Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: 8 ಗಂಟೆಗೆ ಪಂದ್ಯ ಶುರು: 12.10 ರಿಂದ ಓವರ್​ ಕಡಿತ..!

India Vs England Semi Final: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕೆ ಐಸಿಸಿ ಕಟ್ ಆಫ್ ಟೈಮ್ ನಿಗದಿ ಮಾಡಿದೆ. ಅದರಂತೆ 8 ಗಂಟೆಯಿಂದ ಶುರುವಾಗುವ ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡಿದರೆ 12.10 AM ವರೆಗೆ ಯಾವುದೇ ಓವರ್ ಕಡಿತ ಮಾಡಲಾಗುವುದಿಲ್ಲ. ಇನ್ನು 12.10 AM ಬಳಿಕ ಓವರ್ ಕಡಿತದೊಂದಿಗೆ ಪಂದ್ಯ ಆಯೋಜಿಸಲು ಸಾಧ್ಯವಾಗದೇ ಇದ್ದರೆ ಮಾತ್ರ ಮ್ಯಾಚ್ ರದ್ದು ಮಾಡಲಾಗುತ್ತದೆ.

ಝಾಹಿರ್ ಯೂಸುಫ್
|

Updated on: Jun 27, 2024 | 12:08 PM

ಗುರುವಾರ (ಜೂ.27) ನಡೆಯಲಿರುವ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ವರದಿಗಳ ಪ್ರಕಾರ, ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ.

ಗುರುವಾರ (ಜೂ.27) ನಡೆಯಲಿರುವ ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಗಯಾನಾದ ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ವರದಿಗಳ ಪ್ರಕಾರ, ಪಂದ್ಯಕ್ಕೆ ಮಳೆ ಅಡಚಣೆಯನ್ನು ಉಂಟು ಮಾಡುವುದು ಬಹುತೇಕ ಖಚಿತ.

1 / 5
ಅದರಲ್ಲೂ ಪಂದ್ಯ ನಿಗದಿತ ಸಮಯದ ವೇಳೆ ಶೇ.50 ರಿಂದ ಶೇ.80 ರಷ್ಟು ಮಳೆಯಾಗಲಿದೆ ಎಂದು ಬಹುತೇಕ ಅಕ್ಯುವೆದರ್ ರಿಪೋರ್ಟ್ ಸೇರಿದಂತೆ ಬಹುತೇಕ ಹವಾಮಾನ ವರದಿಗಳು ತಿಳಿಸಿದೆ. ಹೀಗಾಗಿ ನಿಗದಿತ ಸಮಯದೊಳಗೆ ಮ್ಯಾಚ್ ನಡೆಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಸಮಯವನ್ನು ತೆಗೆದುಕೊಳ್ಳಲಾಗುತ್ತದೆ.

ಅದರಲ್ಲೂ ಪಂದ್ಯ ನಿಗದಿತ ಸಮಯದ ವೇಳೆ ಶೇ.50 ರಿಂದ ಶೇ.80 ರಷ್ಟು ಮಳೆಯಾಗಲಿದೆ ಎಂದು ಬಹುತೇಕ ಅಕ್ಯುವೆದರ್ ರಿಪೋರ್ಟ್ ಸೇರಿದಂತೆ ಬಹುತೇಕ ಹವಾಮಾನ ವರದಿಗಳು ತಿಳಿಸಿದೆ. ಹೀಗಾಗಿ ನಿಗದಿತ ಸಮಯದೊಳಗೆ ಮ್ಯಾಚ್ ನಡೆಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಸಮಯವನ್ನು ತೆಗೆದುಕೊಳ್ಳಲಾಗುತ್ತದೆ.

2 / 5
ಒಂದು ವೇಳೆ ಪಂದ್ಯದ ಸಮಯದಲ್ಲಿ ಬಂದರೆ ಓವರ್ ಕಡಿತಕ್ಕೂ ಸಮಯ ನಿಗದಿ ಮಾಡಲಾಗಿದೆ. ಅದರಂತೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದ್ದು, ಇದಾದ ಬಳಿಕ 4 ಗಂಟೆಗಳ ಕಾಲ ಯಾವುದೇ ಓವರ್ ಕಡಿತ ಇರುವುದಿಲ್ಲ. ಅಂದರೆ 12.10 ರೊಳಗೆ ಮಳೆ ಬಂದು ಪಂದ್ಯ ತಡವಾದರೂ ಯಾವುದೇ ಓವರ್ ಕಡಿತ ಮಾಡುವುದಿಲ್ಲ ಎಂದು ಐಸಿಸಿ ಮೂಲಗಳು ತಿಳಿಸಿವೆ.

ಒಂದು ವೇಳೆ ಪಂದ್ಯದ ಸಮಯದಲ್ಲಿ ಬಂದರೆ ಓವರ್ ಕಡಿತಕ್ಕೂ ಸಮಯ ನಿಗದಿ ಮಾಡಲಾಗಿದೆ. ಅದರಂತೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯ ಶುರುವಾಗಲಿದ್ದು, ಇದಾದ ಬಳಿಕ 4 ಗಂಟೆಗಳ ಕಾಲ ಯಾವುದೇ ಓವರ್ ಕಡಿತ ಇರುವುದಿಲ್ಲ. ಅಂದರೆ 12.10 ರೊಳಗೆ ಮಳೆ ಬಂದು ಪಂದ್ಯ ತಡವಾದರೂ ಯಾವುದೇ ಓವರ್ ಕಡಿತ ಮಾಡುವುದಿಲ್ಲ ಎಂದು ಐಸಿಸಿ ಮೂಲಗಳು ತಿಳಿಸಿವೆ.

3 / 5
ಇನ್ನು ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ 12.10 AM (IST) ಬಳಿಕ ಓವರ್ ಕಡಿತ ಮಾಡಲಾಗುತ್ತದೆ. ಹೀಗಾಗಿ ಪಂದ್ಯಕ್ಕೆ ನಿಗದಿಯಾದ ಮೊದಲ ನಾಲ್ಕು ಗಂಟೆಗಳ ಒಳಗೆ ಮಳೆ ಬಂದು ಪಂದ್ಯ ವಿಳಂಬವಾದರೂ ಸಂಪೂರ್ಣ 20 ಓವರ್​ಗಳ ಮ್ಯಾಚ್​ ನಡೆಯಲಿದೆ. ಇನ್ನು 12.15 ರಿಂದ ಪ್ರತಿ ಐದು ನಿಮಿಷದಂತೆ ಒಂದೊಂದು ಓವರ್​ಗಳನ್ನು ಕಡಿತ ಮಾಡಲಾಗುತ್ತದೆ.

ಇನ್ನು ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದರೆ 12.10 AM (IST) ಬಳಿಕ ಓವರ್ ಕಡಿತ ಮಾಡಲಾಗುತ್ತದೆ. ಹೀಗಾಗಿ ಪಂದ್ಯಕ್ಕೆ ನಿಗದಿಯಾದ ಮೊದಲ ನಾಲ್ಕು ಗಂಟೆಗಳ ಒಳಗೆ ಮಳೆ ಬಂದು ಪಂದ್ಯ ವಿಳಂಬವಾದರೂ ಸಂಪೂರ್ಣ 20 ಓವರ್​ಗಳ ಮ್ಯಾಚ್​ ನಡೆಯಲಿದೆ. ಇನ್ನು 12.15 ರಿಂದ ಪ್ರತಿ ಐದು ನಿಮಿಷದಂತೆ ಒಂದೊಂದು ಓವರ್​ಗಳನ್ನು ಕಡಿತ ಮಾಡಲಾಗುತ್ತದೆ.

4 / 5
ಮೀಸಲು ದಿನದಾಟವಿಲ್ಲ: ಭಾರತ ಮತ್ತು ಇಂಗ್ಲೆಂಡ್ ನಡುವಣ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನದಾಟವಿಲ್ಲ. ಒಂದು ವೇಳೆ ಮಳೆ ಬಂದರೆ 250 ನಿಮಿಷಗಳನ್ನು ಹೆಚ್ಚುವರಿ ಬಳಸಲಾಗುತ್ತದೆ. ಈ ಮೂಲಕ ಪಂದ್ಯವನ್ನು ಆಯೋಜಿಸಲು ಪ್ರಯತ್ನಿಸಲಿದ್ದಾರೆ. ಇದಾಗ್ಯೂ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಮ್ಯಾಚ್ ರದ್ದಾಗಲಿದೆ. ಅಲ್ಲದೆ ಸೂಪರ್-8 ಹಂತದ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡವು ಫೈನಲ್​ಗೆ ಪ್ರವೇಶಿಸಲಿದೆ.

ಮೀಸಲು ದಿನದಾಟವಿಲ್ಲ: ಭಾರತ ಮತ್ತು ಇಂಗ್ಲೆಂಡ್ ನಡುವಣ ಸೆಮಿಫೈನಲ್ ಪಂದ್ಯಕ್ಕೆ ಮೀಸಲು ದಿನದಾಟವಿಲ್ಲ. ಒಂದು ವೇಳೆ ಮಳೆ ಬಂದರೆ 250 ನಿಮಿಷಗಳನ್ನು ಹೆಚ್ಚುವರಿ ಬಳಸಲಾಗುತ್ತದೆ. ಈ ಮೂಲಕ ಪಂದ್ಯವನ್ನು ಆಯೋಜಿಸಲು ಪ್ರಯತ್ನಿಸಲಿದ್ದಾರೆ. ಇದಾಗ್ಯೂ ಪಂದ್ಯವನ್ನು ಆಯೋಜಿಸಲು ಸಾಧ್ಯವಾಗದೇ ಇದ್ದರೆ, ಮ್ಯಾಚ್ ರದ್ದಾಗಲಿದೆ. ಅಲ್ಲದೆ ಸೂಪರ್-8 ಹಂತದ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡವು ಫೈನಲ್​ಗೆ ಪ್ರವೇಶಿಸಲಿದೆ.

5 / 5
Follow us
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ