AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Test: ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಅನುಮಾನ: ಬಿಸಿಸಿಐಗೆ ಶುರುವಾಯಿತು ಹೊಸ ತಲೆನೋವು

India vs Australia Test: ಭಾರತ ಆಸ್ಟ್ರೇಲಿಯಾ ತೃತೀಯ ಟೆಸ್ಟ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಮಾರ್ಚ್ 1 ರಿಂದ 5ರ ವರೆಗೆ ಧರ್ಮಶಾಲಾದಲ್ಲಿ ಈ ಟೆಸ್ಟ್ ಶುರುವಾಗುವುದು ಕಷ್ಟವಂತೆ.

TV9 Web
| Edited By: |

Updated on:Feb 11, 2023 | 10:32 AM

Share
ಭಾರತ ಕ್ರಿಕೆಟ್ ತಂಡ ಸದ್ಯ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ - ಗವಾಸ್ಕರ್ ಟ್ರೋಫಿಯ ಪ್ರಥಮ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ.

ಭಾರತ ಕ್ರಿಕೆಟ್ ತಂಡ ಸದ್ಯ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್ - ಗವಾಸ್ಕರ್ ಟ್ರೋಫಿಯ ಪ್ರಥಮ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ.

1 / 7
ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿದೆ. ಮೊದಲ ಟೆಸ್ಟ್ ಬಳಿಕ ಎರಡನೇ ಪಂದ್ಯವನ್ನು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಬಳಿಕ ಮಾರ್ಚ್ 1 ರಿಂದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ಮೂರನೇ ಟೆಸ್ಟ್ ಶುರುವಾಗಲಿದೆ.

ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಒಟ್ಟು ನಾಲ್ಕು ಪಂದ್ಯಗಳು ನಡೆಯಲಿದೆ. ಮೊದಲ ಟೆಸ್ಟ್ ಬಳಿಕ ಎರಡನೇ ಪಂದ್ಯವನ್ನು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಆಯೋಜಿಸಲಾಗಿದೆ. ಬಳಿಕ ಮಾರ್ಚ್ 1 ರಿಂದ ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ಮೂರನೇ ಟೆಸ್ಟ್ ಶುರುವಾಗಲಿದೆ.

2 / 7
ಆದರೆ, ಈ ತೃತೀಯ ಟೆಸ್ಟ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಮಾರ್ಚ್ 1 ರಿಂದ 5ರ ವರೆಗೆ ಧರ್ಮಶಾಲಾದಲ್ಲಿ ಈ ಟೆಸ್ಟ್ ಶುರುವಾಗುವುದು ಕಷ್ಟವಂತೆ. ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಅನ್ನು ಇತ್ತೀಚೆಗಷ್ಟೆ ನವೀಕರಣಗೊಳಿಸಲಾಗಿತ್ತು. ಆದರೆ, ಪಿಚ್ ಸಂಪೂರ್ಣ ಸಜ್ಜಾದ ಕಾರಣ ಅಂತರರಾಷ್ಟ್ರೀಯ ಪಂದ್ಯ ಆಡಲು ಯೋಗ್ಯವಾಗಿಲ್ಲ ಎಂದು ಹೇಳಲಾಗಿದೆ.

ಆದರೆ, ಈ ತೃತೀಯ ಟೆಸ್ಟ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಮಾರ್ಚ್ 1 ರಿಂದ 5ರ ವರೆಗೆ ಧರ್ಮಶಾಲಾದಲ್ಲಿ ಈ ಟೆಸ್ಟ್ ಶುರುವಾಗುವುದು ಕಷ್ಟವಂತೆ. ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನ ಪಿಚ್ ಅನ್ನು ಇತ್ತೀಚೆಗಷ್ಟೆ ನವೀಕರಣಗೊಳಿಸಲಾಗಿತ್ತು. ಆದರೆ, ಪಿಚ್ ಸಂಪೂರ್ಣ ಸಜ್ಜಾದ ಕಾರಣ ಅಂತರರಾಷ್ಟ್ರೀಯ ಪಂದ್ಯ ಆಡಲು ಯೋಗ್ಯವಾಗಿಲ್ಲ ಎಂದು ಹೇಳಲಾಗಿದೆ.

3 / 7
ಬಿಸಿಸಿಐ ಪಿಚ್ ಪರಿಶೀಲನೆ ನಡೆಸುವ ವಿಶೇಷ ಅಧಿಕಾರಿಗಳನ್ನು ಹೊಂದಿದೆ. ಇವರು ಇನ್ನೆರಡು ದಿನಗಳಲ್ಲಿ ಧರ್ಮಶಾಲಗೆ ತೆರಳಿ ಪಿಚ್ ಅನ್ನು ತಪಾಸಣೆ ನಡೆಸಿ ವರದಿ ಸಲ್ಲಿಸಲಿದ್ದಾರೆ. ಪಿಚ್ ಇನ್ನೂ ಸಂಪೂರ್ಣ ಸಿದ್ಧವಾಗಿಲ್ಲ ಎಂದಾದರೆ ಮೂರನೇ ಟೆಸ್ಟ್ ಸ್ಥಳಾಂತರಗೊಳ್ಳಲಿದೆ.

ಬಿಸಿಸಿಐ ಪಿಚ್ ಪರಿಶೀಲನೆ ನಡೆಸುವ ವಿಶೇಷ ಅಧಿಕಾರಿಗಳನ್ನು ಹೊಂದಿದೆ. ಇವರು ಇನ್ನೆರಡು ದಿನಗಳಲ್ಲಿ ಧರ್ಮಶಾಲಗೆ ತೆರಳಿ ಪಿಚ್ ಅನ್ನು ತಪಾಸಣೆ ನಡೆಸಿ ವರದಿ ಸಲ್ಲಿಸಲಿದ್ದಾರೆ. ಪಿಚ್ ಇನ್ನೂ ಸಂಪೂರ್ಣ ಸಿದ್ಧವಾಗಿಲ್ಲ ಎಂದಾದರೆ ಮೂರನೇ ಟೆಸ್ಟ್ ಸ್ಥಳಾಂತರಗೊಳ್ಳಲಿದೆ.

4 / 7
ಧರ್ಮಶಾಲ ಪಿಚ್ ಅನ್ನು ಇತ್ತೀಚೆಗಷ್ಟೆ ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಲಾಗಿತ್ತು. ಆದರೆ, ನಿರಂತರ ಮಳೆ ಸುರಿಯುತ್ತಿರುವ ಕಾರಣ ಕಾಮಗಾರಿ ವಿಳಂಬವಾಗಿದೆ. ಎಲ್ಲಾದರು ಪಿಚ್ ಸಿದ್ಧವಾಗಿ ಇಂಡೋ-ಆಸೀಸ್ ತೃತೀಯ ಟೆಸ್ಟ್ ನಡೆದರೂ ಪಂದ್ಯಕ್ಕ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.

ಧರ್ಮಶಾಲ ಪಿಚ್ ಅನ್ನು ಇತ್ತೀಚೆಗಷ್ಟೆ ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಲಾಗಿತ್ತು. ಆದರೆ, ನಿರಂತರ ಮಳೆ ಸುರಿಯುತ್ತಿರುವ ಕಾರಣ ಕಾಮಗಾರಿ ವಿಳಂಬವಾಗಿದೆ. ಎಲ್ಲಾದರು ಪಿಚ್ ಸಿದ್ಧವಾಗಿ ಇಂಡೋ-ಆಸೀಸ್ ತೃತೀಯ ಟೆಸ್ಟ್ ನಡೆದರೂ ಪಂದ್ಯಕ್ಕ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ.

5 / 7
ಪಿಚ್ ಸರಿಪಡಿಸುವ ಕೆಲಸ ನಡೆಯುತ್ತಿರುವುದರಿಂದ ಇಲ್ಲಿ ರಣಜಿ ಸೇರಿದಂತೆ ಯಾವುದೇ ಪಂದ್ಯವನ್ನು ಆಯೋಜಿಸಿಲ್ಲ. ಧರ್ಮಶಾಲ ಬಿಟ್ಟರೆ ಭಾರತ-ಆಸ್ಟ್ರೇಲಿಯಾ ಪಂದ್ಯ ವಿಶಾಖಪಟ್ಟಣಂನ ವೈಜಾಗ್​ನಲ್ಲಿ ಆಯೋಜಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಪಿಚ್ ಸರಿಪಡಿಸುವ ಕೆಲಸ ನಡೆಯುತ್ತಿರುವುದರಿಂದ ಇಲ್ಲಿ ರಣಜಿ ಸೇರಿದಂತೆ ಯಾವುದೇ ಪಂದ್ಯವನ್ನು ಆಯೋಜಿಸಿಲ್ಲ. ಧರ್ಮಶಾಲ ಬಿಟ್ಟರೆ ಭಾರತ-ಆಸ್ಟ್ರೇಲಿಯಾ ಪಂದ್ಯ ವಿಶಾಖಪಟ್ಟಣಂನ ವೈಜಾಗ್​ನಲ್ಲಿ ಆಯೋಜಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

6 / 7
ಧರ್ಮಶಾಲಾದಲ್ಲಿ 2017 ರಲ್ಲಿ ಕೊನೆಯ ಟೆಸ್ಟ್ ಪಂದ್ಯ ನಡೆದಿತ್ತು. ಭಾರತ- ಆಸ್ಟ್ರೇಲಿಯಾ ನಡುವೆ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳ ಜಯ ಸಾಧಿಸಿತ್ತು. ವಿರಾಟ್ ಕೊಹ್ಲಿಗೆ ಇಂಜುರಿ ಆಗಿದ್ದ ಕಾರಣ ಅಜಿಂಕ್ಯಾ ರಹಾನೆ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದರು. ಜಡೇಜಾ ಆಲ್ರೌಂಡರ್ ಪ್ರದರ್ಶನ ತೋರಿದ್ದರು.

ಧರ್ಮಶಾಲಾದಲ್ಲಿ 2017 ರಲ್ಲಿ ಕೊನೆಯ ಟೆಸ್ಟ್ ಪಂದ್ಯ ನಡೆದಿತ್ತು. ಭಾರತ- ಆಸ್ಟ್ರೇಲಿಯಾ ನಡುವೆ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್​ಗಳ ಜಯ ಸಾಧಿಸಿತ್ತು. ವಿರಾಟ್ ಕೊಹ್ಲಿಗೆ ಇಂಜುರಿ ಆಗಿದ್ದ ಕಾರಣ ಅಜಿಂಕ್ಯಾ ರಹಾನೆ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡಿದ್ದರು. ಜಡೇಜಾ ಆಲ್ರೌಂಡರ್ ಪ್ರದರ್ಶನ ತೋರಿದ್ದರು.

7 / 7

Published On - 10:32 am, Sat, 11 February 23

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ