾರಿವಹಿಸಿಕೊಂಡರೆ ಸೂರ್ಯಕುಮಾರ್ ಯಾದವ್​ಗೆ ಅವಕಾಶ ಸಿಗಲಿದೆ.

3 / 6
ಅಂದರೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಹಾಗೂ ಕೆಎಸ್ ಭರತ್ ಆಯ್ಕೆಯಾಗಿದ್ದಾರೆ. ಆದರೆ ಈ ಇಬ್ಬರಿಗಿಂತ ವಿಕೆಟ್ ಕೀಪಿಂಗ್​ನಲ್ಲಿ ಕೆಎಲ್ ರಾಹುಲ್ ಹೆಚ್ಚಿನ ಅನುಭವ ಹೊಂದಿದ್ದಾರೆ. ಹೀಗಾಗಿ ವಿಕೆಟ್ ಕೀಪರ್ ಜವಾಬ್ದಾರಿಯನ್ನೂ ಕೂಡ ಅವರೇ ವಹಿಸಿಕೊಂಡರೆ ಹೆಚ್ಚುವರಿ ಬ್ಯಾಟ್ಸ್​ಮನ್​ನ ಕಣಕ್ಕಿಳಿಸುವ ಆಯ್ಕೆ ಟೀಮ್ ಇಂಡಿಯಾಗೆ ಸಿಗಲಿದೆ.

ಅಂದರೆ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಹಾಗೂ ಕೆಎಸ್ ಭರತ್ ಆಯ್ಕೆಯಾಗಿದ್ದಾರೆ. ಆದರೆ ಈ ಇಬ್ಬರಿಗಿಂತ ವಿಕೆಟ್ ಕೀಪಿಂಗ್​ನಲ್ಲಿ ಕೆಎಲ್ ರಾಹುಲ್ ಹೆಚ್ಚಿನ ಅನುಭವ ಹೊಂದಿದ್ದಾರೆ. ಹೀಗಾಗಿ ವಿಕೆಟ್ ಕೀಪರ್ ಜವಾಬ್ದಾರಿಯನ್ನೂ ಕೂಡ ಅವರೇ ವಹಿಸಿಕೊಂಡರೆ ಹೆಚ್ಚುವರಿ ಬ್ಯಾಟ್ಸ್​ಮನ್​ನ ಕಣಕ್ಕಿಳಿಸುವ ಆಯ್ಕೆ ಟೀಮ್ ಇಂಡಿಯಾಗೆ ಸಿಗಲಿದೆ.

4 / 6
ಅದರಂತೆ ಸೂರ್ಯಕುಮಾರ್ ಯಾದವ್ ಟೆಸ್ಟ್​ ಕ್ರಿಕೆಟ್​ನಲ್ಲಿ ಪದಾರ್ಪಣೆ ಮಾಡುವ ಅವಕಾಶ ದೊರೆಯಲಿದೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ರಿಷಭ್ ಪಂತ್ ಸ್ಥಾನವನ್ನು ತುಂಬಬಲ್ಲ ಆಟಗಾರನ ಅವಶ್ಯಕತೆ ಟೀಮ್ ಇಂಡಿಯಾಗಿದೆ. ಹೀಗಾಗಿ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್​ರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

ಅದರಂತೆ ಸೂರ್ಯಕುಮಾರ್ ಯಾದವ್ ಟೆಸ್ಟ್​ ಕ್ರಿಕೆಟ್​ನಲ್ಲಿ ಪದಾರ್ಪಣೆ ಮಾಡುವ ಅವಕಾಶ ದೊರೆಯಲಿದೆ. ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟರ್ ರಿಷಭ್ ಪಂತ್ ಸ್ಥಾನವನ್ನು ತುಂಬಬಲ್ಲ ಆಟಗಾರನ ಅವಶ್ಯಕತೆ ಟೀಮ್ ಇಂಡಿಯಾಗಿದೆ. ಹೀಗಾಗಿ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್​ರನ್ನು ಕಣಕ್ಕಿಳಿಸಿದರೂ ಅಚ್ಚರಿಪಡಬೇಕಿಲ್ಲ.

5 / 6
ಆದರೆ ಸೂರ್ಯಕುಮಾರ್​ಗೆ ಚಾನ್ಸ್ ಸಿಗಬೇಕಿದ್ದರೆ ಇಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಇಲ್ಲದಿದ್ರೆ ಕೆಎಸ್ ಭರತ್​ ಆಡುವ ಬಳಗದಲ್ಲಿ ಅವಕಾಶ ಪಡೆಯಲಿದ್ದಾರೆ. ಅದರಂತೆ ನಾಗಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ಗೆ ಚೊಚ್ಚಲ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.

ಆದರೆ ಸೂರ್ಯಕುಮಾರ್​ಗೆ ಚಾನ್ಸ್ ಸಿಗಬೇಕಿದ್ದರೆ ಇಲ್ಲಿ ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಇಲ್ಲದಿದ್ರೆ ಕೆಎಸ್ ಭರತ್​ ಆಡುವ ಬಳಗದಲ್ಲಿ ಅವಕಾಶ ಪಡೆಯಲಿದ್ದಾರೆ. ಅದರಂತೆ ನಾಗಪುರದಲ್ಲಿ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ಗೆ ಚೊಚ್ಚಲ ಅವಕಾಶ ಸಿಗಲಿದೆಯಾ ಕಾದು ನೋಡಬೇಕಿದೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ