ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನಕ್ಕೆ ಮಳೆಯ ಕಾಟ?: ರಾಜ್ಕೋಟ್ ಹವಾಮಾನ ಹೀಗಿದೆ

Updated on: Sep 26, 2023 | 7:58 AM

Rajkot Weather Forecast on September 27: ಇಂದೋರ್​ನಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಆಸ್ಟ್ರೇಲಿಯಾ ಟಾರ್ಗೆಟ್ ಬೆನ್ನಟ್ಟುವ ನಡುವೆ ಮಳೆ ಬಂದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಹಾಗಾದರೆ, ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇದೆಯೇ?, ರಾಜ್ಕೋಟ್ ಹವಾಮಾನ ಹೇಗಿದೆ ನೋಡೋಣ.

1 / 6
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸೋಮವಾರ ಸಂಜೆ ರಾಜ್ಕೋಟ್​ಗೆ ತಲುಪಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಸೆಪ್ಟೆಂಬರ್ 27 ರಂದು ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಸೋಮವಾರ ಸಂಜೆ ರಾಜ್ಕೋಟ್​ಗೆ ತಲುಪಿದ್ದಾರೆ.

2 / 6
ವಿಶ್ರಾಂತಿಯಲ್ಲಿದ್ದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್ ಹಾಗೂ ಇನ್ನೂ ಕೆಲ ಆಟಗಾರರು ಮೂರನೇ ಪಂದ್ಯದಲ್ಲಿ ಆಡಲಿದ್ದು, ತಂಡ ಸೇರಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ ಇಂದು ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿ ಉಳಿದೆಲ್ಲ ಪ್ಲೇಯರ್ಸ್ ರಾಜ್ಕೋಟ್​ಗೆ ಬಂದಿದ್ದಾರೆ. ಶುಭ್​ಮನ್ ಗಿಲ್ ಹಾಗೂ ಶಾರ್ದೂಲ್ ಠಾಕೂರ್​ಗೆ ರೆಸ್ಟ್ ನೀಡಲಾಗಿದೆ.

ವಿಶ್ರಾಂತಿಯಲ್ಲಿದ್ದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್ ಹಾಗೂ ಇನ್ನೂ ಕೆಲ ಆಟಗಾರರು ಮೂರನೇ ಪಂದ್ಯದಲ್ಲಿ ಆಡಲಿದ್ದು, ತಂಡ ಸೇರಿಕೊಂಡಿದ್ದಾರೆ. ನಾಯಕ ರೋಹಿತ್ ಶರ್ಮಾ ಇಂದು ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ. ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿ ಉಳಿದೆಲ್ಲ ಪ್ಲೇಯರ್ಸ್ ರಾಜ್ಕೋಟ್​ಗೆ ಬಂದಿದ್ದಾರೆ. ಶುಭ್​ಮನ್ ಗಿಲ್ ಹಾಗೂ ಶಾರ್ದೂಲ್ ಠಾಕೂರ್​ಗೆ ರೆಸ್ಟ್ ನೀಡಲಾಗಿದೆ.

3 / 6
ಇಂದೋರ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಆಸ್ಟ್ರೇಲಿಯಾ ಟಾರ್ಗೆಟ್ ಬೆನ್ನಟ್ಟುವ ನಡುವೆ ಮಳೆ ಬಂದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಹಾಗಾದರೆ, ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇದೆಯೇ?, ರಾಜ್ಕೋಟ್ ಹವಾಮಾನ ಹೇಗಿದೆ ನೋಡೋಣ.

ಇಂದೋರ್​ನಲ್ಲಿ ನಡೆದ ಎರಡನೇ ಏಕದಿನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಿತ್ತು. ಆಸ್ಟ್ರೇಲಿಯಾ ಟಾರ್ಗೆಟ್ ಬೆನ್ನಟ್ಟುವ ನಡುವೆ ಮಳೆ ಬಂದ ಕಾರಣ ಡಕ್ವರ್ತ್ ಲೂಯಿಸ್ ನಿಯಮವನ್ನು ಅಳವಡಿಸಲಾಯಿತು. ಹಾಗಾದರೆ, ಇಂಡೋ-ಆಸೀಸ್ ತೃತೀಯ ಏಕದಿನಕ್ಕೆ ವರುಣನ ಕಾಟ ಇದೆಯೇ?, ರಾಜ್ಕೋಟ್ ಹವಾಮಾನ ಹೇಗಿದೆ ನೋಡೋಣ.

4 / 6
ಬುಧವಾರ (ಸೆಪ್ಟೆಂಬರ್ 27) ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮಳೆ ಬೀಳುವ ನಿರೀಕ್ಷೆ ಇದ್ದು, ಪಂದ್ಯದ ದಿನ ಮಳೆಯ ಸಾಧ್ಯತೆ ಕಮ್ಮಿ. ಗರಿಷ್ಠ ತಾಪಮಾನವು 34 C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ, ಆದರೆ ದಿನದ ಆಟದ ಕೊನೆಯಲ್ಲಿ 25 C ಗೆ ಕಡಿಮೆಯಾಗುತ್ತದೆ.

ಬುಧವಾರ (ಸೆಪ್ಟೆಂಬರ್ 27) ಹೆಚ್ಚಾಗಿ ಮೋಡ ಕವಿದ ವಾತಾವರಣ ಇರಲಿದೆ. ಇಂದು ಮಳೆ ಬೀಳುವ ನಿರೀಕ್ಷೆ ಇದ್ದು, ಪಂದ್ಯದ ದಿನ ಮಳೆಯ ಸಾಧ್ಯತೆ ಕಮ್ಮಿ. ಗರಿಷ್ಠ ತಾಪಮಾನವು 34 C ಆಗಿರಬಹುದು ಎಂದು ನಿರೀಕ್ಷಿಸಲಾಗಿದೆ, ಆದರೆ ದಿನದ ಆಟದ ಕೊನೆಯಲ್ಲಿ 25 C ಗೆ ಕಡಿಮೆಯಾಗುತ್ತದೆ.

5 / 6
ರಾಜ್ಕೋಟ್​ನಲ್ಲಿ ಭಾನುವಾರ (ಸೆಪ್ಟೆಂಬರ್ 24) ದಿಂದ ಮಂಗಳವಾರ (ಸೆಪ್ಟೆಂಬರ್ 26) ವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಆದರೆ ಪಂದ್ಯದ ದಿನ - ಬುಧವಾರ (ಸೆಪ್ಟೆಂಬರ್ 27) ಮಳೆ ಬೀಳುವ ಸಾಧ್ಯತೆ ಕೇವಲ 6 ಪ್ರತಿಶತದಷ್ಟು ಮಾತ್ರ. ಆದ್ದರಿಂದ, ಭಾರತ-ಆಸ್ಟ್ರೇಲಿಯಾ 3ನೇ ಏಕದಿನಕ್ಕೆ ಮಳೆಯ ಕಾಟ ಇರುವುದಿಲ್ಲ.

ರಾಜ್ಕೋಟ್​ನಲ್ಲಿ ಭಾನುವಾರ (ಸೆಪ್ಟೆಂಬರ್ 24) ದಿಂದ ಮಂಗಳವಾರ (ಸೆಪ್ಟೆಂಬರ್ 26) ವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿತ್ತು. ಆದರೆ ಪಂದ್ಯದ ದಿನ - ಬುಧವಾರ (ಸೆಪ್ಟೆಂಬರ್ 27) ಮಳೆ ಬೀಳುವ ಸಾಧ್ಯತೆ ಕೇವಲ 6 ಪ್ರತಿಶತದಷ್ಟು ಮಾತ್ರ. ಆದ್ದರಿಂದ, ಭಾರತ-ಆಸ್ಟ್ರೇಲಿಯಾ 3ನೇ ಏಕದಿನಕ್ಕೆ ಮಳೆಯ ಕಾಟ ಇರುವುದಿಲ್ಲ.

6 / 6
ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬಗ್ಗೆ ನೋಡುವುದಾದರೆ, ಭಾರತದಲ್ಲಿನ ಹೆಚ್ಚಿನ ಮೇಲ್ಮೈಗಳಂತೆ, SCA ಸ್ಟೇಡಿಯಂನಲ್ಲಿನ ವಿಕೆಟ್​ಗಳು ಸಹ ಬ್ಯಾಟಿಂಗ್ ಸ್ನೇಹಿ ಆಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿ ದೊಡ್ಡ ಸ್ಕೋರ್ ಆಗುತ್ತದೆ. ಇಲ್ಲಿಯವರೆಗೆ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಎಲ್ಲ ಪಂದ್ಯಗಳನ್ನು ಗೆದ್ದಿದೆ.

ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಬಗ್ಗೆ ನೋಡುವುದಾದರೆ, ಭಾರತದಲ್ಲಿನ ಹೆಚ್ಚಿನ ಮೇಲ್ಮೈಗಳಂತೆ, SCA ಸ್ಟೇಡಿಯಂನಲ್ಲಿನ ವಿಕೆಟ್​ಗಳು ಸಹ ಬ್ಯಾಟಿಂಗ್ ಸ್ನೇಹಿ ಆಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಇಲ್ಲಿ ದೊಡ್ಡ ಸ್ಕೋರ್ ಆಗುತ್ತದೆ. ಇಲ್ಲಿಯವರೆಗೆ ನಡೆದ ಮೂರು ಏಕದಿನ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಎಲ್ಲ ಪಂದ್ಯಗಳನ್ನು ಗೆದ್ದಿದೆ.

Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us