AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತಕ್ಕೆ ಅಶ್ವಿನ್- ಜಡೇಜಾ ಆಸರೆ; ದಿನದಾಟದಂತ್ಯಕ್ಕೆ ಟೀಂ ಇಂಡಿಯಾ 339/6

IND vs BAN: ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯಗೊಂಡಿದೆ. ದಿನದಾಟದಂತ್ಯಕ್ಕೆ ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿದೆ. ಬರೋಬ್ಬರಿ 195 ರನ್​ಗಳ ಜೊತೆಯಾಟ ಹಂಚಿಕೊಂಡ ಅಶ್ವಿನ್ ಹಾಗೂ ಜಡೇಜಾ ಮೊದಲ ದಿನದಾಟದ ಹೀರೋಗಳೆನಿಸಿಕೊಂಡರು.

ಪೃಥ್ವಿಶಂಕರ
|

Updated on:Sep 19, 2024 | 5:41 PM

Share
ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯಗೊಂಡಿದೆ. ದಿನದಾಟದಂತ್ಯಕ್ಕೆ ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿದೆ. ಬರೋಬ್ಬರಿ 195 ರನ್​ಗಳ ಜೊತೆಯಾಟ ಹಂಚಿಕೊಂಡ ಅಶ್ವಿನ್ ಹಾಗೂ ಜಡೇಜಾ ಮೊದಲ ದಿನದಾಟದ ಹೀರೋಗಳೆನಿಸಿಕೊಂಡರು.

ಚೆನ್ನೈನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯಗೊಂಡಿದೆ. ದಿನದಾಟದಂತ್ಯಕ್ಕೆ ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿರುವ ಟೀಂ ಇಂಡಿಯಾ 6 ವಿಕೆಟ್ ಕಳೆದುಕೊಂಡು 339 ರನ್ ಕಲೆಹಾಕಿದೆ. ಬರೋಬ್ಬರಿ 195 ರನ್​ಗಳ ಜೊತೆಯಾಟ ಹಂಚಿಕೊಂಡ ಅಶ್ವಿನ್ ಹಾಗೂ ಜಡೇಜಾ ಮೊದಲ ದಿನದಾಟದ ಹೀರೋಗಳೆನಿಸಿಕೊಂಡರು.

1 / 7
ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಆಘಾತ ಎದುರಾಯಿತು. ತಂಡದ ಮೊತ್ತ 14 ರನ್​ಗಳಿರುವಾಗ ನಾಯಕ ರೋಹಿತ್ ಶರ್ಮಾ ಕೇವಲ 6 ರನ್ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು. ನಂತರ ಬಂದ ಶುಭ್​ಮನ್​ ಗಿಲ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

ಟಾಸ್ ಸೋತು ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ಬ್ಯಾಕ್ ಟು ಬ್ಯಾಕ್ ಆಘಾತ ಎದುರಾಯಿತು. ತಂಡದ ಮೊತ್ತ 14 ರನ್​ಗಳಿರುವಾಗ ನಾಯಕ ರೋಹಿತ್ ಶರ್ಮಾ ಕೇವಲ 6 ರನ್ ಬಾರಿಸಿ ಪೆವಿಲಿಯನ್‌ ಸೇರಿಕೊಂಡರು. ನಂತರ ಬಂದ ಶುಭ್​ಮನ್​ ಗಿಲ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ.

2 / 7
ಈ ವೇಳೆ ಬರೋಬ್ಬರಿ 9 ತಿಂಗಳ ನಂತರ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಅದೆಲ್ಲವನ್ನು ಹುಸಿ ಮಾಡಿದ ಕೊಹ್ಲಿ, ರೋಹಿತ್​ರಂತೆ ಕೇವಲ 6 ರನ್ ಬಾರಿಸಿ ಔಟಾದರು.  ಆದರೆ ಆ ಬಳಿಕ ಜೊತೆಯಾದ ಪಂತ್ ಹಾಗೂ ಜೈಸ್ವಾಲ್ ತಂಡದ ಇನ್ನಿಂಗ್ಸ್ ಕಟ್ಟಿದರು.

ಈ ವೇಳೆ ಬರೋಬ್ಬರಿ 9 ತಿಂಗಳ ನಂತರ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಅದೆಲ್ಲವನ್ನು ಹುಸಿ ಮಾಡಿದ ಕೊಹ್ಲಿ, ರೋಹಿತ್​ರಂತೆ ಕೇವಲ 6 ರನ್ ಬಾರಿಸಿ ಔಟಾದರು. ಆದರೆ ಆ ಬಳಿಕ ಜೊತೆಯಾದ ಪಂತ್ ಹಾಗೂ ಜೈಸ್ವಾಲ್ ತಂಡದ ಇನ್ನಿಂಗ್ಸ್ ಕಟ್ಟಿದರು.

3 / 7
ಈ ಇಬ್ಬರು ಆಟಗಾರರು ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ರಿಷಬ್ ಪಂತ್ 39 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, 118 ಎಸೆತಗಳಲ್ಲಿ 9 ಬೌಂಡರಿಗಳ ಸಹಿತ 56 ರನ್​ಗಳ ಅತ್ಯಮೂಲ್ಯ ಇನ್ನಿಂಗ್ಸ್ ಕಟ್ಟಿದ ಜೈಸ್ವಾಲ್ ಪೆವಿಲಿಯನ್‌ ಸೇರಿಕೊಂಡರು.

ಈ ಇಬ್ಬರು ಆಟಗಾರರು ಅರ್ಧಶತಕದ ಜೊತೆಯಾಟವನ್ನು ಹಂಚಿಕೊಂಡರು. ಈ ವೇಳೆ ರಿಷಬ್ ಪಂತ್ 39 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರೆ, 118 ಎಸೆತಗಳಲ್ಲಿ 9 ಬೌಂಡರಿಗಳ ಸಹಿತ 56 ರನ್​ಗಳ ಅತ್ಯಮೂಲ್ಯ ಇನ್ನಿಂಗ್ಸ್ ಕಟ್ಟಿದ ಜೈಸ್ವಾಲ್ ಪೆವಿಲಿಯನ್‌ ಸೇರಿಕೊಂಡರು.

4 / 7
ನಂತರ ಬಂದ ಕನ್ನಡಿಗ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಕ್ರೀಸ್​ನಲ್ಲಿ ಸಾಕಷ್ಟು ಸಮಯ ಕಳೆದ ರಾಹುಲ್ 52 ಎಸೆತಗಳಲ್ಲಿ 12 ರನ್​ ಬಾರಿಸಿ ಬ್ಯಾಟ್ ಎತ್ತಿಟ್ಟರು. ಹೀಗಾಗಿ 144 ರನ್​ಗಳಿಗೆ ಟೀಂ ಇಂಡಿಯಾ ಪ್ರಮುಖ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

ನಂತರ ಬಂದ ಕನ್ನಡಿಗ ರಾಹುಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಆದರೆ ಕ್ರೀಸ್​ನಲ್ಲಿ ಸಾಕಷ್ಟು ಸಮಯ ಕಳೆದ ರಾಹುಲ್ 52 ಎಸೆತಗಳಲ್ಲಿ 12 ರನ್​ ಬಾರಿಸಿ ಬ್ಯಾಟ್ ಎತ್ತಿಟ್ಟರು. ಹೀಗಾಗಿ 144 ರನ್​ಗಳಿಗೆ ಟೀಂ ಇಂಡಿಯಾ ಪ್ರಮುಖ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು.

5 / 7
ಆದರೆ ಇಲ್ಲಿಂದ ಜೊತೆಯಾದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅಜೇಯ 195 ರನ್​ಗಳ ಜೊತೆಯಾಟವನ್ನಾಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಈ ವೇಳೆ ಅಶ್ವಿನ್ 112 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಬೌಂಡರಿ ಸಹಿತ ಅಜೇಯ 102 ರನ್ ಕಲೆಹಾಕಿದರೆ, ಜಡೇಜಾ ಕೂಡ 117 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 86 ರನ್ ಬಾರಿಸಿದ್ದಾರೆ.

ಆದರೆ ಇಲ್ಲಿಂದ ಜೊತೆಯಾದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅಜೇಯ 195 ರನ್​ಗಳ ಜೊತೆಯಾಟವನ್ನಾಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಈ ವೇಳೆ ಅಶ್ವಿನ್ 112 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಬೌಂಡರಿ ಸಹಿತ ಅಜೇಯ 102 ರನ್ ಕಲೆಹಾಕಿದರೆ, ಜಡೇಜಾ ಕೂಡ 117 ಎಸೆತಗಳಲ್ಲಿ 10 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 86 ರನ್ ಬಾರಿಸಿದ್ದಾರೆ.

6 / 7
ಇನ್ನು ಬಾಂಗ್ಲಾದೇಶ ಪರ ಬೌಲಿಂಗ್​ನಲ್ಲಿ ಮಿಂಚಿದ ಯುವ ವೇಗದ ಬೌಲರ್ ಹಸನ್ ಮಹಮೂದ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ರಿಷಬ್ ಸೇರಿದಂತೆ ನಾಲ್ವರ ವಿಕೆಟ್ ಉರುಳಿಸಿದರು. ಉಳಿದಂತೆ ನಹಿದ್ ರಾಣಾ, ಮೆಹದಿ ಹಸನ್ ಮೀರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

ಇನ್ನು ಬಾಂಗ್ಲಾದೇಶ ಪರ ಬೌಲಿಂಗ್​ನಲ್ಲಿ ಮಿಂಚಿದ ಯುವ ವೇಗದ ಬೌಲರ್ ಹಸನ್ ಮಹಮೂದ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭ್​ಮನ್ ಗಿಲ್, ರಿಷಬ್ ಸೇರಿದಂತೆ ನಾಲ್ವರ ವಿಕೆಟ್ ಉರುಳಿಸಿದರು. ಉಳಿದಂತೆ ನಹಿದ್ ರಾಣಾ, ಮೆಹದಿ ಹಸನ್ ಮೀರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

7 / 7

Published On - 5:12 pm, Thu, 19 September 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್