AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್​ ಕೆಎಲ್ ರಾಹುಲ್ ಪಾಲಿಗೆ ಅಗ್ನಿಪರೀಕ್ಷೆ

India vs Australia 2nd Test: ಆದರೆ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಕೇವಲ 20 ರನ್​ಗಳಿಸಿ ನಿರಾಸೆ ಮೂಡಿಸಿದ್ದರು. ಇದರ ಬೆನ್ನಲ್ಲೇ 2ನೇ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಕೈ ಬಿಡಬೇಕೆಂಬ ಕೂಗುಗಳು ಕೇಳಿ ಬಂದಿದ್ದವು.

TV9 Web
| Updated By: ಝಾಹಿರ್ ಯೂಸುಫ್|

Updated on: Feb 15, 2023 | 9:24 PM

Share
ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯಕ್ಕಾಗಿ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 17 ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಅವರ ಭವಿಷ್ಯ ಕೂಡ ನಿರ್ಧಾರವಾಗಲಿದೆ.

ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯಕ್ಕಾಗಿ ವೇದಿಕೆ ಸಿದ್ಧವಾಗಿದೆ. ಫೆಬ್ರವರಿ 17 ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಉಪನಾಯಕ ಕೆಎಲ್ ರಾಹುಲ್ ಅವರ ಭವಿಷ್ಯ ಕೂಡ ನಿರ್ಧಾರವಾಗಲಿದೆ.

1 / 8
ಕಳೆದ ಕೆಲ ಪಂದ್ಯಗಳಿಂದ ಕಳಪೆ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳೆದ್ದಿವೆ. ಅದರಲ್ಲೂ ಇನ್​ಫಾರ್ಮ ಆಟಗಾರ ಶುಭ್​ಮನ್ ಗಿಲ್ ಅವರನ್ನು ಹೊರಗಿಟ್ಟು ಕೆಎಲ್​ ರಾಹುಲ್ ಅವರಿಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ನೀಡಲಾಗಿತ್ತು.

ಕಳೆದ ಕೆಲ ಪಂದ್ಯಗಳಿಂದ ಕಳಪೆ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಅವರ ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳೆದ್ದಿವೆ. ಅದರಲ್ಲೂ ಇನ್​ಫಾರ್ಮ ಆಟಗಾರ ಶುಭ್​ಮನ್ ಗಿಲ್ ಅವರನ್ನು ಹೊರಗಿಟ್ಟು ಕೆಎಲ್​ ರಾಹುಲ್ ಅವರಿಗೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ನೀಡಲಾಗಿತ್ತು.

2 / 8
ಆದರೆ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಕೇವಲ 20 ರನ್​ಗಳಿಸಿ ನಿರಾಸೆ ಮೂಡಿಸಿದ್ದರು. ಇದರ ಬೆನ್ನಲ್ಲೇ 2ನೇ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಅವರನ್ನು ಕೈ ಬಿಡಬೇಕೆಂಬ ಕೂಗುಗಳು ಕೇಳಿ ಬಂದಿದ್ದವು. ಇದಾಗ್ಯೂ ಮತ್ತೊಂದು ಅವಕಾಶ ನೀಡಲು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ದ್ರಾವಿಡ್ ಬಯಸಿದ್ದಾರೆ ಎಂದು ತಿಳಿದು ಬಂದಿದೆ.

ಆದರೆ ಆರಂಭಿಕನಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಕೇವಲ 20 ರನ್​ಗಳಿಸಿ ನಿರಾಸೆ ಮೂಡಿಸಿದ್ದರು. ಇದರ ಬೆನ್ನಲ್ಲೇ 2ನೇ ಟೆಸ್ಟ್ ಪಂದ್ಯದಿಂದ ಕೆಎಲ್ ರಾಹುಲ್ ಅವರನ್ನು ಕೈ ಬಿಡಬೇಕೆಂಬ ಕೂಗುಗಳು ಕೇಳಿ ಬಂದಿದ್ದವು. ಇದಾಗ್ಯೂ ಮತ್ತೊಂದು ಅವಕಾಶ ನೀಡಲು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ದ್ರಾವಿಡ್ ಬಯಸಿದ್ದಾರೆ ಎಂದು ತಿಳಿದು ಬಂದಿದೆ.

3 / 8
ಅಂದರೆ ದೆಹಲಿ ಟೆಸ್ಟ್​ನಲ್ಲಿ ಕೆಎಲ್​ ರಾಹುಲ್​ಗೆ ಕೊನೆಯ ಅವಕಾಶ ನೀಡಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಒಂದು ವೇಳೆ ಅವರು ಈ ಬಾರಿ ಕೂಡ ವಿಫಲರಾದರೆ ಮುಂದಿನ 2 ಟೆಸ್ಟ್​ ಪಂದ್ಯಗಳಲ್ಲಿ ಶುಭ್​ಮನ್ ಗಿಲ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

ಅಂದರೆ ದೆಹಲಿ ಟೆಸ್ಟ್​ನಲ್ಲಿ ಕೆಎಲ್​ ರಾಹುಲ್​ಗೆ ಕೊನೆಯ ಅವಕಾಶ ನೀಡಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಒಂದು ವೇಳೆ ಅವರು ಈ ಬಾರಿ ಕೂಡ ವಿಫಲರಾದರೆ ಮುಂದಿನ 2 ಟೆಸ್ಟ್​ ಪಂದ್ಯಗಳಲ್ಲಿ ಶುಭ್​ಮನ್ ಗಿಲ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.

4 / 8
ಇಲ್ಲಿ ಗಮನಿಸಬೇಕಾದ ಮತ್ತೊಂದು ವಿಷಯ ಎಂದರೆ ದೆಹಲಿ ಟೆಸ್ಟ್ ಪಂದ್ಯಗಳ ಬಳಿಕ 3ನೇ ಹಾಗೂ 4ನೇ ಟೆಸ್ಟ್ ಪಂದ್ಯಗಳಿಗಾಗಿ ಟೀಮ್ ಇಂಡಿಯಾವನ್ನು ಘೋಷಣೆ ಮಾಡಲಿದೆ. ಹೀಗಾಗಿ ದೆಹಲಿ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ವಿಫಲರಾದರೆ ತಂಡದಿಂದಲೇ ಹೊರಬೀಳಬಹುದು.

ಇಲ್ಲಿ ಗಮನಿಸಬೇಕಾದ ಮತ್ತೊಂದು ವಿಷಯ ಎಂದರೆ ದೆಹಲಿ ಟೆಸ್ಟ್ ಪಂದ್ಯಗಳ ಬಳಿಕ 3ನೇ ಹಾಗೂ 4ನೇ ಟೆಸ್ಟ್ ಪಂದ್ಯಗಳಿಗಾಗಿ ಟೀಮ್ ಇಂಡಿಯಾವನ್ನು ಘೋಷಣೆ ಮಾಡಲಿದೆ. ಹೀಗಾಗಿ ದೆಹಲಿ ಟೆಸ್ಟ್​ನಲ್ಲಿ ಕೆಎಲ್ ರಾಹುಲ್ ವಿಫಲರಾದರೆ ತಂಡದಿಂದಲೇ ಹೊರಬೀಳಬಹುದು.

5 / 8
ಏಕೆಂದರೆ ಕಳೆದ 8 ಟೆಸ್ಟ್​​ ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಅವರ ಬ್ಯಾಟ್​ನಿಂದ ಮೂಡಿಬಂದಂತಹ ಗರಿಷ್ಠ ಸ್ಕೋರ್ 23 ಮಾತ್ರ. ಹೀಗಾಗಿಯೇ ದೆಹಲಿ ಟೆಸ್ಟ್ ಪಂದ್ಯವು ಕನ್ನಡಿಗನಿಗೆ ಅಗ್ನಿಪರೀಕ್ಷೆಯಾಗಿರಲಿದೆ.

ಏಕೆಂದರೆ ಕಳೆದ 8 ಟೆಸ್ಟ್​​ ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಅವರ ಬ್ಯಾಟ್​ನಿಂದ ಮೂಡಿಬಂದಂತಹ ಗರಿಷ್ಠ ಸ್ಕೋರ್ 23 ಮಾತ್ರ. ಹೀಗಾಗಿಯೇ ದೆಹಲಿ ಟೆಸ್ಟ್ ಪಂದ್ಯವು ಕನ್ನಡಿಗನಿಗೆ ಅಗ್ನಿಪರೀಕ್ಷೆಯಾಗಿರಲಿದೆ.

6 / 8
ಈ ಪಂದ್ಯದಲ್ಲಿ ಮಿಂಚಿದರೆ ತಂಡದಲ್ಲಿ ಮುಂದುವರೆಯಲಿದ್ದಾರೆ. ವಿಫಲರಾದರೆ ತಂಡದಿಂದ ಹೊರಬೀಳುವುದು ಖಚಿತ ಎಂದೇ ಹೇಳಬಹುದು.

ಈ ಪಂದ್ಯದಲ್ಲಿ ಮಿಂಚಿದರೆ ತಂಡದಲ್ಲಿ ಮುಂದುವರೆಯಲಿದ್ದಾರೆ. ವಿಫಲರಾದರೆ ತಂಡದಿಂದ ಹೊರಬೀಳುವುದು ಖಚಿತ ಎಂದೇ ಹೇಳಬಹುದು.

7 / 8
ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

8 / 8
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ