AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ದಿನಗಳಲ್ಲಿ 4 ಟೆಸ್ಟ್ ಪಂದ್ಯಗಳು

India Vs England 2025: ಜೂನ್ ತಿಂಗಳಾಂತ್ಯದೊಳಗೆ 8 ತಂಡಗಳು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿಯಲಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದ್ದು, ಈ ಪಂದ್ಯದ ಬೆನ್ನಲ್ಲೇ ಮುಂದಿನ ವಾರದಿಂದ ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ತಂಡಗಳು ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯಗಳನ್ನಾಡಲಿದೆ.

ಝಾಹಿರ್ ಯೂಸುಫ್
|

Updated on:Jun 17, 2025 | 8:10 AM

Share
ಚುಟುಕು ಕ್ರಿಕೆಟ್ ಪಂದ್ಯಗಳ ಅಬ್ಬರದ ಬಳಿಕ ಟೆಸ್ಟ್ ಸರಣಿಗಳು ಮತ್ತೆ ಶುರುವಾಗುತ್ತಿದೆ. ಅದರಲ್ಲೂ ಇದೇ ತಿಂಗಳು 8 ತಂಡಗಳು 4 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ಸರಣಿಗಳಲ್ಲಿ ಟೀಮ್ ಇಂಡಿಯಾ ಕೂಡ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ 2027ರ ಸರಣಿಯನ್ನು ಆರಂಭಿಸಲಿದೆ. ಹಾಗಿದ್ರೆ ಈ ತಿಂಗಳು ಟೆಸ್ಟ್ ಸರಣಿಗಳನ್ನು ಆಡಲಿರುವ 8 ತಂಡಗಳಾವುವು ಎಂದು ನೋಡೋಣ...

ಚುಟುಕು ಕ್ರಿಕೆಟ್ ಪಂದ್ಯಗಳ ಅಬ್ಬರದ ಬಳಿಕ ಟೆಸ್ಟ್ ಸರಣಿಗಳು ಮತ್ತೆ ಶುರುವಾಗುತ್ತಿದೆ. ಅದರಲ್ಲೂ ಇದೇ ತಿಂಗಳು 8 ತಂಡಗಳು 4 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ಸರಣಿಗಳಲ್ಲಿ ಟೀಮ್ ಇಂಡಿಯಾ ಕೂಡ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ 2027ರ ಸರಣಿಯನ್ನು ಆರಂಭಿಸಲಿದೆ. ಹಾಗಿದ್ರೆ ಈ ತಿಂಗಳು ಟೆಸ್ಟ್ ಸರಣಿಗಳನ್ನು ಆಡಲಿರುವ 8 ತಂಡಗಳಾವುವು ಎಂದು ನೋಡೋಣ...

1 / 5
ಶ್ರೀಲಂಕಾ vs ಬಾಂಗ್ಲಾದೇಶ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವುದು ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ತಂಡಗಳು. ಶ್ರೀಲಂಕಾದ ಗಾಲೆಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯವು ಇಂದಿನಿಂದ (ಜೂನ್ 17) ಶುರುವಾಗಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ್-ಶ್ರೀಲಂಕಾ ಒಟ್ಟು 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಶ್ರೀಲಂಕಾ vs ಬಾಂಗ್ಲಾದೇಶ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವುದು ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ತಂಡಗಳು. ಶ್ರೀಲಂಕಾದ ಗಾಲೆಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯವು ಇಂದಿನಿಂದ (ಜೂನ್ 17) ಶುರುವಾಗಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ್-ಶ್ರೀಲಂಕಾ ಒಟ್ಟು 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

2 / 5
ಭಾರತ vs ಇಂಗ್ಲೆಂಡ್: ಇಂಡೊ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಶುಕ್ರವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

ಭಾರತ vs ಇಂಗ್ಲೆಂಡ್: ಇಂಡೊ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಶುಕ್ರವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

3 / 5
ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ: ವಿಂಡೀಸ್-ಆಸೀಸ್ ನಡುವಿನ ಟೆಸ್ಟ್ ಸರಣಿಯು ಜೂನ್ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ವೆಸ್ಟ್ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆಯಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು ಒಟ್ಟು 3 ಟೆಸ್ಟ್ ಪಂದ್ಯಗಳನ್ನಾಡಲಿದೆ.

ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ: ವಿಂಡೀಸ್-ಆಸೀಸ್ ನಡುವಿನ ಟೆಸ್ಟ್ ಸರಣಿಯು ಜೂನ್ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ವೆಸ್ಟ್ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆಯಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು ಒಟ್ಟು 3 ಟೆಸ್ಟ್ ಪಂದ್ಯಗಳನ್ನಾಡಲಿದೆ.

4 / 5
ಝಿಂಬಾಬ್ವೆ vs ಸೌತ್ ಆಫ್ರಿಕಾ: ವಿಶ್ವ ಟೆಸ್ಟ್ ಚಾಂಪಿಯನ್​ ಸೌತ್ ಆಫ್ರಿಕಾ ತಂಡವು ಜೂನ್ 28 ರಂದು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯಲಿದೆ. ಝಿಂಬಾಬ್ವೆಯಲ್ಲಿ ನಡೆಯಲಿರುವ ಈ ಟೆಸ್ಟ್​ ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ಜೂನ್ ತಿಂಗಳಾಂತ್ಯದೊಳಗೆ ಒಟ್ಟು 8 ತಂಡಗಳು ಟೆಸ್ಟ್ ಸರಣಿಯನ್ನು ಆರಂಭಿಸಲಿದೆ.

ಝಿಂಬಾಬ್ವೆ vs ಸೌತ್ ಆಫ್ರಿಕಾ: ವಿಶ್ವ ಟೆಸ್ಟ್ ಚಾಂಪಿಯನ್​ ಸೌತ್ ಆಫ್ರಿಕಾ ತಂಡವು ಜೂನ್ 28 ರಂದು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯಲಿದೆ. ಝಿಂಬಾಬ್ವೆಯಲ್ಲಿ ನಡೆಯಲಿರುವ ಈ ಟೆಸ್ಟ್​ ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ಜೂನ್ ತಿಂಗಳಾಂತ್ಯದೊಳಗೆ ಒಟ್ಟು 8 ತಂಡಗಳು ಟೆಸ್ಟ್ ಸರಣಿಯನ್ನು ಆರಂಭಿಸಲಿದೆ.

5 / 5

Published On - 8:09 am, Tue, 17 June 25

Follow Us
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್‌ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು