ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಫೆಬ್ರವರಿ 17 ರಿಂದ ಶುರುವಾಗಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾದ ವೇಗಿಯನ್ನು ತಂಡದಿಂದ ಕೈ ಬಿಡಲಾಗಿದೆ.
1 / 6
ಹೌದು, ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯದಿಂದ ಎಡಗೈ ವೇಗಿ ಜಯದೇವ್ ಉನಾದ್ಕತ್ ಕೈ ಬಿಡಲಾಗಿದೆ. ಅಲ್ಲದೆ ಅವರಿಗೆ ರಣಜಿ ಟ್ರೋಫಿ ಆಡುವಂತೆ ಬಿಸಿಸಿಐ ಸೂಚಿಸಿದೆ.
2 / 6
ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದ ಉನಾದ್ಕತ್ ಅವರಿಗೆ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ದೆಹಲಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲೂ ಚಾನ್ಸ್ ಸಿಗುವುದು ಅನುಮಾನ. ಹೀಗಾಗಿ ಅವರಿಗೆ ರಣಜಿ ಟೂರ್ನಿ ಫೈನಲ್ ಆಡಲು ತಿಳಿಸಲಾಗಿದೆ.
3 / 6
ಪ್ರಸ್ತಕ ಸಾಲಿನ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಸೋಲಿಸಿ ಸೌರಾಷ್ಟ್ರ ತಂಡ ಫೈನಲ್ಗೆ ಪ್ರವೇಶಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವ ಮುನ್ನ ಸೌರಾಷ್ಟ್ರ ತಂಡವನ್ನು ಜಯದೇವ್ ಉನಾದ್ಕತ್ ಮುನ್ನಡೆಸಿದ್ದರು.
4 / 6
ಇದೀಗ ತಂಡವು ಫೈನಲ್ ಪ್ರವೇಶಿಸಿದ್ದು, ಹೀಗಾಗಿ ಅಂತಿಮ ಹಣಾಹಣಿಯಲ್ಲಿ ತಂಡವನ್ನು ಮುನ್ನಡೆಸುವಂತೆ ತಿಳಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಜಯದೇವ್ ಉನಾದ್ಕತ್ ಕಾಣಿಸಿಕೊಳ್ಳುವುದಿಲ್ಲ.
5 / 6
ಬದಲಾಗಿ ಫೆಬ್ರವರಿ 16 ರಂದು ನಡೆಯಲಿರುವ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ವಿರುದ್ಧ ಸೌರಾಷ್ಟ್ರ ತಂಡದ ನಾಯಕರಾಗಿ ಜಯದೇವ್ ಉನಾದ್ಕತ್ ಕಾಣಿಸಿಕೊಳ್ಳಲಿದ್ದಾರೆ.