AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ರೋಹಿತ್ ಶರ್ಮಾಗೆ ಗಾಯ: 5ನೇ ಟೆಸ್ಟ್ ಪಂದ್ಯದಲ್ಲಿ ಆಡ್ತಾರಾ?

Rohit Sharma's injury update: ಚೆಂಡು ಬಡಿದ ನೋವಿನಿಂದ ಹಿಟ್​ಮ್ಯಾನ್ ಬಳಲಿದ್ದರು. ಇನ್ನು ರನ್​ ಓಡುವ ವೇಳೆ ಎಡ ಮೊಣಕಾಲಿಗೆ ಪಾದ ಕೂಡ ತಿರುಚಿಕೊಂಡಿತ್ತು. ಹೀಗಾಗಿ ಇಂಗ್ಲೆಂಡ್ ಇನಿಂಗ್ಸ್​ ವೇಳೆ ರೋಹಿತ್ ಶರ್ಮಾ ಫೀಲ್ಡಿಂಗ್​ಗೆ ಇಳಿದಿರಲಿಲ್ಲ.

TV9 Web
| Edited By: |

Updated on: Sep 07, 2021 | 8:31 PM

Share
ಇಂಗ್ಲೆಂಡ್​ ವಿರುದ್ದದ ಐದು ಟೆಸ್ಟ್​ ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ 2ನೇ ಪಂದ್ಯವನ್ನು ಟೀಮ್ ಇಂಡಿಯಾ ಗೆದ್ದುಕೊಂಡಿತು. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿತು. ಓವಲ್​ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಮತ್ತೆ ಭರ್ಜರಿ ಜಯ ದಾಖಲಿಸಿರುವ ಟೀಮ್ ಇಂಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಮ್ಯಾಚೆಂಸ್ಟರ್​ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಗೆಲುವು ಅಥವಾ ಡ್ರಾ ಸಾಧಿಸಿದರೆ ಸರಣಿ ಟೀಮ್ ಇಂಡಿಯಾ ವಶವಾಗಲಿದೆ.

ಇಂಗ್ಲೆಂಡ್​ ವಿರುದ್ದದ ಐದು ಟೆಸ್ಟ್​ ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಮೊದಲ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ 2ನೇ ಪಂದ್ಯವನ್ನು ಟೀಮ್ ಇಂಡಿಯಾ ಗೆದ್ದುಕೊಂಡಿತು. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಜಯ ಸಾಧಿಸಿತು. ಓವಲ್​ ಮೈದಾನದಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಮತ್ತೆ ಭರ್ಜರಿ ಜಯ ದಾಖಲಿಸಿರುವ ಟೀಮ್ ಇಂಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಮ್ಯಾಚೆಂಸ್ಟರ್​ನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಗೆಲುವು ಅಥವಾ ಡ್ರಾ ಸಾಧಿಸಿದರೆ ಸರಣಿ ಟೀಮ್ ಇಂಡಿಯಾ ವಶವಾಗಲಿದೆ.

1 / 5
ಆದರೆ 5ನೇ ಟೆಸ್ಟ್​ ಪಂದ್ಯಕ್ಕೂ ಮುನ್ನ ಇದೀಗ ಟೀಮ್ ಇಂಡಿಯಾಗೆ ಹೊಸ ಚಿಂತೆ ಎದುರಾಗಿದೆ. ಹೌದು, ನಾಲ್ಕನೇ ಟೆಸ್ಟ್​ ಪಂದ್ಯದ ಗೆಲುವಿನ ರೂವಾರಿಗಳಲ್ಲಿ ಒಬ್ಬರಾದ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ದ್ವಿತೀಯ ಇನಿಂಗ್ಸ್​​ನಲ್ಲಿ ಭರ್ಜರಿ ಶತಕ (127 ರನ್) ಬಾರಿಸಿ ಟೀಮ್ ಇಂಡಿಯಾ ಮೊತ್ತವನ್ನು 466 ಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಿಟ್​ಮ್ಯಾನ್ ಇಂಗ್ಲೆಂಡ್​ ವೇಗಿಗಳಿಂದ ಗಾಯಗೊಂಡಿದ್ದರು.

ಆದರೆ 5ನೇ ಟೆಸ್ಟ್​ ಪಂದ್ಯಕ್ಕೂ ಮುನ್ನ ಇದೀಗ ಟೀಮ್ ಇಂಡಿಯಾಗೆ ಹೊಸ ಚಿಂತೆ ಎದುರಾಗಿದೆ. ಹೌದು, ನಾಲ್ಕನೇ ಟೆಸ್ಟ್​ ಪಂದ್ಯದ ಗೆಲುವಿನ ರೂವಾರಿಗಳಲ್ಲಿ ಒಬ್ಬರಾದ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ. ದ್ವಿತೀಯ ಇನಿಂಗ್ಸ್​​ನಲ್ಲಿ ಭರ್ಜರಿ ಶತಕ (127 ರನ್) ಬಾರಿಸಿ ಟೀಮ್ ಇಂಡಿಯಾ ಮೊತ್ತವನ್ನು 466 ಕ್ಕೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಿಟ್​ಮ್ಯಾನ್ ಇಂಗ್ಲೆಂಡ್​ ವೇಗಿಗಳಿಂದ ಗಾಯಗೊಂಡಿದ್ದರು.

2 / 5
ಇಂಗ್ಲೆಂಡ್​ ವೇಗಿಗಳ ಮಾರಕ ದಾಳಿಯಿಂದಾಗಿ ರೋಹಿತ್ ಶರ್ಮಾ ತೊಡೆ ಭಾಗದಲ್ಲಿ ಹಲವು ಬಾರಿ ಚೆಂಡು ಬಡಿದಿತ್ತು. ಇದರಿಂದ ಸಣ್ಣ ಪ್ರಮಾಣದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗಿತ್ತು. ಅಷ್ಟೇ ಅಲ್ಲದೆ ಚೆಂಡು ಬಡಿದ ನೋವಿನಿಂದ ಹಿಟ್​ಮ್ಯಾನ್ ಬಳಲಿದ್ದರು. ಇನ್ನು ರನ್​ ಓಡುವ ವೇಳೆ ಎಡ ಮೊಣಕಾಲಿಗೆ ಪಾದ ಕೂಡ ತಿರುಚಿಕೊಂಡಿತ್ತು. ಹೀಗಾಗಿ ಇಂಗ್ಲೆಂಡ್ ಇನಿಂಗ್ಸ್​ ವೇಳೆ ರೋಹಿತ್ ಶರ್ಮಾ ಫೀಲ್ಡಿಂಗ್​ಗೆ ಇಳಿದಿರಲಿಲ್ಲ.

ಇಂಗ್ಲೆಂಡ್​ ವೇಗಿಗಳ ಮಾರಕ ದಾಳಿಯಿಂದಾಗಿ ರೋಹಿತ್ ಶರ್ಮಾ ತೊಡೆ ಭಾಗದಲ್ಲಿ ಹಲವು ಬಾರಿ ಚೆಂಡು ಬಡಿದಿತ್ತು. ಇದರಿಂದ ಸಣ್ಣ ಪ್ರಮಾಣದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗಿತ್ತು. ಅಷ್ಟೇ ಅಲ್ಲದೆ ಚೆಂಡು ಬಡಿದ ನೋವಿನಿಂದ ಹಿಟ್​ಮ್ಯಾನ್ ಬಳಲಿದ್ದರು. ಇನ್ನು ರನ್​ ಓಡುವ ವೇಳೆ ಎಡ ಮೊಣಕಾಲಿಗೆ ಪಾದ ಕೂಡ ತಿರುಚಿಕೊಂಡಿತ್ತು. ಹೀಗಾಗಿ ಇಂಗ್ಲೆಂಡ್ ಇನಿಂಗ್ಸ್​ ವೇಳೆ ರೋಹಿತ್ ಶರ್ಮಾ ಫೀಲ್ಡಿಂಗ್​ಗೆ ಇಳಿದಿರಲಿಲ್ಲ.

3 / 5
 ಇದೇ ಕಾರಣದಿಂದ ಇದೀಗ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫಾರ್ಡ್​ನಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಟೆಸ್ಟ್​ನಲ್ಲಿ ಹಿಟ್​ಮ್ಯಾನ್ ಆಡುವುದು ಅನುಮಾನ ಎನ್ನಲಾಗಿದೆ. ಇದಾಗ್ಯೂ ಕೊನೆಯ ಪಂದ್ಯವನ್ನಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ರೋಹಿತ್ ಶರ್ಮಾ. ಪಂದ್ಯಕ್ಕೆ ಇನ್ನು 3 ದಿನಗಳಿವೆ. ಸದ್ಯ ಗಾಯವನ್ನು ಪರಿಶೀಲಿಸಲಾಗುತ್ತಿದೆ. ಫಿಸಿಯೋ ಗಾಯದ ಬಗ್ಗೆ ಕ್ಷಣ ಕ್ಷಣಕ್ಕೂ ಗಮನ ಹರಿಸುತ್ತಿದ್ದಾರೆ. ಅಂತಹ ಗಂಭೀರ ಗಾಯವಲ್ಲ. ಹೀಗಾಗಿ ಬೇಗ ಗುಣವಾಗುತ್ತೆ ಎಂದು ಭಾವಿಸುತ್ತೇನೆ ಎಂದು ರೋಹಿತ್ ಹೇಳಿದ್ದಾರೆ.

ಇದೇ ಕಾರಣದಿಂದ ಇದೀಗ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫಾರ್ಡ್​ನಲ್ಲಿ ನಡೆಯಲಿರುವ ಐದನೇ ಮತ್ತು ಅಂತಿಮ ಟೆಸ್ಟ್​ನಲ್ಲಿ ಹಿಟ್​ಮ್ಯಾನ್ ಆಡುವುದು ಅನುಮಾನ ಎನ್ನಲಾಗಿದೆ. ಇದಾಗ್ಯೂ ಕೊನೆಯ ಪಂದ್ಯವನ್ನಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ರೋಹಿತ್ ಶರ್ಮಾ. ಪಂದ್ಯಕ್ಕೆ ಇನ್ನು 3 ದಿನಗಳಿವೆ. ಸದ್ಯ ಗಾಯವನ್ನು ಪರಿಶೀಲಿಸಲಾಗುತ್ತಿದೆ. ಫಿಸಿಯೋ ಗಾಯದ ಬಗ್ಗೆ ಕ್ಷಣ ಕ್ಷಣಕ್ಕೂ ಗಮನ ಹರಿಸುತ್ತಿದ್ದಾರೆ. ಅಂತಹ ಗಂಭೀರ ಗಾಯವಲ್ಲ. ಹೀಗಾಗಿ ಬೇಗ ಗುಣವಾಗುತ್ತೆ ಎಂದು ಭಾವಿಸುತ್ತೇನೆ ಎಂದು ರೋಹಿತ್ ಹೇಳಿದ್ದಾರೆ.

4 / 5
ಹೀಗಾಗಿ ಇನ್ನೆರಡು ದಿನಗಳಲ್ಲಿ ಹಿಟ್​ಮ್ಯಾನ್ ಚೇತರಿಸಿಕೊಂಡರೆ ಮಾತ್ರ ಫೈನಲ್ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. ಒಂದು ವೇಳೆ ರೋಹಿತ್ ಶರ್ಮಾ ಅಂತಿಮ ಟೆಸ್ಟ್​ಗೆ ಅಲಭ್ಯರಾದರೆ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಐದನೇ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಡ್ರಾ ಸಾಧಿಸಿದರೂ ಸರಣಿ ಭಾರತ ಪಾಲಾಗಲಿದೆ. ಈ ಮೂಲಕ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಜಯಿಸುವ ವಿಶ್ವಾಸದಲ್ಲಿದೆ ಭಾರತ ತಂಡ.

ಹೀಗಾಗಿ ಇನ್ನೆರಡು ದಿನಗಳಲ್ಲಿ ಹಿಟ್​ಮ್ಯಾನ್ ಚೇತರಿಸಿಕೊಂಡರೆ ಮಾತ್ರ ಫೈನಲ್ ಟೆಸ್ಟ್ ಪಂದ್ಯವನ್ನಾಡಲಿದ್ದಾರೆ. ಒಂದು ವೇಳೆ ರೋಹಿತ್ ಶರ್ಮಾ ಅಂತಿಮ ಟೆಸ್ಟ್​ಗೆ ಅಲಭ್ಯರಾದರೆ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಇನಿಂಗ್ಸ್​ ಆರಂಭಿಸುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಐದನೇ ಟೆಸ್ಟ್​ ಪಂದ್ಯದಲ್ಲಿ ಟೀಮ್ ಇಂಡಿಯಾ ಡ್ರಾ ಸಾಧಿಸಿದರೂ ಸರಣಿ ಭಾರತ ಪಾಲಾಗಲಿದೆ. ಈ ಮೂಲಕ ಇಂಗ್ಲೆಂಡ್​ನಲ್ಲಿ ಟೆಸ್ಟ್ ಸರಣಿ ಜಯಿಸುವ ವಿಶ್ವಾಸದಲ್ಲಿದೆ ಭಾರತ ತಂಡ.

5 / 5
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ