IND vs BAN: 2ನೇ ಪಂದ್ಯದಲ್ಲೂ ಫೇಲ್; ಸಿಕ್ಕ ಅವಕಾಶಗಳನ್ನು ಬಳಸಿಕೊಳ್ಳದ ಸಂಜು ಸ್ಯಾಮ್ಸನ್

Sanju Samson: ಸಂಜು ಸ್ಯಾಮ್ಸನ್ ಈ ಸರಣಿಯಲ್ಲಿ ದೊಡ್ಡ ಇನ್ನಿಂಗ್ಸ್ ಆಡುವ ಅವಕಾಶವನ್ನು ಹೊಂದಿದ್ದರು. ಆದರೆ ಅವರು ಮೊದಲ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇನ್ನು ಸ್ಯಾಮ್ಸನ್ ಇದೇ ರೀತಿ ಆಟ ಮುಂದುವರಿಸಿದರೆ ಅವರಿಗೆ ತಂಡದಿಂದ ಕೋಕ್ ಸಿಗುವುದು ಗ್ಯಾರಂಟಿ. ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಉಳಿದಿದ್ದು, ಸಂಜು ಆ ಪಂದ್ಯದಲ್ಲಾದರೂ ಅಬ್ಬರಿಸಲಿ ಎಂಬುದು ಅಭಿಮಾನಿಗಳ ಆಶಯ.

|

Updated on: Oct 09, 2024 | 8:12 PM

ಭಾರತ ಹಾಗೂ ಬಾಂಗ್ಲಾದೇಶ ನಡುವೆ ಪ್ರಸ್ತುತ 3 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ಸಾಧಿಸಿತ್ತು. ಇದೀಗ ಎರಡು ತಂಡಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಮುಖಾಮುಖಿಯಾಗಿವೆ.

ಭಾರತ ಹಾಗೂ ಬಾಂಗ್ಲಾದೇಶ ನಡುವೆ ಪ್ರಸ್ತುತ 3 ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಉಭಯ ತಂಡಗಳ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯ ಗೆಲುವು ಸಾಧಿಸಿತ್ತು. ಇದೀಗ ಎರಡು ತಂಡಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಎರಡನೇ ಟಿ20 ಪಂದ್ಯದಲ್ಲಿ ಮುಖಾಮುಖಿಯಾಗಿವೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ನಜ್ಮುಲ್ ಹೂಸೈನ್ ಶಾಂಟೊ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಆರಂಭಿಸಿದ ಆತಿಥೇಯ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಒದಗಿಸಿಕೊಡುವುಲ್ಲಿ ಆರಂಭಿಕರಿಬ್ಬರು ಎಡವಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ನಾಯಕ ನಜ್ಮುಲ್ ಹೂಸೈನ್ ಶಾಂಟೊ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಹೀಗಾಗಿ ಮೊದಲು ಬ್ಯಾಟಿಂಗ್ ಆರಂಭಿಸಿದ ಆತಿಥೇಯ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಒದಗಿಸಿಕೊಡುವುಲ್ಲಿ ಆರಂಭಿಕರಿಬ್ಬರು ಎಡವಿದ್ದಾರೆ.

2 / 7
ವಾಸ್ತವವಾಗಿ ಈ ಸರಣಿಯಲ್ಲಿ ತಂಡದ ಆರಂಭಿಕ ಜೋಡಿ ಬದಲಾಗಿದೆ. ಅದರಂತೆ ಅನುಭವಿ ಸಂಜು ಸ್ಯಾಮ್ಸನ್ ಹಾಗೂ ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಈ ಜೋಡಿ ಮೊದಲ ವಿಕೆಟ್​ಗೆ  25 ರನ್​ಗಳ ಜೊತೆಯಾಟ ನೀಡಿತ್ತು. ಆದರೆ 2ನೇ ಟಿ20 ಪಂದ್ಯದಲ್ಲಿ 17 ರನ್​ಗಳಿಗೆ ಈ ಜೊತೆಯಾಟ ಮುರಿದುಬಿದ್ದಿದೆ.

ವಾಸ್ತವವಾಗಿ ಈ ಸರಣಿಯಲ್ಲಿ ತಂಡದ ಆರಂಭಿಕ ಜೋಡಿ ಬದಲಾಗಿದೆ. ಅದರಂತೆ ಅನುಭವಿ ಸಂಜು ಸ್ಯಾಮ್ಸನ್ ಹಾಗೂ ಯುವ ಬ್ಯಾಟರ್ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಮೊದಲ ಪಂದ್ಯದಲ್ಲಿ ಈ ಜೋಡಿ ಮೊದಲ ವಿಕೆಟ್​ಗೆ 25 ರನ್​ಗಳ ಜೊತೆಯಾಟ ನೀಡಿತ್ತು. ಆದರೆ 2ನೇ ಟಿ20 ಪಂದ್ಯದಲ್ಲಿ 17 ರನ್​ಗಳಿಗೆ ಈ ಜೊತೆಯಾಟ ಮುರಿದುಬಿದ್ದಿದೆ.

3 / 7
ಗೌತಮ್ ಗಂಭೀರ್ ಮುಖ್ಯ ಕೋಚ್ ಆದ ಬಳಿಕ ಸಂಜು ಸ್ಯಾಮ್ಸನ್​ಗೆ ಟಿ20 ಕ್ರಿಕೆಟ್​ನಲ್ಲಿ ಮತ್ತೆ ಮರು ಜೀವ ಸಿಕ್ಕಿದೆ. ಆದರೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಸಂಜು ಎಡವುತ್ತಿದ್ದಾರೆ. ಸರಣಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಸಂಜು, ಉತ್ತಮ ಆರಂಭ ಪಡೆದುಕೊಂಡ ಹೊರತಾಗಿಯೂ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಬದಲಿಸುವಲ್ಲಿ ಎಡವುತ್ತಿದ್ದಾರೆ.

ಗೌತಮ್ ಗಂಭೀರ್ ಮುಖ್ಯ ಕೋಚ್ ಆದ ಬಳಿಕ ಸಂಜು ಸ್ಯಾಮ್ಸನ್​ಗೆ ಟಿ20 ಕ್ರಿಕೆಟ್​ನಲ್ಲಿ ಮತ್ತೆ ಮರು ಜೀವ ಸಿಕ್ಕಿದೆ. ಆದರೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಸಂಜು ಎಡವುತ್ತಿದ್ದಾರೆ. ಸರಣಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ಸಂಜು, ಉತ್ತಮ ಆರಂಭ ಪಡೆದುಕೊಂಡ ಹೊರತಾಗಿಯೂ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಬದಲಿಸುವಲ್ಲಿ ಎಡವುತ್ತಿದ್ದಾರೆ.

4 / 7
ಇದಕ್ಕೆ ಉದಾಹರಣೆಯಾಗಿ ಮೊದಲ ಟಿ20 ಪಂದ್ಯದಲ್ಲಿ 19 ಎಸೆತಗಳಲ್ಲಿ 6 ಬೌಂಡರಿ ಸಹಿತ 29 ರನ್ ಕಲೆಹಾಕಿದ್ದ ಸಂಜು ಸ್ಲೋ ಬಾಲ್​ಗೆ ಬಲಿಯಾಗಿದ್ದರು. ಇದೀಗ ಎರಡನೇ ಟಿ20 ಪಂದ್ಯದಲ್ಲೂ 7 ಎಸೆತಗಳಲ್ಲಿ 2 ಬೌಂಡರಿ ಸಹಿತ  10 ರನ್ ಕಲೆಹಾಕಿದ್ದ ಸಂಜು, ಮತ್ತೊಮ್ಮೆ ಸ್ಲೋ ಬಾಲ್​ಗೆ ವಿಕೆಟ್ ಒಪ್ಪಿಸಿದ್ದಾರೆ. ತಂಡದಲ್ಲಿ ಅವಕಾಶಕ್ಕಾಗಿ ಪೈಪೋಟಿ ಏರ್ಪಟ್ಟಿರುವಾಗ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳದ ಸಂಜುಗೆ ಇನ್ನೇಷ್ಟು ಅವಕಾಶ ನೀಡಬೇಕು ಎಂಬುದು ಅಭಿಮಾನಿಗಳ ಅಭಿಪ್ರಾಯವಾಗಿದೆ.

ಇದಕ್ಕೆ ಉದಾಹರಣೆಯಾಗಿ ಮೊದಲ ಟಿ20 ಪಂದ್ಯದಲ್ಲಿ 19 ಎಸೆತಗಳಲ್ಲಿ 6 ಬೌಂಡರಿ ಸಹಿತ 29 ರನ್ ಕಲೆಹಾಕಿದ್ದ ಸಂಜು ಸ್ಲೋ ಬಾಲ್​ಗೆ ಬಲಿಯಾಗಿದ್ದರು. ಇದೀಗ ಎರಡನೇ ಟಿ20 ಪಂದ್ಯದಲ್ಲೂ 7 ಎಸೆತಗಳಲ್ಲಿ 2 ಬೌಂಡರಿ ಸಹಿತ 10 ರನ್ ಕಲೆಹಾಕಿದ್ದ ಸಂಜು, ಮತ್ತೊಮ್ಮೆ ಸ್ಲೋ ಬಾಲ್​ಗೆ ವಿಕೆಟ್ ಒಪ್ಪಿಸಿದ್ದಾರೆ. ತಂಡದಲ್ಲಿ ಅವಕಾಶಕ್ಕಾಗಿ ಪೈಪೋಟಿ ಏರ್ಪಟ್ಟಿರುವಾಗ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳದ ಸಂಜುಗೆ ಇನ್ನೇಷ್ಟು ಅವಕಾಶ ನೀಡಬೇಕು ಎಂಬುದು ಅಭಿಮಾನಿಗಳ ಅಭಿಪ್ರಾಯವಾಗಿದೆ.

5 / 7
ಇದಕ್ಕೆ ಪೂರಕವಾಗಿ ಸಂಜು ಅವರ ಟಿ20 ದಾಖಲೆಯನ್ನು ನೋಡುವುದಾದರೆ.. ಇದುವರೆಗೆ 27 ಟಿ20 ಇನ್ನಿಂಗ್ಸ್‌ಗಳನ್ನಾಡಿರುವ ಸಂಜು ಕೇವಲ 473 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಸ್ಯಾಮ್ಸನ್ ಅವರ ಸರಾಸರಿ 20 ಕ್ಕಿಂತ ಕಡಿಮೆ ಇದೆ. ಸಂಜು ಸ್ಯಾಮ್ಸನ್ ಈ ಮಾದರಿಯಲ್ಲಿ ಇನ್ನೂ ಒಂದೇ ಒಂದು ಅರ್ಧಶತಕ ಗಳಿಸಿಲ್ಲ.

ಇದಕ್ಕೆ ಪೂರಕವಾಗಿ ಸಂಜು ಅವರ ಟಿ20 ದಾಖಲೆಯನ್ನು ನೋಡುವುದಾದರೆ.. ಇದುವರೆಗೆ 27 ಟಿ20 ಇನ್ನಿಂಗ್ಸ್‌ಗಳನ್ನಾಡಿರುವ ಸಂಜು ಕೇವಲ 473 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಸ್ಯಾಮ್ಸನ್ ಅವರ ಸರಾಸರಿ 20 ಕ್ಕಿಂತ ಕಡಿಮೆ ಇದೆ. ಸಂಜು ಸ್ಯಾಮ್ಸನ್ ಈ ಮಾದರಿಯಲ್ಲಿ ಇನ್ನೂ ಒಂದೇ ಒಂದು ಅರ್ಧಶತಕ ಗಳಿಸಿಲ್ಲ.

6 / 7
ಸಂಜು ಸ್ಯಾಮ್ಸನ್ ಈ ಸರಣಿಯಲ್ಲಿ ದೊಡ್ಡ ಇನ್ನಿಂಗ್ಸ್ ಆಡುವ ಅವಕಾಶವನ್ನು ಹೊಂದಿದ್ದರು ಆದರೆ ಅವರು ಮೊದಲ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇನ್ನು ಸ್ಯಾಮ್ಸನ್ ಇದೇ ರೀತಿ ಆಟ ಮುಂದುವರಿಸಿದರೆ ಅವರಿಗೆ ತಂಡದಿಂದ ಕೋಕ್ ಸಿಗುವುದು ಗ್ಯಾರಂಟಿ. ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಉಳಿದಿದ್ದು,  ಸಂಜು ಆ ಪಂದ್ಯದಲ್ಲಾದರೂ ಅಬ್ಬರಿಸಲಿ ಎಂಬುದು ಅಭಿಮಾನಿಗಳ ಆಶಯ.

ಸಂಜು ಸ್ಯಾಮ್ಸನ್ ಈ ಸರಣಿಯಲ್ಲಿ ದೊಡ್ಡ ಇನ್ನಿಂಗ್ಸ್ ಆಡುವ ಅವಕಾಶವನ್ನು ಹೊಂದಿದ್ದರು ಆದರೆ ಅವರು ಮೊದಲ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಇನ್ನು ಸ್ಯಾಮ್ಸನ್ ಇದೇ ರೀತಿ ಆಟ ಮುಂದುವರಿಸಿದರೆ ಅವರಿಗೆ ತಂಡದಿಂದ ಕೋಕ್ ಸಿಗುವುದು ಗ್ಯಾರಂಟಿ. ಸರಣಿಯಲ್ಲಿ ಇನ್ನೊಂದು ಪಂದ್ಯ ಬಾಕಿ ಉಳಿದಿದ್ದು, ಸಂಜು ಆ ಪಂದ್ಯದಲ್ಲಾದರೂ ಅಬ್ಬರಿಸಲಿ ಎಂಬುದು ಅಭಿಮಾನಿಗಳ ಆಶಯ.

7 / 7
Follow us
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಹಿಂದಿನ ಸತ್ಯಾಂಶ ಮುಚ್ಚಿಟ್ಟ ಶಿವಕುಮಾರ್
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ LIVE
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಶಿವಕುಮಾರ್​ಗೆ ಮುನ್ನ ಸಿಎಂ ಭೇಟಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ಜೈಲಿಗೆ ಬಂದ ಡಾಕ್ಟರ್​ಗಳಲ್ಲಿ ಒಬ್ಬರೂ ಪರಿಣಿತರಲ್ಲ, ಎಲ್ಲರೂ ಜ್ಯೂನಿಯರ್​ಗಳು
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ
ರಿಹರ್ಸಲ್​​ನಲ್ಲಿ ನಿಶಾನೆ ಆನೆಯಾಗಿ ಮುಂಚೂಣಿಯಲ್ಲಿ ಸಾಗಿದ ಧನಂಜಯ