AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ದಿನಗಳಲ್ಲಿ 4 ಟೆಸ್ಟ್ ಪಂದ್ಯಗಳು

India Vs England 2025: ಜೂನ್ ತಿಂಗಳಾಂತ್ಯದೊಳಗೆ 8 ತಂಡಗಳು ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿಯಲಿವೆ. ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಶುಕ್ರವಾರದಿಂದ ಶುರುವಾಗಲಿದ್ದು, ಈ ಪಂದ್ಯದ ಬೆನ್ನಲ್ಲೇ ಮುಂದಿನ ವಾರದಿಂದ ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ತಂಡಗಳು ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯಗಳನ್ನಾಡಲಿದೆ.

ಝಾಹಿರ್ ಯೂಸುಫ್
|

Updated on:Jun 17, 2025 | 8:10 AM

Share
ಚುಟುಕು ಕ್ರಿಕೆಟ್ ಪಂದ್ಯಗಳ ಅಬ್ಬರದ ಬಳಿಕ ಟೆಸ್ಟ್ ಸರಣಿಗಳು ಮತ್ತೆ ಶುರುವಾಗುತ್ತಿದೆ. ಅದರಲ್ಲೂ ಇದೇ ತಿಂಗಳು 8 ತಂಡಗಳು 4 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ಸರಣಿಗಳಲ್ಲಿ ಟೀಮ್ ಇಂಡಿಯಾ ಕೂಡ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ 2027ರ ಸರಣಿಯನ್ನು ಆರಂಭಿಸಲಿದೆ. ಹಾಗಿದ್ರೆ ಈ ತಿಂಗಳು ಟೆಸ್ಟ್ ಸರಣಿಗಳನ್ನು ಆಡಲಿರುವ 8 ತಂಡಗಳಾವುವು ಎಂದು ನೋಡೋಣ...

ಚುಟುಕು ಕ್ರಿಕೆಟ್ ಪಂದ್ಯಗಳ ಅಬ್ಬರದ ಬಳಿಕ ಟೆಸ್ಟ್ ಸರಣಿಗಳು ಮತ್ತೆ ಶುರುವಾಗುತ್ತಿದೆ. ಅದರಲ್ಲೂ ಇದೇ ತಿಂಗಳು 8 ತಂಡಗಳು 4 ಟೆಸ್ಟ್ ಪಂದ್ಯಗಳನ್ನಾಡಲಿದೆ. ಈ 4 ಸರಣಿಗಳಲ್ಲಿ ಟೀಮ್ ಇಂಡಿಯಾ ಕೂಡ ಕಣಕ್ಕಿಳಿಯುತ್ತಿರುವುದು ವಿಶೇಷ. ಅಂದರೆ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ 2027ರ ಸರಣಿಯನ್ನು ಆರಂಭಿಸಲಿದೆ. ಹಾಗಿದ್ರೆ ಈ ತಿಂಗಳು ಟೆಸ್ಟ್ ಸರಣಿಗಳನ್ನು ಆಡಲಿರುವ 8 ತಂಡಗಳಾವುವು ಎಂದು ನೋಡೋಣ...

1 / 5
ಶ್ರೀಲಂಕಾ vs ಬಾಂಗ್ಲಾದೇಶ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವುದು ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ತಂಡಗಳು. ಶ್ರೀಲಂಕಾದ ಗಾಲೆಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯವು ಇಂದಿನಿಂದ (ಜೂನ್ 17) ಶುರುವಾಗಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ್-ಶ್ರೀಲಂಕಾ ಒಟ್ಟು 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಶ್ರೀಲಂಕಾ vs ಬಾಂಗ್ಲಾದೇಶ್: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2027ರ ಸರಣಿಯ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವುದು ಶ್ರೀಲಂಕಾ ಮತ್ತು ಬಾಂಗ್ಲಾದೇಶ್ ತಂಡಗಳು. ಶ್ರೀಲಂಕಾದ ಗಾಲೆಯಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯವು ಇಂದಿನಿಂದ (ಜೂನ್ 17) ಶುರುವಾಗಲಿದೆ. ಈ ಸರಣಿಯಲ್ಲಿ ಬಾಂಗ್ಲಾದೇಶ್-ಶ್ರೀಲಂಕಾ ಒಟ್ಟು 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

2 / 5
ಭಾರತ vs ಇಂಗ್ಲೆಂಡ್: ಇಂಡೊ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಶುಕ್ರವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

ಭಾರತ vs ಇಂಗ್ಲೆಂಡ್: ಇಂಡೊ-ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಲಾಗುತ್ತದೆ. ಶುಕ್ರವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಲೀಡ್ಸ್​ನ ಹೆಡಿಂಗ್ಲೆ ಸ್ಟೇಡಿಯಂ ಆತಿಥ್ಯವಹಿಸಲಿದ್ದು, ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಲಿದ್ದಾರೆ.

3 / 5
ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ: ವಿಂಡೀಸ್-ಆಸೀಸ್ ನಡುವಿನ ಟೆಸ್ಟ್ ಸರಣಿಯು ಜೂನ್ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ವೆಸ್ಟ್ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆಯಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು ಒಟ್ಟು 3 ಟೆಸ್ಟ್ ಪಂದ್ಯಗಳನ್ನಾಡಲಿದೆ.

ವೆಸ್ಟ್ ಇಂಡೀಸ್ vs ಆಸ್ಟ್ರೇಲಿಯಾ: ವಿಂಡೀಸ್-ಆಸೀಸ್ ನಡುವಿನ ಟೆಸ್ಟ್ ಸರಣಿಯು ಜೂನ್ 25 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ವೆಸ್ಟ್ ಇಂಡೀಸ್​ನ ಬಾರ್ಬಡೋಸ್​ನಲ್ಲಿ ನಡೆಯಲಿದ್ದು, ಈ ಸಿರೀಸ್​ನಲ್ಲಿ ಉಭಯ ತಂಡಗಳು ಒಟ್ಟು 3 ಟೆಸ್ಟ್ ಪಂದ್ಯಗಳನ್ನಾಡಲಿದೆ.

4 / 5
ಝಿಂಬಾಬ್ವೆ vs ಸೌತ್ ಆಫ್ರಿಕಾ: ವಿಶ್ವ ಟೆಸ್ಟ್ ಚಾಂಪಿಯನ್​ ಸೌತ್ ಆಫ್ರಿಕಾ ತಂಡವು ಜೂನ್ 28 ರಂದು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯಲಿದೆ. ಝಿಂಬಾಬ್ವೆಯಲ್ಲಿ ನಡೆಯಲಿರುವ ಈ ಟೆಸ್ಟ್​ ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ಜೂನ್ ತಿಂಗಳಾಂತ್ಯದೊಳಗೆ ಒಟ್ಟು 8 ತಂಡಗಳು ಟೆಸ್ಟ್ ಸರಣಿಯನ್ನು ಆರಂಭಿಸಲಿದೆ.

ಝಿಂಬಾಬ್ವೆ vs ಸೌತ್ ಆಫ್ರಿಕಾ: ವಿಶ್ವ ಟೆಸ್ಟ್ ಚಾಂಪಿಯನ್​ ಸೌತ್ ಆಫ್ರಿಕಾ ತಂಡವು ಜೂನ್ 28 ರಂದು ಝಿಂಬಾಬ್ವೆ ವಿರುದ್ಧ ಕಣಕ್ಕಿಳಿಯಲಿದೆ. ಝಿಂಬಾಬ್ವೆಯಲ್ಲಿ ನಡೆಯಲಿರುವ ಈ ಟೆಸ್ಟ್​ ಸರಣಿಯಲ್ಲಿ ಒಟ್ಟು 2 ಪಂದ್ಯಗಳನ್ನಾಡಲಾಗುತ್ತದೆ. ಅದರಂತೆ ಜೂನ್ ತಿಂಗಳಾಂತ್ಯದೊಳಗೆ ಒಟ್ಟು 8 ತಂಡಗಳು ಟೆಸ್ಟ್ ಸರಣಿಯನ್ನು ಆರಂಭಿಸಲಿದೆ.

5 / 5

Published On - 8:09 am, Tue, 17 June 25

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ