AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN, ICC World Cup: ಭಾರತ-ಬಾಂಗ್ಲಾದೇಶ ಪಂದ್ಯಕ್ಕೆ ಮಳೆ ಕಾಟ?: ಇಲ್ಲಿದೆ ಪುಣೆ ಹವಾಮಾನ ವರದಿ

India vs Bangladesh World Cup Pune Weather Update: ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಇಂದು ಬಾಂಗ್ಲಾದೇಶವನ್ನು ಎದುರಿಸಲಿದೆ. ಏತನ್ಮಧ್ಯೆ, ಪುಣೆಯಲ್ಲಿ ನಿನ್ನೆ (ಬುಧವಾರ) ಲಘುವಾದ ತುಂತುರು ಮಳೆ ಬಂದಿದೆ. ಇದು ಟೀಮ್ ಇಂಡಿಯಾ ಆಟವನ್ನು ನೋಡಲು ಕಾಯುತ್ತಿರುವ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

Vinay Bhat
|

Updated on:Oct 19, 2023 | 8:40 AM

Share
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಇಂದು ಬಾಂಗ್ಲಾದೇಶವನ್ನು ಎದುರಿಸಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ವಿಶ್ವಕಪ್‌ನಲ್ಲಿ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಪ್ರಾರಂಭಿಸಿ ಬಳಿಕ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ವಿರುದ್ಧ ಜಯಗಳಿಸಿತು.

ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ತನ್ನ ನಾಲ್ಕನೇ ಪಂದ್ಯದಲ್ಲಿ ಭಾರತ ಇಂದು ಬಾಂಗ್ಲಾದೇಶವನ್ನು ಎದುರಿಸಲಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ವಿಶ್ವಕಪ್‌ನಲ್ಲಿ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ ಗೆಲುವಿನೊಂದಿಗೆ ಪಂದ್ಯಾವಳಿಯನ್ನು ಪ್ರಾರಂಭಿಸಿ ಬಳಿಕ ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ವಿರುದ್ಧ ಜಯಗಳಿಸಿತು.

1 / 7
ಭಾರತ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಭರ್ಜರಿ ಫಾರ್ಮ್​ನಲ್ಲಿದ್ದರೆ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

ಭಾರತ ಪರ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಭರ್ಜರಿ ಫಾರ್ಮ್​ನಲ್ಲಿದ್ದರೆ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ.

2 / 7
ಬಾಂಗ್ಲಾದೇಶ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧ ಅವಳಿ ಸೋಲಿನ ನಂತರ ಗೆಲುವು ಅನಿವಾರ್ಯವಾಗಿದೆ. ತಂಡವು ಅಫ್ಘಾನಿಸ್ತಾನದ ವಿರುದ್ಧ ಗೆಲುವಿನೊಂದಿಗೆ ಅಭಿಯಾನವನ್ನು ಪ್ರಾರಂಭಿಸಿತು ಆದರೆ ಸತತ ಸೋಲುಗಳಿಂದ ದೊಡ್ಡ ಹಿನ್ನಡೆಯಾಗಿದೆ. ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಜೀವಂತವಾಗಿರಲು ಭಾರತದ ವಿರುದ್ಧ ಗೆದ್ದರೆ ಉತ್ತಮ.

ಬಾಂಗ್ಲಾದೇಶ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ವಿರುದ್ಧ ಅವಳಿ ಸೋಲಿನ ನಂತರ ಗೆಲುವು ಅನಿವಾರ್ಯವಾಗಿದೆ. ತಂಡವು ಅಫ್ಘಾನಿಸ್ತಾನದ ವಿರುದ್ಧ ಗೆಲುವಿನೊಂದಿಗೆ ಅಭಿಯಾನವನ್ನು ಪ್ರಾರಂಭಿಸಿತು ಆದರೆ ಸತತ ಸೋಲುಗಳಿಂದ ದೊಡ್ಡ ಹಿನ್ನಡೆಯಾಗಿದೆ. ವಿಶ್ವಕಪ್‌ನಲ್ಲಿ ಬಾಂಗ್ಲಾದೇಶ ಜೀವಂತವಾಗಿರಲು ಭಾರತದ ವಿರುದ್ಧ ಗೆದ್ದರೆ ಉತ್ತಮ.

3 / 7
ಏತನ್ಮಧ್ಯೆ, ಪುಣೆಯಲ್ಲಿ ನಿನ್ನೆ (ಬುಧವಾರ) ಲಘುವಾದ ತುಂತುರು ಮಳೆ ಬಂದಿದೆ. ಇದು ಟೀಮ್ ಇಂಡಿಯಾ ಆಟವನ್ನು ನೋಡಲು ಕಾಯುತ್ತಿರುವ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಅಕ್ಯುವೆದರ್ ಪ್ರಕಾರ, ಅಕ್ಟೋಬರ್ 19 ರಂದು ಮಳೆಯ ತೊಂದರೆ ಇರುವುದಿಲ್ಲ. ಗುರುವಾರ ಮಳೆಯ ಸಾಧ್ಯತೆಗಳು 3 ಪ್ರತಿಶತದಷ್ಟು ಕಡಿಮೆಯಾಗುತ್ತದೆ.

ಏತನ್ಮಧ್ಯೆ, ಪುಣೆಯಲ್ಲಿ ನಿನ್ನೆ (ಬುಧವಾರ) ಲಘುವಾದ ತುಂತುರು ಮಳೆ ಬಂದಿದೆ. ಇದು ಟೀಮ್ ಇಂಡಿಯಾ ಆಟವನ್ನು ನೋಡಲು ಕಾಯುತ್ತಿರುವ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಅಕ್ಯುವೆದರ್ ಪ್ರಕಾರ, ಅಕ್ಟೋಬರ್ 19 ರಂದು ಮಳೆಯ ತೊಂದರೆ ಇರುವುದಿಲ್ಲ. ಗುರುವಾರ ಮಳೆಯ ಸಾಧ್ಯತೆಗಳು 3 ಪ್ರತಿಶತದಷ್ಟು ಕಡಿಮೆಯಾಗುತ್ತದೆ.

4 / 7
ಪಂದ್ಯದ ದಿನ ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಮತ್ತು ಆರ್ದ್ರತೆಯು ಶೇಕಡಾ 41 ರಷ್ಟಿರುತ್ತದೆ. ಸಂಜೆಯ ಹೊತ್ತಿಗೆ ತಾಪಮಾನವು ಕಡಿಮೆಯಾಗಲಿದ್ದು, ಇದು ಆಟಗಾರರಿಗೆ ಸುಲಭವಾಗಲಿದೆ. ಇಬ್ಬನಿಯು ಪಂದ್ಯದ ಮಧ್ಯೆ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿಲ್ಲ.

ಪಂದ್ಯದ ದಿನ ತಾಪಮಾನವು ಸುಮಾರು 33 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಮತ್ತು ಆರ್ದ್ರತೆಯು ಶೇಕಡಾ 41 ರಷ್ಟಿರುತ್ತದೆ. ಸಂಜೆಯ ಹೊತ್ತಿಗೆ ತಾಪಮಾನವು ಕಡಿಮೆಯಾಗಲಿದ್ದು, ಇದು ಆಟಗಾರರಿಗೆ ಸುಲಭವಾಗಲಿದೆ. ಇಬ್ಬನಿಯು ಪಂದ್ಯದ ಮಧ್ಯೆ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿಲ್ಲ.

5 / 7
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ವರ್ಗ ಎಂದು ಹೇಳಬಹುದು. ಪಂದ್ಯದುದ್ದಕ್ಕೂ ಬ್ಯಾಟರ್‌ಗಳಿಗೆ ಈ ಪಿಚ್ ಸಹಕಾರ ನೀಡುತ್ತದೆ. ಬೌಲರ್​ಗಳಿಗೆ ಇಲ್ಲಿ ದೊಡ್ಡ ಸವಾಲು ಎನ್ನಬಹುದು. ಮೈದಾನದ ಗಾತ್ರ ಚಿಕ್ಕದಾಗಿದ್ದು, ಇಲ್ಲಿ ಕೇವಲ 7 ಏಕದಿನ ಪಂದ್ಯಗಳನ್ನು ಆಡಲಾಗಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಪಿಚ್ ಬ್ಯಾಟಿಂಗ್ ಸ್ವರ್ಗ ಎಂದು ಹೇಳಬಹುದು. ಪಂದ್ಯದುದ್ದಕ್ಕೂ ಬ್ಯಾಟರ್‌ಗಳಿಗೆ ಈ ಪಿಚ್ ಸಹಕಾರ ನೀಡುತ್ತದೆ. ಬೌಲರ್​ಗಳಿಗೆ ಇಲ್ಲಿ ದೊಡ್ಡ ಸವಾಲು ಎನ್ನಬಹುದು. ಮೈದಾನದ ಗಾತ್ರ ಚಿಕ್ಕದಾಗಿದ್ದು, ಇಲ್ಲಿ ಕೇವಲ 7 ಏಕದಿನ ಪಂದ್ಯಗಳನ್ನು ಆಡಲಾಗಿದೆ.

6 / 7
ಇಲ್ಲಿ ಆಡಿರುವ ಏಳು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 4 ರಲ್ಲಿ ಜಯಗಳಿದೆ. 2017ರಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 356/2 ದಾಖಲಿಸಿದ ಅತ್ಯಧಿಕ ಸ್ಕೋರ್ ಆಗಿದೆ. ಎರಡು ವರ್ಷಗಳ ನಂತರ ಇಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಪಿಚ್ ಹೇಗೆ ವರ್ತಿಸುತ್ತದೆ ಎಂಬ ಬಗ್ಗೆ ಕುತೂಹಲ ಕೂಡ ಇದೆ. ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡುವುದು ಉತ್ತಮ ಆಯ್ಕೆ.

ಇಲ್ಲಿ ಆಡಿರುವ ಏಳು ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 4 ರಲ್ಲಿ ಜಯಗಳಿದೆ. 2017ರಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 356/2 ದಾಖಲಿಸಿದ ಅತ್ಯಧಿಕ ಸ್ಕೋರ್ ಆಗಿದೆ. ಎರಡು ವರ್ಷಗಳ ನಂತರ ಇಲ್ಲಿ ಪಂದ್ಯ ನಡೆಯುತ್ತಿರುವುದರಿಂದ ಪಿಚ್ ಹೇಗೆ ವರ್ತಿಸುತ್ತದೆ ಎಂಬ ಬಗ್ಗೆ ಕುತೂಹಲ ಕೂಡ ಇದೆ. ಟಾಸ್ ಗೆದ್ದ ತಂಡವು ಮೊದಲು ಬ್ಯಾಟಿಂಗ್ ಮಾಡುವುದು ಉತ್ತಮ ಆಯ್ಕೆ.

7 / 7

Published On - 7:56 am, Thu, 19 October 23

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ