AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕೊಹ್ಲಿ ಆಯ್ತು, ಈಗ ಜಡೇಜಾ ಮೇಲೆ ಆಸೀಸ್ ಮಾಧ್ಯಮಗಳ ಸುಳ್ಳು ಆರೋಪ

Australia's Media Attacks Jadeja: ಆಸ್ಟ್ರೇಲಿಯಾದ ಮಾಧ್ಯಮಗಳು ರವೀಂದ್ರ ಜಡೇಜಾ ಅವರ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿವೆ. ಪತ್ರಿಕಾಗೋಷ್ಠಿಯಲ್ಲಿ ಹಿಂದಿಯಲ್ಲಿ ಮಾತನಾಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಂಡಿರುವುದಾಗಿ ಆರೋಪಿಸಲಾಗಿದೆ. ಆದರೆ ಭಾರತೀಯ ಮಾಧ್ಯಮಗಳು ಈ ಆರೋಪವನ್ನು ತಳ್ಳಿಹಾಕಿ, ಪತ್ರಿಕಾಗೋಷ್ಠಿಗೆ ಭಾರತೀಯ ಮಾಧ್ಯಮಗಳನ್ನು ಮಾತ್ರ ಆಹ್ವಾನಿಸಲಾಗಿತ್ತು ಎಂದು ಸ್ಪಷ್ಟಪಡಿಸಿವೆ.

ಪೃಥ್ವಿಶಂಕರ
|

Updated on: Dec 21, 2024 | 6:38 PM

Share
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ಗಾಗಿ ಟೀಂ ಇಂಡಿಯಾ ಮೆಲ್ಬೋರ್ನ್ ತಲುಪಿದ್ದು, ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಸಿದ್ಧತೆಯನ್ನೂ ಆರಂಭಿಸಿದೆ. ಆದರೆ ಈ ಮಧ್ಯೆ ಭಾರತದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಗ್ಗೆ  ಆಸ್ಟ್ರೇಲಿಯಾ ಮಾಧ್ಯಮಗಳು ಇಲ್ಲಸಲ್ಲದ ಆರೋಪಗಳನ್ನು ಹೊರಿಸುವ ಮೂಲಕ ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಿವೆ.

ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್‌ಗಾಗಿ ಟೀಂ ಇಂಡಿಯಾ ಮೆಲ್ಬೋರ್ನ್ ತಲುಪಿದ್ದು, ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಸಿದ್ಧತೆಯನ್ನೂ ಆರಂಭಿಸಿದೆ. ಆದರೆ ಈ ಮಧ್ಯೆ ಭಾರತದ ಸ್ಟಾರ್ ಆಲ್ ರೌಂಡರ್ ರವೀಂದ್ರ ಜಡೇಜಾ ಬಗ್ಗೆ ಆಸ್ಟ್ರೇಲಿಯಾ ಮಾಧ್ಯಮಗಳು ಇಲ್ಲಸಲ್ಲದ ಆರೋಪಗಳನ್ನು ಹೊರಿಸುವ ಮೂಲಕ ಅವರ ಆತ್ಮಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಿವೆ.

1 / 6
ವಾಸ್ತವವಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿ ಆರಂಭದಿಂದಲೂ ಟೀಂ ಇಂಡಿಯಾ ಆಟಗಾರರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುತ್ತಲ್ಲೇ ಬಂದಿರುವ ಆಸ್ಟ್ರೇಲಿಯದ ಮಾಧ್ಯಮಗಳು ಇದೀಗ ರವೀಂದ್ರ ಜಡೇಜಾರನ್ನು ಗುರಿಯಾಗಿಸಿಕೊಂಡಿವೆ. ಮೊದಲು ವಿರಾಟ್ ಕೊಹ್ಲಿ ವಿರುದ್ಧ ಆರೋಪ ಹೊರಿಸಿದ್ದ ಈ ಮಾಧ್ಯಮಗಳು ಈಗ ಜಡೇಜಾರನ್ನು ಟಾರ್ಗೆಟ್ ಮಾಡಿವೆ.

ವಾಸ್ತವವಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿ ಆರಂಭದಿಂದಲೂ ಟೀಂ ಇಂಡಿಯಾ ಆಟಗಾರರ ವಿರುದ್ಧ ಸುಳ್ಳು ಆರೋಪಗಳನ್ನು ಹೊರಿಸುತ್ತಲ್ಲೇ ಬಂದಿರುವ ಆಸ್ಟ್ರೇಲಿಯದ ಮಾಧ್ಯಮಗಳು ಇದೀಗ ರವೀಂದ್ರ ಜಡೇಜಾರನ್ನು ಗುರಿಯಾಗಿಸಿಕೊಂಡಿವೆ. ಮೊದಲು ವಿರಾಟ್ ಕೊಹ್ಲಿ ವಿರುದ್ಧ ಆರೋಪ ಹೊರಿಸಿದ್ದ ಈ ಮಾಧ್ಯಮಗಳು ಈಗ ಜಡೇಜಾರನ್ನು ಟಾರ್ಗೆಟ್ ಮಾಡಿವೆ.

2 / 6
ಡಿಸೆಂಬರ್ 26 ರಿಂದ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್​ ಪಂದ್ಯಕ್ಕೂ ಮುನ್ನ ರವೀಂದ್ರ ಜಡೇಜಾ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆಸೀಸ್ ಮಾಧ್ಯಮ ಚಾನೆಲ್ 7 ಪ್ರಕಾರ, ಈ ಪತ್ರಿಕಾಗೋಷ್ಠಿಯಲ್ಲಿ ಆಸ್ಟ್ರೇಲಿಯಾದ ಪತ್ರಕರ್ತರು ಕೇಳಿದ ಯಾವುದೇ ಪ್ರಶ್ನೆಗೆ ಜಡೇಜಾ ಉತ್ತರಿಸಿಲ್ಲ. ಅಲ್ಲದೆ ಜಡೇಜಾ ಅವರು ಭಾರತೀಯ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಹಿಂದಿಯಲ್ಲಿ ಉತ್ತರಿಸಿದ್ದಾರೆ ಎಂದು ಆರೋಪ ಹೊರಿಸಿವೆ.

ಡಿಸೆಂಬರ್ 26 ರಿಂದ ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್​ ಪಂದ್ಯಕ್ಕೂ ಮುನ್ನ ರವೀಂದ್ರ ಜಡೇಜಾ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು. ಆಸೀಸ್ ಮಾಧ್ಯಮ ಚಾನೆಲ್ 7 ಪ್ರಕಾರ, ಈ ಪತ್ರಿಕಾಗೋಷ್ಠಿಯಲ್ಲಿ ಆಸ್ಟ್ರೇಲಿಯಾದ ಪತ್ರಕರ್ತರು ಕೇಳಿದ ಯಾವುದೇ ಪ್ರಶ್ನೆಗೆ ಜಡೇಜಾ ಉತ್ತರಿಸಿಲ್ಲ. ಅಲ್ಲದೆ ಜಡೇಜಾ ಅವರು ಭಾರತೀಯ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಹಿಂದಿಯಲ್ಲಿ ಉತ್ತರಿಸಿದ್ದಾರೆ ಎಂದು ಆರೋಪ ಹೊರಿಸಿವೆ.

3 / 6
ಆದರೆ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಪತ್ರಕರ್ತರು ಆಸೀಸ್ ಮಾಧ್ಯಮಗಳ ಆರೋಪವನ್ನು ತಿರಸ್ಕರಿಸಿದ್ದಾರೆ. ಈ ಪತ್ರಿಕಾಗೋಷ್ಠಿಗೆ ಭಾರತೀಯ ಮಾಧ್ಯಮಗಳನ್ನು ಮಾತ್ರ ಆಹ್ವಾನಿಸಲಾಗಿತ್ತು ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಷ್ಟೇ ಅಲ್ಲ, ಜಡೇಜಾ ಸಾಮಾನ್ಯವಾಗಿ ಹಿಂದಿಯಲ್ಲಿ ಆರಾಮದಾಯಕವಾಗಿ ಉತ್ತರಿಸುತ್ತಾರೆ. ಇದರಿಂದಾಗಿ ಭಾರತೀಯ ಮಾಧ್ಯಮಗಳು ಅವರಿಗೆ ಹಿಂದಿಯಲ್ಲಿ ಮಾತ್ರ ಪ್ರಶ್ನೆಗಳನ್ನು ಕೇಳಿದ್ದವು. ಅಂತಹ ಪರಿಸ್ಥಿತಿಯಲ್ಲಿ ಜಡೇಜಾ ಕೂಡ ಹಿಂದಿಯಲ್ಲಿ ಉತ್ತರಿಸಿದರು ಎಂದಿದ್ದಾರೆ.

ಆದರೆ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಪತ್ರಕರ್ತರು ಆಸೀಸ್ ಮಾಧ್ಯಮಗಳ ಆರೋಪವನ್ನು ತಿರಸ್ಕರಿಸಿದ್ದಾರೆ. ಈ ಪತ್ರಿಕಾಗೋಷ್ಠಿಗೆ ಭಾರತೀಯ ಮಾಧ್ಯಮಗಳನ್ನು ಮಾತ್ರ ಆಹ್ವಾನಿಸಲಾಗಿತ್ತು ಎಂದು ಸ್ಪಷ್ಟೀಕರಣ ನೀಡಿದ್ದಾರೆ. ಅಷ್ಟೇ ಅಲ್ಲ, ಜಡೇಜಾ ಸಾಮಾನ್ಯವಾಗಿ ಹಿಂದಿಯಲ್ಲಿ ಆರಾಮದಾಯಕವಾಗಿ ಉತ್ತರಿಸುತ್ತಾರೆ. ಇದರಿಂದಾಗಿ ಭಾರತೀಯ ಮಾಧ್ಯಮಗಳು ಅವರಿಗೆ ಹಿಂದಿಯಲ್ಲಿ ಮಾತ್ರ ಪ್ರಶ್ನೆಗಳನ್ನು ಕೇಳಿದ್ದವು. ಅಂತಹ ಪರಿಸ್ಥಿತಿಯಲ್ಲಿ ಜಡೇಜಾ ಕೂಡ ಹಿಂದಿಯಲ್ಲಿ ಉತ್ತರಿಸಿದರು ಎಂದಿದ್ದಾರೆ.

4 / 6
ವಾಸ್ತವವಾಗಿ ಜಡೇಜಾಗೂ ಮುನ್ನ ಆಸೀಸ್ ಮಾಧ್ಯಮಳು ಕೊಹ್ಲಿ ವಿರುದ್ಧ ಹರಿಹಾಯ್ದಿದ್ದವು. ವಿರಾಟ್ ಕೊಹ್ಲಿ ಮಹಿಳಾ ಪತ್ರಕರ್ತೆಯನ್ನೇ ನಿಂಧಿಸಿದ್ದಾರೆ ಎಂದು ಆರೋಪಿಸಿದ್ದವು. ಅಷ್ಟಕ್ಕೂ ನಡೆದಿದ್ದೇನೆಂದರೆ,, ನಾಲ್ಕನೇ ಟೆಸ್ಟ್​ಗಾಗಿ ಕೊಹ್ಲಿ ಮೆಲ್ಬೋರ್ನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಈ ವೇಳೆ ಆಸೀಸ್ ಮಾಧ್ಯಮಗಳು ಕೊಹ್ಲಿಯ ಅನುಮತಿಯಿಲ್ಲದೆ ಅವರ ಮಕ್ಕಳ ಫೋಟೋ ತೆಗೆಯಲು ಮುಂದಾಗಿದ್ದವು.

ವಾಸ್ತವವಾಗಿ ಜಡೇಜಾಗೂ ಮುನ್ನ ಆಸೀಸ್ ಮಾಧ್ಯಮಳು ಕೊಹ್ಲಿ ವಿರುದ್ಧ ಹರಿಹಾಯ್ದಿದ್ದವು. ವಿರಾಟ್ ಕೊಹ್ಲಿ ಮಹಿಳಾ ಪತ್ರಕರ್ತೆಯನ್ನೇ ನಿಂಧಿಸಿದ್ದಾರೆ ಎಂದು ಆರೋಪಿಸಿದ್ದವು. ಅಷ್ಟಕ್ಕೂ ನಡೆದಿದ್ದೇನೆಂದರೆ,, ನಾಲ್ಕನೇ ಟೆಸ್ಟ್​ಗಾಗಿ ಕೊಹ್ಲಿ ಮೆಲ್ಬೋರ್ನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಈ ವೇಳೆ ಆಸೀಸ್ ಮಾಧ್ಯಮಗಳು ಕೊಹ್ಲಿಯ ಅನುಮತಿಯಿಲ್ಲದೆ ಅವರ ಮಕ್ಕಳ ಫೋಟೋ ತೆಗೆಯಲು ಮುಂದಾಗಿದ್ದವು.

5 / 6
ಇದನ್ನು ಗಮನಿಸಿದ್ದ ಕೊಹ್ಲಿ ತಮ್ಮ ಮಕ್ಕಳ ಚಿತ್ರಗಳನ್ನು ಕ್ಲಿಕ್ಕಿಸದಂತೆ ಆಸೀಸ್ ಮಾಧ್ಯಮಗಳನ್ನು ತಡೆದರು. ಹಾಗೆಯೇ ನನ್ನನ್ನು ಕೇಳದೆ ನೀವು ನನ್ನ ಮಕ್ಕಳ ಫೋಟೋಗಳನ್ನು ತೆಗೆದುಕೊಳ್ಳುವಂತಿಲ್ಲ. ನಮ್ಮ ಖಾಸಗೀತನಕ್ಕೆ ಗೌರವ ಕೊಡಿ ಎಂದು ಮನವಿ ಮಾಡಿದ್ದರು. ಆದರೆ, ಆಸೀಸ್ ಮಾಧ್ಯಮಗಳು ಮಾತ್ರ ಕೊಹ್ಲಿ ಆರೋಪವನ್ನು ತಳ್ಳಿ ಹಾಕಿದ್ದವು. ನಾವು ಕೊಹ್ಲಿ ಮಕ್ಕಳ ಫೋಟೋವನ್ನು ತೆಗೆಯಲು ಪ್ರಯತ್ನಿಸಲಿಲ್ಲ ಎಂದಿದ್ದವು.

ಇದನ್ನು ಗಮನಿಸಿದ್ದ ಕೊಹ್ಲಿ ತಮ್ಮ ಮಕ್ಕಳ ಚಿತ್ರಗಳನ್ನು ಕ್ಲಿಕ್ಕಿಸದಂತೆ ಆಸೀಸ್ ಮಾಧ್ಯಮಗಳನ್ನು ತಡೆದರು. ಹಾಗೆಯೇ ನನ್ನನ್ನು ಕೇಳದೆ ನೀವು ನನ್ನ ಮಕ್ಕಳ ಫೋಟೋಗಳನ್ನು ತೆಗೆದುಕೊಳ್ಳುವಂತಿಲ್ಲ. ನಮ್ಮ ಖಾಸಗೀತನಕ್ಕೆ ಗೌರವ ಕೊಡಿ ಎಂದು ಮನವಿ ಮಾಡಿದ್ದರು. ಆದರೆ, ಆಸೀಸ್ ಮಾಧ್ಯಮಗಳು ಮಾತ್ರ ಕೊಹ್ಲಿ ಆರೋಪವನ್ನು ತಳ್ಳಿ ಹಾಕಿದ್ದವು. ನಾವು ಕೊಹ್ಲಿ ಮಕ್ಕಳ ಫೋಟೋವನ್ನು ತೆಗೆಯಲು ಪ್ರಯತ್ನಿಸಲಿಲ್ಲ ಎಂದಿದ್ದವು.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು