AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ಕಪಿಲ್ ದೇವ್ ದಾಖಲೆ ಮುರಿದು ಟಾಪ್-3 ಗೆ ಎಂಟ್ರಿಕೊಟ್ಟ ಅಶ್ವಿನ್

India vs Australia 3rd Test: ಬೃಹತ್ ಮೊತ್ತದತ್ತ ನಿರೀಕ್ಷೆಯೊಂದಿಗೆ 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಮುಳುವಾಗಿದ್ದು ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ವೇಗಿ ಉಮೇಶ್ ಯಾದವ್.

TV9 Web
| Edited By: |

Updated on: Mar 02, 2023 | 12:08 PM

Share
ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾವನ್ನು ಕೇವಲ 109 ರನ್​ಗಳಿಗೆ ಆಲೌಟ್ ಮಾಡಿದ್ದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ ಅನ್ನು 197 ರನ್​ಗಳಿಗೆ ಅಂತ್ಯಗೊಳಿಸಿದೆ.

ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯವು ರೋಚಕಘಟ್ಟದತ್ತ ಸಾಗುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾವನ್ನು ಕೇವಲ 109 ರನ್​ಗಳಿಗೆ ಆಲೌಟ್ ಮಾಡಿದ್ದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ ಅನ್ನು 197 ರನ್​ಗಳಿಗೆ ಅಂತ್ಯಗೊಳಿಸಿದೆ.

1 / 9
ಇತ್ತ ಬೃಹತ್ ಮೊತ್ತದತ್ತ ನಿರೀಕ್ಷೆಯೊಂದಿಗೆ 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಮುಳುವಾಗಿದ್ದು ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ವೇಗಿ ಉಮೇಶ್ ಯಾದವ್. ಮೊದಲ ದಿನದಾಟದಲ್ಲಿ 4 ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ 2ನೇ ದಿನದಾಟದ ಆರಂಭದಲ್ಲೇ ಅಶ್ವಿನ್ ಶಾಕ್ ನೀಡಿದ್ದರು.

ಇತ್ತ ಬೃಹತ್ ಮೊತ್ತದತ್ತ ನಿರೀಕ್ಷೆಯೊಂದಿಗೆ 2ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಮುಳುವಾಗಿದ್ದು ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹಾಗೂ ವೇಗಿ ಉಮೇಶ್ ಯಾದವ್. ಮೊದಲ ದಿನದಾಟದಲ್ಲಿ 4 ವಿಕೆಟ್ ಕಳೆದುಕೊಂಡಿದ್ದ ಆಸ್ಟ್ರೇಲಿಯಾಗೆ 2ನೇ ದಿನದಾಟದ ಆರಂಭದಲ್ಲೇ ಅಶ್ವಿನ್ ಶಾಕ್ ನೀಡಿದ್ದರು.

2 / 9
ಉತ್ತಮ ಸ್ಪಿನ್ ಮೋಡಿ ಮಾಡಿದ ಅಶ್ವಿನ್ 44 ರನ್​ಗೆ 3 ವಿಕೆಟ್ ಕಬಳಿಸುವ ಮೂಲಕ ಕಾಂಗರೂ ಪಡೆಯನ್ನು ಬೇಗನೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ವಿಶೇಷ ಎಂದರೆ ಈ ಮೂರು ವಿಕೆಟ್​ಗಳೊಂದಿಗೆ ರವಿ ಅಶ್ವಿನ್ ವಿಶೇಷ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಅದು ಕೂಡ ಕಪಿಲ್ ದೇವ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ಇಲ್ಲಿ ವಿಶೇಷ.

ಉತ್ತಮ ಸ್ಪಿನ್ ಮೋಡಿ ಮಾಡಿದ ಅಶ್ವಿನ್ 44 ರನ್​ಗೆ 3 ವಿಕೆಟ್ ಕಬಳಿಸುವ ಮೂಲಕ ಕಾಂಗರೂ ಪಡೆಯನ್ನು ಬೇಗನೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ವಿಶೇಷ ಎಂದರೆ ಈ ಮೂರು ವಿಕೆಟ್​ಗಳೊಂದಿಗೆ ರವಿ ಅಶ್ವಿನ್ ವಿಶೇಷ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಅದು ಕೂಡ ಕಪಿಲ್ ದೇವ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದೇ ಇಲ್ಲಿ ವಿಶೇಷ.

3 / 9
ಹೌದು, ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಅಶ್ವಿನ್ ಮೂರನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ಸ್ಥಾನದಲ್ಲಿ ಕಪಿಲ್ ದೇವ್ ಇದ್ದರು.

ಹೌದು, ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತ್ಯಧಿಕ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಅಶ್ವಿನ್ ಮೂರನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ಸ್ಥಾನದಲ್ಲಿ ಕಪಿಲ್ ದೇವ್ ಇದ್ದರು.

4 / 9
ಭಾರತದ ಪರ 356 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕಪಿಲ್ ದೇವ್ ಒಟ್ಟು 687 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂಲಕ ಅತ್ಯಧಿಕ ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರು.

ಭಾರತದ ಪರ 356 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕಪಿಲ್ ದೇವ್ ಒಟ್ಟು 687 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ಮೂಲಕ ಅತ್ಯಧಿಕ ವಿಕೆಟ್ ಪಡೆದ ಭಾರತೀಯರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರು.

5 / 9
ಇದೀಗ ರವಿಚಂದ್ರನ್ ಅಶ್ವಿನ್ 269* ನೇ ಅಂತಾರಾಷ್ಟ್ರೀಯ ಪಂದ್ಯದಿಂದ ಒಟ್ಟು 689* ವಿಕೆಟ್​ಗಳನ್ನು ಉರುಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್​ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಇದೀಗ ರವಿಚಂದ್ರನ್ ಅಶ್ವಿನ್ 269* ನೇ ಅಂತಾರಾಷ್ಟ್ರೀಯ ಪಂದ್ಯದಿಂದ ಒಟ್ಟು 689* ವಿಕೆಟ್​ಗಳನ್ನು ಉರುಳಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್​ ಪಡೆದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

6 / 9
ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್​ ಪಡೆದ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ಭಾರತದ ಪರ 401 ಪಂದ್ಯಗಳನ್ನಾಡಿದ್ದ ಕುಂಬ್ಳೆ ಒಟ್ಟು 953 ವಿಕೆಟ್ ಕಬಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ.

ಇನ್ನು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್​ ಪಡೆದ ದಾಖಲೆ ಅನಿಲ್ ಕುಂಬ್ಳೆ ಹೆಸರಿನಲ್ಲಿದೆ. ಭಾರತದ ಪರ 401 ಪಂದ್ಯಗಳನ್ನಾಡಿದ್ದ ಕುಂಬ್ಳೆ ಒಟ್ಟು 953 ವಿಕೆಟ್ ಕಬಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ.

7 / 9
ಹಾಗೆಯೇ ದ್ವಿತೀಯ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು, 365 ಅಂತಾರಾಷ್ಟ್ರೀಯ ಪಂದ್ಯಗಳಿಂದ ಒಟ್ಟು 707 ವಿಕೆಟ್ ಪಡೆದಿದ್ದಾರೆ.

ಹಾಗೆಯೇ ದ್ವಿತೀಯ ಸ್ಥಾನದಲ್ಲಿ ಹರ್ಭಜನ್ ಸಿಂಗ್ ಇದ್ದು, 365 ಅಂತಾರಾಷ್ಟ್ರೀಯ ಪಂದ್ಯಗಳಿಂದ ಒಟ್ಟು 707 ವಿಕೆಟ್ ಪಡೆದಿದ್ದಾರೆ.

8 / 9
ಇದೀಗ ಮೂರನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್​ಗೆ ಹರ್ಭಜನ್ ಸಿಂಗ್ ದಾಖಲೆ ಮುರಿಯಲು ಕೇವಲ 18 ವಿಕೆಟ್​ಗಳ ಅವಶ್ಯಕತೆಯಿದೆ. ಹೀಗಾಗಿ ಮುಂಬರುವ ಟೆಸ್ಟ್​ ಸರಣಿಗಳ ಮೂಲಕ ಅಶ್ವಿನ್ ದ್ವಿತೀಯ ಸ್ಥಾನಕ್ಕೇರುವ ವಿಶ್ವಾಸದಲ್ಲಿದ್ದಾರೆ ಅಶ್ವಿನ್.

ಇದೀಗ ಮೂರನೇ ಸ್ಥಾನದಲ್ಲಿರುವ ರವಿಚಂದ್ರನ್ ಅಶ್ವಿನ್​ಗೆ ಹರ್ಭಜನ್ ಸಿಂಗ್ ದಾಖಲೆ ಮುರಿಯಲು ಕೇವಲ 18 ವಿಕೆಟ್​ಗಳ ಅವಶ್ಯಕತೆಯಿದೆ. ಹೀಗಾಗಿ ಮುಂಬರುವ ಟೆಸ್ಟ್​ ಸರಣಿಗಳ ಮೂಲಕ ಅಶ್ವಿನ್ ದ್ವಿತೀಯ ಸ್ಥಾನಕ್ಕೇರುವ ವಿಶ್ವಾಸದಲ್ಲಿದ್ದಾರೆ ಅಶ್ವಿನ್.

9 / 9
Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್