AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ ತಂಡ ಗೆಲ್ಲಲ್ಲ ಅಂದೋರು ಯಾರು? ಸೋಲಲ್ಲ ಎಂದು ತಿಳಿಸಿದವರು ಯಾರು?

India vs England: 5 ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ 5 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 336 ರನ್​ಗಳ ಅಮೋಘ ಗೆಲುವು ದಾಖಲಿಸಿತ್ತು. ಮೂರನೇ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡವು 22 ರನ್​ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿದ್ದರು. ನಾಲ್ಕ ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಇದೀಗ ಐದನೇ ಮ್ಯಾಚ್​ನಲ್ಲಿ 6 ರನ್​ಗಳ ಐತಿಹಾಸಿಕ ವಿಜಯ ಸಾಧಿಸಿ ಟೀಮ್ ಇಂಡಿಯಾ ಸರಣಿಯನ್ನು 2-2 ಅಂತರದಿಂದ ಡ್ರಾನಲ್ಲಿ ಅಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದೆ.

ಝಾಹಿರ್ ಯೂಸುಫ್
|

Updated on: Aug 05, 2025 | 8:30 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿ ಮುಗಿದಿದೆ. ಐದು ಮ್ಯಾಚ್​ಗಳ ಈ ಸರಣಿಯನ್ನು 2-2 ಅಂತರದಿಂದ ಡ್ರಾಗೊಳಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ವಿಶೇಷ ಎಂದರೆ ಈ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎನ್ನಲಾಗಿತ್ತು. ಅದರಲ್ಲೂ ಕೆಲವರು ಟೀಮ್ ಇಂಡಿಯಾ ಹೀನಾಯವಾಗಿ ಸೋಲನುಭವಿಸಲಿದೆ ಎಂದಿದ್ದರು.

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿ ಮುಗಿದಿದೆ. ಐದು ಮ್ಯಾಚ್​ಗಳ ಈ ಸರಣಿಯನ್ನು 2-2 ಅಂತರದಿಂದ ಡ್ರಾಗೊಳಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. ವಿಶೇಷ ಎಂದರೆ ಈ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡಕ್ಕೆ ಸೋಲು ಕಟ್ಟಿಟ್ಟ ಬುತ್ತಿ ಎನ್ನಲಾಗಿತ್ತು. ಅದರಲ್ಲೂ ಕೆಲವರು ಟೀಮ್ ಇಂಡಿಯಾ ಹೀನಾಯವಾಗಿ ಸೋಲನುಭವಿಸಲಿದೆ ಎಂದಿದ್ದರು.

1 / 6
ಹೀಗೆ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಸೋಲಿನ ಬಗ್ಗೆ ಭವಿಷ್ಯ ನುಡಿದಿದ್ದವರು ಯಾರು? ಇಂಗ್ಲೆಂಡ್ ವಿರುದ್ಧದ ಭಾರತ ತಂಡ ಡ್ರಾ ಸಾಧಿಸಲಿದೆ, ಖಂಡಿತ ಸರಣಿ ಗೆಲಲ್ಲಲಿದೆ ಎಂದ ಕಾಮೆಂಟೇಟರ್​ಗಳು ಯಾರೆಲ್ಲಾ ಎಂಬುದರ ಸಂಕ್ಷಿಪ್ತ ಮಾಹಿತಿ  ಈ ಕೆಳಗಿನಂತಿದೆ...

ಹೀಗೆ ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಸೋಲಿನ ಬಗ್ಗೆ ಭವಿಷ್ಯ ನುಡಿದಿದ್ದವರು ಯಾರು? ಇಂಗ್ಲೆಂಡ್ ವಿರುದ್ಧದ ಭಾರತ ತಂಡ ಡ್ರಾ ಸಾಧಿಸಲಿದೆ, ಖಂಡಿತ ಸರಣಿ ಗೆಲಲ್ಲಲಿದೆ ಎಂದ ಕಾಮೆಂಟೇಟರ್​ಗಳು ಯಾರೆಲ್ಲಾ ಎಂಬುದರ ಸಂಕ್ಷಿಪ್ತ ಮಾಹಿತಿ  ಈ ಕೆಳಗಿನಂತಿದೆ...

2 / 6
ಇಂಗ್ಲೆಂಡ್​ನ ಮಾಜಿ ಆಟಗಾರ ಸ್ಕೈ ಸ್ಪೋರ್ಟ್ಸ್​ ಕಾಮೆಂಟೇಟರ್ ಡೇವಿಡ್ ಲಾಯ್ಡ್​ ಈ ಬಾರಿ ಭಾರತ ತಂಡ 4-0 ಅಂತರದಿಂದ ಸೋಲಲಿದೆ ಎಂದು ಭವಿಷ್ಯ ನುಡಿದಿದ್ದರು. ಇನ್ನು ಮಾಜಿ ಕ್ರಿಕೆಟಿಗ ಫಿಲ್ ಟಫ್ನೆಲ್ ಇಂಗ್ಲೆಂಡ್ ತಂಡವು 3-1 ಅಂತರದಿಂದ ಸರಣಿ ಗೆಲ್ಲಲಿದೆ ಎಂದಿದ್ದರು. ಆದರೆ ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್​ ಈ ಬಾರಿ ಇಂಗ್ಲೆಂಡ್ ತಂಡವನ್ನು 2-3 ಅಂತರದಿಂದ ಭಾರತ ಮಣಿಸಲಿದೆ ಎಂದು ಭವಿಷ್ಯ ನುಡಿದಿದ್ದರು.

ಇಂಗ್ಲೆಂಡ್​ನ ಮಾಜಿ ಆಟಗಾರ ಸ್ಕೈ ಸ್ಪೋರ್ಟ್ಸ್​ ಕಾಮೆಂಟೇಟರ್ ಡೇವಿಡ್ ಲಾಯ್ಡ್​ ಈ ಬಾರಿ ಭಾರತ ತಂಡ 4-0 ಅಂತರದಿಂದ ಸೋಲಲಿದೆ ಎಂದು ಭವಿಷ್ಯ ನುಡಿದಿದ್ದರು. ಇನ್ನು ಮಾಜಿ ಕ್ರಿಕೆಟಿಗ ಫಿಲ್ ಟಫ್ನೆಲ್ ಇಂಗ್ಲೆಂಡ್ ತಂಡವು 3-1 ಅಂತರದಿಂದ ಸರಣಿ ಗೆಲ್ಲಲಿದೆ ಎಂದಿದ್ದರು. ಆದರೆ ಮತ್ತೊಂದೆಡೆ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕಲ್ ಕ್ಲಾರ್ಕ್​ ಈ ಬಾರಿ ಇಂಗ್ಲೆಂಡ್ ತಂಡವನ್ನು 2-3 ಅಂತರದಿಂದ ಭಾರತ ಮಣಿಸಲಿದೆ ಎಂದು ಭವಿಷ್ಯ ನುಡಿದಿದ್ದರು.

3 / 6
ಸೌತ್ ಆಫ್ರಿಕಾದ ಮಾಜಿ ವೇಗಿ ಡೇಲ್ ಸ್ಟೈನ್ ಇಂಗ್ಲೆಂಡ್ 3-2 ಅಂತರದಿಂದ ಸರಣಿ ಗೆಲ್ಲಲಿದೆ ಎಂದರೆ, ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ 4-1 ಅಂತರದಿಂದ ಆಂಗ್ಲರು ಸರಣಿಯನ್ನು ವಶಪಡಿಸಿಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಗ್ಲೆಂಡ್ 3-2 ಅಂತರದಿಂದ ಗೆಲ್ಲಲಿದ್ದಾರೆ ಎಂದು ತಿಳಿಸಿದ್ದರು. ಇನ್ನು ಇಂಗ್ಲೆಂಡ್ ತಂಡದ ಆಟಗಾರ ಜೋಸ್ ಬಟ್ಲರ್ ಕೂಡ ಭಾರತಕ್ಕೆ 3-2 ಅಂತರದ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದರು.

ಸೌತ್ ಆಫ್ರಿಕಾದ ಮಾಜಿ ವೇಗಿ ಡೇಲ್ ಸ್ಟೈನ್ ಇಂಗ್ಲೆಂಡ್ 3-2 ಅಂತರದಿಂದ ಸರಣಿ ಗೆಲ್ಲಲಿದೆ ಎಂದರೆ, ಇಂಗ್ಲೆಂಡ್ ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ 4-1 ಅಂತರದಿಂದ ಆಂಗ್ಲರು ಸರಣಿಯನ್ನು ವಶಪಡಿಸಿಕೊಳ್ಳಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಇಂಗ್ಲೆಂಡ್ 3-2 ಅಂತರದಿಂದ ಗೆಲ್ಲಲಿದ್ದಾರೆ ಎಂದು ತಿಳಿಸಿದ್ದರು. ಇನ್ನು ಇಂಗ್ಲೆಂಡ್ ತಂಡದ ಆಟಗಾರ ಜೋಸ್ ಬಟ್ಲರ್ ಕೂಡ ಭಾರತಕ್ಕೆ 3-2 ಅಂತರದ ಸೋಲು ಕಟ್ಟಿಟ್ಟ ಬುತ್ತಿ ಎಂದಿದ್ದರು.

4 / 6
ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಆಂಗ್ಲರು ಸರಣಿಯನ್ನು 3-1 ಅಂತರದಿಂದ ಕೊನೆಗೊಳಿಸಲಿದ್ದಾರೆ ಎಂದರೆ, ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಸರಣಿ 2-2 ಅಂತರದಿಂದ ಡ್ರಾ ಆಗಲಿದೆ ಎಂದು ಭವಿಷ್ಯ ನುಡಿದಿದ್ದರು. ಇನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕರುಗಳಾದ ಮೈಕಲ್ ವಾನ್ ಹಾಗೂ ಅಲಿಸ್ಟರ್ ಕುಕ್  3-1 ಅಂತರದಿಂದ ಭಾರತ ತಂಡ ಸೋಲಲಿದೆ ಎಂದು ಭವಿಷ್ಯ ನುಡಿದಿದ್ದರು.

ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಆಂಗ್ಲರು ಸರಣಿಯನ್ನು 3-1 ಅಂತರದಿಂದ ಕೊನೆಗೊಳಿಸಲಿದ್ದಾರೆ ಎಂದರೆ, ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಸರಣಿ 2-2 ಅಂತರದಿಂದ ಡ್ರಾ ಆಗಲಿದೆ ಎಂದು ಭವಿಷ್ಯ ನುಡಿದಿದ್ದರು. ಇನ್ನು ಇಂಗ್ಲೆಂಡ್ ತಂಡದ ಮಾಜಿ ನಾಯಕರುಗಳಾದ ಮೈಕಲ್ ವಾನ್ ಹಾಗೂ ಅಲಿಸ್ಟರ್ ಕುಕ್  3-1 ಅಂತರದಿಂದ ಭಾರತ ತಂಡ ಸೋಲಲಿದೆ ಎಂದು ಭವಿಷ್ಯ ನುಡಿದಿದ್ದರು.

5 / 6
11 ಮಾಜಿ ಕ್ರಿಕೆಟಿಗರುಗಳ ಈ ಭವಿಷ್ಯದಲ್ಲಿ ನಿಜವಾಗಿದ್ದು ದಿನೇಶ್ ಕಾರ್ತಿಕ್ ಅವರ ಪ್ರೆಡಿಕ್ಷನ್. ಡಿಕೆ ಐದು ಪಂದ್ಯಗಳ ಸರಣಿಯು 2-2 ಅಂತರದಿಂದ ಕೊನೆಗೊಳ್ಳಲಿದೆ ಎಂದು ತಿಳಿಸಿದ್ದರು. ಅದರಂತೆ ಇದೀಗ ಟೀಮ್ ಇಂಡಿಯಾ ಆತಿಥೇಯ ಆಂಗ್ಲರ ವಿರುದ್ಧ 2-2 ಅಂತರದಿಂದ ಸರಣಿಯನ್ನು ಡ್ರಾ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

11 ಮಾಜಿ ಕ್ರಿಕೆಟಿಗರುಗಳ ಈ ಭವಿಷ್ಯದಲ್ಲಿ ನಿಜವಾಗಿದ್ದು ದಿನೇಶ್ ಕಾರ್ತಿಕ್ ಅವರ ಪ್ರೆಡಿಕ್ಷನ್. ಡಿಕೆ ಐದು ಪಂದ್ಯಗಳ ಸರಣಿಯು 2-2 ಅಂತರದಿಂದ ಕೊನೆಗೊಳ್ಳಲಿದೆ ಎಂದು ತಿಳಿಸಿದ್ದರು. ಅದರಂತೆ ಇದೀಗ ಟೀಮ್ ಇಂಡಿಯಾ ಆತಿಥೇಯ ಆಂಗ್ಲರ ವಿರುದ್ಧ 2-2 ಅಂತರದಿಂದ ಸರಣಿಯನ್ನು ಡ್ರಾ ಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

6 / 6
Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ