AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೆಸ್ಟ್ ಸರಣಿ ನಡುವೆ ಟೀಂ ಇಂಡಿಯಾದಿಂದ ಹೊರಬಿದ್ದ ವೇಗಿ ಆವೇಶ್ ಖಾನ್..!

IND vs ENG: ಹೈದರಾಬಾದ್ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದಿಂದ ವೇಗದ ಬೌಲರ್ ಆವೇಶ್ ಖಾನ್ ಅವರನ್ನು ಬಿಡುಗಡೆ ಮಾಡಲಾಗಿದೆ.

ಪೃಥ್ವಿಶಂಕರ
|

Updated on: Jan 25, 2024 | 3:31 PM

Share
ಹೈದರಾಬಾದ್ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದಿಂದ ವೇಗದ ಬೌಲರ್ ಆವೇಶ್ ಖಾನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಹೈದರಾಬಾದ್ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾದಿಂದ ವೇಗದ ಬೌಲರ್ ಆವೇಶ್ ಖಾನ್ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

1 / 6
ವಾಸ್ತವವಾಗಿ ಈ ಹಿಂದೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದಾಗ ಆವೇಶ್ ಖಾನ್ ಕೂಡ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಆಯ್ಕೆಯಾಗಿದ್ದರು. ಆದರೆ ಇದೀಗ ತಂಡದಿಂದ ಬಿಡುಗಡೆಯಾಗಿರುವ ಆವೇಶ್ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ.

ವಾಸ್ತವವಾಗಿ ಈ ಹಿಂದೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದಾಗ ಆವೇಶ್ ಖಾನ್ ಕೂಡ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದಲ್ಲಿ ಆಯ್ಕೆಯಾಗಿದ್ದರು. ಆದರೆ ಇದೀಗ ತಂಡದಿಂದ ಬಿಡುಗಡೆಯಾಗಿರುವ ಆವೇಶ್ ನಡೆಯುತ್ತಿರುವ ರಣಜಿ ಟ್ರೋಫಿಯಲ್ಲಿ ಮಧ್ಯಪ್ರದೇಶ ತಂಡದ ಪರ ಕಣಕ್ಕಿಳಿಯಲ್ಲಿದ್ದಾರೆ.

2 / 6
ಪಂದ್ಯ ಆರಂಭಕ್ಕೂ ಮುನ್ನ ನಡೆದ ಟಾಸ್ ಮುಗಿದ ಬಳಿಕ ಬಿಸಿಸಿಐ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಈ ಮಾಹಿತಿ ನೀಡಿದೆ. ಇನ್ನು ಭಾರತ ತಂಡ ಮೊದಲ ಟೆಸ್ಟ್‌ನಲ್ಲಿ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗದ ಬೌಲರ್‌ಗಳೊಂದಿಗೆ ಮೈದಾನಕ್ಕಿಳಿದಿದೆ.

ಪಂದ್ಯ ಆರಂಭಕ್ಕೂ ಮುನ್ನ ನಡೆದ ಟಾಸ್ ಮುಗಿದ ಬಳಿಕ ಬಿಸಿಸಿಐ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಈ ಮಾಹಿತಿ ನೀಡಿದೆ. ಇನ್ನು ಭಾರತ ತಂಡ ಮೊದಲ ಟೆಸ್ಟ್‌ನಲ್ಲಿ ಮೂವರು ಸ್ಪಿನ್ನರ್‌ಗಳು ಮತ್ತು ಇಬ್ಬರು ವೇಗದ ಬೌಲರ್‌ಗಳೊಂದಿಗೆ ಮೈದಾನಕ್ಕಿಳಿದಿದೆ.

3 / 6
ಅಷ್ಟಕ್ಕೂ ಆವೇಶ್​ ಖಾನ್​ರನ್ನು ತಂಡದಿಂದ ಕೈಬಿಡಲು ಕಾರಣವೂ ಇದ್ದು, ಹೈದರಾಬಾದ್ ಪಿಚ್‌ ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ತಂಡದಲ್ಲಿ ಮೂರನೇ ವೇಗದ ಬೌಲರ್ ಅನ್ನು ಆಡಿಸುವ ಅಗತ್ಯವಿಲ್ಲ ಎಂದು ಭಾವಿಸಿರುವ ಆಡಳಿತ ಮಂಡಳಿ ಆವೇಶ್​ ಖಾನ್​ರನ್ನು ತಂಡದಿಂದ ಹೊರಗಿಟ್ಟಿದೆ.

ಅಷ್ಟಕ್ಕೂ ಆವೇಶ್​ ಖಾನ್​ರನ್ನು ತಂಡದಿಂದ ಕೈಬಿಡಲು ಕಾರಣವೂ ಇದ್ದು, ಹೈದರಾಬಾದ್ ಪಿಚ್‌ ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗಲಿದೆ. ಹೀಗಾಗಿ ತಂಡದಲ್ಲಿ ಮೂರನೇ ವೇಗದ ಬೌಲರ್ ಅನ್ನು ಆಡಿಸುವ ಅಗತ್ಯವಿಲ್ಲ ಎಂದು ಭಾವಿಸಿರುವ ಆಡಳಿತ ಮಂಡಳಿ ಆವೇಶ್​ ಖಾನ್​ರನ್ನು ತಂಡದಿಂದ ಹೊರಗಿಟ್ಟಿದೆ.

4 / 6
ಈಗ ತಂಡದಿಂದ ಹೊರನಡೆದಿರುವ ಆವೇಶ್, ನಡೆಯುತ್ತಿರುವ ರಣಜಿ ಟ್ರೋಫಿಯ ಮುಂದಿನ ಪಂದ್ಯದಲ್ಲಿ ಮಧ್ಯಪ್ರದೇಶ ಪರ ಆಡಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡದ ಕಾರಣ, ಅವರ ಸ್ಥಾನಕ್ಕೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಈಗ ತಂಡದಿಂದ ಹೊರನಡೆದಿರುವ ಆವೇಶ್, ನಡೆಯುತ್ತಿರುವ ರಣಜಿ ಟ್ರೋಫಿಯ ಮುಂದಿನ ಪಂದ್ಯದಲ್ಲಿ ಮಧ್ಯಪ್ರದೇಶ ಪರ ಆಡಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳನ್ನು ಆಡದ ಕಾರಣ, ಅವರ ಸ್ಥಾನಕ್ಕೆ ರಜತ್ ಪಾಟಿದಾರ್ ಅವರನ್ನು ಆಯ್ಕೆ ಮಾಡಲಾಗಿದೆ.

5 / 6
ಅವೇಶ್ ಖಾನ್​ಗೆ ಟೆಸ್ಟ್ ಮಾದರಿಯಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶ ಈವರೆಗೆ ಸಿಕ್ಕಿಲ್ಲ. ಆದರೆ ಉಳಿದೆರಡು ಮಾದರಿಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿರುವ ಅವೇಶ್ 20 ಟಿ20 ಪಂದ್ಯಗಳಲ್ಲಿ 32.53 ಸರಾಸರಿಯಲ್ಲಿ 19 ವಿಕೆಟ್ ಹಾಗೂ 8 ಏಕದಿನ ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ.

ಅವೇಶ್ ಖಾನ್​ಗೆ ಟೆಸ್ಟ್ ಮಾದರಿಯಲ್ಲಿ ಟೀಂ ಇಂಡಿಯಾ ಪರ ಪದಾರ್ಪಣೆ ಮಾಡುವ ಅವಕಾಶ ಈವರೆಗೆ ಸಿಕ್ಕಿಲ್ಲ. ಆದರೆ ಉಳಿದೆರಡು ಮಾದರಿಗಳಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿರುವ ಅವೇಶ್ 20 ಟಿ20 ಪಂದ್ಯಗಳಲ್ಲಿ 32.53 ಸರಾಸರಿಯಲ್ಲಿ 19 ವಿಕೆಟ್ ಹಾಗೂ 8 ಏಕದಿನ ಪಂದ್ಯಗಳಲ್ಲಿ 9 ವಿಕೆಟ್ ಪಡೆದಿದ್ದಾರೆ.

6 / 6
Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ