AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ICC Women's World Cup: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ.

ಪೃಥ್ವಿಶಂಕರ
|

Updated on:Mar 19, 2022 | 3:27 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಪಂದ್ಯ ಹಲವು ರೀತಿಯಲ್ಲಿ ವಿಶೇಷವಾಗಿತ್ತು. ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಈ ಪಂದ್ಯದಲ್ಲಿ ಒಂದು ವಿಶಿಷ್ಟ ಘಟನೆ ನಡೆದಿದೆ. ವಾಸ್ತವವಾಗಿ, ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ 3 ಶತಕಗಳ ಜೊತೆಯಾಟ ಕಂಡುಬಂದಿದೆ. ಮಹಿಳಾ ವಿಶ್ವಕಪ್‌ನಲ್ಲಿ ಈ ಹಿಂದೆ ಯಾವ ಪಂದ್ಯದಲ್ಲೂ ಹೀಗಾಗಿರಲಿಲ್ಲ.

1 / 4
ಮೊದಲು ಪಾಲುದಾರಿಕೆ ಬಗ್ಗೆ ಮಾತನಾಡುವುದಾದರೆ, ಆಸ್ಟ್ರೇಲಿಯಾದ ಗೆಲುವಿಗೆ ಅಡಿಪಾಯ ಹಾಕಿದ ಶತಕದ ಜೊತೆಯಾಟವು ರಾಚೆಲ್ ಹೈನ್ಸ್ ಮತ್ತು ಅಲಿಸ್ಸಾ ಹೀಲಿ ನಡುವೆ ಇತ್ತು. ಇವರಿಬ್ಬರ ನಡುವೆ 117 ಎಸೆತಗಳಲ್ಲಿ 121 ರನ್‌ಗಳ ಜೊತೆಯಾಟವಿತ್ತು.

2 / 4
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ಗೆಲುವಿನ ಎತ್ತರದ ಕಟ್ಟಡವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಈ ಅಡಿಪಾಯದ ಪಾಲುದಾರಿಕೆಯು ಆಸ್ಟ್ರೇಲಿಯಾದ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಎಲ್ಲಿಸ್ ಪೆರ್ರಿ ನಡುವೆ ಇತ್ತು. ಇವರಿಬ್ಬರು ಮೂರನೇ ವಿಕೆಟ್‌ಗೆ 123 ಎಸೆತಗಳಲ್ಲಿ 103 ರನ್ ಸೇರಿಸಿದರು.

3 / 4
Women’s World Cup: ಮಹಿಳಾ ವಿಶ್ವಕಪ್ ಇತಿಹಾಸದಲ್ಲೇ ಅಪರೂಪದ ದಾಖಲೆ ಬರೆದ ಭಾರತ- ಆಸೀಸ್ ಆಟಗಾರ್ತಿಯರು!

ಈ ಪಂದ್ಯದಲ್ಲಿ ಭಾರತದಿಂದಲೂ ಶತಕದ ಜೊತೆಯಾಟ ಮೂಡಿಬಂತು. ಆದರೆ, ಆ ಜೊತೆಯಾಟ ಗೆಲುವಿಗೆ ಸಾಕ್ಷಿಯಾಗಲಿಲ್ಲ. ಆದರೆ ಭಾರತದ ಸ್ಕೋರ್ ಬೋರ್ಡ್ ಅನ್ನು 277 ರನ್‌ಗಳಿಗೆ ಕೊಂಡೊಯ್ಯಲೂ ಸಹಾಯ ಮಾಡಿತು. ಆದರೆ, ಆಸ್ಟ್ರೇಲಿಯಾ ಈ ಗುರಿಯನ್ನು ಬೆನ್ನಟ್ಟಿತು. ಭಾರತಕ್ಕೆ ಈ ಜೊತೆಯಾಟ ಮಿಥಾಲಿ ರಾಜ್ ಮತ್ತು ಯಾಸ್ತಿಕಾ ಭಾಟಿಯಾ ನಡುವೆ ಮೂರನೇ ವಿಕೆಟ್‌ಗೆ ಸೇರಿತ್ತು. ಇವರಿಬ್ಬರು 154 ಎಸೆತಗಳಲ್ಲಿ 130 ರನ್ ಸೇರಿಸಿದರು.

4 / 4

Published On - 3:13 pm, Sat, 19 March 22

ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ