IND vs NZ: ಕ್ರಿಕೆಟ್ ಪ್ರೇಮಿಗಳ ಗಮನಕ್ಕೆ; ಬೆಂಗಳೂರು ಟೆಸ್ಟ್ ಪಂದ್ಯ ಆರಂಭದ ಸಮಯದಲ್ಲಿ ಬದಲಾವಣೆ

IND vs NZ: ಮಳೆಯಿಂದಾಗಿ ಭಾರತ- ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್​ನ ಮೊದಲ ದಿನದಾಟವನ್ನು ರದ್ದುಗೊಳಿಸಲಾಗಿದೆ. ಇನ್ನು ಈ ಟೆಸ್ಟ್​ನಲ್ಲಿ 4 ದಿನಗಳು ಬಾಕಿ ಉಳಿದಿದ್ದು, ಹೇಗಾದರೂ ಮಾಡಿ ಮೊದಲ ಟೆಸ್ಟ್ ಪಂದ್ಯವನ್ನು ಪೂರ್ಣಗೊಳಿಸುವ ಸಲುವಾಗಿ ಬಿಸಿಸಿಐ ಮಹತ್ವದ ಹೆಜ್ಜೆ ಇಟ್ಟಿದೆ. ಅದರಂತೆ ಟೆಸ್ಟ್ ಪಂದ್ಯದ ಉಳಿದ ನಾಲ್ಕು ದಿನಗಳ ಸಮಯದಲ್ಲಿ ಬದಲಾವಣೆ ಮಾಡಿದೆ.

|

Updated on:Oct 16, 2024 | 5:55 PM

ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಅಲ್ಲೋಲ್ಲ ಕಲ್ಲೋಲ ಸೃಷ್ಟಿಸಿದೆ. ಕೇವಲ ಎರಡು ದಿನಗಳ ಮಳೆಗೆ ಐಟಿ ನಗರ ತತ್ತರಿಸಿ ಹೋಗಿದೆ. ಹಿಂಗಾರು ಮಳೆಯ ಪರಿಣಾಮ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೇಲೂ ಪರಿಣಾಮ ಬೀರಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ದೃಷ್ಟಿಯಿಂದ ಈ ಟೆಸ್ಟ್ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದಾಗಿದೆ.

ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲಿ ಅಲ್ಲೋಲ್ಲ ಕಲ್ಲೋಲ ಸೃಷ್ಟಿಸಿದೆ. ಕೇವಲ ಎರಡು ದಿನಗಳ ಮಳೆಗೆ ಐಟಿ ನಗರ ತತ್ತರಿಸಿ ಹೋಗಿದೆ. ಹಿಂಗಾರು ಮಳೆಯ ಪರಿಣಾಮ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೇಲೂ ಪರಿಣಾಮ ಬೀರಿದೆ. ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ದೃಷ್ಟಿಯಿಂದ ಈ ಟೆಸ್ಟ್ ಸರಣಿ ಉಭಯ ತಂಡಗಳಿಗೂ ಅತ್ಯಂತ ಮಹತ್ವದಾಗಿದೆ.

1 / 6
ಹೀಗಾಗಿ ಗೆಲ್ಲುವ ಇರಾದೆಯೊಂದಿಗೆ ಬೆಂಗಳೂರಿಗೆ ಬಂದಿಳಿದಿದ್ದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳಿಗೆ ನಿರಾಸೆ ಎದುರಾಗಿದೆ. ವಾಸ್ತವವಾಗಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂವಾಗಬೇಕಿದ್ದ ಮೊದಲ ಟೆಸ್ಟ್​ ಪಂದ್ಯದ ಮೊದಲ ದಿನದಾಟ ಮಳೆಗಾಹುತಿಯಾಗಿದೆ. ಪಂದ್ಯ ಆರಂಭವಾಗುವುದಿರಲಿ. ಮಳೆಯಿಂದಾಗಿ ಟಾಸ್ ಕೂಡ ನಡೆಯಲಿಲ್ಲ.

ಹೀಗಾಗಿ ಗೆಲ್ಲುವ ಇರಾದೆಯೊಂದಿಗೆ ಬೆಂಗಳೂರಿಗೆ ಬಂದಿಳಿದಿದ್ದ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳಿಗೆ ನಿರಾಸೆ ಎದುರಾಗಿದೆ. ವಾಸ್ತವವಾಗಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂವಾಗಬೇಕಿದ್ದ ಮೊದಲ ಟೆಸ್ಟ್​ ಪಂದ್ಯದ ಮೊದಲ ದಿನದಾಟ ಮಳೆಗಾಹುತಿಯಾಗಿದೆ. ಪಂದ್ಯ ಆರಂಭವಾಗುವುದಿರಲಿ. ಮಳೆಯಿಂದಾಗಿ ಟಾಸ್ ಕೂಡ ನಡೆಯಲಿಲ್ಲ.

2 / 6
ಮೊದಲ ದಿನದಾಟದ ಎರಡನೇ ಸೆಷನ್​ವರೆಗೂ ಪಂದ್ಯ ನಡೆಸುವ ಇರಾದೆಯೊಂದಿಗೆ ಕಾದ ಅಂಪೈರ್​ಗಳು ಆ ನಂತರ ಮಳೆಯಿಂದಾಗಿ ಮೊದಲ ದಿನದಾಟವನ್ನು ರದ್ದುಗೊಳಿಸಿದರು. ಇನ್ನು ಈ ಟೆಸ್ಟ್​ನಲ್ಲಿ 4 ದಿನಗಳು ಬಾಕಿ ಉಳಿದಿದ್ದು, ಹೇಗಾದರೂ ಮಾಡಿ ಮೊದಲ ಟೆಸ್ಟ್ ಪಂದ್ಯವನ್ನು ಪೂರ್ಣಗೊಳಿಸುವ ಸಲುವಾಗಿ ಬಿಸಿಸಿಐ ಮಹತ್ವದ ಹೆಜ್ಜೆ ಇಟ್ಟಿದೆ. ಅದರಂತೆ ಟೆಸ್ಟ್ ಪಂದ್ಯದ ಉಳಿದ ನಾಲ್ಕು ದಿನಗಳ ಸಮಯದಲ್ಲಿ ಬದಲಾವಣೆ ಮಾಡಿದೆ.

ಮೊದಲ ದಿನದಾಟದ ಎರಡನೇ ಸೆಷನ್​ವರೆಗೂ ಪಂದ್ಯ ನಡೆಸುವ ಇರಾದೆಯೊಂದಿಗೆ ಕಾದ ಅಂಪೈರ್​ಗಳು ಆ ನಂತರ ಮಳೆಯಿಂದಾಗಿ ಮೊದಲ ದಿನದಾಟವನ್ನು ರದ್ದುಗೊಳಿಸಿದರು. ಇನ್ನು ಈ ಟೆಸ್ಟ್​ನಲ್ಲಿ 4 ದಿನಗಳು ಬಾಕಿ ಉಳಿದಿದ್ದು, ಹೇಗಾದರೂ ಮಾಡಿ ಮೊದಲ ಟೆಸ್ಟ್ ಪಂದ್ಯವನ್ನು ಪೂರ್ಣಗೊಳಿಸುವ ಸಲುವಾಗಿ ಬಿಸಿಸಿಐ ಮಹತ್ವದ ಹೆಜ್ಜೆ ಇಟ್ಟಿದೆ. ಅದರಂತೆ ಟೆಸ್ಟ್ ಪಂದ್ಯದ ಉಳಿದ ನಾಲ್ಕು ದಿನಗಳ ಸಮಯದಲ್ಲಿ ಬದಲಾವಣೆ ಮಾಡಿದೆ.

3 / 6
ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಬೆಂಗಳೂರು ಟೆಸ್ಟ್​ನ ಉಳಿದ 4 ದಿನಗಳ ದಿನದಾಟವನ್ನು 9:30 ಕ್ಕೆ ಬದಲಾಗಿ 9:15 ಕ್ಕೆ ಆರಂಭವಾಗಲಿದೆ. ಅದರಂತೆ ಟಾಸ್ ಕೂಡ 9 ಗಂಟೆಗೆ ಬದಲಾಗಿ 8:45 ಕ್ಕೆ ನಡೆಯಲಿದೆ. ಮಳೆಯಿಂದ ಮೊದಲ ದಿನದಾಟ ರದ್ದಾಗಿರುವ ಕಾರಣ, ಮೊದಲ ದಿನದಾಟದ ನಷ್ಟವನ್ನು ಉಳಿದ 4 ದಿನಗಳಲ್ಲಿ ಸರಿದೂಗಿಸಲು ಬಿಸಿಸಿಐ ಈ ತೀರ್ಮಾನಕ್ಕೆ ಬಂದಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ, ಬೆಂಗಳೂರು ಟೆಸ್ಟ್​ನ ಉಳಿದ 4 ದಿನಗಳ ದಿನದಾಟವನ್ನು 9:30 ಕ್ಕೆ ಬದಲಾಗಿ 9:15 ಕ್ಕೆ ಆರಂಭವಾಗಲಿದೆ. ಅದರಂತೆ ಟಾಸ್ ಕೂಡ 9 ಗಂಟೆಗೆ ಬದಲಾಗಿ 8:45 ಕ್ಕೆ ನಡೆಯಲಿದೆ. ಮಳೆಯಿಂದ ಮೊದಲ ದಿನದಾಟ ರದ್ದಾಗಿರುವ ಕಾರಣ, ಮೊದಲ ದಿನದಾಟದ ನಷ್ಟವನ್ನು ಉಳಿದ 4 ದಿನಗಳಲ್ಲಿ ಸರಿದೂಗಿಸಲು ಬಿಸಿಸಿಐ ಈ ತೀರ್ಮಾನಕ್ಕೆ ಬಂದಿದೆ.

4 / 6
ಮೊದಲ ದಿನದಾಟವಾದ ಇಂದು 90 ಓವರ್​ಗಳ ಪಂದ್ಯ ನಡೆಯಬೇಕಿತ್ತು. ಆದರೆ ಈ ದಿನ ಒಂದು ಎಸೆತವನ್ನು ಆಡಲಾಗಲಿಲ್ಲ. ಹೀಗಾಗಿ ಉಳಿದ ದಿನಗಳಲ್ಲಿ ಪಂದ್ಯವನ್ನು 15 ನಿಮಿಷ ಬೇಗ ಆರಂಭಿಸಲು ಬಿಸಿಸಿಐ ಮುಂದಾಗಿದೆ. ಅದರಂತೆ ಎರಡನೇ ದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದಿದ್ದರೆ, ದಿನದಾಟದಂತ್ಯದ ಸಮಯವನ್ನು ವಿಸ್ತರಿಸುವುದಾಗಿ ಬಿಸಿಸಿಐ ತಿಳಿಸಿದೆ.

ಮೊದಲ ದಿನದಾಟವಾದ ಇಂದು 90 ಓವರ್​ಗಳ ಪಂದ್ಯ ನಡೆಯಬೇಕಿತ್ತು. ಆದರೆ ಈ ದಿನ ಒಂದು ಎಸೆತವನ್ನು ಆಡಲಾಗಲಿಲ್ಲ. ಹೀಗಾಗಿ ಉಳಿದ ದಿನಗಳಲ್ಲಿ ಪಂದ್ಯವನ್ನು 15 ನಿಮಿಷ ಬೇಗ ಆರಂಭಿಸಲು ಬಿಸಿಸಿಐ ಮುಂದಾಗಿದೆ. ಅದರಂತೆ ಎರಡನೇ ದಿನ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದಿದ್ದರೆ, ದಿನದಾಟದಂತ್ಯದ ಸಮಯವನ್ನು ವಿಸ್ತರಿಸುವುದಾಗಿ ಬಿಸಿಸಿಐ ತಿಳಿಸಿದೆ.

5 / 6
ಇನ್ನು ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನವೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎರಡನೇ ದಿನ ಅಂದರೆ ಗುರುವಾರ ಅಕ್ಟೋಬರ್ 17 ರಂದು ಬೆಳಿಗ್ಗೆ ಮಳೆಯ ಮುನ್ಸೂಚನೆ ಇಲ್ಲ. ಆದರೆ 10 ಗಂಟೆಯ ನಂತರ ಮಧ್ಯಂತರವಾಗಿ ಶೇ.30ರಿಂದ 40ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಎರಡನೇ ದಿನದದಾಟ ಆರಂಭವಾದರೆ ಆಗಾಗ ಮಳೆ ಅಡ್ಡಿಪಡಿಸಬಹುದು.

ಇನ್ನು ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನವೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎರಡನೇ ದಿನ ಅಂದರೆ ಗುರುವಾರ ಅಕ್ಟೋಬರ್ 17 ರಂದು ಬೆಳಿಗ್ಗೆ ಮಳೆಯ ಮುನ್ಸೂಚನೆ ಇಲ್ಲ. ಆದರೆ 10 ಗಂಟೆಯ ನಂತರ ಮಧ್ಯಂತರವಾಗಿ ಶೇ.30ರಿಂದ 40ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಎರಡನೇ ದಿನದದಾಟ ಆರಂಭವಾದರೆ ಆಗಾಗ ಮಳೆ ಅಡ್ಡಿಪಡಿಸಬಹುದು.

6 / 6

Published On - 5:50 pm, Wed, 16 October 24

Follow us
ಜಗಳಗಳವೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಜಗಳಗಳವೇ ತುಂಬಿದ್ದ ಬಿಗ್​ಬಾಸ್ ಮನೆಯಲ್ಲಿ ಮಗುವಿನ ಅಳು
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ಟಿಕೆಟ್ ಸಿಗದಿದ್ದರೆ ಕಾರ್ಯಕರ್ತರು ಹೇಳಿದಂತೆ ಕೇಳುವೆ: ಸಿಪಿ ಯೋಗೇಶ್ವರ್
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ನಿರಂತರ ಮಳೆಗೆ ಗಿಡದಲ್ಲಿಯೇ ಕೊಳೆಯುತ್ತಿರೋ ದಾಳಿಂಬೆ; ಕಂಗಾಲಾದ ರೈತರು
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯರನ್ನು ಸಿಲುಕಿಸುವ ಪ್ರಯತ್ನದಲ್ಲಿ ಬಿಜೆಪಿ ಸಫಲವಾಗಲ್ಲ:ನಾಗೇಂದ್ರ
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ಸಿದ್ದರಾಮಯ್ಯ ಅತ್ಯಾಪ್ತ ಮರಿಗೌಡರನ್ನು ನಿಜಕ್ಕೂ ಅನಾರೋಗ್ಯ ಕಾಡುತ್ತಿದೆಯೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ತೊರೆಕಾಡನಹಳ್ಳಿಗೆ ಕಾರಿನ ಬದಲು ಲಕ್ಸುರಿ ಬಸ್ಸಲ್ಲಿ ಹೋಗುವ ಅಗತ್ಯವಿತ್ತೇ?
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಮಳೆ ಅವಾಂತರ: ಕರ್ನಾಟಕ ಪೊಲೀಸ್ ಅಧಿಕಾರಿ ಮನೆಗೂ ನುಗ್ಗಿದ ನೀರು
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಅಭಿಮಾನಿಗಳ ಹರ್ಷೋದ್ಗಾರ... ಮಳೆಗೂ ಕುಗ್ಗದ ಕಿಂಗ್ ಕೊಹ್ಲಿಯ ಕ್ರೇಝ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಸುರೇಶಣ್ಣ ಸ್ಪರ್ಧಿಸಿದರೆ ಮನೆಮನೆ ತಿರುಗಿ ಪ್ರಚಾರ ಮಾಡುವೆ: ಪ್ರದೀಪ್ ಈಶ್ವರ್
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ
ಮಗನೇ ಮತ್ತೊಮ್ಮೆ ಹುಟ್ಟಿಬಂದಷ್ಟು ಸಂತೋಷವಾಗುತ್ತಿದೆ ಎಂದ ಶಿವನಗೌಡ