Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Australia 1st: ಮೊದಲ ಟೆಸ್ಟ್​ಗೂ ಮುನ್ನ ಆಸ್ಟ್ರೇಲಿಯಾಗೆ ಡಬಲ್ ಶಾಕ್

Australia Playing XI 1st Test: ತಂಡದಲ್ಲಿ ಹೊಸ ಆಟಗಾರರಿದ್ದು, ಇವರ್ಯಾರು ಭಾರತೀಯ ಪಿಚ್​ನಲ್ಲಿ ಆಡಿದ ಅನುಭವನ್ನು ಹೊಂದಿಲ್ಲ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Feb 07, 2023 | 4:12 PM

ಭಾರತ-ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ನಾಲ್ಕು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

ಭಾರತ-ಆಸ್ಟ್ರೇಲಿಯಾ ನಡುವಣ ಪ್ರತಿಷ್ಠಿತ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯು ಫೆಬ್ರವರಿ 9 ರಿಂದ ಶುರುವಾಗಲಿದೆ. ನಾಲ್ಕು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯಕ್ಕೆ ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಆದರೆ ಈ ಪಂದ್ಯಕ್ಕೆ ಆಸ್ಟ್ರೇಲಿಯಾ ತಂಡದ ಇಬ್ಬರು ಪ್ರಮುಖ ಆಟಗಾರರು ಅಲಭ್ಯರಾಗುವುದು ಖಚಿತವಾಗಿದೆ.

1 / 6
ಹೌದು, ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಯುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಅಲಭ್ಯರಾಗಲಿದ್ದಾರೆ ಎಂದು ಸ್ಟೀವ್ ಸ್ಮಿತ್ ತಿಳಿಸಿದ್ದಾರೆ.

ಹೌದು, ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಯುವ ಆಲ್​ರೌಂಡರ್ ಕ್ಯಾಮರೋನ್ ಗ್ರೀನ್ ಅಲಭ್ಯರಾಗಲಿದ್ದಾರೆ ಎಂದು ಸ್ಟೀವ್ ಸ್ಮಿತ್ ತಿಳಿಸಿದ್ದಾರೆ.

2 / 6
ಇತ್ತೀಚೆಗೆ ಸೌತ್ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್​ ಅವರ ಬಲ ತೋರು ಬೆರಳಿಗೆ ಗಾಯವಾಗಿತ್ತು. ಇದಾಗ್ಯೂ ಅವರನ್ನು ಭಾರತದ ವಿರುದ್ಧ ಟೆಸ್ಟ್​ ಸರಣಿಗೆ ಆಯ್ಕೆ ಮಾಡಿದ್ದರು. ಆದರೆ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರದ ಕಾರಣ ಮೊದಲ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇತ್ತೀಚೆಗೆ ಸೌತ್ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್​ ಅವರ ಬಲ ತೋರು ಬೆರಳಿಗೆ ಗಾಯವಾಗಿತ್ತು. ಇದಾಗ್ಯೂ ಅವರನ್ನು ಭಾರತದ ವಿರುದ್ಧ ಟೆಸ್ಟ್​ ಸರಣಿಗೆ ಆಯ್ಕೆ ಮಾಡಿದ್ದರು. ಆದರೆ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರದ ಕಾರಣ ಮೊದಲ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

3 / 6
ಮತ್ತೊಂದೆಡೆ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ನಾಗಪುರ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದಿಲ್ಲ. ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಹ್ಯಾಝಲ್​ವುಡ್​ ಅವರ ಎಡಗಾಲಿಗೆ ಗಾಯವಾಗಿತ್ತು. ಈ ಗಾಯವು ಇನ್ನೂ ಕೂಡ ಸಂಪೂರ್ಣವಾಗಿ ಗುಣವಾಗಿರದ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಮತ್ತೊಂದೆಡೆ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ ಕೂಡ ನಾಗಪುರ ಟೆಸ್ಟ್​ನಲ್ಲಿ ಕಣಕ್ಕಿಳಿಯುವುದಿಲ್ಲ. ಕಳೆದ ತಿಂಗಳು ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದ ವೇಳೆ ಹ್ಯಾಝಲ್​ವುಡ್​ ಅವರ ಎಡಗಾಲಿಗೆ ಗಾಯವಾಗಿತ್ತು. ಈ ಗಾಯವು ಇನ್ನೂ ಕೂಡ ಸಂಪೂರ್ಣವಾಗಿ ಗುಣವಾಗಿರದ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

4 / 6
ಇತ್ತ ಪ್ರಮುಖ ಆಲ್​ರೌಂಡರ್ ಗ್ರೀನ್ ಹಾಗೂ ಮುಖ್ಯ ವೇಗಿ ಹ್ಯಾಝಲ್​ವುಡ್ ಹೊರಗುಳಿಯುತ್ತಿರುವುದು ಆಸೀಸ್ ತಂಡದ ನಾಯಕನ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ತಂಡದಲ್ಲಿ ಹೊಸ ಆಟಗಾರರಿದ್ದು, ಇವರ್ಯಾರು ಭಾರತೀಯ ಪಿಚ್​ನಲ್ಲಿ ಆಡಿದ ಅನುಭವನ್ನು ಹೊಂದಿಲ್ಲ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

ಇತ್ತ ಪ್ರಮುಖ ಆಲ್​ರೌಂಡರ್ ಗ್ರೀನ್ ಹಾಗೂ ಮುಖ್ಯ ವೇಗಿ ಹ್ಯಾಝಲ್​ವುಡ್ ಹೊರಗುಳಿಯುತ್ತಿರುವುದು ಆಸೀಸ್ ತಂಡದ ನಾಯಕನ ಚಿಂತೆಯನ್ನು ಹೆಚ್ಚಿಸಿದೆ. ಏಕೆಂದರೆ ತಂಡದಲ್ಲಿ ಹೊಸ ಆಟಗಾರರಿದ್ದು, ಇವರ್ಯಾರು ಭಾರತೀಯ ಪಿಚ್​ನಲ್ಲಿ ಆಡಿದ ಅನುಭವನ್ನು ಹೊಂದಿಲ್ಲ. ಇದುವೇ ಈಗ ಆಸ್ಟ್ರೇಲಿಯಾ ತಂಡದ ಚಿಂತೆಗೆ ಕಾರಣವಾಗಿದೆ.

5 / 6
ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

ಆಸ್ಟ್ರೇಲಿಯಾ ಟೆಸ್ಟ್ ತಂಡ ಹೀಗಿದೆ: ಪ್ಯಾಟ್ ಕಮಿನ್ಸ್ (ನಾಯಕ), ಆಷ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ , ಕ್ಯಾಮರೋನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್ , ಜೋಶ್ ಹ್ಯಾಝಲ್‌ವುಡ್, ಟ್ರಾವಿಸ್ ಹೆಡ್, ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ನಾಥನ್ ಲಿಯಾನ್ , ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಥ್ಯೂ ರೆನ್‌ಶಾಮಿ , ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ವೆಪ್ಸನ್, ಡೇವಿಡ್ ವಾರ್ನರ್.

6 / 6

Published On - 4:11 pm, Tue, 7 February 23

Follow us
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ